Homeಮುಖಪುಟಕೊರೊನಾ ಮೊದಲ ಅಲೆಯಲ್ಲಿ ಸಿಂಧಿಯಾ, ಎರಡನೆ ಅಲೆಯಲ್ಲಿ ಜಿತಿನ್‍: ರಾಹುಲ್‍ ತೊರೆದ ಆಪ್ತರು!

ಕೊರೊನಾ ಮೊದಲ ಅಲೆಯಲ್ಲಿ ಸಿಂಧಿಯಾ, ಎರಡನೆ ಅಲೆಯಲ್ಲಿ ಜಿತಿನ್‍: ರಾಹುಲ್‍ ತೊರೆದ ಆಪ್ತರು!

- Advertisement -
- Advertisement -

ಕಳೆದ ವರ್ಷ ಕೋವಿಡ್‍ನ ಆರಂಭದ ಬಿಕ್ಕಟ್ಟಿನ ಸಮಯ. ಆಗ ಮಧ್ಯಪ್ರದೇಶದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿತ್ತು. ವಿಮಾನ ಅಪಘಾತದಲ್ಲಿ ದುರ್ಮರಣ ಹೊಂದಿದ ಕಾಂಗ್ರೆಸ್‍ ನಾಯಕ ಮಾಧವರಾವ ಸಿಂಧಿಯಾ ಅವರ ಪುತ್ರ ಜ್ಯೋತಿರಾಧಿತ್ಯ ಸಿಂಧಿಯಾ 22 ಕಾಂಗ್ರೆಸ್‍ ಶಾಸಕರೊಂದಿಗೆ ಸೇರಿ ಕಾಂಗ್ರೆಸ್‍ನ ಕಮಲನಾಥ್‍ ನೇತೃತ್ವದ ಸರ್ಕಾರವನ್ನು ಉರುಳಿಸಿದ್ದರು. ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಬಂದಾದ ಮೇಲೆಯಷ್ಟೇ ಕೇಂದ್ರ ಸರ್ಕಾರ ಲಾಕ್‍ಡೌನ್‍ ಹೇರಿತು ಎಂಬ ಆರೋಪವಿದೆ.

ಈಗ ಕೋವಿಡ್‍ ಎರಡನೆ ಅಲೆ ಸಂದರ್ಭದಲ್ಲಿ ಇನ್ನೊಬ್ಬ ಯುವನಾಯಕ ಜಿತಿನ್‍ ಪ್ರಸಾದ್‍ ಕಾಂಗ್ರೆಸ್‍ ತೊರೆದು ಬಿಜೆಪಿ ಸೇರಿದ್ದಾರೆ. ಇದು ವರ್ಷದೊಳಗೆ ನಡೆಯಲಿರುವ ಉತ್ತರಪ್ರದೇಶ ಚುನಾವಣೆ ಗುರಿಯಾಗಿ ಇಟ್ಟುಕೊಂಡು ನಡೆದ ವಿದ್ಯಮಾನ.

ಈ ನಡುವೆ ರಾಜಸ್ತಾನದಲ್ಲಿ ಕಾಂಗ್ರೆಸ್‍ ಯುವ ನಾಯಕ ಸಚಿನ್‍ ಪೈಲಟ್‍ ಕೂಡ ಬಿಜೆಪಿಗೆ ಹೊರಟು ವಾಪಸ್‍ ಬಂದರು.

ಮೇಲಿನ ವಿದ್ಯಮಾನಗಳು ಏನನ್ನು ಸೂಚಿಸುತ್ತವೆ? ರಾಹುಲ್‍ ಗಾಂಧಿಯವರ ಇಬ್ಬರು ಆಪ್ತ ಯುವನಾಯಕರನ್ನು ಬಿಜೆಪಿ ಬೇಟೆಯಾಡಿದೆ. ಸಾಂಕ್ರಾಮಿಕವೋ ಇನ್ನೊಂದೋ, ಬಿಜೆಪಿಗೆ ರಾಜಕೀಯ ಅಧಿಕಾರ ಮುಖ್ಯ ಎಂಬುದನ್ನೂ, ಕಾಂಗ್ರೆಸ್‍ ಒಳಗಡೆ ಆಂತರಿಕ ಸಮಸ್ಯೆ ಇದೆ ಎಂಬುದನ್ನೂ ಈ ವಿದ್ಯಮಾನಗಳು ಸೂಚಿಸುತ್ತಿವೆ ಅಲ್ಲವೇ?

