Homeಮುಖಪುಟಕೊರೊನಾ ಮೊದಲ ಅಲೆಯಲ್ಲಿ ಸಿಂಧಿಯಾ, ಎರಡನೆ ಅಲೆಯಲ್ಲಿ ಜಿತಿನ್‍: ರಾಹುಲ್‍ ತೊರೆದ ಆಪ್ತರು!

ಕೊರೊನಾ ಮೊದಲ ಅಲೆಯಲ್ಲಿ ಸಿಂಧಿಯಾ, ಎರಡನೆ ಅಲೆಯಲ್ಲಿ ಜಿತಿನ್‍: ರಾಹುಲ್‍ ತೊರೆದ ಆಪ್ತರು!

- Advertisement -
- Advertisement -

ಕಳೆದ ವರ್ಷ ಕೋವಿಡ್‍ನ ಆರಂಭದ ಬಿಕ್ಕಟ್ಟಿನ ಸಮಯ. ಆಗ ಮಧ್ಯಪ್ರದೇಶದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿತ್ತು. ವಿಮಾನ ಅಪಘಾತದಲ್ಲಿ ದುರ್ಮರಣ ಹೊಂದಿದ ಕಾಂಗ್ರೆಸ್‍ ನಾಯಕ ಮಾಧವರಾವ ಸಿಂಧಿಯಾ ಅವರ ಪುತ್ರ ಜ್ಯೋತಿರಾಧಿತ್ಯ ಸಿಂಧಿಯಾ 22 ಕಾಂಗ್ರೆಸ್‍ ಶಾಸಕರೊಂದಿಗೆ ಸೇರಿ ಕಾಂಗ್ರೆಸ್‍ನ ಕಮಲನಾಥ್‍ ನೇತೃತ್ವದ ಸರ್ಕಾರವನ್ನು ಉರುಳಿಸಿದ್ದರು. ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಬಂದಾದ ಮೇಲೆಯಷ್ಟೇ ಕೇಂದ್ರ ಸರ್ಕಾರ ಲಾಕ್‍ಡೌನ್‍ ಹೇರಿತು ಎಂಬ ಆರೋಪವಿದೆ.

ಈಗ ಕೋವಿಡ್‍ ಎರಡನೆ ಅಲೆ ಸಂದರ್ಭದಲ್ಲಿ ಇನ್ನೊಬ್ಬ ಯುವನಾಯಕ ಜಿತಿನ್‍ ಪ್ರಸಾದ್‍ ಕಾಂಗ್ರೆಸ್‍ ತೊರೆದು ಬಿಜೆಪಿ ಸೇರಿದ್ದಾರೆ. ಇದು ವರ್ಷದೊಳಗೆ ನಡೆಯಲಿರುವ ಉತ್ತರಪ್ರದೇಶ ಚುನಾವಣೆ ಗುರಿಯಾಗಿ ಇಟ್ಟುಕೊಂಡು ನಡೆದ ವಿದ್ಯಮಾನ.

ಈ ನಡುವೆ ರಾಜಸ್ತಾನದಲ್ಲಿ ಕಾಂಗ್ರೆಸ್‍ ಯುವ ನಾಯಕ ಸಚಿನ್‍ ಪೈಲಟ್‍ ಕೂಡ ಬಿಜೆಪಿಗೆ ಹೊರಟು ವಾಪಸ್‍ ಬಂದರು.

ಮೇಲಿನ ವಿದ್ಯಮಾನಗಳು ಏನನ್ನು ಸೂಚಿಸುತ್ತವೆ? ರಾಹುಲ್‍ ಗಾಂಧಿಯವರ ಇಬ್ಬರು ಆಪ್ತ ಯುವನಾಯಕರನ್ನು ಬಿಜೆಪಿ ಬೇಟೆಯಾಡಿದೆ. ಸಾಂಕ್ರಾಮಿಕವೋ ಇನ್ನೊಂದೋ, ಬಿಜೆಪಿಗೆ ರಾಜಕೀಯ ಅಧಿಕಾರ ಮುಖ್ಯ ಎಂಬುದನ್ನೂ, ಕಾಂಗ್ರೆಸ್‍ ಒಳಗಡೆ ಆಂತರಿಕ ಸಮಸ್ಯೆ ಇದೆ ಎಂಬುದನ್ನೂ ಈ ವಿದ್ಯಮಾನಗಳು ಸೂಚಿಸುತ್ತಿವೆ ಅಲ್ಲವೇ?

