Homeಅಂತರಾಷ್ಟ್ರೀಯವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

ವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

- Advertisement -
- Advertisement -

ಒಂದಲ್ಲ, ಏಳು ಭಾರತೀಯ ರಾಜ್ಯಗಳು! ಬಸ್ ಖರೀದಿಯಲ್ಲಿ ‘ರೈಲು’ ಬಿಟ್ಟಿದೆ ಕೇಂದ್ರ ಸಾರಿಗೆ ಸಚಿವಾಲಯ! ಹಾಳಾಗಿ ಹೋಗ್ಲಿ, ಇದೆಲ್ಲ ಗೊತ್ತಿದ್ದರೂ, ದೊಡ್ಡ ಮೀಡಿಯಾ ಸುಮ್ಮನಿದೆ!
ಏಳು ರಾಜ್ಯಗಳಿಗೆ ಬಸ್‌ ಒದಗಿಸುವ ಒಪ್ಪಂದಗಳನ್ನು ಗೆಲ್ಲಲು ಸ್ವೀಡಿಷ್ ಬಸ್ ತಯಾರಕ ಕಂಪನಿ ಸ್ಕ್ಯಾನಿಯಾ ಲಂಚ ನೀಡಿದೆ, ಸ್ವೀಡನ್‌ನ ಎಸ್‌ವಿಟಿ ಮತ್ತು ಜರ್ಮನಿಯ ಝೆಡ್‌ಡಿಎಫ್ ಬಹಿರಂಗ ಮಾಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

2013 ಮತ್ತು 2016 ರ ನಡುವೆ ಏಳು ಭಾರತೀಯ ರಾಜ್ಯಗಳಲ್ಲಿ ಬಸ್ ಒಪ್ಪಂದಗಳನ್ನು ಗೆಲ್ಲಲು ಸ್ವೀಡಿಷ್ ಟ್ರಕ್ ಮತ್ತು ಬಸ್ ತಯಾರಕ ಸಂಸ್ಥೆ ಸ್ಕ್ಯಾನಿಯಾ ಲಂಚ ನೀಡಿದೆ ಎಂದು ರಾಯಿಟರ್ಸ್ ಮಂಗಳವಾರ ವರದಿ ಮಾಡಿದೆ.

ಸ್ಕ್ಯಾನಿಯಾದಿಂದ ಲಂಚ ಪಡೆದವರಲ್ಲಿ ಒಬ್ಬ ‘ಅನಾಮಧೇಯ’ ಸಚಿವ ಕೂಡ ಇದ್ದಾರೆ.
ಸ್ವೀಡನ್‌ನ ಎಸ್‌ವಿಟಿ ಮತ್ತು ಜರ್ಮನಿಯ ಝೆಡ್‌ಡಿಎಫ್ ತನಿಖೆಯನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದ ಪ್ರಕಾರ, 2016 ರ ನವೆಂಬರ್‌ನಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಪುತ್ರರೊಂದಿಗೆ ಸಂಬಂಧ ಹೊಂದಿರುವ ಕಂಪನಿಗೆ ಸ್ಕ್ಯಾನಿಯಾ ಐಷಾರಾಮಿ ಬಸ್ ಒಂದನ್ನು ಮಾರಿದೆ. ಈ ಆರೋಪಗಳನ್ನು ಸಚಿವರ ಕಚೇರಿ “ದುರುದ್ದೇಶಪೂರಿತ, ಕಟ್ಟುಕಥೆ ಮತ್ತು ಆಧಾರರಹಿತ” ಎಂದು ಬುಧವಾರ ಹೇಳಿದೆ.

ಸ್ಕ್ಯಾನಿಯಾ ವಕ್ತಾರರು ಈ ಪ್ರಕರಣದಲ್ಲಿ ಲೋಪ ಆಗಿವೆ ಎಂದು ರಾಯಿಟರ್ಸ್‌ಗೆ ತಿಳಿಸಿದ್ದಾರೆ.. ಸ್ಕ್ಯಾನಿಯಾದ ಸಿಇಒ ಹೆನ್ರಿಕ್ ಹೆನ್ರಿಕ್ಸನ್, ಭಾರತದಲ್ಲಿ ತನ್ನ ವ್ಯವಹಾರದಲ್ಲಿ ಕಂಪನಿಯು “ಸ್ವಲ್ಪ ನಿಷ್ಕಪಟ” ವಾಗಿರಬಹುದು ಎಂದು ಹೇಳಿದ್ದಾರೆ..

