Homeಮುಖಪುಟವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಐಎಎಸ್‌ ಅಧಿಕಾರಿ: ರಾಷ್ಟ್ರೀಯ ಎಸ್‌ಸಿ ಆಯೋಗದಿಂದ ನೋಟಿಸ್

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಐಎಎಸ್‌ ಅಧಿಕಾರಿ: ರಾಷ್ಟ್ರೀಯ ಎಸ್‌ಸಿ ಆಯೋಗದಿಂದ ನೋಟಿಸ್

- Advertisement -
- Advertisement -

ಐಎಎಸ್‌ ಅಧಿಕಾರಿಯೊಬ್ಬರು ತೆಲಂಗಾಣದ ವೆಲ್ಫೇರ್ (ಕಲ್ಯಾಣ) ಶಾಲೆಗಳ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಆರೋಪ ಕೇಳಿ ಬಂದಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ನೋಟಿಸ್ ಜಾರಿ ಮಾಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆಯೋಗವು 15 ದಿನಗಳಲ್ಲಿ ಕ್ರಮ ಕೈಗೊಂಡ ವರದಿಯನ್ನು ಕೋರಿದೆ.

ತೆಲಂಗಾಣದ ಸಮಾಜ ಕಲ್ಯಾಣ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ ಕಾರ್ಯದರ್ಶಿ ಎಸ್. ಅಲಗು ವರ್ಷಿಣಿ ಅವರು, ಕಲ್ಯಾಣ ಹಾಸ್ಟೆಲ್‌ಗಳು ಮತ್ತು ತರಗತಿ ಕೊಠಡಿಗಳಲ್ಲಿ ವಿದ್ಯಾರ್ಥಿಗಳ ದಿನಚರಿಯಲ್ಲಿ ಶುಚಿಗೊಳಿಸುವ ಕೆಲಸಗಳನ್ನು ಸೇರಿಸುವಂತೆ ಶಾಲಾ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದ್ದಾರೆ ಎಂಬ ಆಡಿಯೊ ಕ್ಲಿಪ್ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ವೈರಲ್ ಆದ ನಂತರ ನೋಟಿಸ್ ನೀಡಲಾಗಿದೆ.

ರಾಜ್ಯ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ತೆಲಂಗಾಣ ಸಮಾಜ ಕಲ್ಯಾಣ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಪರಿಶಿಷ್ಟ ಜಾತಿ ಸಮುದಾಯಗಳ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಒದಗಿಸುತ್ತದೆ.

ಸಮಾಜ ಕಲ್ಯಾಣ ಸಂಘದಿಂದ ನಡೆಸಲ್ಪಡುವ ಸಂಸ್ಥೆಗಳ ವಿದ್ಯಾರ್ಥಿಗಳು ಅತ್ಯಂತ ಬಡ ಹಿನ್ನೆಲೆಯಿಂದ ಬಂದವರು. ಹಾಗಾಗಿ, ಅವರು ಮನೆಯಲ್ಲಿದ್ದಾಗಲೂ ತಮ್ಮನ್ನು ತಾವು ಹೇಗೆ ನೋಡಿಕೊಳ್ಳಬೇಕೆಂದು ಕಲಿಯಬೇಕಾಗಿದೆ ಎಂದು ವರ್ಷಿಣಿ ಹೇಳುತ್ತಿರುವುದು ಆಡಿಯೋದಲ್ಲಿ ಕೇಳಿಬಂದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ಅವರು (ವಿದ್ಯಾರ್ಥಿಗಳು) ತಮ್ಮ ಕೊಠಡಿ ಸ್ವಚ್ಛಗೊಳಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಅವರ ಕೊಠಡಿಗಳನ್ನು ಯಾರು ಸ್ವಚ್ಛಗೊಳಿಸುತ್ತಾರೆ? ಒಬ್ಬರು ಕಸ ಗುಡಿಸುವರು ಒಂದು ಸಲ ಸ್ವಚ್ಛ ಮಾಡಿದರೆ, ಇತರ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ಏಕೆ ಸ್ವಚ್ಛ ಮಾಡಬಾರದು? ಅವರು ತಮ್ಮ ಶೌಚಾಲಯಗಳನ್ನು ಏಕೆ ಸ್ವಚ್ಛಗೊಳಿಸಲು ಸಾಧ್ಯವಿಲ್ಲ? ಅದರಲ್ಲಿ ತಪ್ಪೇನು?” ಎಂದು ವರ್ಷಿಣಿ ಹೇಳಿರುವುದಾಗಿ ಆರೋಪಿಸಲಾಗಿದೆ.

ತನ್ನ ನಿರ್ದೇಶನಕ್ಕೆ ಆಕ್ಷೇಪ ವ್ಯಕ್ತಪಡಿಸುವ ಪೋಷಕರಿಗೆ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ವರ್ಷಿಣಿ ಹೇಳಿದ್ದಾರೆ ಎನ್ನಲಾಗಿದೆ.

