Homeಮುಖಪುಟಮೈಜುಮ್ಮೆನಿಸುವ ದೃಶ್ಯ: ತಮ್ಮ ಜೀವ ಲೆಕ್ಕಿಸದೆ ಸಿನಿಮೀಯ ರೀತಿಯಲ್ಲಿ ತಾಯಿ-ಮಗುವನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

ಮೈಜುಮ್ಮೆನಿಸುವ ದೃಶ್ಯ: ತಮ್ಮ ಜೀವ ಲೆಕ್ಕಿಸದೆ ಸಿನಿಮೀಯ ರೀತಿಯಲ್ಲಿ ತಾಯಿ-ಮಗುವನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

- Advertisement -
- Advertisement -

ತಮಿಳುನಾಡಿನ ಸೇಲಂ ಜಿಲ್ಲೆಯ ಆನೈವಾರಿ ಜಲಪಾತದ ಬಳಿ ಸಿಲುಕಿದ್ದ ಮಹಿಳೆ ಮತ್ತು ಮಗುವನ್ನು ತಮಿಳುನಾಡು ಅರಣ್ಯ ಇಲಾಖೆಯ ಸಿಬ್ಬಂದಿ ಸಿನಿಮೀಯ ರೀತಿಯಲ್ಲಿ ರಕ್ಷಿಸುತ್ತಿರುವ ವಿಡಿಯೊ ಇದೀಗ ವೈರಲ್ ಆಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೂಡಾ ಈ ವಿಡಿಯೊ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಇಬ್ಬರ ಜೀವ ಉಳಿಸಿದವರನ್ನು ಸರ್ಕಾರದ ವತಿಯಿಂದ ಗೌರವಿಸಲಾಗುವುದು ಎಂದು ಹೇಳಿದ್ದಾರೆ.

ಘಟನೆಯು ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಪ್ರವಾಸಿ ಸ್ಥಳವಾಗಿರುವ ಆನೈವಾರಿ ಜಲಪಾತ ಪ್ರದೇಶವನ್ನು ಕೊರೊನಾ ಲಾಕ್‌ಡೌನ್‌ ನಂತರ ಎರಡು ತಿಂಗಳ ಹಿಂದೆಯಷ್ಟೇ ಪ್ರವಾಸಿಗರಿಗೆ ತೆರೆಯಲಾಗಿತ್ತು. ಇಲ್ಲಿಗೆ ಪ್ರವಾಸಕ್ಕೆ ತೆರಳಿದ್ದ ಮಹಿಳೆಯು ಆಕಸ್ಮಿಕವಾಗಿ ಅಲ್ಲಿ ಸಿಲುಕಿ ಬಿದ್ದಿದ್ದರು. ಆದರೆ ಅರಣ್ಯ ಇಲಾಖೆಯ ಸಿಬ್ಬಂದಿ ಅವರನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಬಸ್‌ ಹತ್ತಿ ಜನರ ಸಮಸ್ಯೆ ಆಲಿಸಿದ ತಮಿಳುನಾಡು ಸಿಎಂ ಸ್ಟಾಲಿನ್!

ವೀಡಿಯೊದಲ್ಲಿ, ಇನ್ನೊಂದು ಬದಿಯಲ್ಲಿ ಇರುವ ಜನರು, “ಮೇಲೆ ಹತ್ತಬೇಡಿ ಬೀಳಬಹುದು, ಅಲ್ಲೇ ನಿಲ್ಲಿ ಎಂದು” ಕಿರುಚುತ್ತಾರೆ. ಅದಾಗಿಯೂ ಹಗ್ಗವನ್ನು ಬಳಸಿ ಅರಣ್ಯ ಇಲಾಖೆಯ ಸಿಬ್ಬಂದಿ ಮೊದಲಿಗೆ ಮಗುವನ್ನು, ನಂತರ ಮಹಿಳೆಯನ್ನು ಎಚ್ಚರಿಕೆಯಿಂದ ಮೇಲಕ್ಕೆತ್ತುತ್ತಾರೆ. ತಾಯಿ ಮತ್ತು ಮಗು ಅಪಾಯದಿಂದ ಪಾರಾದ ನಂತರ ರಕ್ಷಣಾ ಕಾರ್ಯದಲ್ಲಿದ್ದ ಇಬ್ಬರು ವ್ಯಕ್ತಿಗಳು ಏಕಾಏಕಿ ಸಮತೋಲನ ಕಳೆದುಕೊಂಡು ನೀರಿಗೆ ಬೀಳುತ್ತಾರೆ.