ವರ್ಷದ ಹಿಂದೆ ಕಾಂಗ್ರೆಸ್‍ನಿಂದ ಬಿಜೆಪಿಗೆ ಸೇರಿದ್ದ ಯುವನಾಯಕ ಜ್ಯೋತಿರಾದಿತ್ಯ ಸಿಂಧಿಯಾ, ಇಂದು ಕಾಂಗ್ರೆಸ್ ಯುವ ನಾಯಕ ಜಿತಿನ್ ಪ್ರಸಾದ ಬಿಜೆಪಿಗೆ ಸೇರ್ಪಡೆಗೊಂಡ  ಕೂಡಲೇ, ಅವರಿಗೆ ವಿಶೇಷ ಸ್ವಾಗತ ನೀಡಿದ್ದಾರೆ.

“ಅವರು ನನ್ನ ಕಿರಿಯ ಸಹೋದರನಂತೆ ಇದ್ದಾರೆ. ನಾನು ಅವರನ್ನು ಬಿಜೆಪಿಗೆ ಸ್ವಾಗತಿಸುತ್ತೇನೆ. ಅವರನ್ನು ಅಭಿನಂದಿಸುತ್ತೇನೆ” ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಕಾಂಗ್ರೆಸ್ಸಿನ ಪ್ರಮುಖ ಬ್ರಾಹ್ಮಣ ಮುಖವಾದ ಜಿತಿನ್ ಪ್ರಸಾದ,  ‘ಇಂದು ದೇಶದ ಏಕೈಕ ರಾಷ್ಟ್ರೀಯ ಪಕ್ಷ’ ಎಂದು ಬಿಜೆಪಿಯನ್ನು ಹೊಗಳುವ ಮೂಲಕ ಆ ಪಕ್ಷಕ್ಕೆ ಸೇರಿಕೊಂಡರು. “ನಿಮ್ಮ ಜನರನ್ನು ನೋಡಿಕೊಳ್ಳಲು ನೀವು ಅಸಮರ್ಥರಾಗಿದ್ದರೆ ಅದರಲ್ಲಿ ಯಾವುದೇ ಅರ್ಥವಿಲ್ಲ’ ಎಂದು ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಜಿತಿನ್‍ ಹೇಳಿದರು.

ಒಂದು ವರ್ಷ‍ಕ್ಕಿಂತ ಕಡಿಮೆ ಅವಧಿಯಲ್ಲಿ ಚುನಾವಣೆ ನಡೆಯಲಿರುವ ಉತ್ತರಪ್ರದೇಶದಲ್ಲಿ ಕಾಂಗ್ರೆಸ್‍ಗೆ  ಈ ವಿದ್ಯಮಾನ ತೊಂದರೆ ಮಾಡಬಹುದು. ಆದರೆ ಅದಕ್ಕಿಂತ ಹೆಚ್ಚಾಗಿ, ಯೋಗಿ ಆದಿತ್ಯನಾಥ್ ಸರ್ಕಾರವು ಟೀಕೆ, ಆಕ್ರೋಶಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಬಿಜೆಪಿಗೆ ಹೊಸ ನರೇಟಿವ್ ಕಟ್ಟಲು ಇದು ಸಹಾಯ ಮಾಡುತ್ತದೆ.

ಬಿಜೆಪಿಯೊಂದಿಗೆ ನೇರ ಮುಖಾಮುಖಿಯನ್ನು ಎದುರಿಸುತ್ತಿರುವ ರಾಜ್ಯಗಳಲ್ಲಿ ಈ ಉನ್ನತ ಮಟ್ಟದ ಪಕ್ಷಾಂತರಗಳು ಕಾಂಗ್ರೆಸ್‍ಗೆ ಬಿಕ್ಕಟ್ಟನ್ನು ಸೂಚಿಸುತ್ತವೆ ಎನ್ನಲಾಗಿದೆ.

ಜ್ಯೋತಿರಾದಿತ್ಯ ಸಿಂಧಿಯಾ 2020ರ ಮಾರ್ಚ್‍ನಲ್ಲಿ ಕಾಂಗ್ರೆಸ್ ತೊರೆದು 22 ಶಾಸಕರೊಂದಿಗೆ ಬಿಜೆಪಿಗೆ ಸೇರಿಕೊಂಡರು, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‍ ಪಕ್ಷದ ಸರ್ಕಾರವನ್ನು ಉರುಳಿಸಿದರು.