ವರ್ಷದ ಹಿಂದೆ ಕಾಂಗ್ರೆಸ್‍ನಿಂದ ಬಿಜೆಪಿಗೆ ಸೇರಿದ್ದ ಯುವನಾಯಕ ಜ್ಯೋತಿರಾದಿತ್ಯ ಸಿಂಧಿಯಾ, ಇಂದು ಕಾಂಗ್ರೆಸ್ ಯುವ ನಾಯಕ ಜಿತಿನ್ ಪ್ರಸಾದ ಬಿಜೆಪಿಗೆ ಸೇರ್ಪಡೆಗೊಂಡ  ಕೂಡಲೇ, ಅವರಿಗೆ ವಿಶೇಷ ಸ್ವಾಗತ ನೀಡಿದ್ದಾರೆ.

“ಅವರು ನನ್ನ ಕಿರಿಯ ಸಹೋದರನಂತೆ ಇದ್ದಾರೆ. ನಾನು ಅವರನ್ನು ಬಿಜೆಪಿಗೆ ಸ್ವಾಗತಿಸುತ್ತೇನೆ. ಅವರನ್ನು ಅಭಿನಂದಿಸುತ್ತೇನೆ” ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಕಾಂಗ್ರೆಸ್ಸಿನ ಪ್ರಮುಖ ಬ್ರಾಹ್ಮಣ ಮುಖವಾದ ಜಿತಿನ್ ಪ್ರಸಾದ,  ‘ಇಂದು ದೇಶದ ಏಕೈಕ ರಾಷ್ಟ್ರೀಯ ಪಕ್ಷ’ ಎಂದು ಬಿಜೆಪಿಯನ್ನು ಹೊಗಳುವ ಮೂಲಕ ಆ ಪಕ್ಷಕ್ಕೆ ಸೇರಿಕೊಂಡರು. “ನಿಮ್ಮ ಜನರನ್ನು ನೋಡಿಕೊಳ್ಳಲು ನೀವು ಅಸಮರ್ಥರಾಗಿದ್ದರೆ ಅದರಲ್ಲಿ ಯಾವುದೇ ಅರ್ಥವಿಲ್ಲ’ ಎಂದು ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಜಿತಿನ್‍ ಹೇಳಿದರು.

ಒಂದು ವರ್ಷ‍ಕ್ಕಿಂತ ಕಡಿಮೆ ಅವಧಿಯಲ್ಲಿ ಚುನಾವಣೆ ನಡೆಯಲಿರುವ ಉತ್ತರಪ್ರದೇಶದಲ್ಲಿ ಕಾಂಗ್ರೆಸ್‍ಗೆ  ಈ ವಿದ್ಯಮಾನ ತೊಂದರೆ ಮಾಡಬಹುದು. ಆದರೆ ಅದಕ್ಕಿಂತ ಹೆಚ್ಚಾಗಿ, ಯೋಗಿ ಆದಿತ್ಯನಾಥ್ ಸರ್ಕಾರವು ಟೀಕೆ, ಆಕ್ರೋಶಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಬಿಜೆಪಿಗೆ ಹೊಸ ನರೇಟಿವ್ ಕಟ್ಟಲು ಇದು ಸಹಾಯ ಮಾಡುತ್ತದೆ.

ಬಿಜೆಪಿಯೊಂದಿಗೆ ನೇರ ಮುಖಾಮುಖಿಯನ್ನು ಎದುರಿಸುತ್ತಿರುವ ರಾಜ್ಯಗಳಲ್ಲಿ ಈ ಉನ್ನತ ಮಟ್ಟದ ಪಕ್ಷಾಂತರಗಳು ಕಾಂಗ್ರೆಸ್‍ಗೆ ಬಿಕ್ಕಟ್ಟನ್ನು ಸೂಚಿಸುತ್ತವೆ ಎನ್ನಲಾಗಿದೆ.

ಜ್ಯೋತಿರಾದಿತ್ಯ ಸಿಂಧಿಯಾ 2020ರ ಮಾರ್ಚ್‍ನಲ್ಲಿ ಕಾಂಗ್ರೆಸ್ ತೊರೆದು 22 ಶಾಸಕರೊಂದಿಗೆ ಬಿಜೆಪಿಗೆ ಸೇರಿಕೊಂಡರು, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‍ ಪಕ್ಷದ ಸರ್ಕಾರವನ್ನು ಉರುಳಿಸಿದರು.

