Homeಕರ್ನಾಟಕಪರಿಶಿಷ್ಟ ಜಾತಿ ಒಳ ಮೀಸಲು: ಸಮೀಕ್ಷೆ ಅವಧಿ ಜೂ. 30ರವರೆಗೆ ವಿಸ್ತರಣೆ

ಪರಿಶಿಷ್ಟ ಜಾತಿ ಒಳ ಮೀಸಲು: ಸಮೀಕ್ಷೆ ಅವಧಿ ಜೂ. 30ರವರೆಗೆ ವಿಸ್ತರಣೆ

- Advertisement -
- Advertisement -

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಲು ರಾಜ್ಯದಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯ ಅವಧಿಯನ್ನು ಮತ್ತೆ ಜೂನ್‌ 30ರವರೆಗೆ ವಿಸ್ತರಿಸಲಾಗಿದೆ.

ಮೇ 5ರಿಂದ ಮನೆ ಮನೆ ಭೇಟಿ ಮೂಲಕ ಸಮೀಕ್ಷೆ ಆರಂಭಗೊಂಡಿತ್ತು. ಈವರೆಗೆ ರಾಜ್ಯದಾದ್ಯಂತ ಸಮೀಕ್ಷೆಯಲ್ಲಿ ಶೇಕಡ 91 ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇಕಡ 50ರಷ್ಟು ಪ್ರಗತಿ ಆಗಿದೆ. ಸಮೀಕ್ಷೆಯಲ್ಲಿ ಭಾಗವಹಿಸದೇ ಇರುವ ಕುಟುಂಬಗಳಿಗೆ ಅಂತಿಮ ಅವಕಾಶ ಕಲ್ಪಿಸುವ ಉದ್ದೇಶದಿಂದ ಸಮೀಕ್ಷೆಯ ಕೊನೆಯ ದಿನಾಂಕವನ್ನು ಜೂನ್ 23ರಿಂದ 30ರವರೆಗೆ ವಿಸ್ತರಿಸಲಾಗಿದೆ ಎಂದು ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ ನೇತೃತ್ವದ ಏಕ ಸದಸ್ಯ ಆಯೋಗ ತಿಳಿಸಿದೆ.

ನಾಗರಿಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್‌, ಬೆಂಗಳೂರು ಒನ್, ಗ್ರಾಮ ಒನ್‌ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಮೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 198 ವಾರ್ಡ್‌ಗಳಲ್ಲೂ ಪ್ರತ್ಯೇಕ ಶಿಬಿರಗಳನ್ನು ತೆರೆಯಲಾಗಿದೆ. ಅಲ್ಲದೆ, ಆನ್‌ಲೈನ್‌ (https://schedulecastesurvey.karnataka.gov.in/selfdeclaration) ಲಿಂಕ್‌ ಮೂಲಕವೂ ಸ್ವಯಂಘೋಷಣೆ ಮಾಡಿಕೊಳ್ಳಬಹುದು ಎಂದು ಆಯೋಗ ತಿಳಿಸಿದೆ.

ಈ ಕುರಿತಂತೆ ಎಲ್ಲಾ ಜಿಲ್ಲಾಧಿಕಾರಿಗಳು, ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ವಲಯ ಆಯುಕ್ತರಿಗೆ ಆಯೋಗ ಪತ್ರ ಬರೆದಿದೆ. ಸಮೀಕ್ಷೆ ಕಾರ್ಯಾವಧಿಯ ಅಂತಿಮ ವಿಸ್ತರಣೆ ಎಂದು ಪತ್ರದಲ್ಲಿ ಉಲ್ಲೇಖಿಸಿದೆ.

ಮೇ 5ರಂದು ಪ್ರಾರಂಭಗೊಂಡ ಸಮೀಕ್ಷೆಯು ಆರಂಭದಲ್ಲಿ ಮೇ 17ರಂದು ಮುಕ್ತಾಯಗೊಳ್ಳಬೇಕಿತ್ತು. ಆದರೆ, ಸಮೀಕ್ಷೆಯ ಅವಧಿಯನ್ನು ಹಲವು ಬಾರಿ ವಿಸ್ತರಿಸಲಾಗಿದೆ.

ಮೊದಲಿಗೆ ಮೇ 18ರಿಂದ ಮೇ 25ರವರೆಗೆ ಮನೆ ಮನೆ ಭೇಟಿಯನ್ನು ವಿಸ್ತರಿಸಲಾಗಿತ್ತು. ಮೇ 19 ರಿಂದ 21ರವೆಗೆ ನಿಗದಿಯಾಗಿದ್ದ ವಿಶೇಷ ಶಿಬಿರಗಳನ್ನು ಮೇ 26 ರಿಂದ 28ರವರೆಗೆ ಮತ್ತು ಮೇ 19 ರಿಂದ 23 ರವರೆಗೆ ನಿಗದಿಯಾಗಿದ್ದ ಆನ್‌ಲೈನ್ ಸ್ವಯಂ ಘೋಷಣೆ ಅವಧಿಯನ್ನು ಮೇ 19 ರಿಂದ 28ಕ್ಕೆ ನಿಗದಿ ಮಾಡಲಾಗಿತ್ತು.

