Homeಮುಖಪುಟಉನ್ನತ ನ್ಯಾಯಾಂಗದಲ್ಲಿ ಮಹಿಳಾ ನ್ಯಾಯಾಧೀಶರ ಕೊರತೆ: ಕಳವಳ ವ್ಯಕ್ತಪಡಿಸಿದ ಎಸ್‌ಸಿಬಿಎ

ಉನ್ನತ ನ್ಯಾಯಾಂಗದಲ್ಲಿ ಮಹಿಳಾ ನ್ಯಾಯಾಧೀಶರ ಕೊರತೆ: ಕಳವಳ ವ್ಯಕ್ತಪಡಿಸಿದ ಎಸ್‌ಸಿಬಿಎ

- Advertisement -
- Advertisement -

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳೆರಡರಲ್ಲೂ ಉನ್ನತ ನ್ಯಾಯಾಂಗಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಕಡಿಮೆ ಇರುವುದರ ಬಗ್ಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ತೀವ್ರ ಕಳವಳ ವ್ಯಕ್ತಪಡಿಸಿದೆ. ಮುಂಬರುವ ನ್ಯಾಯಾಂಗ ನೇಮಕಾತಿಗಳಲ್ಲಿ ಸಾಕಷ್ಟು ಲಿಂಗ ವೈವಿಧ್ಯತೆಯನ್ನು ಕಾಯ್ದುಕೊಳ್ಳುವಂತೆ ಕೊಲಿಜಿಯಂ ಅನ್ನು ಒತ್ತಾಯಿಸಿದೆ.

ಆಗಸ್ಟ್ 30, 2025ರಂದು ಅಂಗೀಕರಿಸಲಾದ ನಿರ್ಣಯದಲ್ಲಿ, ಉತ್ತರಾಖಂಡ, ತ್ರಿಪುರ, ಮೇಘಾಲಯ ಮತ್ತು ಮಣಿಪುರದಂತಹ ಹಲವಾರು ಹೈಕೋರ್ಟ್‌ಗಳಲ್ಲಿ ಪ್ರಸ್ತುತ ಮಹಿಳಾ ನ್ಯಾಯಾಧೀಶರೇ ಇಲ್ಲ ಎಂದು ಎಸ್‌ಸಿಬಿಎ ಹೇಳಿದೆ. ದೇಶದಾದ್ಯಂತ, ಸುಮಾರು 1,100 ಅನುಮೋದಿತ ಹೈಕೋರ್ಟ್ ನ್ಯಾಯಾಧೀಶರ ಹುದ್ದೆಗಳಲ್ಲಿ, ಸುಮಾರು 670 ಪುರುಷರು ಮತ್ತು ಕೇವಲ 103 ಮಹಿಳೆಯರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ ಎಂದಿದೆ.

ಇತ್ತೀಚಿನ ನ್ಯಾಯಾಂಗ ನೇಮಕಾತಿಗಳ ಕುರಿತು ಸಂಘವು ತನ್ನ ‘ತೀವ್ರ ನಿರಾಶೆ’ ದಾಖಲಿಸಿದೆ. 2021ರಿಂದ ಸುಪ್ರೀಂ ಕೋರ್ಟ್‌ಗೆ ಯಾವುದೇ ಮಹಿಳಾ ನ್ಯಾಯಾಧೀಶರನ್ನು ನೇಮಿಸಲಾಗಿಲ್ಲ ಎಂದು ಹೇಳಿದೆ. ಪ್ರಸ್ತುತ, ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು ಸುಪ್ರೀಂ ಕೋರ್ಟ್‌ನ ಏಕೈಕ ಮಹಿಳಾ ನ್ಯಾಯಾಧೀಶರಾಗಿದ್ದಾರೆ.

