Homeಮುಖಪುಟಮೈಜುಮ್ಮೆನಿಸುವ ದೃಶ್ಯ: ತಮ್ಮ ಜೀವ ಲೆಕ್ಕಿಸದೆ ಸಿನಿಮೀಯ ರೀತಿಯಲ್ಲಿ ತಾಯಿ-ಮಗುವನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

ಮೈಜುಮ್ಮೆನಿಸುವ ದೃಶ್ಯ: ತಮ್ಮ ಜೀವ ಲೆಕ್ಕಿಸದೆ ಸಿನಿಮೀಯ ರೀತಿಯಲ್ಲಿ ತಾಯಿ-ಮಗುವನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

- Advertisement -
- Advertisement -

ತಮಿಳುನಾಡಿನ ಸೇಲಂ ಜಿಲ್ಲೆಯ ಆನೈವಾರಿ ಜಲಪಾತದ ಬಳಿ ಸಿಲುಕಿದ್ದ ಮಹಿಳೆ ಮತ್ತು ಮಗುವನ್ನು ತಮಿಳುನಾಡು ಅರಣ್ಯ ಇಲಾಖೆಯ ಸಿಬ್ಬಂದಿ ಸಿನಿಮೀಯ ರೀತಿಯಲ್ಲಿ ರಕ್ಷಿಸುತ್ತಿರುವ ವಿಡಿಯೊ ಇದೀಗ ವೈರಲ್ ಆಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೂಡಾ ಈ ವಿಡಿಯೊ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಇಬ್ಬರ ಜೀವ ಉಳಿಸಿದವರನ್ನು ಸರ್ಕಾರದ ವತಿಯಿಂದ ಗೌರವಿಸಲಾಗುವುದು ಎಂದು ಹೇಳಿದ್ದಾರೆ.

ಘಟನೆಯು ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಪ್ರವಾಸಿ ಸ್ಥಳವಾಗಿರುವ ಆನೈವಾರಿ ಜಲಪಾತ ಪ್ರದೇಶವನ್ನು ಕೊರೊನಾ ಲಾಕ್‌ಡೌನ್‌ ನಂತರ ಎರಡು ತಿಂಗಳ ಹಿಂದೆಯಷ್ಟೇ ಪ್ರವಾಸಿಗರಿಗೆ ತೆರೆಯಲಾಗಿತ್ತು. ಇಲ್ಲಿಗೆ ಪ್ರವಾಸಕ್ಕೆ ತೆರಳಿದ್ದ ಮಹಿಳೆಯು ಆಕಸ್ಮಿಕವಾಗಿ ಅಲ್ಲಿ ಸಿಲುಕಿ ಬಿದ್ದಿದ್ದರು. ಆದರೆ ಅರಣ್ಯ ಇಲಾಖೆಯ ಸಿಬ್ಬಂದಿ ಅವರನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಬಸ್‌ ಹತ್ತಿ ಜನರ ಸಮಸ್ಯೆ ಆಲಿಸಿದ ತಮಿಳುನಾಡು ಸಿಎಂ ಸ್ಟಾಲಿನ್!

ವೀಡಿಯೊದಲ್ಲಿ, ಇನ್ನೊಂದು ಬದಿಯಲ್ಲಿ ಇರುವ ಜನರು, “ಮೇಲೆ ಹತ್ತಬೇಡಿ ಬೀಳಬಹುದು, ಅಲ್ಲೇ ನಿಲ್ಲಿ ಎಂದು” ಕಿರುಚುತ್ತಾರೆ. ಅದಾಗಿಯೂ ಹಗ್ಗವನ್ನು ಬಳಸಿ ಅರಣ್ಯ ಇಲಾಖೆಯ ಸಿಬ್ಬಂದಿ ಮೊದಲಿಗೆ ಮಗುವನ್ನು, ನಂತರ ಮಹಿಳೆಯನ್ನು ಎಚ್ಚರಿಕೆಯಿಂದ ಮೇಲಕ್ಕೆತ್ತುತ್ತಾರೆ. ತಾಯಿ ಮತ್ತು ಮಗು ಅಪಾಯದಿಂದ ಪಾರಾದ ನಂತರ ರಕ್ಷಣಾ ಕಾರ್ಯದಲ್ಲಿದ್ದ ಇಬ್ಬರು ವ್ಯಕ್ತಿಗಳು ಏಕಾಏಕಿ ಸಮತೋಲನ ಕಳೆದುಕೊಂಡು ನೀರಿಗೆ ಬೀಳುತ್ತಾರೆ.