ವೈರಲ್‌ ವಿಡಿಯೊ ಈ ಹಂತದಲ್ಲಿ ಕೊನೆಗೊಂಡರೂ, ಆಯಾತಪ್ಪಿ ನೀರಿಗೆ ಬಿದ್ದವರು ನದಿಯನ್ನು ಈಜಿ ಯಾವುದೆ ಅಪಾಯವಿಲ್ಲದೆ ದಡ ತಲುಪಿದ್ದಾರೆ ಎಂದು ವರದಿಯಾಗಿದೆ. ಮಹಿಳೆ ಮತ್ತು ಮಗು ಮಾತ್ರವಲ್ಲದೆ ಇನ್ನೂ ಕೆಲವರನ್ನು ಅಧಿಕಾರಿಗಳು ರಕ್ಷಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮುಂದಿನ ಚುನಾವಣೆಗೆ ಮುನ್ನೆಲೆಗೆ ಬರುವುದೇ ‘ತಮಿಳುನಾಡು ಮಾದರಿ?’

ಘಟನೆಯಲ್ಲಿ ಯಾವುದೇ ಸಾವು ಅಥವಾ ಗಾಯದ ವರದಿಯಾಗಿಲ್ಲ ಎಂದು ಸೇಲಂ ಜಿಲ್ಲಾ ಅರಣ್ಯಾಧಿಕಾರಿ ಕೆ ಗೌತಮ್ ಹೇಳಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಅನೈವಾರಿ ಜಲಪಾತವು ಗುರುತಿಸಲ್ಪಟ್ಟ ಪರಿಸರ ಪ್ರವಾಸೋದ್ಯಮ ತಾಣವಾಗಿದೆ. ಕಲ್ಲವರಾಯನ ಬೆಟ್ಟಗಳಿಂದ ಬರುವ ಮಳೆ ನೀರು ಇಲ್ಲಿ ಜಲಪಾತವಾಗಿ ಪರಿವರ್ತನೆಯಾಗುತ್ತದೆ. ಇದು ಅತ್ತೂರು ಪ್ರದೇಶವಾಗಿದ್ದು; ಈ ಬೆಟ್ಟದ ಇನ್ನೊಂದು ಬದಿಯಲ್ಲಿರುವ ಕರ್ಮಂಡುರೈ ಪ್ರದೇಶದಲ್ಲಿ ಮಳೆಯಾದರೆ, ಅದು ಇಲ್ಲಿನ ಜನರಿಗೆ ತಿಳಿಯುವುದಿಲ್ಲ” ಎಂದು ಅವರು ಹೇಳಿದ್ದಾರೆ.

