Homeಮುಖಪುಟವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಐಎಎಸ್‌ ಅಧಿಕಾರಿ: ರಾಷ್ಟ್ರೀಯ ಎಸ್‌ಸಿ ಆಯೋಗದಿಂದ ನೋಟಿಸ್

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಐಎಎಸ್‌ ಅಧಿಕಾರಿ: ರಾಷ್ಟ್ರೀಯ ಎಸ್‌ಸಿ ಆಯೋಗದಿಂದ ನೋಟಿಸ್

- Advertisement -
- Advertisement -

ಐಎಎಸ್‌ ಅಧಿಕಾರಿಯೊಬ್ಬರು ತೆಲಂಗಾಣದ ವೆಲ್ಫೇರ್ (ಕಲ್ಯಾಣ) ಶಾಲೆಗಳ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಆರೋಪ ಕೇಳಿ ಬಂದಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ನೋಟಿಸ್ ಜಾರಿ ಮಾಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆಯೋಗವು 15 ದಿನಗಳಲ್ಲಿ ಕ್ರಮ ಕೈಗೊಂಡ ವರದಿಯನ್ನು ಕೋರಿದೆ.

ತೆಲಂಗಾಣದ ಸಮಾಜ ಕಲ್ಯಾಣ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ ಕಾರ್ಯದರ್ಶಿ ಎಸ್. ಅಲಗು ವರ್ಷಿಣಿ ಅವರು, ಕಲ್ಯಾಣ ಹಾಸ್ಟೆಲ್‌ಗಳು ಮತ್ತು ತರಗತಿ ಕೊಠಡಿಗಳಲ್ಲಿ ವಿದ್ಯಾರ್ಥಿಗಳ ದಿನಚರಿಯಲ್ಲಿ ಶುಚಿಗೊಳಿಸುವ ಕೆಲಸಗಳನ್ನು ಸೇರಿಸುವಂತೆ ಶಾಲಾ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದ್ದಾರೆ ಎಂಬ ಆಡಿಯೊ ಕ್ಲಿಪ್ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ವೈರಲ್ ಆದ ನಂತರ ನೋಟಿಸ್ ನೀಡಲಾಗಿದೆ.

ರಾಜ್ಯ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ತೆಲಂಗಾಣ ಸಮಾಜ ಕಲ್ಯಾಣ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಪರಿಶಿಷ್ಟ ಜಾತಿ ಸಮುದಾಯಗಳ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಒದಗಿಸುತ್ತದೆ.

ಸಮಾಜ ಕಲ್ಯಾಣ ಸಂಘದಿಂದ ನಡೆಸಲ್ಪಡುವ ಸಂಸ್ಥೆಗಳ ವಿದ್ಯಾರ್ಥಿಗಳು ಅತ್ಯಂತ ಬಡ ಹಿನ್ನೆಲೆಯಿಂದ ಬಂದವರು. ಹಾಗಾಗಿ, ಅವರು ಮನೆಯಲ್ಲಿದ್ದಾಗಲೂ ತಮ್ಮನ್ನು ತಾವು ಹೇಗೆ ನೋಡಿಕೊಳ್ಳಬೇಕೆಂದು ಕಲಿಯಬೇಕಾಗಿದೆ ಎಂದು ವರ್ಷಿಣಿ ಹೇಳುತ್ತಿರುವುದು ಆಡಿಯೋದಲ್ಲಿ ಕೇಳಿಬಂದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ಅವರು (ವಿದ್ಯಾರ್ಥಿಗಳು) ತಮ್ಮ ಕೊಠಡಿ ಸ್ವಚ್ಛಗೊಳಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಅವರ ಕೊಠಡಿಗಳನ್ನು ಯಾರು ಸ್ವಚ್ಛಗೊಳಿಸುತ್ತಾರೆ? ಒಬ್ಬರು ಕಸ ಗುಡಿಸುವರು ಒಂದು ಸಲ ಸ್ವಚ್ಛ ಮಾಡಿದರೆ, ಇತರ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ಏಕೆ ಸ್ವಚ್ಛ ಮಾಡಬಾರದು? ಅವರು ತಮ್ಮ ಶೌಚಾಲಯಗಳನ್ನು ಏಕೆ ಸ್ವಚ್ಛಗೊಳಿಸಲು ಸಾಧ್ಯವಿಲ್ಲ? ಅದರಲ್ಲಿ ತಪ್ಪೇನು?” ಎಂದು ವರ್ಷಿಣಿ ಹೇಳಿರುವುದಾಗಿ ಆರೋಪಿಸಲಾಗಿದೆ.

ತನ್ನ ನಿರ್ದೇಶನಕ್ಕೆ ಆಕ್ಷೇಪ ವ್ಯಕ್ತಪಡಿಸುವ ಪೋಷಕರಿಗೆ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ವರ್ಷಿಣಿ ಹೇಳಿದ್ದಾರೆ ಎನ್ನಲಾಗಿದೆ.