ವೈರಲ್‌ ವಿಡಿಯೊ ಈ ಹಂತದಲ್ಲಿ ಕೊನೆಗೊಂಡರೂ, ಆಯಾತಪ್ಪಿ ನೀರಿಗೆ ಬಿದ್ದವರು ನದಿಯನ್ನು ಈಜಿ ಯಾವುದೆ ಅಪಾಯವಿಲ್ಲದೆ ದಡ ತಲುಪಿದ್ದಾರೆ ಎಂದು ವರದಿಯಾಗಿದೆ. ಮಹಿಳೆ ಮತ್ತು ಮಗು ಮಾತ್ರವಲ್ಲದೆ ಇನ್ನೂ ಕೆಲವರನ್ನು ಅಧಿಕಾರಿಗಳು ರಕ್ಷಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮುಂದಿನ ಚುನಾವಣೆಗೆ ಮುನ್ನೆಲೆಗೆ ಬರುವುದೇ ‘ತಮಿಳುನಾಡು ಮಾದರಿ?’

ಘಟನೆಯಲ್ಲಿ ಯಾವುದೇ ಸಾವು ಅಥವಾ ಗಾಯದ ವರದಿಯಾಗಿಲ್ಲ ಎಂದು ಸೇಲಂ ಜಿಲ್ಲಾ ಅರಣ್ಯಾಧಿಕಾರಿ ಕೆ ಗೌತಮ್ ಹೇಳಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಅನೈವಾರಿ ಜಲಪಾತವು ಗುರುತಿಸಲ್ಪಟ್ಟ ಪರಿಸರ ಪ್ರವಾಸೋದ್ಯಮ ತಾಣವಾಗಿದೆ. ಕಲ್ಲವರಾಯನ ಬೆಟ್ಟಗಳಿಂದ ಬರುವ ಮಳೆ ನೀರು ಇಲ್ಲಿ ಜಲಪಾತವಾಗಿ ಪರಿವರ್ತನೆಯಾಗುತ್ತದೆ. ಇದು ಅತ್ತೂರು ಪ್ರದೇಶವಾಗಿದ್ದು; ಈ ಬೆಟ್ಟದ ಇನ್ನೊಂದು ಬದಿಯಲ್ಲಿರುವ ಕರ್ಮಂಡುರೈ ಪ್ರದೇಶದಲ್ಲಿ ಮಳೆಯಾದರೆ, ಅದು ಇಲ್ಲಿನ ಜನರಿಗೆ ತಿಳಿಯುವುದಿಲ್ಲ” ಎಂದು ಅವರು ಹೇಳಿದ್ದಾರೆ.