ತನಿಖೆಯ ಪ್ರಕಾರ, 11.8 ಮಿಲಿಯನ್ ಡಾಲರ್ ಒಪ್ಪಂದದ ಭಾಗವಾಗಿ, ಚಾರ್ಸಿ ನಂಬರ್ ಮತ್ತು ಪರವಾನಗಿ ಫಲಕಗಳನ್ನು ಬದಲಾಯಿಸುವ ದಂಧೆಯೂ ಇಲ್ಲಿ ನಡೆದಿದೆ. ಭಾರತೀಯ ಗಣಿಗಾರಿಕೆ ಕಂಪನಿ ಒಂದರ ಜೊತೆ ಸ್ಕ್ಯಾನಿಯಾ ಈ ದಂಧೆ ಮಾಡಿದೆ ಎಂದು ಆರೋಪಿಸಲಾಗಿದೆ.

ಲಂಚ ಹಗರಣದ ಸುದ್ದಿ ಬರುತ್ತಿದ್ದಂತೆ, ಟ್ವಿಟರ್‌ನಲ್ಲಿ “ಸ್ಕ್ಯಾನಿಯಾ ಹಗರಣ” ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಭರ್ಜರಿ ವಿರೋಧ ವ್ಯಕ್ತವಾಗಿತು. ಆಕ್ಟಿವಿಸ್ಟ್‌ಗಳು, ಪತ್ರಕರ್ತರು ಮತ್ತು ಇತರ ಬಳಕೆದಾರರು ಈ ಹಗರಣ ವರದಿ ಮಾಡದ ಮುಖ್ಯವಾಹಿನಿಯ ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಇಂಡಿಯಾ ಟುಡೆ ಮಾಜಿ ಸಂಪಾದಕ ದಿಲೀಪ್ ಮಂಡಲ್, ಹಗರಣದ ಬಗ್ಗೆ ಮುಖ್ಯವಾಹಿನಿಗಳ ಮೌನವನ್ನು ಟೀಕಿಸಿದ್ದಾರೆ. ಕಾಂಗ್ರೆಸ್ ಮುಖವಾಣಿ ನ್ಯಾಷನಲ್ ಹೆರಾಲ್ಡ್ ಸಂಪಾದಕೀಯ ಸಲಹೆಗಾರ ಸಂಜುಕ್ತ ಬಸು ಮತ್ತು ಸ್ವೀಡನ್ ಮೂಲದ ಸಂಶೋಧಕ ಅಶೋಕ್ ಸ್ವೈನ್ ಕೂಡ ತನಿಖೆಯ ಬಗ್ಗೆ ಟ್ವೀಟ್ ಮಾಡಿದ್ದಾರೆ. ಆದಿವಾಸಿ ಹಕ್ಕುಗಳ ಗುಂಪು ಸಹ ವಿರೋಧ ವ್ಯಕ್ತ ಮಾಡಿದೆ.

ಪಟ್ಟಭದ್ರ ಹಿತಾಸಕ್ತಿಗಳನ್ನು ಗಮನಿಸದ ಅಥವಾ ಆ ತರಹ ನಾಟಕ ಆಡುವ ಪತ್ರಿಕೋದ್ಯಮವು ಈ ದೇಶದಲ್ಲಿ ಹೆಚ್ಚು ಚಾಲ್ತಿಯಲ್ಲಿದೆ ಎಂಬುದನ್ನು ಇದು ತೋರಿಸುತ್ತದೆ.
(ಕೃಪೆ: ನ್ಯೂಸ್ ಲ್ಯಾಂಡ್ರಿ)


ಇದನ್ನೂ ಓದಿ: ಖಾಲಿ ಗೋಡೌನ್‌ಗೆ ಸರ್ಕಾರದಿಂದ ಆರೂವರೆ ಕೋಟಿ ಬಾಡಿಗೆ ಪಡೆದ ಅದಾನಿ!: ಅದಾನಿಗಾಗಿ ಸಿಎಜಿ ವರದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...