ವರ್ಷಿಣಿ ಅವರ ಮಾತು ಬೆಳಕಿಗೆ ಬಂದ ನಂತರ, ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ನಾಯಕ ಮತ್ತು ಸಂಘದ ಮಾಜಿ ಕಾರ್ಯದರ್ಶಿ ಆರ್.ಎಸ್. ಪ್ರವೀಣ್ ಕುಮಾರ್, ವರ್ಷಿಣಿ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

“ಈ ಸಂಪೂರ್ಣ ಶಿಕ್ಷಣ ಪ್ರಯೋಗ” ಸೋ ಕಾಲ್ಡ್ ಶ್ರೀಮಂತ ಸಮಾಜ ಎಂದು ಕರೆಯಲ್ಪಡುವವರಿಂದ ಮತ್ತು ಅವರ ಮಕ್ಕಳ ಪ್ರೀತಿಯ ಮನೆ, ಅಂತಾರಾಷ್ಟ್ರೀಯ ಶಾಲೆಗಳಿಂದ ಪ್ರಾರಂಭವಾಗಬೇಕು. ಅಲ್ಲದೆ ಬಡ ಮಕ್ಕಳಿಂದ ಅಲ್ಲ” ಎಂದು ಪ್ರವೀಣ್ ಕುಮಾರ್ ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿದ್ದಾರೆ.

“ದಮನಿತ ಸಮುದಾಯಗಳು/ಕುಟುಂಬಗಳ ಮಕ್ಕಳು ಪ್ರತಿದಿನ ತೊಟ್ಟಿಲಿನಿಂದ ಸಮಾಧಿಯವರೆಗೆ ಪ್ರತಿದಿನ ತಮ್ಮನ್ನು ತಾವು ಸಹಾಯ ಮಾಡಿಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲದೆ ಉಳಿದಿದ್ದಾರೆ. ಏಕೆಂದರೆ, ಅವರಿಗೆ ತಮ್ಮ ಹೊರೆಯನ್ನು ಬೇರೆಯವರ ಮೇಲೆ ಹೊರಿಸಲು ಇಷ್ಟವಿಲ್ಲ” ಎಂದಿದ್ದಾರೆ.

“ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ರಾಜ್ಯ ಸರ್ಕಾರದ ಕಾರ್ಯದರ್ಶಿ ತಮ್ಮ ಮಕ್ಕಳನ್ನು ಒಂದು ತಿಂಗಳ ಕಾಲ ಕಲ್ಯಾಣ ಹಾಸ್ಟೆಲ್‌ಗಳಲ್ಲಿ ಇರಿಸಿ, ಮೊದಲು ಅವರಿಂದ ಈ ಸ್ವ-ಸಹಾಯವನ್ನು ಮಾಡಿಸಲಿ. ಬಡವರಿಗೆ ಧರ್ಮೋಪದೇಶ ಮಾಡುವುದು ತುಂಬಾ ಸುಲಭ. ಏಕೆಂದರೆ ಅವರಿಗೆ ಬೇರೆ ಆಯ್ಕೆ ಇಲ್ಲದ ಕಾರಣ ಅವರು ಪ್ರತಿಯಾಗಿ ಪ್ರಶ್ನೆಗಳನ್ನು ಕೇಳುವುದಿಲ್ಲ” ಎಂದು ಕುಮಾರ್ ಹೇಳಿದ್ದಾರೆ.

ಆಡಿಯೋ ಕ್ಲಿಪ್ ಅನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿರುವ ಬಿಆರ್‌ಎಸ್ ಎಂಎಲ್‌ಸಿ ಕೆ. ಕವಿತಾ, “ಐಎಎಸ್ ಅಧಿಕಾರಿಯ ಆಘಾತಕಾರಿ ನಡವಳಿಕೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಡವರ ವಿರೋಧಿ ನಡೆ ಕಾಣುತ್ತಿದೆ” ಎಂದಿದ್ದಾರೆ.

“ಬಿಆರ್‌ಎಸ್ ಸರ್ಕಾರದ ಅವಧಿಯಲ್ಲಿ ಪ್ರತಿ ಸಮಾಜ ಕಲ್ಯಾಣ ಶಾಲೆಗೆ ಶುಚಿಗೊಳಿಸುವ ಕಾರ್ಯಗಳಿಗಾಗಿ ನಾಲ್ಕು ತಾತ್ಕಾಲಿಕ ಕಾರ್ಮಿಕರನ್ನು ನೇಮಿಸಿಕೊಳ್ಳಲು ತಿಂಗಳಿಗೆ 40,000 ರೂ.ಗಳನ್ನು ನೀಡಲಾಗುತ್ತಿತ್ತು” ಎಂದು ಕವಿತಾ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ. “ಈ ವರ್ಷದ ಮೇ ತಿಂಗಳಿನಿಂದ ಕಾಂಗ್ರೆಸ್ ಸರ್ಕಾರ ಇದನ್ನು ನಿಲ್ಲಿಸಿದೆ” ಎಂದಿದ್ದಾರೆ.

