Homeಮುಖಪುಟಮೈಜುಮ್ಮೆನಿಸುವ ದೃಶ್ಯ: ತಮ್ಮ ಜೀವ ಲೆಕ್ಕಿಸದೆ ಸಿನಿಮೀಯ ರೀತಿಯಲ್ಲಿ ತಾಯಿ-ಮಗುವನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

ಮೈಜುಮ್ಮೆನಿಸುವ ದೃಶ್ಯ: ತಮ್ಮ ಜೀವ ಲೆಕ್ಕಿಸದೆ ಸಿನಿಮೀಯ ರೀತಿಯಲ್ಲಿ ತಾಯಿ-ಮಗುವನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

- Advertisement -
- Advertisement -

ತಮಿಳುನಾಡಿನ ಸೇಲಂ ಜಿಲ್ಲೆಯ ಆನೈವಾರಿ ಜಲಪಾತದ ಬಳಿ ಸಿಲುಕಿದ್ದ ಮಹಿಳೆ ಮತ್ತು ಮಗುವನ್ನು ತಮಿಳುನಾಡು ಅರಣ್ಯ ಇಲಾಖೆಯ ಸಿಬ್ಬಂದಿ ಸಿನಿಮೀಯ ರೀತಿಯಲ್ಲಿ ರಕ್ಷಿಸುತ್ತಿರುವ ವಿಡಿಯೊ ಇದೀಗ ವೈರಲ್ ಆಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೂಡಾ ಈ ವಿಡಿಯೊ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಇಬ್ಬರ ಜೀವ ಉಳಿಸಿದವರನ್ನು ಸರ್ಕಾರದ ವತಿಯಿಂದ ಗೌರವಿಸಲಾಗುವುದು ಎಂದು ಹೇಳಿದ್ದಾರೆ.

ಘಟನೆಯು ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಪ್ರವಾಸಿ ಸ್ಥಳವಾಗಿರುವ ಆನೈವಾರಿ ಜಲಪಾತ ಪ್ರದೇಶವನ್ನು ಕೊರೊನಾ ಲಾಕ್‌ಡೌನ್‌ ನಂತರ ಎರಡು ತಿಂಗಳ ಹಿಂದೆಯಷ್ಟೇ ಪ್ರವಾಸಿಗರಿಗೆ ತೆರೆಯಲಾಗಿತ್ತು. ಇಲ್ಲಿಗೆ ಪ್ರವಾಸಕ್ಕೆ ತೆರಳಿದ್ದ ಮಹಿಳೆಯು ಆಕಸ್ಮಿಕವಾಗಿ ಅಲ್ಲಿ ಸಿಲುಕಿ ಬಿದ್ದಿದ್ದರು. ಆದರೆ ಅರಣ್ಯ ಇಲಾಖೆಯ ಸಿಬ್ಬಂದಿ ಅವರನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಬಸ್‌ ಹತ್ತಿ ಜನರ ಸಮಸ್ಯೆ ಆಲಿಸಿದ ತಮಿಳುನಾಡು ಸಿಎಂ ಸ್ಟಾಲಿನ್!

ವೀಡಿಯೊದಲ್ಲಿ, ಇನ್ನೊಂದು ಬದಿಯಲ್ಲಿ ಇರುವ ಜನರು, “ಮೇಲೆ ಹತ್ತಬೇಡಿ ಬೀಳಬಹುದು, ಅಲ್ಲೇ ನಿಲ್ಲಿ ಎಂದು” ಕಿರುಚುತ್ತಾರೆ. ಅದಾಗಿಯೂ ಹಗ್ಗವನ್ನು ಬಳಸಿ ಅರಣ್ಯ ಇಲಾಖೆಯ ಸಿಬ್ಬಂದಿ ಮೊದಲಿಗೆ ಮಗುವನ್ನು, ನಂತರ ಮಹಿಳೆಯನ್ನು ಎಚ್ಚರಿಕೆಯಿಂದ ಮೇಲಕ್ಕೆತ್ತುತ್ತಾರೆ. ತಾಯಿ ಮತ್ತು ಮಗು ಅಪಾಯದಿಂದ ಪಾರಾದ ನಂತರ ರಕ್ಷಣಾ ಕಾರ್ಯದಲ್ಲಿದ್ದ ಇಬ್ಬರು ವ್ಯಕ್ತಿಗಳು ಏಕಾಏಕಿ ಸಮತೋಲನ ಕಳೆದುಕೊಂಡು ನೀರಿಗೆ ಬೀಳುತ್ತಾರೆ.

