Homeಮುಖಪುಟವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಐಎಎಸ್‌ ಅಧಿಕಾರಿ: ರಾಷ್ಟ್ರೀಯ ಎಸ್‌ಸಿ ಆಯೋಗದಿಂದ ನೋಟಿಸ್

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಐಎಎಸ್‌ ಅಧಿಕಾರಿ: ರಾಷ್ಟ್ರೀಯ ಎಸ್‌ಸಿ ಆಯೋಗದಿಂದ ನೋಟಿಸ್

- Advertisement -
- Advertisement -

ಐಎಎಸ್‌ ಅಧಿಕಾರಿಯೊಬ್ಬರು ತೆಲಂಗಾಣದ ವೆಲ್ಫೇರ್ (ಕಲ್ಯಾಣ) ಶಾಲೆಗಳ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಆರೋಪ ಕೇಳಿ ಬಂದಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ನೋಟಿಸ್ ಜಾರಿ ಮಾಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆಯೋಗವು 15 ದಿನಗಳಲ್ಲಿ ಕ್ರಮ ಕೈಗೊಂಡ ವರದಿಯನ್ನು ಕೋರಿದೆ.

ತೆಲಂಗಾಣದ ಸಮಾಜ ಕಲ್ಯಾಣ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ ಕಾರ್ಯದರ್ಶಿ ಎಸ್. ಅಲಗು ವರ್ಷಿಣಿ ಅವರು, ಕಲ್ಯಾಣ ಹಾಸ್ಟೆಲ್‌ಗಳು ಮತ್ತು ತರಗತಿ ಕೊಠಡಿಗಳಲ್ಲಿ ವಿದ್ಯಾರ್ಥಿಗಳ ದಿನಚರಿಯಲ್ಲಿ ಶುಚಿಗೊಳಿಸುವ ಕೆಲಸಗಳನ್ನು ಸೇರಿಸುವಂತೆ ಶಾಲಾ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದ್ದಾರೆ ಎಂಬ ಆಡಿಯೊ ಕ್ಲಿಪ್ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ವೈರಲ್ ಆದ ನಂತರ ನೋಟಿಸ್ ನೀಡಲಾಗಿದೆ.

ರಾಜ್ಯ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ತೆಲಂಗಾಣ ಸಮಾಜ ಕಲ್ಯಾಣ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಪರಿಶಿಷ್ಟ ಜಾತಿ ಸಮುದಾಯಗಳ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಒದಗಿಸುತ್ತದೆ.

ಸಮಾಜ ಕಲ್ಯಾಣ ಸಂಘದಿಂದ ನಡೆಸಲ್ಪಡುವ ಸಂಸ್ಥೆಗಳ ವಿದ್ಯಾರ್ಥಿಗಳು ಅತ್ಯಂತ ಬಡ ಹಿನ್ನೆಲೆಯಿಂದ ಬಂದವರು. ಹಾಗಾಗಿ, ಅವರು ಮನೆಯಲ್ಲಿದ್ದಾಗಲೂ ತಮ್ಮನ್ನು ತಾವು ಹೇಗೆ ನೋಡಿಕೊಳ್ಳಬೇಕೆಂದು ಕಲಿಯಬೇಕಾಗಿದೆ ಎಂದು ವರ್ಷಿಣಿ ಹೇಳುತ್ತಿರುವುದು ಆಡಿಯೋದಲ್ಲಿ ಕೇಳಿಬಂದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ಅವರು (ವಿದ್ಯಾರ್ಥಿಗಳು) ತಮ್ಮ ಕೊಠಡಿ ಸ್ವಚ್ಛಗೊಳಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಅವರ ಕೊಠಡಿಗಳನ್ನು ಯಾರು ಸ್ವಚ್ಛಗೊಳಿಸುತ್ತಾರೆ? ಒಬ್ಬರು ಕಸ ಗುಡಿಸುವರು ಒಂದು ಸಲ ಸ್ವಚ್ಛ ಮಾಡಿದರೆ, ಇತರ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ಏಕೆ ಸ್ವಚ್ಛ ಮಾಡಬಾರದು? ಅವರು ತಮ್ಮ ಶೌಚಾಲಯಗಳನ್ನು ಏಕೆ ಸ್ವಚ್ಛಗೊಳಿಸಲು ಸಾಧ್ಯವಿಲ್ಲ? ಅದರಲ್ಲಿ ತಪ್ಪೇನು?” ಎಂದು ವರ್ಷಿಣಿ ಹೇಳಿರುವುದಾಗಿ ಆರೋಪಿಸಲಾಗಿದೆ.

ತನ್ನ ನಿರ್ದೇಶನಕ್ಕೆ ಆಕ್ಷೇಪ ವ್ಯಕ್ತಪಡಿಸುವ ಪೋಷಕರಿಗೆ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ವರ್ಷಿಣಿ ಹೇಳಿದ್ದಾರೆ ಎನ್ನಲಾಗಿದೆ.

