Homeಮುಖಪುಟಕೊರೊನಾ ಮೊದಲ ಅಲೆಯಲ್ಲಿ ಸಿಂಧಿಯಾ, ಎರಡನೆ ಅಲೆಯಲ್ಲಿ ಜಿತಿನ್‍: ರಾಹುಲ್‍ ತೊರೆದ ಆಪ್ತರು!

ಕೊರೊನಾ ಮೊದಲ ಅಲೆಯಲ್ಲಿ ಸಿಂಧಿಯಾ, ಎರಡನೆ ಅಲೆಯಲ್ಲಿ ಜಿತಿನ್‍: ರಾಹುಲ್‍ ತೊರೆದ ಆಪ್ತರು!

- Advertisement -
- Advertisement -

ಕಳೆದ ವರ್ಷ ಕೋವಿಡ್‍ನ ಆರಂಭದ ಬಿಕ್ಕಟ್ಟಿನ ಸಮಯ. ಆಗ ಮಧ್ಯಪ್ರದೇಶದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿತ್ತು. ವಿಮಾನ ಅಪಘಾತದಲ್ಲಿ ದುರ್ಮರಣ ಹೊಂದಿದ ಕಾಂಗ್ರೆಸ್‍ ನಾಯಕ ಮಾಧವರಾವ ಸಿಂಧಿಯಾ ಅವರ ಪುತ್ರ ಜ್ಯೋತಿರಾಧಿತ್ಯ ಸಿಂಧಿಯಾ 22 ಕಾಂಗ್ರೆಸ್‍ ಶಾಸಕರೊಂದಿಗೆ ಸೇರಿ ಕಾಂಗ್ರೆಸ್‍ನ ಕಮಲನಾಥ್‍ ನೇತೃತ್ವದ ಸರ್ಕಾರವನ್ನು ಉರುಳಿಸಿದ್ದರು. ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಬಂದಾದ ಮೇಲೆಯಷ್ಟೇ ಕೇಂದ್ರ ಸರ್ಕಾರ ಲಾಕ್‍ಡೌನ್‍ ಹೇರಿತು ಎಂಬ ಆರೋಪವಿದೆ.

ಈಗ ಕೋವಿಡ್‍ ಎರಡನೆ ಅಲೆ ಸಂದರ್ಭದಲ್ಲಿ ಇನ್ನೊಬ್ಬ ಯುವನಾಯಕ ಜಿತಿನ್‍ ಪ್ರಸಾದ್‍ ಕಾಂಗ್ರೆಸ್‍ ತೊರೆದು ಬಿಜೆಪಿ ಸೇರಿದ್ದಾರೆ. ಇದು ವರ್ಷದೊಳಗೆ ನಡೆಯಲಿರುವ ಉತ್ತರಪ್ರದೇಶ ಚುನಾವಣೆ ಗುರಿಯಾಗಿ ಇಟ್ಟುಕೊಂಡು ನಡೆದ ವಿದ್ಯಮಾನ.

ಈ ನಡುವೆ ರಾಜಸ್ತಾನದಲ್ಲಿ ಕಾಂಗ್ರೆಸ್‍ ಯುವ ನಾಯಕ ಸಚಿನ್‍ ಪೈಲಟ್‍ ಕೂಡ ಬಿಜೆಪಿಗೆ ಹೊರಟು ವಾಪಸ್‍ ಬಂದರು.

ಮೇಲಿನ ವಿದ್ಯಮಾನಗಳು ಏನನ್ನು ಸೂಚಿಸುತ್ತವೆ? ರಾಹುಲ್‍ ಗಾಂಧಿಯವರ ಇಬ್ಬರು ಆಪ್ತ ಯುವನಾಯಕರನ್ನು ಬಿಜೆಪಿ ಬೇಟೆಯಾಡಿದೆ. ಸಾಂಕ್ರಾಮಿಕವೋ ಇನ್ನೊಂದೋ, ಬಿಜೆಪಿಗೆ ರಾಜಕೀಯ ಅಧಿಕಾರ ಮುಖ್ಯ ಎಂಬುದನ್ನೂ, ಕಾಂಗ್ರೆಸ್‍ ಒಳಗಡೆ ಆಂತರಿಕ ಸಮಸ್ಯೆ ಇದೆ ಎಂಬುದನ್ನೂ ಈ ವಿದ್ಯಮಾನಗಳು ಸೂಚಿಸುತ್ತಿವೆ ಅಲ್ಲವೇ?

