Homeಕರ್ನಾಟಕಪರಿಶಿಷ್ಟ ಜಾತಿ ಒಳ ಮೀಸಲು: ಸಮೀಕ್ಷೆ ಅವಧಿ ಜೂ. 30ರವರೆಗೆ ವಿಸ್ತರಣೆ

ಪರಿಶಿಷ್ಟ ಜಾತಿ ಒಳ ಮೀಸಲು: ಸಮೀಕ್ಷೆ ಅವಧಿ ಜೂ. 30ರವರೆಗೆ ವಿಸ್ತರಣೆ

- Advertisement -
- Advertisement -

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಲು ರಾಜ್ಯದಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯ ಅವಧಿಯನ್ನು ಮತ್ತೆ ಜೂನ್‌ 30ರವರೆಗೆ ವಿಸ್ತರಿಸಲಾಗಿದೆ.

ಮೇ 5ರಿಂದ ಮನೆ ಮನೆ ಭೇಟಿ ಮೂಲಕ ಸಮೀಕ್ಷೆ ಆರಂಭಗೊಂಡಿತ್ತು. ಈವರೆಗೆ ರಾಜ್ಯದಾದ್ಯಂತ ಸಮೀಕ್ಷೆಯಲ್ಲಿ ಶೇಕಡ 91 ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇಕಡ 50ರಷ್ಟು ಪ್ರಗತಿ ಆಗಿದೆ. ಸಮೀಕ್ಷೆಯಲ್ಲಿ ಭಾಗವಹಿಸದೇ ಇರುವ ಕುಟುಂಬಗಳಿಗೆ ಅಂತಿಮ ಅವಕಾಶ ಕಲ್ಪಿಸುವ ಉದ್ದೇಶದಿಂದ ಸಮೀಕ್ಷೆಯ ಕೊನೆಯ ದಿನಾಂಕವನ್ನು ಜೂನ್ 23ರಿಂದ 30ರವರೆಗೆ ವಿಸ್ತರಿಸಲಾಗಿದೆ ಎಂದು ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ ನೇತೃತ್ವದ ಏಕ ಸದಸ್ಯ ಆಯೋಗ ತಿಳಿಸಿದೆ.

ನಾಗರಿಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್‌, ಬೆಂಗಳೂರು ಒನ್, ಗ್ರಾಮ ಒನ್‌ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಮೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 198 ವಾರ್ಡ್‌ಗಳಲ್ಲೂ ಪ್ರತ್ಯೇಕ ಶಿಬಿರಗಳನ್ನು ತೆರೆಯಲಾಗಿದೆ. ಅಲ್ಲದೆ, ಆನ್‌ಲೈನ್‌ (https://schedulecastesurvey.karnataka.gov.in/selfdeclaration) ಲಿಂಕ್‌ ಮೂಲಕವೂ ಸ್ವಯಂಘೋಷಣೆ ಮಾಡಿಕೊಳ್ಳಬಹುದು ಎಂದು ಆಯೋಗ ತಿಳಿಸಿದೆ.

ಈ ಕುರಿತಂತೆ ಎಲ್ಲಾ ಜಿಲ್ಲಾಧಿಕಾರಿಗಳು, ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ವಲಯ ಆಯುಕ್ತರಿಗೆ ಆಯೋಗ ಪತ್ರ ಬರೆದಿದೆ. ಸಮೀಕ್ಷೆ ಕಾರ್ಯಾವಧಿಯ ಅಂತಿಮ ವಿಸ್ತರಣೆ ಎಂದು ಪತ್ರದಲ್ಲಿ ಉಲ್ಲೇಖಿಸಿದೆ.

ಮೇ 5ರಂದು ಪ್ರಾರಂಭಗೊಂಡ ಸಮೀಕ್ಷೆಯು ಆರಂಭದಲ್ಲಿ ಮೇ 17ರಂದು ಮುಕ್ತಾಯಗೊಳ್ಳಬೇಕಿತ್ತು. ಆದರೆ, ಸಮೀಕ್ಷೆಯ ಅವಧಿಯನ್ನು ಹಲವು ಬಾರಿ ವಿಸ್ತರಿಸಲಾಗಿದೆ.

ಮೊದಲಿಗೆ ಮೇ 18ರಿಂದ ಮೇ 25ರವರೆಗೆ ಮನೆ ಮನೆ ಭೇಟಿಯನ್ನು ವಿಸ್ತರಿಸಲಾಗಿತ್ತು. ಮೇ 19 ರಿಂದ 21ರವೆಗೆ ನಿಗದಿಯಾಗಿದ್ದ ವಿಶೇಷ ಶಿಬಿರಗಳನ್ನು ಮೇ 26 ರಿಂದ 28ರವರೆಗೆ ಮತ್ತು ಮೇ 19 ರಿಂದ 23 ರವರೆಗೆ ನಿಗದಿಯಾಗಿದ್ದ ಆನ್‌ಲೈನ್ ಸ್ವಯಂ ಘೋಷಣೆ ಅವಧಿಯನ್ನು ಮೇ 19 ರಿಂದ 28ಕ್ಕೆ ನಿಗದಿ ಮಾಡಲಾಗಿತ್ತು.

