Homeಕರ್ನಾಟಕಪರಿಶಿಷ್ಟ ಜಾತಿ ಒಳ ಮೀಸಲು: ಸಮೀಕ್ಷೆ ಅವಧಿ ಜೂ. 30ರವರೆಗೆ ವಿಸ್ತರಣೆ

ಪರಿಶಿಷ್ಟ ಜಾತಿ ಒಳ ಮೀಸಲು: ಸಮೀಕ್ಷೆ ಅವಧಿ ಜೂ. 30ರವರೆಗೆ ವಿಸ್ತರಣೆ

- Advertisement -
- Advertisement -

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಲು ರಾಜ್ಯದಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯ ಅವಧಿಯನ್ನು ಮತ್ತೆ ಜೂನ್‌ 30ರವರೆಗೆ ವಿಸ್ತರಿಸಲಾಗಿದೆ.

ಮೇ 5ರಿಂದ ಮನೆ ಮನೆ ಭೇಟಿ ಮೂಲಕ ಸಮೀಕ್ಷೆ ಆರಂಭಗೊಂಡಿತ್ತು. ಈವರೆಗೆ ರಾಜ್ಯದಾದ್ಯಂತ ಸಮೀಕ್ಷೆಯಲ್ಲಿ ಶೇಕಡ 91 ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇಕಡ 50ರಷ್ಟು ಪ್ರಗತಿ ಆಗಿದೆ. ಸಮೀಕ್ಷೆಯಲ್ಲಿ ಭಾಗವಹಿಸದೇ ಇರುವ ಕುಟುಂಬಗಳಿಗೆ ಅಂತಿಮ ಅವಕಾಶ ಕಲ್ಪಿಸುವ ಉದ್ದೇಶದಿಂದ ಸಮೀಕ್ಷೆಯ ಕೊನೆಯ ದಿನಾಂಕವನ್ನು ಜೂನ್ 23ರಿಂದ 30ರವರೆಗೆ ವಿಸ್ತರಿಸಲಾಗಿದೆ ಎಂದು ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ ನೇತೃತ್ವದ ಏಕ ಸದಸ್ಯ ಆಯೋಗ ತಿಳಿಸಿದೆ.

ನಾಗರಿಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್‌, ಬೆಂಗಳೂರು ಒನ್, ಗ್ರಾಮ ಒನ್‌ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಮೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 198 ವಾರ್ಡ್‌ಗಳಲ್ಲೂ ಪ್ರತ್ಯೇಕ ಶಿಬಿರಗಳನ್ನು ತೆರೆಯಲಾಗಿದೆ. ಅಲ್ಲದೆ, ಆನ್‌ಲೈನ್‌ (https://schedulecastesurvey.karnataka.gov.in/selfdeclaration) ಲಿಂಕ್‌ ಮೂಲಕವೂ ಸ್ವಯಂಘೋಷಣೆ ಮಾಡಿಕೊಳ್ಳಬಹುದು ಎಂದು ಆಯೋಗ ತಿಳಿಸಿದೆ.

ಈ ಕುರಿತಂತೆ ಎಲ್ಲಾ ಜಿಲ್ಲಾಧಿಕಾರಿಗಳು, ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ವಲಯ ಆಯುಕ್ತರಿಗೆ ಆಯೋಗ ಪತ್ರ ಬರೆದಿದೆ. ಸಮೀಕ್ಷೆ ಕಾರ್ಯಾವಧಿಯ ಅಂತಿಮ ವಿಸ್ತರಣೆ ಎಂದು ಪತ್ರದಲ್ಲಿ ಉಲ್ಲೇಖಿಸಿದೆ.

ಮೇ 5ರಂದು ಪ್ರಾರಂಭಗೊಂಡ ಸಮೀಕ್ಷೆಯು ಆರಂಭದಲ್ಲಿ ಮೇ 17ರಂದು ಮುಕ್ತಾಯಗೊಳ್ಳಬೇಕಿತ್ತು. ಆದರೆ, ಸಮೀಕ್ಷೆಯ ಅವಧಿಯನ್ನು ಹಲವು ಬಾರಿ ವಿಸ್ತರಿಸಲಾಗಿದೆ.

ಮೊದಲಿಗೆ ಮೇ 18ರಿಂದ ಮೇ 25ರವರೆಗೆ ಮನೆ ಮನೆ ಭೇಟಿಯನ್ನು ವಿಸ್ತರಿಸಲಾಗಿತ್ತು. ಮೇ 19 ರಿಂದ 21ರವೆಗೆ ನಿಗದಿಯಾಗಿದ್ದ ವಿಶೇಷ ಶಿಬಿರಗಳನ್ನು ಮೇ 26 ರಿಂದ 28ರವರೆಗೆ ಮತ್ತು ಮೇ 19 ರಿಂದ 23 ರವರೆಗೆ ನಿಗದಿಯಾಗಿದ್ದ ಆನ್‌ಲೈನ್ ಸ್ವಯಂ ಘೋಷಣೆ ಅವಧಿಯನ್ನು ಮೇ 19 ರಿಂದ 28ಕ್ಕೆ ನಿಗದಿ ಮಾಡಲಾಗಿತ್ತು.