ವೈರಲ್‌ ವಿಡಿಯೊ ಈ ಹಂತದಲ್ಲಿ ಕೊನೆಗೊಂಡರೂ, ಆಯಾತಪ್ಪಿ ನೀರಿಗೆ ಬಿದ್ದವರು ನದಿಯನ್ನು ಈಜಿ ಯಾವುದೆ ಅಪಾಯವಿಲ್ಲದೆ ದಡ ತಲುಪಿದ್ದಾರೆ ಎಂದು ವರದಿಯಾಗಿದೆ. ಮಹಿಳೆ ಮತ್ತು ಮಗು ಮಾತ್ರವಲ್ಲದೆ ಇನ್ನೂ ಕೆಲವರನ್ನು ಅಧಿಕಾರಿಗಳು ರಕ್ಷಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮುಂದಿನ ಚುನಾವಣೆಗೆ ಮುನ್ನೆಲೆಗೆ ಬರುವುದೇ ‘ತಮಿಳುನಾಡು ಮಾದರಿ?’

ಘಟನೆಯಲ್ಲಿ ಯಾವುದೇ ಸಾವು ಅಥವಾ ಗಾಯದ ವರದಿಯಾಗಿಲ್ಲ ಎಂದು ಸೇಲಂ ಜಿಲ್ಲಾ ಅರಣ್ಯಾಧಿಕಾರಿ ಕೆ ಗೌತಮ್ ಹೇಳಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಅನೈವಾರಿ ಜಲಪಾತವು ಗುರುತಿಸಲ್ಪಟ್ಟ ಪರಿಸರ ಪ್ರವಾಸೋದ್ಯಮ ತಾಣವಾಗಿದೆ. ಕಲ್ಲವರಾಯನ ಬೆಟ್ಟಗಳಿಂದ ಬರುವ ಮಳೆ ನೀರು ಇಲ್ಲಿ ಜಲಪಾತವಾಗಿ ಪರಿವರ್ತನೆಯಾಗುತ್ತದೆ. ಇದು ಅತ್ತೂರು ಪ್ರದೇಶವಾಗಿದ್ದು; ಈ ಬೆಟ್ಟದ ಇನ್ನೊಂದು ಬದಿಯಲ್ಲಿರುವ ಕರ್ಮಂಡುರೈ ಪ್ರದೇಶದಲ್ಲಿ ಮಳೆಯಾದರೆ, ಅದು ಇಲ್ಲಿನ ಜನರಿಗೆ ತಿಳಿಯುವುದಿಲ್ಲ” ಎಂದು ಅವರು ಹೇಳಿದ್ದಾರೆ.