“ಕರ್ಮಂಡುರೈ ಪ್ರದೇಶದಲ್ಲಿ ಮಳೆಯಾಗಿ 20-30 ನಿಮಿಷಗಳಲ್ಲಿ, ಪ್ರವಾಹದ ನೀರು ಈ ಪ್ರದೇಶವನ್ನು ತಲುಪುತ್ತದೆ. ಇದು ಪ್ರತಿ ವರ್ಷ ನಡೆಯುತ್ತದೆ. ಈ ಬಾರಿ ನೀರಿನ ಪ್ರಮಾಣ ಹೆಚ್ಚಿದೆ. ಇದು ತಿಳಿದಿರದ ಜನರು ಆ ಬದಿಯಲ್ಲಿ ಸಿಕ್ಕಿಬಿದ್ದರು. ಇನ್ನೊಂದು ಬದಿಗೆ ಬರಲು ಯಾವುದೇ ದಾರಿ ಇರುವುದಿಲ್ಲ. ಅಲ್ಲಿರುವವರು ಹಗ್ಗವನ್ನು ಬಳಸಿ ಮಾತ್ರ ಇನ್ನೊಂದು ಬದಿಯನ್ನು ತಲುಪಬಹುದು. ನಮ್ಮ ಜನರು ಈಗಾಗಲೇ ಅಂತಹ ಸಂದರ್ಭಗಳ ಬಗ್ಗೆ ತರಬೇತಿ ಪಡೆದಿದ್ದರಿಂದ, ಅವರು ಸಾರ್ವಜನಿಕರನ್ನು ಸುರಕ್ಷಿತವಾಗಿ ರಕ್ಷಿಸಿದರು. ನಾವು ತಕ್ಷಣ ಜನರನ್ನು ಖಾಲಿ ಮಾಡಿದ್ದೇವೆ ಮತ್ತು ಪ್ರದೇಶವನ್ನು ಮುಚ್ಚಲು ಆದೇಶಿಸಿದ್ದೇವೆ” ಎಂದು ಕೆ. ಗೌತಮ್ ಹೇಳಿದ್ದಾರೆ.

ಹವಾಮಾನ ವೈಪರೀತ್ಯದಿಂದಾಗಿ ಆನೈವಾರಿ ಜಲಪಾತಗಳು, ವಳುಕ್ಕುಪರೈ ಮತ್ತು ಯೆರ್ಕಾಡ್‌ನ ಮತ್ತೊಂದು ಪ್ರವಾಸೋದ್ಯಮ ಸ್ಥಳವನ್ನು ಮುಂದಿನ ಸೂಚನೆ ಬರುವವರೆಗೆ ಮುಚ್ಚಲು ಆದೇಶಿಸಲಾಗಿದೆ ಎಂದು ಡಿಎಫ್‌ಒ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು – ರಾಜ್ಯದ ಸರ್ಕಾರಿ ಉದ್ದಿಮೆಗಳ 2.87 ಲಕ್ಷ ಸಿಬ್ಬಂದಿಗೆ 216.38 ಕೋಟಿ ‘ದೀಪಾವಳಿ ಬೋನಸ್’!

“ಘಟನೆಯ ವರದಿ ಇನ್ನೂ ನನಗೆ ತಲುಪಿಲ್ಲ. ಆ ಬಳಿಕವಷ್ಟೇ ರಕ್ಷಿಸಿದವರ ವಿವರ ತಿಳಿಯಲಿದೆ” ಎಂದು ಅವರು ತಿಳಿಸಿದ್ದಾರೆ.

ಈ ನಡುವೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘಟನೆಯ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ತಾಯಿ ಮತ್ತು ಮಗಳನ್ನು ರಕ್ಷಿಸಿದವರ ಧೈರ್ಯದ ಕಾರ್ಯ ಶ್ಲಾಘನೀಯ; ಅವರನ್ನು ಸರ್ಕಾರದಿಂದ ಗುರುತಿಸಿ  ಗೌರವಿಸಲಾಗುವುದು. ತಮ್ಮ ಪ್ರಾಣವನ್ನು ಲೆಕ್ಕಿಸದೆ ಇತರರ ಪ್ರಾಣವನ್ನು ಉಳಿಸುವ ಧೈರ್ಯ ತೋರುವವರಲ್ಲಿ ಮಾನವೀಯತೆ ಬೆಳಗುತ್ತಿದೆ! ದುರಂತದ ಸಂದರ್ಭದಲ್ಲಿ ಸಾರ್ವಜನಿಕರು ಜಾಗೃತರಾಗಿರಬೇಕು. ಸಭ್ಯ ಜಗತ್ತು.” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ: ಕೇವಲ ಒಂದು ಮತ ಪಡೆದ ಬಿಜೆಪಿ ಅಭ್ಯರ್ಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...