Homeಅಂತರಾಷ್ಟ್ರೀಯವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

ವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

- Advertisement -
- Advertisement -

ಒಂದಲ್ಲ, ಏಳು ಭಾರತೀಯ ರಾಜ್ಯಗಳು! ಬಸ್ ಖರೀದಿಯಲ್ಲಿ ‘ರೈಲು’ ಬಿಟ್ಟಿದೆ ಕೇಂದ್ರ ಸಾರಿಗೆ ಸಚಿವಾಲಯ! ಹಾಳಾಗಿ ಹೋಗ್ಲಿ, ಇದೆಲ್ಲ ಗೊತ್ತಿದ್ದರೂ, ದೊಡ್ಡ ಮೀಡಿಯಾ ಸುಮ್ಮನಿದೆ!
ಏಳು ರಾಜ್ಯಗಳಿಗೆ ಬಸ್‌ ಒದಗಿಸುವ ಒಪ್ಪಂದಗಳನ್ನು ಗೆಲ್ಲಲು ಸ್ವೀಡಿಷ್ ಬಸ್ ತಯಾರಕ ಕಂಪನಿ ಸ್ಕ್ಯಾನಿಯಾ ಲಂಚ ನೀಡಿದೆ, ಸ್ವೀಡನ್‌ನ ಎಸ್‌ವಿಟಿ ಮತ್ತು ಜರ್ಮನಿಯ ಝೆಡ್‌ಡಿಎಫ್ ಬಹಿರಂಗ ಮಾಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

2013 ಮತ್ತು 2016 ರ ನಡುವೆ ಏಳು ಭಾರತೀಯ ರಾಜ್ಯಗಳಲ್ಲಿ ಬಸ್ ಒಪ್ಪಂದಗಳನ್ನು ಗೆಲ್ಲಲು ಸ್ವೀಡಿಷ್ ಟ್ರಕ್ ಮತ್ತು ಬಸ್ ತಯಾರಕ ಸಂಸ್ಥೆ ಸ್ಕ್ಯಾನಿಯಾ ಲಂಚ ನೀಡಿದೆ ಎಂದು ರಾಯಿಟರ್ಸ್ ಮಂಗಳವಾರ ವರದಿ ಮಾಡಿದೆ.

ಸ್ಕ್ಯಾನಿಯಾದಿಂದ ಲಂಚ ಪಡೆದವರಲ್ಲಿ ಒಬ್ಬ ‘ಅನಾಮಧೇಯ’ ಸಚಿವ ಕೂಡ ಇದ್ದಾರೆ.
ಸ್ವೀಡನ್‌ನ ಎಸ್‌ವಿಟಿ ಮತ್ತು ಜರ್ಮನಿಯ ಝೆಡ್‌ಡಿಎಫ್ ತನಿಖೆಯನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದ ಪ್ರಕಾರ, 2016 ರ ನವೆಂಬರ್‌ನಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಪುತ್ರರೊಂದಿಗೆ ಸಂಬಂಧ ಹೊಂದಿರುವ ಕಂಪನಿಗೆ ಸ್ಕ್ಯಾನಿಯಾ ಐಷಾರಾಮಿ ಬಸ್ ಒಂದನ್ನು ಮಾರಿದೆ. ಈ ಆರೋಪಗಳನ್ನು ಸಚಿವರ ಕಚೇರಿ “ದುರುದ್ದೇಶಪೂರಿತ, ಕಟ್ಟುಕಥೆ ಮತ್ತು ಆಧಾರರಹಿತ” ಎಂದು ಬುಧವಾರ ಹೇಳಿದೆ.

ಸ್ಕ್ಯಾನಿಯಾ ವಕ್ತಾರರು ಈ ಪ್ರಕರಣದಲ್ಲಿ ಲೋಪ ಆಗಿವೆ ಎಂದು ರಾಯಿಟರ್ಸ್‌ಗೆ ತಿಳಿಸಿದ್ದಾರೆ.. ಸ್ಕ್ಯಾನಿಯಾದ ಸಿಇಒ ಹೆನ್ರಿಕ್ ಹೆನ್ರಿಕ್ಸನ್, ಭಾರತದಲ್ಲಿ ತನ್ನ ವ್ಯವಹಾರದಲ್ಲಿ ಕಂಪನಿಯು “ಸ್ವಲ್ಪ ನಿಷ್ಕಪಟ” ವಾಗಿರಬಹುದು ಎಂದು ಹೇಳಿದ್ದಾರೆ..

