Homeಮುಖಪುಟಕೊರೊನಾ ಮೊದಲ ಅಲೆಯಲ್ಲಿ ಸಿಂಧಿಯಾ, ಎರಡನೆ ಅಲೆಯಲ್ಲಿ ಜಿತಿನ್‍: ರಾಹುಲ್‍ ತೊರೆದ ಆಪ್ತರು!

ಕೊರೊನಾ ಮೊದಲ ಅಲೆಯಲ್ಲಿ ಸಿಂಧಿಯಾ, ಎರಡನೆ ಅಲೆಯಲ್ಲಿ ಜಿತಿನ್‍: ರಾಹುಲ್‍ ತೊರೆದ ಆಪ್ತರು!

- Advertisement -
- Advertisement -

ಕಳೆದ ವರ್ಷ ಕೋವಿಡ್‍ನ ಆರಂಭದ ಬಿಕ್ಕಟ್ಟಿನ ಸಮಯ. ಆಗ ಮಧ್ಯಪ್ರದೇಶದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿತ್ತು. ವಿಮಾನ ಅಪಘಾತದಲ್ಲಿ ದುರ್ಮರಣ ಹೊಂದಿದ ಕಾಂಗ್ರೆಸ್‍ ನಾಯಕ ಮಾಧವರಾವ ಸಿಂಧಿಯಾ ಅವರ ಪುತ್ರ ಜ್ಯೋತಿರಾಧಿತ್ಯ ಸಿಂಧಿಯಾ 22 ಕಾಂಗ್ರೆಸ್‍ ಶಾಸಕರೊಂದಿಗೆ ಸೇರಿ ಕಾಂಗ್ರೆಸ್‍ನ ಕಮಲನಾಥ್‍ ನೇತೃತ್ವದ ಸರ್ಕಾರವನ್ನು ಉರುಳಿಸಿದ್ದರು. ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಬಂದಾದ ಮೇಲೆಯಷ್ಟೇ ಕೇಂದ್ರ ಸರ್ಕಾರ ಲಾಕ್‍ಡೌನ್‍ ಹೇರಿತು ಎಂಬ ಆರೋಪವಿದೆ.

ಈಗ ಕೋವಿಡ್‍ ಎರಡನೆ ಅಲೆ ಸಂದರ್ಭದಲ್ಲಿ ಇನ್ನೊಬ್ಬ ಯುವನಾಯಕ ಜಿತಿನ್‍ ಪ್ರಸಾದ್‍ ಕಾಂಗ್ರೆಸ್‍ ತೊರೆದು ಬಿಜೆಪಿ ಸೇರಿದ್ದಾರೆ. ಇದು ವರ್ಷದೊಳಗೆ ನಡೆಯಲಿರುವ ಉತ್ತರಪ್ರದೇಶ ಚುನಾವಣೆ ಗುರಿಯಾಗಿ ಇಟ್ಟುಕೊಂಡು ನಡೆದ ವಿದ್ಯಮಾನ.

ಈ ನಡುವೆ ರಾಜಸ್ತಾನದಲ್ಲಿ ಕಾಂಗ್ರೆಸ್‍ ಯುವ ನಾಯಕ ಸಚಿನ್‍ ಪೈಲಟ್‍ ಕೂಡ ಬಿಜೆಪಿಗೆ ಹೊರಟು ವಾಪಸ್‍ ಬಂದರು.

ಮೇಲಿನ ವಿದ್ಯಮಾನಗಳು ಏನನ್ನು ಸೂಚಿಸುತ್ತವೆ? ರಾಹುಲ್‍ ಗಾಂಧಿಯವರ ಇಬ್ಬರು ಆಪ್ತ ಯುವನಾಯಕರನ್ನು ಬಿಜೆಪಿ ಬೇಟೆಯಾಡಿದೆ. ಸಾಂಕ್ರಾಮಿಕವೋ ಇನ್ನೊಂದೋ, ಬಿಜೆಪಿಗೆ ರಾಜಕೀಯ ಅಧಿಕಾರ ಮುಖ್ಯ ಎಂಬುದನ್ನೂ, ಕಾಂಗ್ರೆಸ್‍ ಒಳಗಡೆ ಆಂತರಿಕ ಸಮಸ್ಯೆ ಇದೆ ಎಂಬುದನ್ನೂ ಈ ವಿದ್ಯಮಾನಗಳು ಸೂಚಿಸುತ್ತಿವೆ ಅಲ್ಲವೇ?