ವರ್ಷಿಣಿ ಅವರ ಮಾತು ಬೆಳಕಿಗೆ ಬಂದ ನಂತರ, ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ನಾಯಕ ಮತ್ತು ಸಂಘದ ಮಾಜಿ ಕಾರ್ಯದರ್ಶಿ ಆರ್.ಎಸ್. ಪ್ರವೀಣ್ ಕುಮಾರ್, ವರ್ಷಿಣಿ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

“ಈ ಸಂಪೂರ್ಣ ಶಿಕ್ಷಣ ಪ್ರಯೋಗ” ಸೋ ಕಾಲ್ಡ್ ಶ್ರೀಮಂತ ಸಮಾಜ ಎಂದು ಕರೆಯಲ್ಪಡುವವರಿಂದ ಮತ್ತು ಅವರ ಮಕ್ಕಳ ಪ್ರೀತಿಯ ಮನೆ, ಅಂತಾರಾಷ್ಟ್ರೀಯ ಶಾಲೆಗಳಿಂದ ಪ್ರಾರಂಭವಾಗಬೇಕು. ಅಲ್ಲದೆ ಬಡ ಮಕ್ಕಳಿಂದ ಅಲ್ಲ” ಎಂದು ಪ್ರವೀಣ್ ಕುಮಾರ್ ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿದ್ದಾರೆ.

“ದಮನಿತ ಸಮುದಾಯಗಳು/ಕುಟುಂಬಗಳ ಮಕ್ಕಳು ಪ್ರತಿದಿನ ತೊಟ್ಟಿಲಿನಿಂದ ಸಮಾಧಿಯವರೆಗೆ ಪ್ರತಿದಿನ ತಮ್ಮನ್ನು ತಾವು ಸಹಾಯ ಮಾಡಿಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲದೆ ಉಳಿದಿದ್ದಾರೆ. ಏಕೆಂದರೆ, ಅವರಿಗೆ ತಮ್ಮ ಹೊರೆಯನ್ನು ಬೇರೆಯವರ ಮೇಲೆ ಹೊರಿಸಲು ಇಷ್ಟವಿಲ್ಲ” ಎಂದಿದ್ದಾರೆ.

“ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ರಾಜ್ಯ ಸರ್ಕಾರದ ಕಾರ್ಯದರ್ಶಿ ತಮ್ಮ ಮಕ್ಕಳನ್ನು ಒಂದು ತಿಂಗಳ ಕಾಲ ಕಲ್ಯಾಣ ಹಾಸ್ಟೆಲ್‌ಗಳಲ್ಲಿ ಇರಿಸಿ, ಮೊದಲು ಅವರಿಂದ ಈ ಸ್ವ-ಸಹಾಯವನ್ನು ಮಾಡಿಸಲಿ. ಬಡವರಿಗೆ ಧರ್ಮೋಪದೇಶ ಮಾಡುವುದು ತುಂಬಾ ಸುಲಭ. ಏಕೆಂದರೆ ಅವರಿಗೆ ಬೇರೆ ಆಯ್ಕೆ ಇಲ್ಲದ ಕಾರಣ ಅವರು ಪ್ರತಿಯಾಗಿ ಪ್ರಶ್ನೆಗಳನ್ನು ಕೇಳುವುದಿಲ್ಲ” ಎಂದು ಕುಮಾರ್ ಹೇಳಿದ್ದಾರೆ.

ಆಡಿಯೋ ಕ್ಲಿಪ್ ಅನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿರುವ ಬಿಆರ್‌ಎಸ್ ಎಂಎಲ್‌ಸಿ ಕೆ. ಕವಿತಾ, “ಐಎಎಸ್ ಅಧಿಕಾರಿಯ ಆಘಾತಕಾರಿ ನಡವಳಿಕೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಡವರ ವಿರೋಧಿ ನಡೆ ಕಾಣುತ್ತಿದೆ” ಎಂದಿದ್ದಾರೆ.

“ಬಿಆರ್‌ಎಸ್ ಸರ್ಕಾರದ ಅವಧಿಯಲ್ಲಿ ಪ್ರತಿ ಸಮಾಜ ಕಲ್ಯಾಣ ಶಾಲೆಗೆ ಶುಚಿಗೊಳಿಸುವ ಕಾರ್ಯಗಳಿಗಾಗಿ ನಾಲ್ಕು ತಾತ್ಕಾಲಿಕ ಕಾರ್ಮಿಕರನ್ನು ನೇಮಿಸಿಕೊಳ್ಳಲು ತಿಂಗಳಿಗೆ 40,000 ರೂ.ಗಳನ್ನು ನೀಡಲಾಗುತ್ತಿತ್ತು” ಎಂದು ಕವಿತಾ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ. “ಈ ವರ್ಷದ ಮೇ ತಿಂಗಳಿನಿಂದ ಕಾಂಗ್ರೆಸ್ ಸರ್ಕಾರ ಇದನ್ನು ನಿಲ್ಲಿಸಿದೆ” ಎಂದಿದ್ದಾರೆ.

