Homeಮುಖಪುಟವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಐಎಎಸ್‌ ಅಧಿಕಾರಿ: ರಾಷ್ಟ್ರೀಯ ಎಸ್‌ಸಿ ಆಯೋಗದಿಂದ ನೋಟಿಸ್

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಐಎಎಸ್‌ ಅಧಿಕಾರಿ: ರಾಷ್ಟ್ರೀಯ ಎಸ್‌ಸಿ ಆಯೋಗದಿಂದ ನೋಟಿಸ್

- Advertisement -
- Advertisement -

ಐಎಎಸ್‌ ಅಧಿಕಾರಿಯೊಬ್ಬರು ತೆಲಂಗಾಣದ ವೆಲ್ಫೇರ್ (ಕಲ್ಯಾಣ) ಶಾಲೆಗಳ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಆರೋಪ ಕೇಳಿ ಬಂದಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ನೋಟಿಸ್ ಜಾರಿ ಮಾಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆಯೋಗವು 15 ದಿನಗಳಲ್ಲಿ ಕ್ರಮ ಕೈಗೊಂಡ ವರದಿಯನ್ನು ಕೋರಿದೆ.

ತೆಲಂಗಾಣದ ಸಮಾಜ ಕಲ್ಯಾಣ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ ಕಾರ್ಯದರ್ಶಿ ಎಸ್. ಅಲಗು ವರ್ಷಿಣಿ ಅವರು, ಕಲ್ಯಾಣ ಹಾಸ್ಟೆಲ್‌ಗಳು ಮತ್ತು ತರಗತಿ ಕೊಠಡಿಗಳಲ್ಲಿ ವಿದ್ಯಾರ್ಥಿಗಳ ದಿನಚರಿಯಲ್ಲಿ ಶುಚಿಗೊಳಿಸುವ ಕೆಲಸಗಳನ್ನು ಸೇರಿಸುವಂತೆ ಶಾಲಾ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದ್ದಾರೆ ಎಂಬ ಆಡಿಯೊ ಕ್ಲಿಪ್ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ವೈರಲ್ ಆದ ನಂತರ ನೋಟಿಸ್ ನೀಡಲಾಗಿದೆ.

ರಾಜ್ಯ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ತೆಲಂಗಾಣ ಸಮಾಜ ಕಲ್ಯಾಣ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಪರಿಶಿಷ್ಟ ಜಾತಿ ಸಮುದಾಯಗಳ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಒದಗಿಸುತ್ತದೆ.

ಸಮಾಜ ಕಲ್ಯಾಣ ಸಂಘದಿಂದ ನಡೆಸಲ್ಪಡುವ ಸಂಸ್ಥೆಗಳ ವಿದ್ಯಾರ್ಥಿಗಳು ಅತ್ಯಂತ ಬಡ ಹಿನ್ನೆಲೆಯಿಂದ ಬಂದವರು. ಹಾಗಾಗಿ, ಅವರು ಮನೆಯಲ್ಲಿದ್ದಾಗಲೂ ತಮ್ಮನ್ನು ತಾವು ಹೇಗೆ ನೋಡಿಕೊಳ್ಳಬೇಕೆಂದು ಕಲಿಯಬೇಕಾಗಿದೆ ಎಂದು ವರ್ಷಿಣಿ ಹೇಳುತ್ತಿರುವುದು ಆಡಿಯೋದಲ್ಲಿ ಕೇಳಿಬಂದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ಅವರು (ವಿದ್ಯಾರ್ಥಿಗಳು) ತಮ್ಮ ಕೊಠಡಿ ಸ್ವಚ್ಛಗೊಳಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಅವರ ಕೊಠಡಿಗಳನ್ನು ಯಾರು ಸ್ವಚ್ಛಗೊಳಿಸುತ್ತಾರೆ? ಒಬ್ಬರು ಕಸ ಗುಡಿಸುವರು ಒಂದು ಸಲ ಸ್ವಚ್ಛ ಮಾಡಿದರೆ, ಇತರ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ಏಕೆ ಸ್ವಚ್ಛ ಮಾಡಬಾರದು? ಅವರು ತಮ್ಮ ಶೌಚಾಲಯಗಳನ್ನು ಏಕೆ ಸ್ವಚ್ಛಗೊಳಿಸಲು ಸಾಧ್ಯವಿಲ್ಲ? ಅದರಲ್ಲಿ ತಪ್ಪೇನು?” ಎಂದು ವರ್ಷಿಣಿ ಹೇಳಿರುವುದಾಗಿ ಆರೋಪಿಸಲಾಗಿದೆ.

ತನ್ನ ನಿರ್ದೇಶನಕ್ಕೆ ಆಕ್ಷೇಪ ವ್ಯಕ್ತಪಡಿಸುವ ಪೋಷಕರಿಗೆ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ವರ್ಷಿಣಿ ಹೇಳಿದ್ದಾರೆ ಎನ್ನಲಾಗಿದೆ.

