Homeಮುಖಪುಟಮೈಜುಮ್ಮೆನಿಸುವ ದೃಶ್ಯ: ತಮ್ಮ ಜೀವ ಲೆಕ್ಕಿಸದೆ ಸಿನಿಮೀಯ ರೀತಿಯಲ್ಲಿ ತಾಯಿ-ಮಗುವನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

ಮೈಜುಮ್ಮೆನಿಸುವ ದೃಶ್ಯ: ತಮ್ಮ ಜೀವ ಲೆಕ್ಕಿಸದೆ ಸಿನಿಮೀಯ ರೀತಿಯಲ್ಲಿ ತಾಯಿ-ಮಗುವನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

- Advertisement -
- Advertisement -

ತಮಿಳುನಾಡಿನ ಸೇಲಂ ಜಿಲ್ಲೆಯ ಆನೈವಾರಿ ಜಲಪಾತದ ಬಳಿ ಸಿಲುಕಿದ್ದ ಮಹಿಳೆ ಮತ್ತು ಮಗುವನ್ನು ತಮಿಳುನಾಡು ಅರಣ್ಯ ಇಲಾಖೆಯ ಸಿಬ್ಬಂದಿ ಸಿನಿಮೀಯ ರೀತಿಯಲ್ಲಿ ರಕ್ಷಿಸುತ್ತಿರುವ ವಿಡಿಯೊ ಇದೀಗ ವೈರಲ್ ಆಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೂಡಾ ಈ ವಿಡಿಯೊ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಇಬ್ಬರ ಜೀವ ಉಳಿಸಿದವರನ್ನು ಸರ್ಕಾರದ ವತಿಯಿಂದ ಗೌರವಿಸಲಾಗುವುದು ಎಂದು ಹೇಳಿದ್ದಾರೆ.

ಘಟನೆಯು ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಪ್ರವಾಸಿ ಸ್ಥಳವಾಗಿರುವ ಆನೈವಾರಿ ಜಲಪಾತ ಪ್ರದೇಶವನ್ನು ಕೊರೊನಾ ಲಾಕ್‌ಡೌನ್‌ ನಂತರ ಎರಡು ತಿಂಗಳ ಹಿಂದೆಯಷ್ಟೇ ಪ್ರವಾಸಿಗರಿಗೆ ತೆರೆಯಲಾಗಿತ್ತು. ಇಲ್ಲಿಗೆ ಪ್ರವಾಸಕ್ಕೆ ತೆರಳಿದ್ದ ಮಹಿಳೆಯು ಆಕಸ್ಮಿಕವಾಗಿ ಅಲ್ಲಿ ಸಿಲುಕಿ ಬಿದ್ದಿದ್ದರು. ಆದರೆ ಅರಣ್ಯ ಇಲಾಖೆಯ ಸಿಬ್ಬಂದಿ ಅವರನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಬಸ್‌ ಹತ್ತಿ ಜನರ ಸಮಸ್ಯೆ ಆಲಿಸಿದ ತಮಿಳುನಾಡು ಸಿಎಂ ಸ್ಟಾಲಿನ್!

ವೀಡಿಯೊದಲ್ಲಿ, ಇನ್ನೊಂದು ಬದಿಯಲ್ಲಿ ಇರುವ ಜನರು, “ಮೇಲೆ ಹತ್ತಬೇಡಿ ಬೀಳಬಹುದು, ಅಲ್ಲೇ ನಿಲ್ಲಿ ಎಂದು” ಕಿರುಚುತ್ತಾರೆ. ಅದಾಗಿಯೂ ಹಗ್ಗವನ್ನು ಬಳಸಿ ಅರಣ್ಯ ಇಲಾಖೆಯ ಸಿಬ್ಬಂದಿ ಮೊದಲಿಗೆ ಮಗುವನ್ನು, ನಂತರ ಮಹಿಳೆಯನ್ನು ಎಚ್ಚರಿಕೆಯಿಂದ ಮೇಲಕ್ಕೆತ್ತುತ್ತಾರೆ. ತಾಯಿ ಮತ್ತು ಮಗು ಅಪಾಯದಿಂದ ಪಾರಾದ ನಂತರ ರಕ್ಷಣಾ ಕಾರ್ಯದಲ್ಲಿದ್ದ ಇಬ್ಬರು ವ್ಯಕ್ತಿಗಳು ಏಕಾಏಕಿ ಸಮತೋಲನ ಕಳೆದುಕೊಂಡು ನೀರಿಗೆ ಬೀಳುತ್ತಾರೆ.