ಎರಡನೇ ಬಾರಿಗೆ ಆನ್‌ಲೈನ್ ಸ್ವಯಂ ಘೋಷಣೆ, ಕರ್ನಾಟಕಒನ್, ಬೆಂಗಳೂರುಒನ್ ಮತ್ತು ಗ್ರಾಮಒನ್‌ನಂತಹ ನಾಗರಿಕ ಸೇವಾ ಕೇಂದ್ರಗಳ ಮೂಲಕ ಸಮೀಕ್ಷೆಗೆ ಜೂನ್ 22ರವೆಗೆ ಅವಧಿ ವಿಸ್ತರಿಸಲಾಗಿತ್ತು. ಇದೀಗ ಮೂರನೇ ಬಾರಿಗೆ ಜೂನ್ 30ರವೆಗೆ ಸಮೀಕ್ಷಾ ಅವಧಿ ವಿಸ್ತರಣೆ ಮಾಡಲಾಗಿದೆ.

ಈ ಕುರಿತು ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಬಸವರಾಜ್‌ ಕೌತಾಳ್‌  ಅವರು, “ಒಳ ಮೀಸಲಾತಿ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು ಬಂದು ಒಂದು ವರ್ಷ ಆಯಿತು. ಹಾಗಾಗಿ, ಸಮೀಕ್ಷೆಯನ್ನು ಮತ್ತೆ ಮತ್ತೆ ವಿಸ್ತರಿಸುವುದು ಸರಿಯಲ್ಲ. ಸಮೀಕ್ಷೆ ಕಾರಣ ನೇಮಕಾತಿಗಳನ್ನು ತಡೆ ಹಿಡಿಯಲಾಗಿದೆ. ಇದರಿಂದ ಉದ್ಯೋಗ ಆಕಾಂಕ್ಷಿಗಳಿಗೆ ಸಮಸ್ಯೆಯಾಗುತ್ತಿದೆ. ಯುವಜನರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ” ಎಂದಿದ್ದಾರೆ.

“ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಸಮೀಕ್ಷೆ ಯಶಸ್ವಿಯಾಗಿ ನಡೆದಿದೆ. ಬೆಂಗಳೂರು ಜನರು ಯಾಕೋ ಆಸಕ್ತಿ ತೋರಿಸುತ್ತಿಲ್ಲ. ಹಾಗಾಗಿ, ಇನ್ನು ಕಾಯುವುದರಲ್ಲಿ ಅರ್ಥವಿಲ್ಲ. ಸರ್ಕಾರ ಆಯೋಗ ವರದಿ ಕೊಡಲಿ ಎನ್ನುತ್ತಿದೆ. ಮತ್ತೆ ಮತ್ತೆ ಸಮೀಕ್ಷೆ ಅವಧಿಯನ್ನು ವಿಸ್ತರಣೆ ಮಾಡುತ್ತಾ ಒಳ ಮೀಸಲಾತಿ ಜಾರಿ ವಿಳಂಬ ಮಾಡುವುದರಿಂದ ಅದಕ್ಕಾಗಿ ಹೋರಾಟ ಮಾಡಿದವರನ್ನು ಅವಮಾನಿಸಿದಂತಾಗುತ್ತದೆ. ಅಲ್ಲದೆ, ಸರ್ಕಾರ ಉದ್ದೇಶಪೂರ್ವಕವಾಗಿಯೇ ವಿಳಂಬ ಮಾಡುತ್ತಿದೆ ಎಂಬ ಭಾವನೆ ಜನರಲ್ಲಿ ಮೂಡುತ್ತದೆ. ಆದ್ದರಿಂದ ನಾಗಮೋಹನ್‌ದಾಸ್ ಆಯೋಗ ತುರ್ತಾಗಿ ವರದಿ ಕೊಡುವ ಅವಶ್ಯಕತೆಯಿದೆ” ಎಂದು ಹೇಳಿದ್ದಾರೆ.

ಜೂನ್ 20ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ, ಸಮೀಕ್ಷೆ ಅವಧಿ ವಿಸ್ತರಿಸದೆ ವರದಿ ನೀಡಿ ಒಳಮೀಸಲಾತಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿತ್ತು.

ಒಳ ಮೀಸಲಾತಿ: ಜಸ್ಟೀಸ್ ನಾಗಮೋಹನದಾಸ್ ಆಯೋಗ ‘ಹೊಸ ಸಮೀಕ್ಷೆ’ಗೆ ಶಿಫಾರಸ್ಸು ಮಾಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...