Homeಅಂತರಾಷ್ಟ್ರೀಯವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

ವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

- Advertisement -
- Advertisement -

ಒಂದಲ್ಲ, ಏಳು ಭಾರತೀಯ ರಾಜ್ಯಗಳು! ಬಸ್ ಖರೀದಿಯಲ್ಲಿ ‘ರೈಲು’ ಬಿಟ್ಟಿದೆ ಕೇಂದ್ರ ಸಾರಿಗೆ ಸಚಿವಾಲಯ! ಹಾಳಾಗಿ ಹೋಗ್ಲಿ, ಇದೆಲ್ಲ ಗೊತ್ತಿದ್ದರೂ, ದೊಡ್ಡ ಮೀಡಿಯಾ ಸುಮ್ಮನಿದೆ!
ಏಳು ರಾಜ್ಯಗಳಿಗೆ ಬಸ್‌ ಒದಗಿಸುವ ಒಪ್ಪಂದಗಳನ್ನು ಗೆಲ್ಲಲು ಸ್ವೀಡಿಷ್ ಬಸ್ ತಯಾರಕ ಕಂಪನಿ ಸ್ಕ್ಯಾನಿಯಾ ಲಂಚ ನೀಡಿದೆ, ಸ್ವೀಡನ್‌ನ ಎಸ್‌ವಿಟಿ ಮತ್ತು ಜರ್ಮನಿಯ ಝೆಡ್‌ಡಿಎಫ್ ಬಹಿರಂಗ ಮಾಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

2013 ಮತ್ತು 2016 ರ ನಡುವೆ ಏಳು ಭಾರತೀಯ ರಾಜ್ಯಗಳಲ್ಲಿ ಬಸ್ ಒಪ್ಪಂದಗಳನ್ನು ಗೆಲ್ಲಲು ಸ್ವೀಡಿಷ್ ಟ್ರಕ್ ಮತ್ತು ಬಸ್ ತಯಾರಕ ಸಂಸ್ಥೆ ಸ್ಕ್ಯಾನಿಯಾ ಲಂಚ ನೀಡಿದೆ ಎಂದು ರಾಯಿಟರ್ಸ್ ಮಂಗಳವಾರ ವರದಿ ಮಾಡಿದೆ.

ಸ್ಕ್ಯಾನಿಯಾದಿಂದ ಲಂಚ ಪಡೆದವರಲ್ಲಿ ಒಬ್ಬ ‘ಅನಾಮಧೇಯ’ ಸಚಿವ ಕೂಡ ಇದ್ದಾರೆ.
ಸ್ವೀಡನ್‌ನ ಎಸ್‌ವಿಟಿ ಮತ್ತು ಜರ್ಮನಿಯ ಝೆಡ್‌ಡಿಎಫ್ ತನಿಖೆಯನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದ ಪ್ರಕಾರ, 2016 ರ ನವೆಂಬರ್‌ನಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಪುತ್ರರೊಂದಿಗೆ ಸಂಬಂಧ ಹೊಂದಿರುವ ಕಂಪನಿಗೆ ಸ್ಕ್ಯಾನಿಯಾ ಐಷಾರಾಮಿ ಬಸ್ ಒಂದನ್ನು ಮಾರಿದೆ. ಈ ಆರೋಪಗಳನ್ನು ಸಚಿವರ ಕಚೇರಿ “ದುರುದ್ದೇಶಪೂರಿತ, ಕಟ್ಟುಕಥೆ ಮತ್ತು ಆಧಾರರಹಿತ” ಎಂದು ಬುಧವಾರ ಹೇಳಿದೆ.

ಸ್ಕ್ಯಾನಿಯಾ ವಕ್ತಾರರು ಈ ಪ್ರಕರಣದಲ್ಲಿ ಲೋಪ ಆಗಿವೆ ಎಂದು ರಾಯಿಟರ್ಸ್‌ಗೆ ತಿಳಿಸಿದ್ದಾರೆ.. ಸ್ಕ್ಯಾನಿಯಾದ ಸಿಇಒ ಹೆನ್ರಿಕ್ ಹೆನ್ರಿಕ್ಸನ್, ಭಾರತದಲ್ಲಿ ತನ್ನ ವ್ಯವಹಾರದಲ್ಲಿ ಕಂಪನಿಯು “ಸ್ವಲ್ಪ ನಿಷ್ಕಪಟ” ವಾಗಿರಬಹುದು ಎಂದು ಹೇಳಿದ್ದಾರೆ..