ವೈರಲ್‌ ವಿಡಿಯೊ ಈ ಹಂತದಲ್ಲಿ ಕೊನೆಗೊಂಡರೂ, ಆಯಾತಪ್ಪಿ ನೀರಿಗೆ ಬಿದ್ದವರು ನದಿಯನ್ನು ಈಜಿ ಯಾವುದೆ ಅಪಾಯವಿಲ್ಲದೆ ದಡ ತಲುಪಿದ್ದಾರೆ ಎಂದು ವರದಿಯಾಗಿದೆ. ಮಹಿಳೆ ಮತ್ತು ಮಗು ಮಾತ್ರವಲ್ಲದೆ ಇನ್ನೂ ಕೆಲವರನ್ನು ಅಧಿಕಾರಿಗಳು ರಕ್ಷಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮುಂದಿನ ಚುನಾವಣೆಗೆ ಮುನ್ನೆಲೆಗೆ ಬರುವುದೇ ‘ತಮಿಳುನಾಡು ಮಾದರಿ?’

ಘಟನೆಯಲ್ಲಿ ಯಾವುದೇ ಸಾವು ಅಥವಾ ಗಾಯದ ವರದಿಯಾಗಿಲ್ಲ ಎಂದು ಸೇಲಂ ಜಿಲ್ಲಾ ಅರಣ್ಯಾಧಿಕಾರಿ ಕೆ ಗೌತಮ್ ಹೇಳಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಅನೈವಾರಿ ಜಲಪಾತವು ಗುರುತಿಸಲ್ಪಟ್ಟ ಪರಿಸರ ಪ್ರವಾಸೋದ್ಯಮ ತಾಣವಾಗಿದೆ. ಕಲ್ಲವರಾಯನ ಬೆಟ್ಟಗಳಿಂದ ಬರುವ ಮಳೆ ನೀರು ಇಲ್ಲಿ ಜಲಪಾತವಾಗಿ ಪರಿವರ್ತನೆಯಾಗುತ್ತದೆ. ಇದು ಅತ್ತೂರು ಪ್ರದೇಶವಾಗಿದ್ದು; ಈ ಬೆಟ್ಟದ ಇನ್ನೊಂದು ಬದಿಯಲ್ಲಿರುವ ಕರ್ಮಂಡುರೈ ಪ್ರದೇಶದಲ್ಲಿ ಮಳೆಯಾದರೆ, ಅದು ಇಲ್ಲಿನ ಜನರಿಗೆ ತಿಳಿಯುವುದಿಲ್ಲ” ಎಂದು ಅವರು ಹೇಳಿದ್ದಾರೆ.