ವರ್ಷಿಣಿ ಅವರ ಮಾತು ಬೆಳಕಿಗೆ ಬಂದ ನಂತರ, ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ನಾಯಕ ಮತ್ತು ಸಂಘದ ಮಾಜಿ ಕಾರ್ಯದರ್ಶಿ ಆರ್.ಎಸ್. ಪ್ರವೀಣ್ ಕುಮಾರ್, ವರ್ಷಿಣಿ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

“ಈ ಸಂಪೂರ್ಣ ಶಿಕ್ಷಣ ಪ್ರಯೋಗ” ಸೋ ಕಾಲ್ಡ್ ಶ್ರೀಮಂತ ಸಮಾಜ ಎಂದು ಕರೆಯಲ್ಪಡುವವರಿಂದ ಮತ್ತು ಅವರ ಮಕ್ಕಳ ಪ್ರೀತಿಯ ಮನೆ, ಅಂತಾರಾಷ್ಟ್ರೀಯ ಶಾಲೆಗಳಿಂದ ಪ್ರಾರಂಭವಾಗಬೇಕು. ಅಲ್ಲದೆ ಬಡ ಮಕ್ಕಳಿಂದ ಅಲ್ಲ” ಎಂದು ಪ್ರವೀಣ್ ಕುಮಾರ್ ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿದ್ದಾರೆ.

“ದಮನಿತ ಸಮುದಾಯಗಳು/ಕುಟುಂಬಗಳ ಮಕ್ಕಳು ಪ್ರತಿದಿನ ತೊಟ್ಟಿಲಿನಿಂದ ಸಮಾಧಿಯವರೆಗೆ ಪ್ರತಿದಿನ ತಮ್ಮನ್ನು ತಾವು ಸಹಾಯ ಮಾಡಿಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲದೆ ಉಳಿದಿದ್ದಾರೆ. ಏಕೆಂದರೆ, ಅವರಿಗೆ ತಮ್ಮ ಹೊರೆಯನ್ನು ಬೇರೆಯವರ ಮೇಲೆ ಹೊರಿಸಲು ಇಷ್ಟವಿಲ್ಲ” ಎಂದಿದ್ದಾರೆ.

“ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ರಾಜ್ಯ ಸರ್ಕಾರದ ಕಾರ್ಯದರ್ಶಿ ತಮ್ಮ ಮಕ್ಕಳನ್ನು ಒಂದು ತಿಂಗಳ ಕಾಲ ಕಲ್ಯಾಣ ಹಾಸ್ಟೆಲ್‌ಗಳಲ್ಲಿ ಇರಿಸಿ, ಮೊದಲು ಅವರಿಂದ ಈ ಸ್ವ-ಸಹಾಯವನ್ನು ಮಾಡಿಸಲಿ. ಬಡವರಿಗೆ ಧರ್ಮೋಪದೇಶ ಮಾಡುವುದು ತುಂಬಾ ಸುಲಭ. ಏಕೆಂದರೆ ಅವರಿಗೆ ಬೇರೆ ಆಯ್ಕೆ ಇಲ್ಲದ ಕಾರಣ ಅವರು ಪ್ರತಿಯಾಗಿ ಪ್ರಶ್ನೆಗಳನ್ನು ಕೇಳುವುದಿಲ್ಲ” ಎಂದು ಕುಮಾರ್ ಹೇಳಿದ್ದಾರೆ.

ಆಡಿಯೋ ಕ್ಲಿಪ್ ಅನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿರುವ ಬಿಆರ್‌ಎಸ್ ಎಂಎಲ್‌ಸಿ ಕೆ. ಕವಿತಾ, “ಐಎಎಸ್ ಅಧಿಕಾರಿಯ ಆಘಾತಕಾರಿ ನಡವಳಿಕೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಡವರ ವಿರೋಧಿ ನಡೆ ಕಾಣುತ್ತಿದೆ” ಎಂದಿದ್ದಾರೆ.

“ಬಿಆರ್‌ಎಸ್ ಸರ್ಕಾರದ ಅವಧಿಯಲ್ಲಿ ಪ್ರತಿ ಸಮಾಜ ಕಲ್ಯಾಣ ಶಾಲೆಗೆ ಶುಚಿಗೊಳಿಸುವ ಕಾರ್ಯಗಳಿಗಾಗಿ ನಾಲ್ಕು ತಾತ್ಕಾಲಿಕ ಕಾರ್ಮಿಕರನ್ನು ನೇಮಿಸಿಕೊಳ್ಳಲು ತಿಂಗಳಿಗೆ 40,000 ರೂ.ಗಳನ್ನು ನೀಡಲಾಗುತ್ತಿತ್ತು” ಎಂದು ಕವಿತಾ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ. “ಈ ವರ್ಷದ ಮೇ ತಿಂಗಳಿನಿಂದ ಕಾಂಗ್ರೆಸ್ ಸರ್ಕಾರ ಇದನ್ನು ನಿಲ್ಲಿಸಿದೆ” ಎಂದಿದ್ದಾರೆ.

