Homeಅಂತರಾಷ್ಟ್ರೀಯವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

ವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

- Advertisement -
- Advertisement -

ಒಂದಲ್ಲ, ಏಳು ಭಾರತೀಯ ರಾಜ್ಯಗಳು! ಬಸ್ ಖರೀದಿಯಲ್ಲಿ ‘ರೈಲು’ ಬಿಟ್ಟಿದೆ ಕೇಂದ್ರ ಸಾರಿಗೆ ಸಚಿವಾಲಯ! ಹಾಳಾಗಿ ಹೋಗ್ಲಿ, ಇದೆಲ್ಲ ಗೊತ್ತಿದ್ದರೂ, ದೊಡ್ಡ ಮೀಡಿಯಾ ಸುಮ್ಮನಿದೆ!
ಏಳು ರಾಜ್ಯಗಳಿಗೆ ಬಸ್‌ ಒದಗಿಸುವ ಒಪ್ಪಂದಗಳನ್ನು ಗೆಲ್ಲಲು ಸ್ವೀಡಿಷ್ ಬಸ್ ತಯಾರಕ ಕಂಪನಿ ಸ್ಕ್ಯಾನಿಯಾ ಲಂಚ ನೀಡಿದೆ, ಸ್ವೀಡನ್‌ನ ಎಸ್‌ವಿಟಿ ಮತ್ತು ಜರ್ಮನಿಯ ಝೆಡ್‌ಡಿಎಫ್ ಬಹಿರಂಗ ಮಾಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

2013 ಮತ್ತು 2016 ರ ನಡುವೆ ಏಳು ಭಾರತೀಯ ರಾಜ್ಯಗಳಲ್ಲಿ ಬಸ್ ಒಪ್ಪಂದಗಳನ್ನು ಗೆಲ್ಲಲು ಸ್ವೀಡಿಷ್ ಟ್ರಕ್ ಮತ್ತು ಬಸ್ ತಯಾರಕ ಸಂಸ್ಥೆ ಸ್ಕ್ಯಾನಿಯಾ ಲಂಚ ನೀಡಿದೆ ಎಂದು ರಾಯಿಟರ್ಸ್ ಮಂಗಳವಾರ ವರದಿ ಮಾಡಿದೆ.

ಸ್ಕ್ಯಾನಿಯಾದಿಂದ ಲಂಚ ಪಡೆದವರಲ್ಲಿ ಒಬ್ಬ ‘ಅನಾಮಧೇಯ’ ಸಚಿವ ಕೂಡ ಇದ್ದಾರೆ.
ಸ್ವೀಡನ್‌ನ ಎಸ್‌ವಿಟಿ ಮತ್ತು ಜರ್ಮನಿಯ ಝೆಡ್‌ಡಿಎಫ್ ತನಿಖೆಯನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದ ಪ್ರಕಾರ, 2016 ರ ನವೆಂಬರ್‌ನಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಪುತ್ರರೊಂದಿಗೆ ಸಂಬಂಧ ಹೊಂದಿರುವ ಕಂಪನಿಗೆ ಸ್ಕ್ಯಾನಿಯಾ ಐಷಾರಾಮಿ ಬಸ್ ಒಂದನ್ನು ಮಾರಿದೆ. ಈ ಆರೋಪಗಳನ್ನು ಸಚಿವರ ಕಚೇರಿ “ದುರುದ್ದೇಶಪೂರಿತ, ಕಟ್ಟುಕಥೆ ಮತ್ತು ಆಧಾರರಹಿತ” ಎಂದು ಬುಧವಾರ ಹೇಳಿದೆ.

ಸ್ಕ್ಯಾನಿಯಾ ವಕ್ತಾರರು ಈ ಪ್ರಕರಣದಲ್ಲಿ ಲೋಪ ಆಗಿವೆ ಎಂದು ರಾಯಿಟರ್ಸ್‌ಗೆ ತಿಳಿಸಿದ್ದಾರೆ.. ಸ್ಕ್ಯಾನಿಯಾದ ಸಿಇಒ ಹೆನ್ರಿಕ್ ಹೆನ್ರಿಕ್ಸನ್, ಭಾರತದಲ್ಲಿ ತನ್ನ ವ್ಯವಹಾರದಲ್ಲಿ ಕಂಪನಿಯು “ಸ್ವಲ್ಪ ನಿಷ್ಕಪಟ” ವಾಗಿರಬಹುದು ಎಂದು ಹೇಳಿದ್ದಾರೆ..

