Homeಕರ್ನಾಟಕಪರಿಶಿಷ್ಟ ಜಾತಿ ಒಳ ಮೀಸಲಾತಿ| ಇಂದಿನಿಂದ ವೈಜ್ಞಾನಿಕ ದತ್ತಾಂಶ ಸಂಗ್ರಹ: ಮೂರೂ ಹಂತಗಳಲ್ಲಿ ಸಮೀಕ್ಷೆ

ಪರಿಶಿಷ್ಟ ಜಾತಿ ಒಳ ಮೀಸಲಾತಿ| ಇಂದಿನಿಂದ ವೈಜ್ಞಾನಿಕ ದತ್ತಾಂಶ ಸಂಗ್ರಹ: ಮೂರೂ ಹಂತಗಳಲ್ಲಿ ಸಮೀಕ್ಷೆ

- Advertisement -
- Advertisement -

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಇಂದಿನಿಂದ (ಮೇ.5) ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ಶುರುವಾಗಲಿದೆ. ಮೂರೂ ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025’ ಕುರಿತಂತೆ ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, “ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ” ಎಂದರು.

“ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್‌.ಎನ್‌ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಆಯೋಗ ವರದಿ ನೀಡಿದೆ.”

“ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡುವ ಸಲುವಾಗಿ ದತ್ತಾಂಶ ಸಂಗ್ರಹಿಸಲು ಹೊಸ ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ”

“2011ರ ಜನಗಣತಿ ಆಧಾರದಲ್ಲಿ ಸದಾಶಿವ ಆಯೋಗ ಪರಿಶಿಷ್ಟ ಜಾತಿ ಸಮುದಾಯಗಳ ಜನಸಂಖ್ಯೆಯನ್ನು ಗುರುತಿಸಿತ್ತು. 1-8-2024ರಲ್ಲಿ ಸುಪ್ರೀಂಕೋರ್ಟ್ ಒಳ ಮೀಸಲಾತಿ ಪರವಾಗಿ ನೀಡಿರುವ ಆದೇಶದಂತೆ ನಾವು ಮುಂದುವರೆದೆ” ಎಂದು ಸಿಎಂ ವಿವರಿಸಿದರು.

ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರ ಸಮುದಾಯಗಳಲ್ಲಿ ಯಾರು ಎಷ್ಟು ಮಂದಿ ಇದ್ದಾರೆ ಎನ್ನುವುದು ಖಚಿತವಾಗಿ ಗೊತ್ತಾಗಬೇಕಿದೆ. ಎಡಗೈ ಸಮುದಾಯ, ಬಲಗೈ ಸಮುದಾಯ ಎಷ್ಟಿದೆ ಎನ್ನುವುದು ವೈಜ್ಞಾನಿಕವಾಗಿ ತಿಳಿಯಬೇಕಿದೆ. 101 ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕೊಡುವಾಗ ನಿರ್ದಿಷ್ಟ ಅಂಕಿ ಅಂಶಗಳು ಬೇಕಾಗುತ್ತವೆ ಎಂದು ಹೇಳಿದರು.

“ಮೊದಲ ಹಂತದಲ್ಲಿ, ಇವತ್ತಿನಿಂದ (5 ಮೇ 2025 ರಿಂದ 17 ಮೇ 2025) ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗುತ್ತದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರುತ್ತಾರೆ.”

“ಎರಡನೇ ಹಂತದಲ್ಲಿ, (19 ಮೇ 2025 ರಿಂದ 21 ಮೇ 2025) ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಇಲ್ಲಿ ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು.”

“ಮೂರನೇ ಹಂತದಲ್ಲಿ, (19 ಮೇ 2025 ರಿಂದ 22 ಮೇ 2025) ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು. ನಿಖರ ದತ್ತಾಂಶ ಸಂಗ್ರಹಿಸಿದ ಮೇಲೆ ನಮಗೆ ಶಿಫಾರಸ್ಸು ಮಾಡುತ್ತಾರೆ. ಒಟ್ಟು 60 ದಿನ ಸಮಯಾವಕಾಶ ನೀಡಲಾಗಿದೆ.
ಎಂದು ಸಿಎಂ ಮಾಹಿತಿ ನೀಡಿದರು.

ಮೊಬೈಲ್ ಆ್ಯಪ್‌ 

ಮೊಬೈಲ್ ಆ್ಯಪ್‌ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30 ರಿಂದ ಸಂಜೆ 6:30ರವರೆಗೆ ಮೊಬೈಲ್ ಆ್ಯಪ್‌ ಎನಾಬಲ್ ಮಾಡಲಾಗಿರುತ್ತದೆ. ಇದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಯಾರೂ ತಪ್ಪಿಸಬಾರದು ಎಂದು ಸಿಎಂ ಹೇಳಿದರು.

ಸಹಾಯವಾಣಿ ಸಂಖ್ಯೆ


ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ನಾವು ಒಳ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು. ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ಕೊಡಿ. ಎಲ್ಲಾ ಸಂಘಟನೆಗಳೂ ಇದಕ್ಕೆ ಸಹಕರಿಸಿ ಎಂದೂ ಸಿಎಂ ಮನವಿ ಮಾಡಿದರು.

ಸಚಿವರಾದ ಹೆಚ್.ಸಿ ಮಹದೇವಪ್ಪ, ಕೆ.ಹೆಚ್ ಮುನಿಯಪ್ಪ, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕರಾದ ರೂಪಕಲಾ ಶಶಿಧರ್, ವಿಧಾನಪರಿಷತ್ ಸದಸ್ಯ ಸುದಾಮ ದಾಸ್, ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

NEET: ಮತ್ತೊಬ್ಬ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರ: ಬ್ರಾಹ್ಮಣ ಸಮುದಾಯದಿಂದ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...