ಎರಡನೇ ಬಾರಿಗೆ ಆನ್‌ಲೈನ್ ಸ್ವಯಂ ಘೋಷಣೆ, ಕರ್ನಾಟಕಒನ್, ಬೆಂಗಳೂರುಒನ್ ಮತ್ತು ಗ್ರಾಮಒನ್‌ನಂತಹ ನಾಗರಿಕ ಸೇವಾ ಕೇಂದ್ರಗಳ ಮೂಲಕ ಸಮೀಕ್ಷೆಗೆ ಜೂನ್ 22ರವೆಗೆ ಅವಧಿ ವಿಸ್ತರಿಸಲಾಗಿತ್ತು. ಇದೀಗ ಮೂರನೇ ಬಾರಿಗೆ ಜೂನ್ 30ರವೆಗೆ ಸಮೀಕ್ಷಾ ಅವಧಿ ವಿಸ್ತರಣೆ ಮಾಡಲಾಗಿದೆ.

ಈ ಕುರಿತು ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಬಸವರಾಜ್‌ ಕೌತಾಳ್‌  ಅವರು, “ಒಳ ಮೀಸಲಾತಿ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು ಬಂದು ಒಂದು ವರ್ಷ ಆಯಿತು. ಹಾಗಾಗಿ, ಸಮೀಕ್ಷೆಯನ್ನು ಮತ್ತೆ ಮತ್ತೆ ವಿಸ್ತರಿಸುವುದು ಸರಿಯಲ್ಲ. ಸಮೀಕ್ಷೆ ಕಾರಣ ನೇಮಕಾತಿಗಳನ್ನು ತಡೆ ಹಿಡಿಯಲಾಗಿದೆ. ಇದರಿಂದ ಉದ್ಯೋಗ ಆಕಾಂಕ್ಷಿಗಳಿಗೆ ಸಮಸ್ಯೆಯಾಗುತ್ತಿದೆ. ಯುವಜನರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ” ಎಂದಿದ್ದಾರೆ.

“ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಸಮೀಕ್ಷೆ ಯಶಸ್ವಿಯಾಗಿ ನಡೆದಿದೆ. ಬೆಂಗಳೂರು ಜನರು ಯಾಕೋ ಆಸಕ್ತಿ ತೋರಿಸುತ್ತಿಲ್ಲ. ಹಾಗಾಗಿ, ಇನ್ನು ಕಾಯುವುದರಲ್ಲಿ ಅರ್ಥವಿಲ್ಲ. ಸರ್ಕಾರ ಆಯೋಗ ವರದಿ ಕೊಡಲಿ ಎನ್ನುತ್ತಿದೆ. ಮತ್ತೆ ಮತ್ತೆ ಸಮೀಕ್ಷೆ ಅವಧಿಯನ್ನು ವಿಸ್ತರಣೆ ಮಾಡುತ್ತಾ ಒಳ ಮೀಸಲಾತಿ ಜಾರಿ ವಿಳಂಬ ಮಾಡುವುದರಿಂದ ಅದಕ್ಕಾಗಿ ಹೋರಾಟ ಮಾಡಿದವರನ್ನು ಅವಮಾನಿಸಿದಂತಾಗುತ್ತದೆ. ಅಲ್ಲದೆ, ಸರ್ಕಾರ ಉದ್ದೇಶಪೂರ್ವಕವಾಗಿಯೇ ವಿಳಂಬ ಮಾಡುತ್ತಿದೆ ಎಂಬ ಭಾವನೆ ಜನರಲ್ಲಿ ಮೂಡುತ್ತದೆ. ಆದ್ದರಿಂದ ನಾಗಮೋಹನ್‌ದಾಸ್ ಆಯೋಗ ತುರ್ತಾಗಿ ವರದಿ ಕೊಡುವ ಅವಶ್ಯಕತೆಯಿದೆ” ಎಂದು ಹೇಳಿದ್ದಾರೆ.

ಜೂನ್ 20ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ, ಸಮೀಕ್ಷೆ ಅವಧಿ ವಿಸ್ತರಿಸದೆ ವರದಿ ನೀಡಿ ಒಳಮೀಸಲಾತಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿತ್ತು.

ಒಳ ಮೀಸಲಾತಿ: ಜಸ್ಟೀಸ್ ನಾಗಮೋಹನದಾಸ್ ಆಯೋಗ ‘ಹೊಸ ಸಮೀಕ್ಷೆ’ಗೆ ಶಿಫಾರಸ್ಸು ಮಾಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...