“ಕರ್ಮಂಡುರೈ ಪ್ರದೇಶದಲ್ಲಿ ಮಳೆಯಾಗಿ 20-30 ನಿಮಿಷಗಳಲ್ಲಿ, ಪ್ರವಾಹದ ನೀರು ಈ ಪ್ರದೇಶವನ್ನು ತಲುಪುತ್ತದೆ. ಇದು ಪ್ರತಿ ವರ್ಷ ನಡೆಯುತ್ತದೆ. ಈ ಬಾರಿ ನೀರಿನ ಪ್ರಮಾಣ ಹೆಚ್ಚಿದೆ. ಇದು ತಿಳಿದಿರದ ಜನರು ಆ ಬದಿಯಲ್ಲಿ ಸಿಕ್ಕಿಬಿದ್ದರು. ಇನ್ನೊಂದು ಬದಿಗೆ ಬರಲು ಯಾವುದೇ ದಾರಿ ಇರುವುದಿಲ್ಲ. ಅಲ್ಲಿರುವವರು ಹಗ್ಗವನ್ನು ಬಳಸಿ ಮಾತ್ರ ಇನ್ನೊಂದು ಬದಿಯನ್ನು ತಲುಪಬಹುದು. ನಮ್ಮ ಜನರು ಈಗಾಗಲೇ ಅಂತಹ ಸಂದರ್ಭಗಳ ಬಗ್ಗೆ ತರಬೇತಿ ಪಡೆದಿದ್ದರಿಂದ, ಅವರು ಸಾರ್ವಜನಿಕರನ್ನು ಸುರಕ್ಷಿತವಾಗಿ ರಕ್ಷಿಸಿದರು. ನಾವು ತಕ್ಷಣ ಜನರನ್ನು ಖಾಲಿ ಮಾಡಿದ್ದೇವೆ ಮತ್ತು ಪ್ರದೇಶವನ್ನು ಮುಚ್ಚಲು ಆದೇಶಿಸಿದ್ದೇವೆ” ಎಂದು ಕೆ. ಗೌತಮ್ ಹೇಳಿದ್ದಾರೆ.

ಹವಾಮಾನ ವೈಪರೀತ್ಯದಿಂದಾಗಿ ಆನೈವಾರಿ ಜಲಪಾತಗಳು, ವಳುಕ್ಕುಪರೈ ಮತ್ತು ಯೆರ್ಕಾಡ್‌ನ ಮತ್ತೊಂದು ಪ್ರವಾಸೋದ್ಯಮ ಸ್ಥಳವನ್ನು ಮುಂದಿನ ಸೂಚನೆ ಬರುವವರೆಗೆ ಮುಚ್ಚಲು ಆದೇಶಿಸಲಾಗಿದೆ ಎಂದು ಡಿಎಫ್‌ಒ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು – ರಾಜ್ಯದ ಸರ್ಕಾರಿ ಉದ್ದಿಮೆಗಳ 2.87 ಲಕ್ಷ ಸಿಬ್ಬಂದಿಗೆ 216.38 ಕೋಟಿ ‘ದೀಪಾವಳಿ ಬೋನಸ್’!

“ಘಟನೆಯ ವರದಿ ಇನ್ನೂ ನನಗೆ ತಲುಪಿಲ್ಲ. ಆ ಬಳಿಕವಷ್ಟೇ ರಕ್ಷಿಸಿದವರ ವಿವರ ತಿಳಿಯಲಿದೆ” ಎಂದು ಅವರು ತಿಳಿಸಿದ್ದಾರೆ.

ಈ ನಡುವೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘಟನೆಯ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ತಾಯಿ ಮತ್ತು ಮಗಳನ್ನು ರಕ್ಷಿಸಿದವರ ಧೈರ್ಯದ ಕಾರ್ಯ ಶ್ಲಾಘನೀಯ; ಅವರನ್ನು ಸರ್ಕಾರದಿಂದ ಗುರುತಿಸಿ  ಗೌರವಿಸಲಾಗುವುದು. ತಮ್ಮ ಪ್ರಾಣವನ್ನು ಲೆಕ್ಕಿಸದೆ ಇತರರ ಪ್ರಾಣವನ್ನು ಉಳಿಸುವ ಧೈರ್ಯ ತೋರುವವರಲ್ಲಿ ಮಾನವೀಯತೆ ಬೆಳಗುತ್ತಿದೆ! ದುರಂತದ ಸಂದರ್ಭದಲ್ಲಿ ಸಾರ್ವಜನಿಕರು ಜಾಗೃತರಾಗಿರಬೇಕು. ಸಭ್ಯ ಜಗತ್ತು.” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ: ಕೇವಲ ಒಂದು ಮತ ಪಡೆದ ಬಿಜೆಪಿ ಅಭ್ಯರ್ಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...