“ರಾಜ್ಯ ಸರ್ಕಾರವು 240 ಶಾಲೆಗಳಲ್ಲಿ ಸಹಾಯಕ ಪಾಲಕರನ್ನು ಹೊಂದುವುದನ್ನು ರದ್ದುಗೊಳಿಸಿದೆ. ವಿದ್ಯಾರ್ಥಿಗಳು ವಾರ್ಡನ್‌ಗಳ ಜವಾಬ್ದಾರಿ ತೆಗೆದುಕೊಳ್ಳಲು ಮತ್ತು ಅಡುಗೆಮನೆಗಳನ್ನು ನಿರ್ವಹಿಸಲು ಒತ್ತಾಯಿಸಿದೆ” ಎಂದು ಅವರು ಆರೋಪಿಸಿದ್ದಾರೆ.

“ಈಗ ಅಧಿಕಾರಿ ಶಾಲೆಗಳಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಮಕ್ಕಳನ್ನು ಒತ್ತಾಯಿಸುತ್ತಿದ್ದಾರೆ. ಅವರ ಹೇಳಿಕೆಯು ತಳ ಸಮುದಾಯಗಳ ವಿದ್ಯಾರ್ಥಿಗಳನ್ನು ಜಾತಿ ಮತ್ತು ವರ್ಗ ಪಕ್ಷಪಾತದಿಂದ ರಕ್ಷಿಸಲು ಗುರುಕುಲಗಳನ್ನು ಸ್ಥಾಪಿಸುವ ಪರಿಕಲ್ಪನೆಗೆ ವಿರುದ್ಧವಾಗಿದೆ. ಈ ನಡವಳಿಕೆಯು ತಾರತಮ್ಯ, ಶೋಷಣೆ ಮತ್ತು ಮಕ್ಕಳ ಹಕ್ಕುಗಳು ಮತ್ತು ಘನತೆಯ ಮೂಲ ತತ್ವಗಳನ್ನು ಉಲ್ಲಂಘಿಸುತ್ತದೆ” ಎಂದು ಕವಿತಾ ಹೇಳಿದ್ದಾರೆ.

ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಯನ್ನು ತೆಗೆದುಹಾಕಲು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಐಎಎಸ್ ಅಧಿಕಾರಿ ವರ್ಷಿಣಿ ಅವರು ಮಾಧ್ಯಮಗಳೊಂದಿಗೆ ಹಂಚಿಕೊಂಡ ಮತ್ತೊಂದು ಆಡಿಯೋ ಕ್ಲಿಪ್‌ನಲ್ಲಿ, “ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ನನ್ನ ಮಾತುಗಳನ್ನು ತಿರುಚಬೇಡಿ ಎಂದು ಮನವಿ ಮಾಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶಾಲೆಗಳಲ್ಲಿ ನೈರ್ಮಲ್ಯ ಸಿಬ್ಬಂದಿ ಇಲ್ಲ ಎಂಬ ಆರೋಪಗಳು ಆಧಾರರಹಿತವೆಂದು ಅವರು ಹೇಳಿಕೊಂಡಿದ್ದು, ಮನೆಯಲ್ಲಿ ಪೋಷಕರಿಗೆ ಮಕ್ಕಳು ಸಹಾಯ ಮಾಡುವುದು ‘ಸಾಮಾನ್ಯ ದಿನನಿತ್ಯದ ಚಟುವಟಿಕೆ’. ಅದು ಅವರು ‘ಜಾಗೃತ ವ್ಯಕ್ತಿ’ ಯಾಗಿ ಬೆಳೆಯಲು ಸಹಾಯ ಮಾಡುತ್ತದೆ” ಎಂದಿದ್ದಾರೆ.

“ನೀವು ವಿದೇಶಕ್ಕೆ ಹೋದರೆ ಅಥವಾ ಬೇರೆ ರಾಜ್ಯಕ್ಕೆ ಹೋದರೆ, ನಿಮ್ಮ ದೈನಂದಿನ ಕೆಲಸವನ್ನು ನೀವೇ ಮಾಡಬೇಕು. ಕೊಠಡಿಗಳನ್ನು ಸ್ವಚ್ಛಗೊಳಿಸುವುದು, ಸ್ನಾನಗೃಹಗಳನ್ನು ತೊಳೆಯುವುದು ಮತ್ತು ಬಟ್ಟೆ ಒಗೆಯುವುದು ಸ್ವತಃ ಮಾಡಬೇಕಾಗಿದೆ. ಜೊತೆಗೆ ಅಧ್ಯಯನದತ್ತ ಗಮನ ಹರಿಸಬೇಕು. ಹಠಾತ್ ರೂಪಾಂತರವು ಸಾಮಾನ್ಯವಾಗಿ ಮಕ್ಕಳಿಗೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

ಹೇಮಾ ಸಮಿತಿ ವರದಿ| ತನಿಖೆಗೆ ಸಂತ್ರಸ್ತರ ಅಸಹಕಾರ: ಕೆಲ ಪ್ರಕರಣಗಳನ್ನು ಕೈಬಿಡಲು ಮುಂದಾದ ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...