ಸಿಂಧಿಯಾ ಅಂದಿನ ತಮ್ಮ ಕಾಂಗ್ರೆಸ್‍ ಮುಖ್ಯಮಂತ್ರಿ ಕಮಲ್ ನಾಥ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದರು. ಆ ಸಂದರ್ಭದಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್ ನಿರಂತರ ಆಂತರಿಕ ಕಿತ್ತಾಟವನ್ನು ಎದುರಿಸಬೇಕಾಗಿತ್ತು.

19 ವರ್ಷ ಕಾಂಗ್ರೆಸ್‍ನಲ್ಲಿದ್ದ ಸಿಂಧಿಯಾ ಪಕ್ಷವನ್ನು ತೊರೆಯುವ ಮೊದಲು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ತಿಂಗಳುಗಟ್ಟಲೆ ಕಾಯ್ದು ವಿಫಲರಾದರು ಎಂದು ಅವರ ಆಪ್ತ ಮೂಲಗಳು ತಿಳಿಸಿದ್ದವು.

ಜ್ಯೋತಿರಾದಿತ್ಯ ಸಿಂಧಿಯಾ, ಜಿತಿನ್ ಪ್ರಸಾದ್‍ ಮತ್ತು ಕಾಂಗ್ರೆಸ್‍ನ ಮತ್ತೊಬ್ಬ ಬಂಡಾಯಗಾರ ಸಚಿನ್ ಪೈಲಟ್- ಈ ಮೂವರೂ ರಾಹುಲ್ ಗಾಂಧಿಯವರ ವಿಶ್ವಾಸಾರ್ಹ ವಲಯದ ಭಾಗವಾಗಿದ್ದರು.

ಆದರೆ 2014ರಿಂದ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡ ನಂತರ, ಕಾಂಗ್ರೆಸ್‍ ಪಕ್ಷವು ಹೆಚ್ಚಿನ ರಾಜ್ಯ ಚುನಾವಣೆಗಳಲ್ಲಿ ಸೋಲು ಕಂಡಿತು. ಇದರಿಂದ ರಾಹುಲ್ ಗಾಂಧಿಯವರ ನಾಯಕತ್ವದ  ಬಗ್ಗೆ  ಎದ್ದ ಪ್ರಶ್ನೆಗಳ ಮಧ್ಯೆ, ಅವರ ಆಪ್ತವಲಯದಲ್ಲಿದ್ದ ಯುವ ನಾಯಕರು ತಾವು ಸೈಡ್‍ಲೈನ್‍ಗೆ ತಳ್ಳಲ್ಪಟ್ಟೆವು ಎಂದು ಭಾವಿಸಿದರು.

ಇತ್ತೀಚೆಗೆ ರಾಹುಲ್‍ ಗಾಂಧಿಯವರು, “ಬಿಜೆಪಿಯಲ್ಲಿ ಕೊನೆ ಬೆಂಚ್‍ನವರಾಗುತ್ತಾರೆ’ ಎಂದು ಸಿಂಧಿಯಾ ಅವರನ್ನು ಕೆಣಕಿದಾಗ, “ನಾನು ಕಾಂಗ್ರೆಸ್‍ನಲ್ಲಿದ್ದಾಗ ರಾಹುಲ್ ಗಾಂಧಿಯವರು ಈಗಿರುವ ರೀತಿಯಲ್ಲಿಯೇ ಕಾಳಜಿ ವಹಿಸಿದ್ದರೆ ಪರಿಸ್ಥಿತಿ ಬೇರೆ ರೀತಿಯೇ ಇರುತ್ತಿತ್ತು’ ಎಂದು ಸಿಂಧಿಯಾ ಪ್ರತಿಕ್ರಿಯಿಸಿದ್ದರು.


ಇದನ್ನೂ ಓದಿ: ಉತ್ತರಪ್ರದೇಶ : ಜಿತಿನ್ ಪ್ರಸಾದ ಬಿಜೆಪಿ ಸೇರ್ಪಡೆ ಮತ್ತು ಬಿಜೆಪಿಯ ರಾಜಕೀಯ ಲೆಕ್ಕಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...