ವರ್ಷದ ಹಿಂದೆ ಕಾಂಗ್ರೆಸ್‍ನಿಂದ ಬಿಜೆಪಿಗೆ ಸೇರಿದ್ದ ಯುವನಾಯಕ ಜ್ಯೋತಿರಾದಿತ್ಯ ಸಿಂಧಿಯಾ, ಇಂದು ಕಾಂಗ್ರೆಸ್ ಯುವ ನಾಯಕ ಜಿತಿನ್ ಪ್ರಸಾದ ಬಿಜೆಪಿಗೆ ಸೇರ್ಪಡೆಗೊಂಡ  ಕೂಡಲೇ, ಅವರಿಗೆ ವಿಶೇಷ ಸ್ವಾಗತ ನೀಡಿದ್ದಾರೆ.

“ಅವರು ನನ್ನ ಕಿರಿಯ ಸಹೋದರನಂತೆ ಇದ್ದಾರೆ. ನಾನು ಅವರನ್ನು ಬಿಜೆಪಿಗೆ ಸ್ವಾಗತಿಸುತ್ತೇನೆ. ಅವರನ್ನು ಅಭಿನಂದಿಸುತ್ತೇನೆ” ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಕಾಂಗ್ರೆಸ್ಸಿನ ಪ್ರಮುಖ ಬ್ರಾಹ್ಮಣ ಮುಖವಾದ ಜಿತಿನ್ ಪ್ರಸಾದ,  ‘ಇಂದು ದೇಶದ ಏಕೈಕ ರಾಷ್ಟ್ರೀಯ ಪಕ್ಷ’ ಎಂದು ಬಿಜೆಪಿಯನ್ನು ಹೊಗಳುವ ಮೂಲಕ ಆ ಪಕ್ಷಕ್ಕೆ ಸೇರಿಕೊಂಡರು. “ನಿಮ್ಮ ಜನರನ್ನು ನೋಡಿಕೊಳ್ಳಲು ನೀವು ಅಸಮರ್ಥರಾಗಿದ್ದರೆ ಅದರಲ್ಲಿ ಯಾವುದೇ ಅರ್ಥವಿಲ್ಲ’ ಎಂದು ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಜಿತಿನ್‍ ಹೇಳಿದರು.

ಒಂದು ವರ್ಷ‍ಕ್ಕಿಂತ ಕಡಿಮೆ ಅವಧಿಯಲ್ಲಿ ಚುನಾವಣೆ ನಡೆಯಲಿರುವ ಉತ್ತರಪ್ರದೇಶದಲ್ಲಿ ಕಾಂಗ್ರೆಸ್‍ಗೆ  ಈ ವಿದ್ಯಮಾನ ತೊಂದರೆ ಮಾಡಬಹುದು. ಆದರೆ ಅದಕ್ಕಿಂತ ಹೆಚ್ಚಾಗಿ, ಯೋಗಿ ಆದಿತ್ಯನಾಥ್ ಸರ್ಕಾರವು ಟೀಕೆ, ಆಕ್ರೋಶಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಬಿಜೆಪಿಗೆ ಹೊಸ ನರೇಟಿವ್ ಕಟ್ಟಲು ಇದು ಸಹಾಯ ಮಾಡುತ್ತದೆ.

ಬಿಜೆಪಿಯೊಂದಿಗೆ ನೇರ ಮುಖಾಮುಖಿಯನ್ನು ಎದುರಿಸುತ್ತಿರುವ ರಾಜ್ಯಗಳಲ್ಲಿ ಈ ಉನ್ನತ ಮಟ್ಟದ ಪಕ್ಷಾಂತರಗಳು ಕಾಂಗ್ರೆಸ್‍ಗೆ ಬಿಕ್ಕಟ್ಟನ್ನು ಸೂಚಿಸುತ್ತವೆ ಎನ್ನಲಾಗಿದೆ.

ಜ್ಯೋತಿರಾದಿತ್ಯ ಸಿಂಧಿಯಾ 2020ರ ಮಾರ್ಚ್‍ನಲ್ಲಿ ಕಾಂಗ್ರೆಸ್ ತೊರೆದು 22 ಶಾಸಕರೊಂದಿಗೆ ಬಿಜೆಪಿಗೆ ಸೇರಿಕೊಂಡರು, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‍ ಪಕ್ಷದ ಸರ್ಕಾರವನ್ನು ಉರುಳಿಸಿದರು.