“ರಾಜ್ಯ ಸರ್ಕಾರವು 240 ಶಾಲೆಗಳಲ್ಲಿ ಸಹಾಯಕ ಪಾಲಕರನ್ನು ಹೊಂದುವುದನ್ನು ರದ್ದುಗೊಳಿಸಿದೆ. ವಿದ್ಯಾರ್ಥಿಗಳು ವಾರ್ಡನ್‌ಗಳ ಜವಾಬ್ದಾರಿ ತೆಗೆದುಕೊಳ್ಳಲು ಮತ್ತು ಅಡುಗೆಮನೆಗಳನ್ನು ನಿರ್ವಹಿಸಲು ಒತ್ತಾಯಿಸಿದೆ” ಎಂದು ಅವರು ಆರೋಪಿಸಿದ್ದಾರೆ.

“ಈಗ ಅಧಿಕಾರಿ ಶಾಲೆಗಳಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಮಕ್ಕಳನ್ನು ಒತ್ತಾಯಿಸುತ್ತಿದ್ದಾರೆ. ಅವರ ಹೇಳಿಕೆಯು ತಳ ಸಮುದಾಯಗಳ ವಿದ್ಯಾರ್ಥಿಗಳನ್ನು ಜಾತಿ ಮತ್ತು ವರ್ಗ ಪಕ್ಷಪಾತದಿಂದ ರಕ್ಷಿಸಲು ಗುರುಕುಲಗಳನ್ನು ಸ್ಥಾಪಿಸುವ ಪರಿಕಲ್ಪನೆಗೆ ವಿರುದ್ಧವಾಗಿದೆ. ಈ ನಡವಳಿಕೆಯು ತಾರತಮ್ಯ, ಶೋಷಣೆ ಮತ್ತು ಮಕ್ಕಳ ಹಕ್ಕುಗಳು ಮತ್ತು ಘನತೆಯ ಮೂಲ ತತ್ವಗಳನ್ನು ಉಲ್ಲಂಘಿಸುತ್ತದೆ” ಎಂದು ಕವಿತಾ ಹೇಳಿದ್ದಾರೆ.

ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಯನ್ನು ತೆಗೆದುಹಾಕಲು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಐಎಎಸ್ ಅಧಿಕಾರಿ ವರ್ಷಿಣಿ ಅವರು ಮಾಧ್ಯಮಗಳೊಂದಿಗೆ ಹಂಚಿಕೊಂಡ ಮತ್ತೊಂದು ಆಡಿಯೋ ಕ್ಲಿಪ್‌ನಲ್ಲಿ, “ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ನನ್ನ ಮಾತುಗಳನ್ನು ತಿರುಚಬೇಡಿ ಎಂದು ಮನವಿ ಮಾಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶಾಲೆಗಳಲ್ಲಿ ನೈರ್ಮಲ್ಯ ಸಿಬ್ಬಂದಿ ಇಲ್ಲ ಎಂಬ ಆರೋಪಗಳು ಆಧಾರರಹಿತವೆಂದು ಅವರು ಹೇಳಿಕೊಂಡಿದ್ದು, ಮನೆಯಲ್ಲಿ ಪೋಷಕರಿಗೆ ಮಕ್ಕಳು ಸಹಾಯ ಮಾಡುವುದು ‘ಸಾಮಾನ್ಯ ದಿನನಿತ್ಯದ ಚಟುವಟಿಕೆ’. ಅದು ಅವರು ‘ಜಾಗೃತ ವ್ಯಕ್ತಿ’ ಯಾಗಿ ಬೆಳೆಯಲು ಸಹಾಯ ಮಾಡುತ್ತದೆ” ಎಂದಿದ್ದಾರೆ.

“ನೀವು ವಿದೇಶಕ್ಕೆ ಹೋದರೆ ಅಥವಾ ಬೇರೆ ರಾಜ್ಯಕ್ಕೆ ಹೋದರೆ, ನಿಮ್ಮ ದೈನಂದಿನ ಕೆಲಸವನ್ನು ನೀವೇ ಮಾಡಬೇಕು. ಕೊಠಡಿಗಳನ್ನು ಸ್ವಚ್ಛಗೊಳಿಸುವುದು, ಸ್ನಾನಗೃಹಗಳನ್ನು ತೊಳೆಯುವುದು ಮತ್ತು ಬಟ್ಟೆ ಒಗೆಯುವುದು ಸ್ವತಃ ಮಾಡಬೇಕಾಗಿದೆ. ಜೊತೆಗೆ ಅಧ್ಯಯನದತ್ತ ಗಮನ ಹರಿಸಬೇಕು. ಹಠಾತ್ ರೂಪಾಂತರವು ಸಾಮಾನ್ಯವಾಗಿ ಮಕ್ಕಳಿಗೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

ಹೇಮಾ ಸಮಿತಿ ವರದಿ| ತನಿಖೆಗೆ ಸಂತ್ರಸ್ತರ ಅಸಹಕಾರ: ಕೆಲ ಪ್ರಕರಣಗಳನ್ನು ಕೈಬಿಡಲು ಮುಂದಾದ ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...