ಸಿಂಧಿಯಾ ಅಂದಿನ ತಮ್ಮ ಕಾಂಗ್ರೆಸ್‍ ಮುಖ್ಯಮಂತ್ರಿ ಕಮಲ್ ನಾಥ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದರು. ಆ ಸಂದರ್ಭದಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್ ನಿರಂತರ ಆಂತರಿಕ ಕಿತ್ತಾಟವನ್ನು ಎದುರಿಸಬೇಕಾಗಿತ್ತು.

19 ವರ್ಷ ಕಾಂಗ್ರೆಸ್‍ನಲ್ಲಿದ್ದ ಸಿಂಧಿಯಾ ಪಕ್ಷವನ್ನು ತೊರೆಯುವ ಮೊದಲು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ತಿಂಗಳುಗಟ್ಟಲೆ ಕಾಯ್ದು ವಿಫಲರಾದರು ಎಂದು ಅವರ ಆಪ್ತ ಮೂಲಗಳು ತಿಳಿಸಿದ್ದವು.

ಜ್ಯೋತಿರಾದಿತ್ಯ ಸಿಂಧಿಯಾ, ಜಿತಿನ್ ಪ್ರಸಾದ್‍ ಮತ್ತು ಕಾಂಗ್ರೆಸ್‍ನ ಮತ್ತೊಬ್ಬ ಬಂಡಾಯಗಾರ ಸಚಿನ್ ಪೈಲಟ್- ಈ ಮೂವರೂ ರಾಹುಲ್ ಗಾಂಧಿಯವರ ವಿಶ್ವಾಸಾರ್ಹ ವಲಯದ ಭಾಗವಾಗಿದ್ದರು.

ಆದರೆ 2014ರಿಂದ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡ ನಂತರ, ಕಾಂಗ್ರೆಸ್‍ ಪಕ್ಷವು ಹೆಚ್ಚಿನ ರಾಜ್ಯ ಚುನಾವಣೆಗಳಲ್ಲಿ ಸೋಲು ಕಂಡಿತು. ಇದರಿಂದ ರಾಹುಲ್ ಗಾಂಧಿಯವರ ನಾಯಕತ್ವದ  ಬಗ್ಗೆ  ಎದ್ದ ಪ್ರಶ್ನೆಗಳ ಮಧ್ಯೆ, ಅವರ ಆಪ್ತವಲಯದಲ್ಲಿದ್ದ ಯುವ ನಾಯಕರು ತಾವು ಸೈಡ್‍ಲೈನ್‍ಗೆ ತಳ್ಳಲ್ಪಟ್ಟೆವು ಎಂದು ಭಾವಿಸಿದರು.

ಇತ್ತೀಚೆಗೆ ರಾಹುಲ್‍ ಗಾಂಧಿಯವರು, “ಬಿಜೆಪಿಯಲ್ಲಿ ಕೊನೆ ಬೆಂಚ್‍ನವರಾಗುತ್ತಾರೆ’ ಎಂದು ಸಿಂಧಿಯಾ ಅವರನ್ನು ಕೆಣಕಿದಾಗ, “ನಾನು ಕಾಂಗ್ರೆಸ್‍ನಲ್ಲಿದ್ದಾಗ ರಾಹುಲ್ ಗಾಂಧಿಯವರು ಈಗಿರುವ ರೀತಿಯಲ್ಲಿಯೇ ಕಾಳಜಿ ವಹಿಸಿದ್ದರೆ ಪರಿಸ್ಥಿತಿ ಬೇರೆ ರೀತಿಯೇ ಇರುತ್ತಿತ್ತು’ ಎಂದು ಸಿಂಧಿಯಾ ಪ್ರತಿಕ್ರಿಯಿಸಿದ್ದರು.


ಇದನ್ನೂ ಓದಿ: ಉತ್ತರಪ್ರದೇಶ : ಜಿತಿನ್ ಪ್ರಸಾದ ಬಿಜೆಪಿ ಸೇರ್ಪಡೆ ಮತ್ತು ಬಿಜೆಪಿಯ ರಾಜಕೀಯ ಲೆಕ್ಕಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...