ಸಿಂಧಿಯಾ ಅಂದಿನ ತಮ್ಮ ಕಾಂಗ್ರೆಸ್‍ ಮುಖ್ಯಮಂತ್ರಿ ಕಮಲ್ ನಾಥ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದರು. ಆ ಸಂದರ್ಭದಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್ ನಿರಂತರ ಆಂತರಿಕ ಕಿತ್ತಾಟವನ್ನು ಎದುರಿಸಬೇಕಾಗಿತ್ತು.

19 ವರ್ಷ ಕಾಂಗ್ರೆಸ್‍ನಲ್ಲಿದ್ದ ಸಿಂಧಿಯಾ ಪಕ್ಷವನ್ನು ತೊರೆಯುವ ಮೊದಲು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ತಿಂಗಳುಗಟ್ಟಲೆ ಕಾಯ್ದು ವಿಫಲರಾದರು ಎಂದು ಅವರ ಆಪ್ತ ಮೂಲಗಳು ತಿಳಿಸಿದ್ದವು.

ಜ್ಯೋತಿರಾದಿತ್ಯ ಸಿಂಧಿಯಾ, ಜಿತಿನ್ ಪ್ರಸಾದ್‍ ಮತ್ತು ಕಾಂಗ್ರೆಸ್‍ನ ಮತ್ತೊಬ್ಬ ಬಂಡಾಯಗಾರ ಸಚಿನ್ ಪೈಲಟ್- ಈ ಮೂವರೂ ರಾಹುಲ್ ಗಾಂಧಿಯವರ ವಿಶ್ವಾಸಾರ್ಹ ವಲಯದ ಭಾಗವಾಗಿದ್ದರು.

ಆದರೆ 2014ರಿಂದ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡ ನಂತರ, ಕಾಂಗ್ರೆಸ್‍ ಪಕ್ಷವು ಹೆಚ್ಚಿನ ರಾಜ್ಯ ಚುನಾವಣೆಗಳಲ್ಲಿ ಸೋಲು ಕಂಡಿತು. ಇದರಿಂದ ರಾಹುಲ್ ಗಾಂಧಿಯವರ ನಾಯಕತ್ವದ  ಬಗ್ಗೆ  ಎದ್ದ ಪ್ರಶ್ನೆಗಳ ಮಧ್ಯೆ, ಅವರ ಆಪ್ತವಲಯದಲ್ಲಿದ್ದ ಯುವ ನಾಯಕರು ತಾವು ಸೈಡ್‍ಲೈನ್‍ಗೆ ತಳ್ಳಲ್ಪಟ್ಟೆವು ಎಂದು ಭಾವಿಸಿದರು.

ಇತ್ತೀಚೆಗೆ ರಾಹುಲ್‍ ಗಾಂಧಿಯವರು, “ಬಿಜೆಪಿಯಲ್ಲಿ ಕೊನೆ ಬೆಂಚ್‍ನವರಾಗುತ್ತಾರೆ’ ಎಂದು ಸಿಂಧಿಯಾ ಅವರನ್ನು ಕೆಣಕಿದಾಗ, “ನಾನು ಕಾಂಗ್ರೆಸ್‍ನಲ್ಲಿದ್ದಾಗ ರಾಹುಲ್ ಗಾಂಧಿಯವರು ಈಗಿರುವ ರೀತಿಯಲ್ಲಿಯೇ ಕಾಳಜಿ ವಹಿಸಿದ್ದರೆ ಪರಿಸ್ಥಿತಿ ಬೇರೆ ರೀತಿಯೇ ಇರುತ್ತಿತ್ತು’ ಎಂದು ಸಿಂಧಿಯಾ ಪ್ರತಿಕ್ರಿಯಿಸಿದ್ದರು.


ಇದನ್ನೂ ಓದಿ: ಉತ್ತರಪ್ರದೇಶ : ಜಿತಿನ್ ಪ್ರಸಾದ ಬಿಜೆಪಿ ಸೇರ್ಪಡೆ ಮತ್ತು ಬಿಜೆಪಿಯ ರಾಜಕೀಯ ಲೆಕ್ಕಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...