Homeಕರ್ನಾಟಕಪರಿಶಿಷ್ಟ ಜಾತಿ ಒಳ ಮೀಸಲು: ಸಮೀಕ್ಷೆ ಅವಧಿ ಜೂ. 30ರವರೆಗೆ ವಿಸ್ತರಣೆ

ಪರಿಶಿಷ್ಟ ಜಾತಿ ಒಳ ಮೀಸಲು: ಸಮೀಕ್ಷೆ ಅವಧಿ ಜೂ. 30ರವರೆಗೆ ವಿಸ್ತರಣೆ

- Advertisement -
- Advertisement -

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಲು ರಾಜ್ಯದಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯ ಅವಧಿಯನ್ನು ಮತ್ತೆ ಜೂನ್‌ 30ರವರೆಗೆ ವಿಸ್ತರಿಸಲಾಗಿದೆ.

ಮೇ 5ರಿಂದ ಮನೆ ಮನೆ ಭೇಟಿ ಮೂಲಕ ಸಮೀಕ್ಷೆ ಆರಂಭಗೊಂಡಿತ್ತು. ಈವರೆಗೆ ರಾಜ್ಯದಾದ್ಯಂತ ಸಮೀಕ್ಷೆಯಲ್ಲಿ ಶೇಕಡ 91 ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇಕಡ 50ರಷ್ಟು ಪ್ರಗತಿ ಆಗಿದೆ. ಸಮೀಕ್ಷೆಯಲ್ಲಿ ಭಾಗವಹಿಸದೇ ಇರುವ ಕುಟುಂಬಗಳಿಗೆ ಅಂತಿಮ ಅವಕಾಶ ಕಲ್ಪಿಸುವ ಉದ್ದೇಶದಿಂದ ಸಮೀಕ್ಷೆಯ ಕೊನೆಯ ದಿನಾಂಕವನ್ನು ಜೂನ್ 23ರಿಂದ 30ರವರೆಗೆ ವಿಸ್ತರಿಸಲಾಗಿದೆ ಎಂದು ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ ನೇತೃತ್ವದ ಏಕ ಸದಸ್ಯ ಆಯೋಗ ತಿಳಿಸಿದೆ.

ನಾಗರಿಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್‌, ಬೆಂಗಳೂರು ಒನ್, ಗ್ರಾಮ ಒನ್‌ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಮೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 198 ವಾರ್ಡ್‌ಗಳಲ್ಲೂ ಪ್ರತ್ಯೇಕ ಶಿಬಿರಗಳನ್ನು ತೆರೆಯಲಾಗಿದೆ. ಅಲ್ಲದೆ, ಆನ್‌ಲೈನ್‌ (https://schedulecastesurvey.karnataka.gov.in/selfdeclaration) ಲಿಂಕ್‌ ಮೂಲಕವೂ ಸ್ವಯಂಘೋಷಣೆ ಮಾಡಿಕೊಳ್ಳಬಹುದು ಎಂದು ಆಯೋಗ ತಿಳಿಸಿದೆ.

ಈ ಕುರಿತಂತೆ ಎಲ್ಲಾ ಜಿಲ್ಲಾಧಿಕಾರಿಗಳು, ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ವಲಯ ಆಯುಕ್ತರಿಗೆ ಆಯೋಗ ಪತ್ರ ಬರೆದಿದೆ. ಸಮೀಕ್ಷೆ ಕಾರ್ಯಾವಧಿಯ ಅಂತಿಮ ವಿಸ್ತರಣೆ ಎಂದು ಪತ್ರದಲ್ಲಿ ಉಲ್ಲೇಖಿಸಿದೆ.

ಮೇ 5ರಂದು ಪ್ರಾರಂಭಗೊಂಡ ಸಮೀಕ್ಷೆಯು ಆರಂಭದಲ್ಲಿ ಮೇ 17ರಂದು ಮುಕ್ತಾಯಗೊಳ್ಳಬೇಕಿತ್ತು. ಆದರೆ, ಸಮೀಕ್ಷೆಯ ಅವಧಿಯನ್ನು ಹಲವು ಬಾರಿ ವಿಸ್ತರಿಸಲಾಗಿದೆ.

ಮೊದಲಿಗೆ ಮೇ 18ರಿಂದ ಮೇ 25ರವರೆಗೆ ಮನೆ ಮನೆ ಭೇಟಿಯನ್ನು ವಿಸ್ತರಿಸಲಾಗಿತ್ತು. ಮೇ 19 ರಿಂದ 21ರವೆಗೆ ನಿಗದಿಯಾಗಿದ್ದ ವಿಶೇಷ ಶಿಬಿರಗಳನ್ನು ಮೇ 26 ರಿಂದ 28ರವರೆಗೆ ಮತ್ತು ಮೇ 19 ರಿಂದ 23 ರವರೆಗೆ ನಿಗದಿಯಾಗಿದ್ದ ಆನ್‌ಲೈನ್ ಸ್ವಯಂ ಘೋಷಣೆ ಅವಧಿಯನ್ನು ಮೇ 19 ರಿಂದ 28ಕ್ಕೆ ನಿಗದಿ ಮಾಡಲಾಗಿತ್ತು.