“ರಾಜ್ಯ ಸರ್ಕಾರವು 240 ಶಾಲೆಗಳಲ್ಲಿ ಸಹಾಯಕ ಪಾಲಕರನ್ನು ಹೊಂದುವುದನ್ನು ರದ್ದುಗೊಳಿಸಿದೆ. ವಿದ್ಯಾರ್ಥಿಗಳು ವಾರ್ಡನ್‌ಗಳ ಜವಾಬ್ದಾರಿ ತೆಗೆದುಕೊಳ್ಳಲು ಮತ್ತು ಅಡುಗೆಮನೆಗಳನ್ನು ನಿರ್ವಹಿಸಲು ಒತ್ತಾಯಿಸಿದೆ” ಎಂದು ಅವರು ಆರೋಪಿಸಿದ್ದಾರೆ.

“ಈಗ ಅಧಿಕಾರಿ ಶಾಲೆಗಳಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಮಕ್ಕಳನ್ನು ಒತ್ತಾಯಿಸುತ್ತಿದ್ದಾರೆ. ಅವರ ಹೇಳಿಕೆಯು ತಳ ಸಮುದಾಯಗಳ ವಿದ್ಯಾರ್ಥಿಗಳನ್ನು ಜಾತಿ ಮತ್ತು ವರ್ಗ ಪಕ್ಷಪಾತದಿಂದ ರಕ್ಷಿಸಲು ಗುರುಕುಲಗಳನ್ನು ಸ್ಥಾಪಿಸುವ ಪರಿಕಲ್ಪನೆಗೆ ವಿರುದ್ಧವಾಗಿದೆ. ಈ ನಡವಳಿಕೆಯು ತಾರತಮ್ಯ, ಶೋಷಣೆ ಮತ್ತು ಮಕ್ಕಳ ಹಕ್ಕುಗಳು ಮತ್ತು ಘನತೆಯ ಮೂಲ ತತ್ವಗಳನ್ನು ಉಲ್ಲಂಘಿಸುತ್ತದೆ” ಎಂದು ಕವಿತಾ ಹೇಳಿದ್ದಾರೆ.

ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಯನ್ನು ತೆಗೆದುಹಾಕಲು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಐಎಎಸ್ ಅಧಿಕಾರಿ ವರ್ಷಿಣಿ ಅವರು ಮಾಧ್ಯಮಗಳೊಂದಿಗೆ ಹಂಚಿಕೊಂಡ ಮತ್ತೊಂದು ಆಡಿಯೋ ಕ್ಲಿಪ್‌ನಲ್ಲಿ, “ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ನನ್ನ ಮಾತುಗಳನ್ನು ತಿರುಚಬೇಡಿ ಎಂದು ಮನವಿ ಮಾಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶಾಲೆಗಳಲ್ಲಿ ನೈರ್ಮಲ್ಯ ಸಿಬ್ಬಂದಿ ಇಲ್ಲ ಎಂಬ ಆರೋಪಗಳು ಆಧಾರರಹಿತವೆಂದು ಅವರು ಹೇಳಿಕೊಂಡಿದ್ದು, ಮನೆಯಲ್ಲಿ ಪೋಷಕರಿಗೆ ಮಕ್ಕಳು ಸಹಾಯ ಮಾಡುವುದು ‘ಸಾಮಾನ್ಯ ದಿನನಿತ್ಯದ ಚಟುವಟಿಕೆ’. ಅದು ಅವರು ‘ಜಾಗೃತ ವ್ಯಕ್ತಿ’ ಯಾಗಿ ಬೆಳೆಯಲು ಸಹಾಯ ಮಾಡುತ್ತದೆ” ಎಂದಿದ್ದಾರೆ.

“ನೀವು ವಿದೇಶಕ್ಕೆ ಹೋದರೆ ಅಥವಾ ಬೇರೆ ರಾಜ್ಯಕ್ಕೆ ಹೋದರೆ, ನಿಮ್ಮ ದೈನಂದಿನ ಕೆಲಸವನ್ನು ನೀವೇ ಮಾಡಬೇಕು. ಕೊಠಡಿಗಳನ್ನು ಸ್ವಚ್ಛಗೊಳಿಸುವುದು, ಸ್ನಾನಗೃಹಗಳನ್ನು ತೊಳೆಯುವುದು ಮತ್ತು ಬಟ್ಟೆ ಒಗೆಯುವುದು ಸ್ವತಃ ಮಾಡಬೇಕಾಗಿದೆ. ಜೊತೆಗೆ ಅಧ್ಯಯನದತ್ತ ಗಮನ ಹರಿಸಬೇಕು. ಹಠಾತ್ ರೂಪಾಂತರವು ಸಾಮಾನ್ಯವಾಗಿ ಮಕ್ಕಳಿಗೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

ಹೇಮಾ ಸಮಿತಿ ವರದಿ| ತನಿಖೆಗೆ ಸಂತ್ರಸ್ತರ ಅಸಹಕಾರ: ಕೆಲ ಪ್ರಕರಣಗಳನ್ನು ಕೈಬಿಡಲು ಮುಂದಾದ ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....