ತನಿಖೆಯ ಪ್ರಕಾರ, 11.8 ಮಿಲಿಯನ್ ಡಾಲರ್ ಒಪ್ಪಂದದ ಭಾಗವಾಗಿ, ಚಾರ್ಸಿ ನಂಬರ್ ಮತ್ತು ಪರವಾನಗಿ ಫಲಕಗಳನ್ನು ಬದಲಾಯಿಸುವ ದಂಧೆಯೂ ಇಲ್ಲಿ ನಡೆದಿದೆ. ಭಾರತೀಯ ಗಣಿಗಾರಿಕೆ ಕಂಪನಿ ಒಂದರ ಜೊತೆ ಸ್ಕ್ಯಾನಿಯಾ ಈ ದಂಧೆ ಮಾಡಿದೆ ಎಂದು ಆರೋಪಿಸಲಾಗಿದೆ.

ಲಂಚ ಹಗರಣದ ಸುದ್ದಿ ಬರುತ್ತಿದ್ದಂತೆ, ಟ್ವಿಟರ್‌ನಲ್ಲಿ “ಸ್ಕ್ಯಾನಿಯಾ ಹಗರಣ” ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಭರ್ಜರಿ ವಿರೋಧ ವ್ಯಕ್ತವಾಗಿತು. ಆಕ್ಟಿವಿಸ್ಟ್‌ಗಳು, ಪತ್ರಕರ್ತರು ಮತ್ತು ಇತರ ಬಳಕೆದಾರರು ಈ ಹಗರಣ ವರದಿ ಮಾಡದ ಮುಖ್ಯವಾಹಿನಿಯ ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಇಂಡಿಯಾ ಟುಡೆ ಮಾಜಿ ಸಂಪಾದಕ ದಿಲೀಪ್ ಮಂಡಲ್, ಹಗರಣದ ಬಗ್ಗೆ ಮುಖ್ಯವಾಹಿನಿಗಳ ಮೌನವನ್ನು ಟೀಕಿಸಿದ್ದಾರೆ. ಕಾಂಗ್ರೆಸ್ ಮುಖವಾಣಿ ನ್ಯಾಷನಲ್ ಹೆರಾಲ್ಡ್ ಸಂಪಾದಕೀಯ ಸಲಹೆಗಾರ ಸಂಜುಕ್ತ ಬಸು ಮತ್ತು ಸ್ವೀಡನ್ ಮೂಲದ ಸಂಶೋಧಕ ಅಶೋಕ್ ಸ್ವೈನ್ ಕೂಡ ತನಿಖೆಯ ಬಗ್ಗೆ ಟ್ವೀಟ್ ಮಾಡಿದ್ದಾರೆ. ಆದಿವಾಸಿ ಹಕ್ಕುಗಳ ಗುಂಪು ಸಹ ವಿರೋಧ ವ್ಯಕ್ತ ಮಾಡಿದೆ.

ಪಟ್ಟಭದ್ರ ಹಿತಾಸಕ್ತಿಗಳನ್ನು ಗಮನಿಸದ ಅಥವಾ ಆ ತರಹ ನಾಟಕ ಆಡುವ ಪತ್ರಿಕೋದ್ಯಮವು ಈ ದೇಶದಲ್ಲಿ ಹೆಚ್ಚು ಚಾಲ್ತಿಯಲ್ಲಿದೆ ಎಂಬುದನ್ನು ಇದು ತೋರಿಸುತ್ತದೆ.
(ಕೃಪೆ: ನ್ಯೂಸ್ ಲ್ಯಾಂಡ್ರಿ)


ಇದನ್ನೂ ಓದಿ: ಖಾಲಿ ಗೋಡೌನ್‌ಗೆ ಸರ್ಕಾರದಿಂದ ಆರೂವರೆ ಕೋಟಿ ಬಾಡಿಗೆ ಪಡೆದ ಅದಾನಿ!: ಅದಾನಿಗಾಗಿ ಸಿಎಜಿ ವರದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...