ವರ್ಷದ ಹಿಂದೆ ಕಾಂಗ್ರೆಸ್‍ನಿಂದ ಬಿಜೆಪಿಗೆ ಸೇರಿದ್ದ ಯುವನಾಯಕ ಜ್ಯೋತಿರಾದಿತ್ಯ ಸಿಂಧಿಯಾ, ಇಂದು ಕಾಂಗ್ರೆಸ್ ಯುವ ನಾಯಕ ಜಿತಿನ್ ಪ್ರಸಾದ ಬಿಜೆಪಿಗೆ ಸೇರ್ಪಡೆಗೊಂಡ  ಕೂಡಲೇ, ಅವರಿಗೆ ವಿಶೇಷ ಸ್ವಾಗತ ನೀಡಿದ್ದಾರೆ.

“ಅವರು ನನ್ನ ಕಿರಿಯ ಸಹೋದರನಂತೆ ಇದ್ದಾರೆ. ನಾನು ಅವರನ್ನು ಬಿಜೆಪಿಗೆ ಸ್ವಾಗತಿಸುತ್ತೇನೆ. ಅವರನ್ನು ಅಭಿನಂದಿಸುತ್ತೇನೆ” ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಕಾಂಗ್ರೆಸ್ಸಿನ ಪ್ರಮುಖ ಬ್ರಾಹ್ಮಣ ಮುಖವಾದ ಜಿತಿನ್ ಪ್ರಸಾದ,  ‘ಇಂದು ದೇಶದ ಏಕೈಕ ರಾಷ್ಟ್ರೀಯ ಪಕ್ಷ’ ಎಂದು ಬಿಜೆಪಿಯನ್ನು ಹೊಗಳುವ ಮೂಲಕ ಆ ಪಕ್ಷಕ್ಕೆ ಸೇರಿಕೊಂಡರು. “ನಿಮ್ಮ ಜನರನ್ನು ನೋಡಿಕೊಳ್ಳಲು ನೀವು ಅಸಮರ್ಥರಾಗಿದ್ದರೆ ಅದರಲ್ಲಿ ಯಾವುದೇ ಅರ್ಥವಿಲ್ಲ’ ಎಂದು ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಜಿತಿನ್‍ ಹೇಳಿದರು.

ಒಂದು ವರ್ಷ‍ಕ್ಕಿಂತ ಕಡಿಮೆ ಅವಧಿಯಲ್ಲಿ ಚುನಾವಣೆ ನಡೆಯಲಿರುವ ಉತ್ತರಪ್ರದೇಶದಲ್ಲಿ ಕಾಂಗ್ರೆಸ್‍ಗೆ  ಈ ವಿದ್ಯಮಾನ ತೊಂದರೆ ಮಾಡಬಹುದು. ಆದರೆ ಅದಕ್ಕಿಂತ ಹೆಚ್ಚಾಗಿ, ಯೋಗಿ ಆದಿತ್ಯನಾಥ್ ಸರ್ಕಾರವು ಟೀಕೆ, ಆಕ್ರೋಶಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಬಿಜೆಪಿಗೆ ಹೊಸ ನರೇಟಿವ್ ಕಟ್ಟಲು ಇದು ಸಹಾಯ ಮಾಡುತ್ತದೆ.

ಬಿಜೆಪಿಯೊಂದಿಗೆ ನೇರ ಮುಖಾಮುಖಿಯನ್ನು ಎದುರಿಸುತ್ತಿರುವ ರಾಜ್ಯಗಳಲ್ಲಿ ಈ ಉನ್ನತ ಮಟ್ಟದ ಪಕ್ಷಾಂತರಗಳು ಕಾಂಗ್ರೆಸ್‍ಗೆ ಬಿಕ್ಕಟ್ಟನ್ನು ಸೂಚಿಸುತ್ತವೆ ಎನ್ನಲಾಗಿದೆ.

ಜ್ಯೋತಿರಾದಿತ್ಯ ಸಿಂಧಿಯಾ 2020ರ ಮಾರ್ಚ್‍ನಲ್ಲಿ ಕಾಂಗ್ರೆಸ್ ತೊರೆದು 22 ಶಾಸಕರೊಂದಿಗೆ ಬಿಜೆಪಿಗೆ ಸೇರಿಕೊಂಡರು, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‍ ಪಕ್ಷದ ಸರ್ಕಾರವನ್ನು ಉರುಳಿಸಿದರು.