ಎರಡನೇ ಬಾರಿಗೆ ಆನ್‌ಲೈನ್ ಸ್ವಯಂ ಘೋಷಣೆ, ಕರ್ನಾಟಕಒನ್, ಬೆಂಗಳೂರುಒನ್ ಮತ್ತು ಗ್ರಾಮಒನ್‌ನಂತಹ ನಾಗರಿಕ ಸೇವಾ ಕೇಂದ್ರಗಳ ಮೂಲಕ ಸಮೀಕ್ಷೆಗೆ ಜೂನ್ 22ರವೆಗೆ ಅವಧಿ ವಿಸ್ತರಿಸಲಾಗಿತ್ತು. ಇದೀಗ ಮೂರನೇ ಬಾರಿಗೆ ಜೂನ್ 30ರವೆಗೆ ಸಮೀಕ್ಷಾ ಅವಧಿ ವಿಸ್ತರಣೆ ಮಾಡಲಾಗಿದೆ.

ಈ ಕುರಿತು ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಬಸವರಾಜ್‌ ಕೌತಾಳ್‌  ಅವರು, “ಒಳ ಮೀಸಲಾತಿ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು ಬಂದು ಒಂದು ವರ್ಷ ಆಯಿತು. ಹಾಗಾಗಿ, ಸಮೀಕ್ಷೆಯನ್ನು ಮತ್ತೆ ಮತ್ತೆ ವಿಸ್ತರಿಸುವುದು ಸರಿಯಲ್ಲ. ಸಮೀಕ್ಷೆ ಕಾರಣ ನೇಮಕಾತಿಗಳನ್ನು ತಡೆ ಹಿಡಿಯಲಾಗಿದೆ. ಇದರಿಂದ ಉದ್ಯೋಗ ಆಕಾಂಕ್ಷಿಗಳಿಗೆ ಸಮಸ್ಯೆಯಾಗುತ್ತಿದೆ. ಯುವಜನರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ” ಎಂದಿದ್ದಾರೆ.

“ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಸಮೀಕ್ಷೆ ಯಶಸ್ವಿಯಾಗಿ ನಡೆದಿದೆ. ಬೆಂಗಳೂರು ಜನರು ಯಾಕೋ ಆಸಕ್ತಿ ತೋರಿಸುತ್ತಿಲ್ಲ. ಹಾಗಾಗಿ, ಇನ್ನು ಕಾಯುವುದರಲ್ಲಿ ಅರ್ಥವಿಲ್ಲ. ಸರ್ಕಾರ ಆಯೋಗ ವರದಿ ಕೊಡಲಿ ಎನ್ನುತ್ತಿದೆ. ಮತ್ತೆ ಮತ್ತೆ ಸಮೀಕ್ಷೆ ಅವಧಿಯನ್ನು ವಿಸ್ತರಣೆ ಮಾಡುತ್ತಾ ಒಳ ಮೀಸಲಾತಿ ಜಾರಿ ವಿಳಂಬ ಮಾಡುವುದರಿಂದ ಅದಕ್ಕಾಗಿ ಹೋರಾಟ ಮಾಡಿದವರನ್ನು ಅವಮಾನಿಸಿದಂತಾಗುತ್ತದೆ. ಅಲ್ಲದೆ, ಸರ್ಕಾರ ಉದ್ದೇಶಪೂರ್ವಕವಾಗಿಯೇ ವಿಳಂಬ ಮಾಡುತ್ತಿದೆ ಎಂಬ ಭಾವನೆ ಜನರಲ್ಲಿ ಮೂಡುತ್ತದೆ. ಆದ್ದರಿಂದ ನಾಗಮೋಹನ್‌ದಾಸ್ ಆಯೋಗ ತುರ್ತಾಗಿ ವರದಿ ಕೊಡುವ ಅವಶ್ಯಕತೆಯಿದೆ” ಎಂದು ಹೇಳಿದ್ದಾರೆ.

ಜೂನ್ 20ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ, ಸಮೀಕ್ಷೆ ಅವಧಿ ವಿಸ್ತರಿಸದೆ ವರದಿ ನೀಡಿ ಒಳಮೀಸಲಾತಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿತ್ತು.

ಒಳ ಮೀಸಲಾತಿ: ಜಸ್ಟೀಸ್ ನಾಗಮೋಹನದಾಸ್ ಆಯೋಗ ‘ಹೊಸ ಸಮೀಕ್ಷೆ’ಗೆ ಶಿಫಾರಸ್ಸು ಮಾಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...