ಉನ್ನತ ನ್ಯಾಯಾಂಗ ನೇಮಕಾತಿಗಳಲ್ಲಿ ಮಹಿಳೆಯರಿಗೆ ಕನಿಷ್ಠ ಅನುಪಾತದ ಪ್ರಾತಿನಿಧ್ಯಕ್ಕೆ ಒತ್ತಾಯಿಸಿ, ತನ್ನ ಅಧ್ಯಕ್ಷ ಹಿರಿಯ ವಕೀಲ ವಿಕಾಸ್ ಸಿಂಗ್ ಅವರು ಮೇ 24, 2025 ಮತ್ತು ಜುಲೈ 18, 2025ರಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದರು ಎಂದು ಎಸ್‌ಸಿಬಿಎ ನೆನಪಿಸಿಕೊಂಡಿದೆ.

ನ್ಯಾಯಯುತ ಮತ್ತು ಸಮಾನ ಪ್ರಾತಿನಿಧ್ಯಕ್ಕಾಗಿ ಮಾತ್ರವಲ್ಲದೆ, ನ್ಯಾಯಾಂಗದಲ್ಲಿ ಸಾರ್ವಜನಿಕರ ವಿಶ್ವಾಸವನ್ನು ಬಲಪಡಿಸಲು, ನ್ಯಾಯಾಂಗ ದೃಷ್ಟಿಕೋನಗಳನ್ನು ಶ್ರೀಮಂತಗೊಳಿಸಲು ಮತ್ತು ನ್ಯಾಯ ಸಂಸ್ಥೆಯಲ್ಲಿ ಸಮಾಜದ ವೈವಿಧ್ಯತೆಯನ್ನು ಪ್ರತಿಬಿಂಬಿಸಲು ನ್ಯಾಯಪೀಠದಲ್ಲಿ ಹೆಚ್ಚಿನ ಲಿಂಗ ಸಮತೋಲನ ಅತ್ಯಗತ್ಯ ಎಂದು ಎಸ್‌ಸಿಬಿಎ ನಿರ್ಣಯವು ಒತ್ತಿ ಹೇಳಿದೆ.

ಅದರಂತೆ, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳೆರಡಕ್ಕೂ ಮುಂಬರುವ ನ್ಯಾಯಾಂಗ ನೇಮಕಾತಿಗಳಲ್ಲಿ ಹೆಚ್ಚಿನ ಮಹಿಳಾ ನ್ಯಾಯಾಧೀಶರ ಆಯ್ಕೆ ಮತ್ತು ಬಡ್ತಿಗೆ ‘ತುರ್ತು ಹಾಗೂ ಸರಿಯಾದ ಪರಿಗಣನೆ’ ನೀಡುವಂತೆ ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಕೊಲಿಜಿಯಂಗೆ ವಿನಂತಿಸಲು ಎಸ್‌ಸಿಬಿಎ ನಿರ್ಧರಿಸಿದೆ.

ಸುಪ್ರೀಂ ಕೋರ್ಟ್‌ಗೆ ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರ ನೇಮಕದ ಸುತ್ತ ಚರ್ಚೆಗಳು ಗರಿಗೆದರರಿರುವ ನಡುವೆ, ಎಸ್‌ಸಿಬಿಎ ಮಹಿಳಾ ನ್ಯಾಯಾಧೀಶರ ಕೊರತೆಯ ಬಗ್ಗೆ ನಿರ್ಣಯ ಕೈಗೊಂಡಿದೆ. ಹಿರಿಯರಾದ ಕನಿಷ್ಠ ಮೂವರು ಮಹಿಳಾ ನ್ಯಾಯಾಧೀಶರಿಗಿಂತ ವಿಪುಲ್ ಪಂಚೋಲಿಗೆ ಏಕೆ ಆದ್ಯತೆ ನೀಡಲಾಯಿತು ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಅಂತರ ಧರ್ಮೀಯ ಭೂ ವರ್ಗಾವಣೆಗೆ ಎಸ್‌ಒಪಿ: ಅಸ್ಸಾಂ ಸರ್ಕಾರದ ಕ್ರಮಕ್ಕೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...