ತನಿಖೆಯ ಪ್ರಕಾರ, 11.8 ಮಿಲಿಯನ್ ಡಾಲರ್ ಒಪ್ಪಂದದ ಭಾಗವಾಗಿ, ಚಾರ್ಸಿ ನಂಬರ್ ಮತ್ತು ಪರವಾನಗಿ ಫಲಕಗಳನ್ನು ಬದಲಾಯಿಸುವ ದಂಧೆಯೂ ಇಲ್ಲಿ ನಡೆದಿದೆ. ಭಾರತೀಯ ಗಣಿಗಾರಿಕೆ ಕಂಪನಿ ಒಂದರ ಜೊತೆ ಸ್ಕ್ಯಾನಿಯಾ ಈ ದಂಧೆ ಮಾಡಿದೆ ಎಂದು ಆರೋಪಿಸಲಾಗಿದೆ.

ಲಂಚ ಹಗರಣದ ಸುದ್ದಿ ಬರುತ್ತಿದ್ದಂತೆ, ಟ್ವಿಟರ್‌ನಲ್ಲಿ “ಸ್ಕ್ಯಾನಿಯಾ ಹಗರಣ” ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಭರ್ಜರಿ ವಿರೋಧ ವ್ಯಕ್ತವಾಗಿತು. ಆಕ್ಟಿವಿಸ್ಟ್‌ಗಳು, ಪತ್ರಕರ್ತರು ಮತ್ತು ಇತರ ಬಳಕೆದಾರರು ಈ ಹಗರಣ ವರದಿ ಮಾಡದ ಮುಖ್ಯವಾಹಿನಿಯ ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಇಂಡಿಯಾ ಟುಡೆ ಮಾಜಿ ಸಂಪಾದಕ ದಿಲೀಪ್ ಮಂಡಲ್, ಹಗರಣದ ಬಗ್ಗೆ ಮುಖ್ಯವಾಹಿನಿಗಳ ಮೌನವನ್ನು ಟೀಕಿಸಿದ್ದಾರೆ. ಕಾಂಗ್ರೆಸ್ ಮುಖವಾಣಿ ನ್ಯಾಷನಲ್ ಹೆರಾಲ್ಡ್ ಸಂಪಾದಕೀಯ ಸಲಹೆಗಾರ ಸಂಜುಕ್ತ ಬಸು ಮತ್ತು ಸ್ವೀಡನ್ ಮೂಲದ ಸಂಶೋಧಕ ಅಶೋಕ್ ಸ್ವೈನ್ ಕೂಡ ತನಿಖೆಯ ಬಗ್ಗೆ ಟ್ವೀಟ್ ಮಾಡಿದ್ದಾರೆ. ಆದಿವಾಸಿ ಹಕ್ಕುಗಳ ಗುಂಪು ಸಹ ವಿರೋಧ ವ್ಯಕ್ತ ಮಾಡಿದೆ.

ಪಟ್ಟಭದ್ರ ಹಿತಾಸಕ್ತಿಗಳನ್ನು ಗಮನಿಸದ ಅಥವಾ ಆ ತರಹ ನಾಟಕ ಆಡುವ ಪತ್ರಿಕೋದ್ಯಮವು ಈ ದೇಶದಲ್ಲಿ ಹೆಚ್ಚು ಚಾಲ್ತಿಯಲ್ಲಿದೆ ಎಂಬುದನ್ನು ಇದು ತೋರಿಸುತ್ತದೆ.
(ಕೃಪೆ: ನ್ಯೂಸ್ ಲ್ಯಾಂಡ್ರಿ)


ಇದನ್ನೂ ಓದಿ: ಖಾಲಿ ಗೋಡೌನ್‌ಗೆ ಸರ್ಕಾರದಿಂದ ಆರೂವರೆ ಕೋಟಿ ಬಾಡಿಗೆ ಪಡೆದ ಅದಾನಿ!: ಅದಾನಿಗಾಗಿ ಸಿಎಜಿ ವರದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....