ಎರಡನೇ ಬಾರಿಗೆ ಆನ್‌ಲೈನ್ ಸ್ವಯಂ ಘೋಷಣೆ, ಕರ್ನಾಟಕಒನ್, ಬೆಂಗಳೂರುಒನ್ ಮತ್ತು ಗ್ರಾಮಒನ್‌ನಂತಹ ನಾಗರಿಕ ಸೇವಾ ಕೇಂದ್ರಗಳ ಮೂಲಕ ಸಮೀಕ್ಷೆಗೆ ಜೂನ್ 22ರವೆಗೆ ಅವಧಿ ವಿಸ್ತರಿಸಲಾಗಿತ್ತು. ಇದೀಗ ಮೂರನೇ ಬಾರಿಗೆ ಜೂನ್ 30ರವೆಗೆ ಸಮೀಕ್ಷಾ ಅವಧಿ ವಿಸ್ತರಣೆ ಮಾಡಲಾಗಿದೆ.

ಈ ಕುರಿತು ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಬಸವರಾಜ್‌ ಕೌತಾಳ್‌  ಅವರು, “ಒಳ ಮೀಸಲಾತಿ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು ಬಂದು ಒಂದು ವರ್ಷ ಆಯಿತು. ಹಾಗಾಗಿ, ಸಮೀಕ್ಷೆಯನ್ನು ಮತ್ತೆ ಮತ್ತೆ ವಿಸ್ತರಿಸುವುದು ಸರಿಯಲ್ಲ. ಸಮೀಕ್ಷೆ ಕಾರಣ ನೇಮಕಾತಿಗಳನ್ನು ತಡೆ ಹಿಡಿಯಲಾಗಿದೆ. ಇದರಿಂದ ಉದ್ಯೋಗ ಆಕಾಂಕ್ಷಿಗಳಿಗೆ ಸಮಸ್ಯೆಯಾಗುತ್ತಿದೆ. ಯುವಜನರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ” ಎಂದಿದ್ದಾರೆ.

“ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಸಮೀಕ್ಷೆ ಯಶಸ್ವಿಯಾಗಿ ನಡೆದಿದೆ. ಬೆಂಗಳೂರು ಜನರು ಯಾಕೋ ಆಸಕ್ತಿ ತೋರಿಸುತ್ತಿಲ್ಲ. ಹಾಗಾಗಿ, ಇನ್ನು ಕಾಯುವುದರಲ್ಲಿ ಅರ್ಥವಿಲ್ಲ. ಸರ್ಕಾರ ಆಯೋಗ ವರದಿ ಕೊಡಲಿ ಎನ್ನುತ್ತಿದೆ. ಮತ್ತೆ ಮತ್ತೆ ಸಮೀಕ್ಷೆ ಅವಧಿಯನ್ನು ವಿಸ್ತರಣೆ ಮಾಡುತ್ತಾ ಒಳ ಮೀಸಲಾತಿ ಜಾರಿ ವಿಳಂಬ ಮಾಡುವುದರಿಂದ ಅದಕ್ಕಾಗಿ ಹೋರಾಟ ಮಾಡಿದವರನ್ನು ಅವಮಾನಿಸಿದಂತಾಗುತ್ತದೆ. ಅಲ್ಲದೆ, ಸರ್ಕಾರ ಉದ್ದೇಶಪೂರ್ವಕವಾಗಿಯೇ ವಿಳಂಬ ಮಾಡುತ್ತಿದೆ ಎಂಬ ಭಾವನೆ ಜನರಲ್ಲಿ ಮೂಡುತ್ತದೆ. ಆದ್ದರಿಂದ ನಾಗಮೋಹನ್‌ದಾಸ್ ಆಯೋಗ ತುರ್ತಾಗಿ ವರದಿ ಕೊಡುವ ಅವಶ್ಯಕತೆಯಿದೆ” ಎಂದು ಹೇಳಿದ್ದಾರೆ.

ಜೂನ್ 20ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ, ಸಮೀಕ್ಷೆ ಅವಧಿ ವಿಸ್ತರಿಸದೆ ವರದಿ ನೀಡಿ ಒಳಮೀಸಲಾತಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿತ್ತು.

ಒಳ ಮೀಸಲಾತಿ: ಜಸ್ಟೀಸ್ ನಾಗಮೋಹನದಾಸ್ ಆಯೋಗ ‘ಹೊಸ ಸಮೀಕ್ಷೆ’ಗೆ ಶಿಫಾರಸ್ಸು ಮಾಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...