ವರ್ಷಿಣಿ ಅವರ ಮಾತು ಬೆಳಕಿಗೆ ಬಂದ ನಂತರ, ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ನಾಯಕ ಮತ್ತು ಸಂಘದ ಮಾಜಿ ಕಾರ್ಯದರ್ಶಿ ಆರ್.ಎಸ್. ಪ್ರವೀಣ್ ಕುಮಾರ್, ವರ್ಷಿಣಿ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

“ಈ ಸಂಪೂರ್ಣ ಶಿಕ್ಷಣ ಪ್ರಯೋಗ” ಸೋ ಕಾಲ್ಡ್ ಶ್ರೀಮಂತ ಸಮಾಜ ಎಂದು ಕರೆಯಲ್ಪಡುವವರಿಂದ ಮತ್ತು ಅವರ ಮಕ್ಕಳ ಪ್ರೀತಿಯ ಮನೆ, ಅಂತಾರಾಷ್ಟ್ರೀಯ ಶಾಲೆಗಳಿಂದ ಪ್ರಾರಂಭವಾಗಬೇಕು. ಅಲ್ಲದೆ ಬಡ ಮಕ್ಕಳಿಂದ ಅಲ್ಲ” ಎಂದು ಪ್ರವೀಣ್ ಕುಮಾರ್ ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿದ್ದಾರೆ.

“ದಮನಿತ ಸಮುದಾಯಗಳು/ಕುಟುಂಬಗಳ ಮಕ್ಕಳು ಪ್ರತಿದಿನ ತೊಟ್ಟಿಲಿನಿಂದ ಸಮಾಧಿಯವರೆಗೆ ಪ್ರತಿದಿನ ತಮ್ಮನ್ನು ತಾವು ಸಹಾಯ ಮಾಡಿಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲದೆ ಉಳಿದಿದ್ದಾರೆ. ಏಕೆಂದರೆ, ಅವರಿಗೆ ತಮ್ಮ ಹೊರೆಯನ್ನು ಬೇರೆಯವರ ಮೇಲೆ ಹೊರಿಸಲು ಇಷ್ಟವಿಲ್ಲ” ಎಂದಿದ್ದಾರೆ.

“ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ರಾಜ್ಯ ಸರ್ಕಾರದ ಕಾರ್ಯದರ್ಶಿ ತಮ್ಮ ಮಕ್ಕಳನ್ನು ಒಂದು ತಿಂಗಳ ಕಾಲ ಕಲ್ಯಾಣ ಹಾಸ್ಟೆಲ್‌ಗಳಲ್ಲಿ ಇರಿಸಿ, ಮೊದಲು ಅವರಿಂದ ಈ ಸ್ವ-ಸಹಾಯವನ್ನು ಮಾಡಿಸಲಿ. ಬಡವರಿಗೆ ಧರ್ಮೋಪದೇಶ ಮಾಡುವುದು ತುಂಬಾ ಸುಲಭ. ಏಕೆಂದರೆ ಅವರಿಗೆ ಬೇರೆ ಆಯ್ಕೆ ಇಲ್ಲದ ಕಾರಣ ಅವರು ಪ್ರತಿಯಾಗಿ ಪ್ರಶ್ನೆಗಳನ್ನು ಕೇಳುವುದಿಲ್ಲ” ಎಂದು ಕುಮಾರ್ ಹೇಳಿದ್ದಾರೆ.

ಆಡಿಯೋ ಕ್ಲಿಪ್ ಅನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿರುವ ಬಿಆರ್‌ಎಸ್ ಎಂಎಲ್‌ಸಿ ಕೆ. ಕವಿತಾ, “ಐಎಎಸ್ ಅಧಿಕಾರಿಯ ಆಘಾತಕಾರಿ ನಡವಳಿಕೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಡವರ ವಿರೋಧಿ ನಡೆ ಕಾಣುತ್ತಿದೆ” ಎಂದಿದ್ದಾರೆ.

“ಬಿಆರ್‌ಎಸ್ ಸರ್ಕಾರದ ಅವಧಿಯಲ್ಲಿ ಪ್ರತಿ ಸಮಾಜ ಕಲ್ಯಾಣ ಶಾಲೆಗೆ ಶುಚಿಗೊಳಿಸುವ ಕಾರ್ಯಗಳಿಗಾಗಿ ನಾಲ್ಕು ತಾತ್ಕಾಲಿಕ ಕಾರ್ಮಿಕರನ್ನು ನೇಮಿಸಿಕೊಳ್ಳಲು ತಿಂಗಳಿಗೆ 40,000 ರೂ.ಗಳನ್ನು ನೀಡಲಾಗುತ್ತಿತ್ತು” ಎಂದು ಕವಿತಾ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ. “ಈ ವರ್ಷದ ಮೇ ತಿಂಗಳಿನಿಂದ ಕಾಂಗ್ರೆಸ್ ಸರ್ಕಾರ ಇದನ್ನು ನಿಲ್ಲಿಸಿದೆ” ಎಂದಿದ್ದಾರೆ.

