Homeಮುಖಪುಟಉನ್ನತ ನ್ಯಾಯಾಂಗದಲ್ಲಿ ಮಹಿಳಾ ನ್ಯಾಯಾಧೀಶರ ಕೊರತೆ: ಕಳವಳ ವ್ಯಕ್ತಪಡಿಸಿದ ಎಸ್‌ಸಿಬಿಎ

ಉನ್ನತ ನ್ಯಾಯಾಂಗದಲ್ಲಿ ಮಹಿಳಾ ನ್ಯಾಯಾಧೀಶರ ಕೊರತೆ: ಕಳವಳ ವ್ಯಕ್ತಪಡಿಸಿದ ಎಸ್‌ಸಿಬಿಎ

- Advertisement -
- Advertisement -

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳೆರಡರಲ್ಲೂ ಉನ್ನತ ನ್ಯಾಯಾಂಗಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಕಡಿಮೆ ಇರುವುದರ ಬಗ್ಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ತೀವ್ರ ಕಳವಳ ವ್ಯಕ್ತಪಡಿಸಿದೆ. ಮುಂಬರುವ ನ್ಯಾಯಾಂಗ ನೇಮಕಾತಿಗಳಲ್ಲಿ ಸಾಕಷ್ಟು ಲಿಂಗ ವೈವಿಧ್ಯತೆಯನ್ನು ಕಾಯ್ದುಕೊಳ್ಳುವಂತೆ ಕೊಲಿಜಿಯಂ ಅನ್ನು ಒತ್ತಾಯಿಸಿದೆ.

ಆಗಸ್ಟ್ 30, 2025ರಂದು ಅಂಗೀಕರಿಸಲಾದ ನಿರ್ಣಯದಲ್ಲಿ, ಉತ್ತರಾಖಂಡ, ತ್ರಿಪುರ, ಮೇಘಾಲಯ ಮತ್ತು ಮಣಿಪುರದಂತಹ ಹಲವಾರು ಹೈಕೋರ್ಟ್‌ಗಳಲ್ಲಿ ಪ್ರಸ್ತುತ ಮಹಿಳಾ ನ್ಯಾಯಾಧೀಶರೇ ಇಲ್ಲ ಎಂದು ಎಸ್‌ಸಿಬಿಎ ಹೇಳಿದೆ. ದೇಶದಾದ್ಯಂತ, ಸುಮಾರು 1,100 ಅನುಮೋದಿತ ಹೈಕೋರ್ಟ್ ನ್ಯಾಯಾಧೀಶರ ಹುದ್ದೆಗಳಲ್ಲಿ, ಸುಮಾರು 670 ಪುರುಷರು ಮತ್ತು ಕೇವಲ 103 ಮಹಿಳೆಯರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ ಎಂದಿದೆ.

ಇತ್ತೀಚಿನ ನ್ಯಾಯಾಂಗ ನೇಮಕಾತಿಗಳ ಕುರಿತು ಸಂಘವು ತನ್ನ ‘ತೀವ್ರ ನಿರಾಶೆ’ ದಾಖಲಿಸಿದೆ. 2021ರಿಂದ ಸುಪ್ರೀಂ ಕೋರ್ಟ್‌ಗೆ ಯಾವುದೇ ಮಹಿಳಾ ನ್ಯಾಯಾಧೀಶರನ್ನು ನೇಮಿಸಲಾಗಿಲ್ಲ ಎಂದು ಹೇಳಿದೆ. ಪ್ರಸ್ತುತ, ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು ಸುಪ್ರೀಂ ಕೋರ್ಟ್‌ನ ಏಕೈಕ ಮಹಿಳಾ ನ್ಯಾಯಾಧೀಶರಾಗಿದ್ದಾರೆ.