ತನಿಖೆಯ ಪ್ರಕಾರ, 11.8 ಮಿಲಿಯನ್ ಡಾಲರ್ ಒಪ್ಪಂದದ ಭಾಗವಾಗಿ, ಚಾರ್ಸಿ ನಂಬರ್ ಮತ್ತು ಪರವಾನಗಿ ಫಲಕಗಳನ್ನು ಬದಲಾಯಿಸುವ ದಂಧೆಯೂ ಇಲ್ಲಿ ನಡೆದಿದೆ. ಭಾರತೀಯ ಗಣಿಗಾರಿಕೆ ಕಂಪನಿ ಒಂದರ ಜೊತೆ ಸ್ಕ್ಯಾನಿಯಾ ಈ ದಂಧೆ ಮಾಡಿದೆ ಎಂದು ಆರೋಪಿಸಲಾಗಿದೆ.

ಲಂಚ ಹಗರಣದ ಸುದ್ದಿ ಬರುತ್ತಿದ್ದಂತೆ, ಟ್ವಿಟರ್‌ನಲ್ಲಿ “ಸ್ಕ್ಯಾನಿಯಾ ಹಗರಣ” ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಭರ್ಜರಿ ವಿರೋಧ ವ್ಯಕ್ತವಾಗಿತು. ಆಕ್ಟಿವಿಸ್ಟ್‌ಗಳು, ಪತ್ರಕರ್ತರು ಮತ್ತು ಇತರ ಬಳಕೆದಾರರು ಈ ಹಗರಣ ವರದಿ ಮಾಡದ ಮುಖ್ಯವಾಹಿನಿಯ ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಇಂಡಿಯಾ ಟುಡೆ ಮಾಜಿ ಸಂಪಾದಕ ದಿಲೀಪ್ ಮಂಡಲ್, ಹಗರಣದ ಬಗ್ಗೆ ಮುಖ್ಯವಾಹಿನಿಗಳ ಮೌನವನ್ನು ಟೀಕಿಸಿದ್ದಾರೆ. ಕಾಂಗ್ರೆಸ್ ಮುಖವಾಣಿ ನ್ಯಾಷನಲ್ ಹೆರಾಲ್ಡ್ ಸಂಪಾದಕೀಯ ಸಲಹೆಗಾರ ಸಂಜುಕ್ತ ಬಸು ಮತ್ತು ಸ್ವೀಡನ್ ಮೂಲದ ಸಂಶೋಧಕ ಅಶೋಕ್ ಸ್ವೈನ್ ಕೂಡ ತನಿಖೆಯ ಬಗ್ಗೆ ಟ್ವೀಟ್ ಮಾಡಿದ್ದಾರೆ. ಆದಿವಾಸಿ ಹಕ್ಕುಗಳ ಗುಂಪು ಸಹ ವಿರೋಧ ವ್ಯಕ್ತ ಮಾಡಿದೆ.

ಪಟ್ಟಭದ್ರ ಹಿತಾಸಕ್ತಿಗಳನ್ನು ಗಮನಿಸದ ಅಥವಾ ಆ ತರಹ ನಾಟಕ ಆಡುವ ಪತ್ರಿಕೋದ್ಯಮವು ಈ ದೇಶದಲ್ಲಿ ಹೆಚ್ಚು ಚಾಲ್ತಿಯಲ್ಲಿದೆ ಎಂಬುದನ್ನು ಇದು ತೋರಿಸುತ್ತದೆ.
(ಕೃಪೆ: ನ್ಯೂಸ್ ಲ್ಯಾಂಡ್ರಿ)


ಇದನ್ನೂ ಓದಿ: ಖಾಲಿ ಗೋಡೌನ್‌ಗೆ ಸರ್ಕಾರದಿಂದ ಆರೂವರೆ ಕೋಟಿ ಬಾಡಿಗೆ ಪಡೆದ ಅದಾನಿ!: ಅದಾನಿಗಾಗಿ ಸಿಎಜಿ ವರದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...