“ಕರ್ಮಂಡುರೈ ಪ್ರದೇಶದಲ್ಲಿ ಮಳೆಯಾಗಿ 20-30 ನಿಮಿಷಗಳಲ್ಲಿ, ಪ್ರವಾಹದ ನೀರು ಈ ಪ್ರದೇಶವನ್ನು ತಲುಪುತ್ತದೆ. ಇದು ಪ್ರತಿ ವರ್ಷ ನಡೆಯುತ್ತದೆ. ಈ ಬಾರಿ ನೀರಿನ ಪ್ರಮಾಣ ಹೆಚ್ಚಿದೆ. ಇದು ತಿಳಿದಿರದ ಜನರು ಆ ಬದಿಯಲ್ಲಿ ಸಿಕ್ಕಿಬಿದ್ದರು. ಇನ್ನೊಂದು ಬದಿಗೆ ಬರಲು ಯಾವುದೇ ದಾರಿ ಇರುವುದಿಲ್ಲ. ಅಲ್ಲಿರುವವರು ಹಗ್ಗವನ್ನು ಬಳಸಿ ಮಾತ್ರ ಇನ್ನೊಂದು ಬದಿಯನ್ನು ತಲುಪಬಹುದು. ನಮ್ಮ ಜನರು ಈಗಾಗಲೇ ಅಂತಹ ಸಂದರ್ಭಗಳ ಬಗ್ಗೆ ತರಬೇತಿ ಪಡೆದಿದ್ದರಿಂದ, ಅವರು ಸಾರ್ವಜನಿಕರನ್ನು ಸುರಕ್ಷಿತವಾಗಿ ರಕ್ಷಿಸಿದರು. ನಾವು ತಕ್ಷಣ ಜನರನ್ನು ಖಾಲಿ ಮಾಡಿದ್ದೇವೆ ಮತ್ತು ಪ್ರದೇಶವನ್ನು ಮುಚ್ಚಲು ಆದೇಶಿಸಿದ್ದೇವೆ” ಎಂದು ಕೆ. ಗೌತಮ್ ಹೇಳಿದ್ದಾರೆ.

ಹವಾಮಾನ ವೈಪರೀತ್ಯದಿಂದಾಗಿ ಆನೈವಾರಿ ಜಲಪಾತಗಳು, ವಳುಕ್ಕುಪರೈ ಮತ್ತು ಯೆರ್ಕಾಡ್‌ನ ಮತ್ತೊಂದು ಪ್ರವಾಸೋದ್ಯಮ ಸ್ಥಳವನ್ನು ಮುಂದಿನ ಸೂಚನೆ ಬರುವವರೆಗೆ ಮುಚ್ಚಲು ಆದೇಶಿಸಲಾಗಿದೆ ಎಂದು ಡಿಎಫ್‌ಒ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು – ರಾಜ್ಯದ ಸರ್ಕಾರಿ ಉದ್ದಿಮೆಗಳ 2.87 ಲಕ್ಷ ಸಿಬ್ಬಂದಿಗೆ 216.38 ಕೋಟಿ ‘ದೀಪಾವಳಿ ಬೋನಸ್’!

“ಘಟನೆಯ ವರದಿ ಇನ್ನೂ ನನಗೆ ತಲುಪಿಲ್ಲ. ಆ ಬಳಿಕವಷ್ಟೇ ರಕ್ಷಿಸಿದವರ ವಿವರ ತಿಳಿಯಲಿದೆ” ಎಂದು ಅವರು ತಿಳಿಸಿದ್ದಾರೆ.

ಈ ನಡುವೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘಟನೆಯ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ತಾಯಿ ಮತ್ತು ಮಗಳನ್ನು ರಕ್ಷಿಸಿದವರ ಧೈರ್ಯದ ಕಾರ್ಯ ಶ್ಲಾಘನೀಯ; ಅವರನ್ನು ಸರ್ಕಾರದಿಂದ ಗುರುತಿಸಿ  ಗೌರವಿಸಲಾಗುವುದು. ತಮ್ಮ ಪ್ರಾಣವನ್ನು ಲೆಕ್ಕಿಸದೆ ಇತರರ ಪ್ರಾಣವನ್ನು ಉಳಿಸುವ ಧೈರ್ಯ ತೋರುವವರಲ್ಲಿ ಮಾನವೀಯತೆ ಬೆಳಗುತ್ತಿದೆ! ದುರಂತದ ಸಂದರ್ಭದಲ್ಲಿ ಸಾರ್ವಜನಿಕರು ಜಾಗೃತರಾಗಿರಬೇಕು. ಸಭ್ಯ ಜಗತ್ತು.” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ: ಕೇವಲ ಒಂದು ಮತ ಪಡೆದ ಬಿಜೆಪಿ ಅಭ್ಯರ್ಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...