“ರಾಜ್ಯ ಸರ್ಕಾರವು 240 ಶಾಲೆಗಳಲ್ಲಿ ಸಹಾಯಕ ಪಾಲಕರನ್ನು ಹೊಂದುವುದನ್ನು ರದ್ದುಗೊಳಿಸಿದೆ. ವಿದ್ಯಾರ್ಥಿಗಳು ವಾರ್ಡನ್‌ಗಳ ಜವಾಬ್ದಾರಿ ತೆಗೆದುಕೊಳ್ಳಲು ಮತ್ತು ಅಡುಗೆಮನೆಗಳನ್ನು ನಿರ್ವಹಿಸಲು ಒತ್ತಾಯಿಸಿದೆ” ಎಂದು ಅವರು ಆರೋಪಿಸಿದ್ದಾರೆ.

“ಈಗ ಅಧಿಕಾರಿ ಶಾಲೆಗಳಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಮಕ್ಕಳನ್ನು ಒತ್ತಾಯಿಸುತ್ತಿದ್ದಾರೆ. ಅವರ ಹೇಳಿಕೆಯು ತಳ ಸಮುದಾಯಗಳ ವಿದ್ಯಾರ್ಥಿಗಳನ್ನು ಜಾತಿ ಮತ್ತು ವರ್ಗ ಪಕ್ಷಪಾತದಿಂದ ರಕ್ಷಿಸಲು ಗುರುಕುಲಗಳನ್ನು ಸ್ಥಾಪಿಸುವ ಪರಿಕಲ್ಪನೆಗೆ ವಿರುದ್ಧವಾಗಿದೆ. ಈ ನಡವಳಿಕೆಯು ತಾರತಮ್ಯ, ಶೋಷಣೆ ಮತ್ತು ಮಕ್ಕಳ ಹಕ್ಕುಗಳು ಮತ್ತು ಘನತೆಯ ಮೂಲ ತತ್ವಗಳನ್ನು ಉಲ್ಲಂಘಿಸುತ್ತದೆ” ಎಂದು ಕವಿತಾ ಹೇಳಿದ್ದಾರೆ.

ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಯನ್ನು ತೆಗೆದುಹಾಕಲು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಐಎಎಸ್ ಅಧಿಕಾರಿ ವರ್ಷಿಣಿ ಅವರು ಮಾಧ್ಯಮಗಳೊಂದಿಗೆ ಹಂಚಿಕೊಂಡ ಮತ್ತೊಂದು ಆಡಿಯೋ ಕ್ಲಿಪ್‌ನಲ್ಲಿ, “ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ನನ್ನ ಮಾತುಗಳನ್ನು ತಿರುಚಬೇಡಿ ಎಂದು ಮನವಿ ಮಾಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶಾಲೆಗಳಲ್ಲಿ ನೈರ್ಮಲ್ಯ ಸಿಬ್ಬಂದಿ ಇಲ್ಲ ಎಂಬ ಆರೋಪಗಳು ಆಧಾರರಹಿತವೆಂದು ಅವರು ಹೇಳಿಕೊಂಡಿದ್ದು, ಮನೆಯಲ್ಲಿ ಪೋಷಕರಿಗೆ ಮಕ್ಕಳು ಸಹಾಯ ಮಾಡುವುದು ‘ಸಾಮಾನ್ಯ ದಿನನಿತ್ಯದ ಚಟುವಟಿಕೆ’. ಅದು ಅವರು ‘ಜಾಗೃತ ವ್ಯಕ್ತಿ’ ಯಾಗಿ ಬೆಳೆಯಲು ಸಹಾಯ ಮಾಡುತ್ತದೆ” ಎಂದಿದ್ದಾರೆ.

“ನೀವು ವಿದೇಶಕ್ಕೆ ಹೋದರೆ ಅಥವಾ ಬೇರೆ ರಾಜ್ಯಕ್ಕೆ ಹೋದರೆ, ನಿಮ್ಮ ದೈನಂದಿನ ಕೆಲಸವನ್ನು ನೀವೇ ಮಾಡಬೇಕು. ಕೊಠಡಿಗಳನ್ನು ಸ್ವಚ್ಛಗೊಳಿಸುವುದು, ಸ್ನಾನಗೃಹಗಳನ್ನು ತೊಳೆಯುವುದು ಮತ್ತು ಬಟ್ಟೆ ಒಗೆಯುವುದು ಸ್ವತಃ ಮಾಡಬೇಕಾಗಿದೆ. ಜೊತೆಗೆ ಅಧ್ಯಯನದತ್ತ ಗಮನ ಹರಿಸಬೇಕು. ಹಠಾತ್ ರೂಪಾಂತರವು ಸಾಮಾನ್ಯವಾಗಿ ಮಕ್ಕಳಿಗೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

ಹೇಮಾ ಸಮಿತಿ ವರದಿ| ತನಿಖೆಗೆ ಸಂತ್ರಸ್ತರ ಅಸಹಕಾರ: ಕೆಲ ಪ್ರಕರಣಗಳನ್ನು ಕೈಬಿಡಲು ಮುಂದಾದ ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...