“ಕರ್ಮಂಡುರೈ ಪ್ರದೇಶದಲ್ಲಿ ಮಳೆಯಾಗಿ 20-30 ನಿಮಿಷಗಳಲ್ಲಿ, ಪ್ರವಾಹದ ನೀರು ಈ ಪ್ರದೇಶವನ್ನು ತಲುಪುತ್ತದೆ. ಇದು ಪ್ರತಿ ವರ್ಷ ನಡೆಯುತ್ತದೆ. ಈ ಬಾರಿ ನೀರಿನ ಪ್ರಮಾಣ ಹೆಚ್ಚಿದೆ. ಇದು ತಿಳಿದಿರದ ಜನರು ಆ ಬದಿಯಲ್ಲಿ ಸಿಕ್ಕಿಬಿದ್ದರು. ಇನ್ನೊಂದು ಬದಿಗೆ ಬರಲು ಯಾವುದೇ ದಾರಿ ಇರುವುದಿಲ್ಲ. ಅಲ್ಲಿರುವವರು ಹಗ್ಗವನ್ನು ಬಳಸಿ ಮಾತ್ರ ಇನ್ನೊಂದು ಬದಿಯನ್ನು ತಲುಪಬಹುದು. ನಮ್ಮ ಜನರು ಈಗಾಗಲೇ ಅಂತಹ ಸಂದರ್ಭಗಳ ಬಗ್ಗೆ ತರಬೇತಿ ಪಡೆದಿದ್ದರಿಂದ, ಅವರು ಸಾರ್ವಜನಿಕರನ್ನು ಸುರಕ್ಷಿತವಾಗಿ ರಕ್ಷಿಸಿದರು. ನಾವು ತಕ್ಷಣ ಜನರನ್ನು ಖಾಲಿ ಮಾಡಿದ್ದೇವೆ ಮತ್ತು ಪ್ರದೇಶವನ್ನು ಮುಚ್ಚಲು ಆದೇಶಿಸಿದ್ದೇವೆ” ಎಂದು ಕೆ. ಗೌತಮ್ ಹೇಳಿದ್ದಾರೆ.

ಹವಾಮಾನ ವೈಪರೀತ್ಯದಿಂದಾಗಿ ಆನೈವಾರಿ ಜಲಪಾತಗಳು, ವಳುಕ್ಕುಪರೈ ಮತ್ತು ಯೆರ್ಕಾಡ್‌ನ ಮತ್ತೊಂದು ಪ್ರವಾಸೋದ್ಯಮ ಸ್ಥಳವನ್ನು ಮುಂದಿನ ಸೂಚನೆ ಬರುವವರೆಗೆ ಮುಚ್ಚಲು ಆದೇಶಿಸಲಾಗಿದೆ ಎಂದು ಡಿಎಫ್‌ಒ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು – ರಾಜ್ಯದ ಸರ್ಕಾರಿ ಉದ್ದಿಮೆಗಳ 2.87 ಲಕ್ಷ ಸಿಬ್ಬಂದಿಗೆ 216.38 ಕೋಟಿ ‘ದೀಪಾವಳಿ ಬೋನಸ್’!

“ಘಟನೆಯ ವರದಿ ಇನ್ನೂ ನನಗೆ ತಲುಪಿಲ್ಲ. ಆ ಬಳಿಕವಷ್ಟೇ ರಕ್ಷಿಸಿದವರ ವಿವರ ತಿಳಿಯಲಿದೆ” ಎಂದು ಅವರು ತಿಳಿಸಿದ್ದಾರೆ.

ಈ ನಡುವೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘಟನೆಯ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ತಾಯಿ ಮತ್ತು ಮಗಳನ್ನು ರಕ್ಷಿಸಿದವರ ಧೈರ್ಯದ ಕಾರ್ಯ ಶ್ಲಾಘನೀಯ; ಅವರನ್ನು ಸರ್ಕಾರದಿಂದ ಗುರುತಿಸಿ  ಗೌರವಿಸಲಾಗುವುದು. ತಮ್ಮ ಪ್ರಾಣವನ್ನು ಲೆಕ್ಕಿಸದೆ ಇತರರ ಪ್ರಾಣವನ್ನು ಉಳಿಸುವ ಧೈರ್ಯ ತೋರುವವರಲ್ಲಿ ಮಾನವೀಯತೆ ಬೆಳಗುತ್ತಿದೆ! ದುರಂತದ ಸಂದರ್ಭದಲ್ಲಿ ಸಾರ್ವಜನಿಕರು ಜಾಗೃತರಾಗಿರಬೇಕು. ಸಭ್ಯ ಜಗತ್ತು.” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ: ಕೇವಲ ಒಂದು ಮತ ಪಡೆದ ಬಿಜೆಪಿ ಅಭ್ಯರ್ಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...