ಸಿಂಧಿಯಾ ಅಂದಿನ ತಮ್ಮ ಕಾಂಗ್ರೆಸ್‍ ಮುಖ್ಯಮಂತ್ರಿ ಕಮಲ್ ನಾಥ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದರು. ಆ ಸಂದರ್ಭದಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್ ನಿರಂತರ ಆಂತರಿಕ ಕಿತ್ತಾಟವನ್ನು ಎದುರಿಸಬೇಕಾಗಿತ್ತು.

19 ವರ್ಷ ಕಾಂಗ್ರೆಸ್‍ನಲ್ಲಿದ್ದ ಸಿಂಧಿಯಾ ಪಕ್ಷವನ್ನು ತೊರೆಯುವ ಮೊದಲು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ತಿಂಗಳುಗಟ್ಟಲೆ ಕಾಯ್ದು ವಿಫಲರಾದರು ಎಂದು ಅವರ ಆಪ್ತ ಮೂಲಗಳು ತಿಳಿಸಿದ್ದವು.

ಜ್ಯೋತಿರಾದಿತ್ಯ ಸಿಂಧಿಯಾ, ಜಿತಿನ್ ಪ್ರಸಾದ್‍ ಮತ್ತು ಕಾಂಗ್ರೆಸ್‍ನ ಮತ್ತೊಬ್ಬ ಬಂಡಾಯಗಾರ ಸಚಿನ್ ಪೈಲಟ್- ಈ ಮೂವರೂ ರಾಹುಲ್ ಗಾಂಧಿಯವರ ವಿಶ್ವಾಸಾರ್ಹ ವಲಯದ ಭಾಗವಾಗಿದ್ದರು.

ಆದರೆ 2014ರಿಂದ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡ ನಂತರ, ಕಾಂಗ್ರೆಸ್‍ ಪಕ್ಷವು ಹೆಚ್ಚಿನ ರಾಜ್ಯ ಚುನಾವಣೆಗಳಲ್ಲಿ ಸೋಲು ಕಂಡಿತು. ಇದರಿಂದ ರಾಹುಲ್ ಗಾಂಧಿಯವರ ನಾಯಕತ್ವದ  ಬಗ್ಗೆ  ಎದ್ದ ಪ್ರಶ್ನೆಗಳ ಮಧ್ಯೆ, ಅವರ ಆಪ್ತವಲಯದಲ್ಲಿದ್ದ ಯುವ ನಾಯಕರು ತಾವು ಸೈಡ್‍ಲೈನ್‍ಗೆ ತಳ್ಳಲ್ಪಟ್ಟೆವು ಎಂದು ಭಾವಿಸಿದರು.

ಇತ್ತೀಚೆಗೆ ರಾಹುಲ್‍ ಗಾಂಧಿಯವರು, “ಬಿಜೆಪಿಯಲ್ಲಿ ಕೊನೆ ಬೆಂಚ್‍ನವರಾಗುತ್ತಾರೆ’ ಎಂದು ಸಿಂಧಿಯಾ ಅವರನ್ನು ಕೆಣಕಿದಾಗ, “ನಾನು ಕಾಂಗ್ರೆಸ್‍ನಲ್ಲಿದ್ದಾಗ ರಾಹುಲ್ ಗಾಂಧಿಯವರು ಈಗಿರುವ ರೀತಿಯಲ್ಲಿಯೇ ಕಾಳಜಿ ವಹಿಸಿದ್ದರೆ ಪರಿಸ್ಥಿತಿ ಬೇರೆ ರೀತಿಯೇ ಇರುತ್ತಿತ್ತು’ ಎಂದು ಸಿಂಧಿಯಾ ಪ್ರತಿಕ್ರಿಯಿಸಿದ್ದರು.


ಇದನ್ನೂ ಓದಿ: ಉತ್ತರಪ್ರದೇಶ : ಜಿತಿನ್ ಪ್ರಸಾದ ಬಿಜೆಪಿ ಸೇರ್ಪಡೆ ಮತ್ತು ಬಿಜೆಪಿಯ ರಾಜಕೀಯ ಲೆಕ್ಕಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....