ಉನ್ನತ ನ್ಯಾಯಾಂಗ ನೇಮಕಾತಿಗಳಲ್ಲಿ ಮಹಿಳೆಯರಿಗೆ ಕನಿಷ್ಠ ಅನುಪಾತದ ಪ್ರಾತಿನಿಧ್ಯಕ್ಕೆ ಒತ್ತಾಯಿಸಿ, ತನ್ನ ಅಧ್ಯಕ್ಷ ಹಿರಿಯ ವಕೀಲ ವಿಕಾಸ್ ಸಿಂಗ್ ಅವರು ಮೇ 24, 2025 ಮತ್ತು ಜುಲೈ 18, 2025ರಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದರು ಎಂದು ಎಸ್‌ಸಿಬಿಎ ನೆನಪಿಸಿಕೊಂಡಿದೆ.

ನ್ಯಾಯಯುತ ಮತ್ತು ಸಮಾನ ಪ್ರಾತಿನಿಧ್ಯಕ್ಕಾಗಿ ಮಾತ್ರವಲ್ಲದೆ, ನ್ಯಾಯಾಂಗದಲ್ಲಿ ಸಾರ್ವಜನಿಕರ ವಿಶ್ವಾಸವನ್ನು ಬಲಪಡಿಸಲು, ನ್ಯಾಯಾಂಗ ದೃಷ್ಟಿಕೋನಗಳನ್ನು ಶ್ರೀಮಂತಗೊಳಿಸಲು ಮತ್ತು ನ್ಯಾಯ ಸಂಸ್ಥೆಯಲ್ಲಿ ಸಮಾಜದ ವೈವಿಧ್ಯತೆಯನ್ನು ಪ್ರತಿಬಿಂಬಿಸಲು ನ್ಯಾಯಪೀಠದಲ್ಲಿ ಹೆಚ್ಚಿನ ಲಿಂಗ ಸಮತೋಲನ ಅತ್ಯಗತ್ಯ ಎಂದು ಎಸ್‌ಸಿಬಿಎ ನಿರ್ಣಯವು ಒತ್ತಿ ಹೇಳಿದೆ.

ಅದರಂತೆ, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳೆರಡಕ್ಕೂ ಮುಂಬರುವ ನ್ಯಾಯಾಂಗ ನೇಮಕಾತಿಗಳಲ್ಲಿ ಹೆಚ್ಚಿನ ಮಹಿಳಾ ನ್ಯಾಯಾಧೀಶರ ಆಯ್ಕೆ ಮತ್ತು ಬಡ್ತಿಗೆ ‘ತುರ್ತು ಹಾಗೂ ಸರಿಯಾದ ಪರಿಗಣನೆ’ ನೀಡುವಂತೆ ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಕೊಲಿಜಿಯಂಗೆ ವಿನಂತಿಸಲು ಎಸ್‌ಸಿಬಿಎ ನಿರ್ಧರಿಸಿದೆ.

ಸುಪ್ರೀಂ ಕೋರ್ಟ್‌ಗೆ ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರ ನೇಮಕದ ಸುತ್ತ ಚರ್ಚೆಗಳು ಗರಿಗೆದರರಿರುವ ನಡುವೆ, ಎಸ್‌ಸಿಬಿಎ ಮಹಿಳಾ ನ್ಯಾಯಾಧೀಶರ ಕೊರತೆಯ ಬಗ್ಗೆ ನಿರ್ಣಯ ಕೈಗೊಂಡಿದೆ. ಹಿರಿಯರಾದ ಕನಿಷ್ಠ ಮೂವರು ಮಹಿಳಾ ನ್ಯಾಯಾಧೀಶರಿಗಿಂತ ವಿಪುಲ್ ಪಂಚೋಲಿಗೆ ಏಕೆ ಆದ್ಯತೆ ನೀಡಲಾಯಿತು ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಅಂತರ ಧರ್ಮೀಯ ಭೂ ವರ್ಗಾವಣೆಗೆ ಎಸ್‌ಒಪಿ: ಅಸ್ಸಾಂ ಸರ್ಕಾರದ ಕ್ರಮಕ್ಕೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...