Homeಮುಖಪುಟವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಐಎಎಸ್‌ ಅಧಿಕಾರಿ: ರಾಷ್ಟ್ರೀಯ ಎಸ್‌ಸಿ ಆಯೋಗದಿಂದ ನೋಟಿಸ್

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಐಎಎಸ್‌ ಅಧಿಕಾರಿ: ರಾಷ್ಟ್ರೀಯ ಎಸ್‌ಸಿ ಆಯೋಗದಿಂದ ನೋಟಿಸ್

- Advertisement -
- Advertisement -

ಐಎಎಸ್‌ ಅಧಿಕಾರಿಯೊಬ್ಬರು ತೆಲಂಗಾಣದ ವೆಲ್ಫೇರ್ (ಕಲ್ಯಾಣ) ಶಾಲೆಗಳ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಆರೋಪ ಕೇಳಿ ಬಂದಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ನೋಟಿಸ್ ಜಾರಿ ಮಾಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆಯೋಗವು 15 ದಿನಗಳಲ್ಲಿ ಕ್ರಮ ಕೈಗೊಂಡ ವರದಿಯನ್ನು ಕೋರಿದೆ.

ತೆಲಂಗಾಣದ ಸಮಾಜ ಕಲ್ಯಾಣ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ ಕಾರ್ಯದರ್ಶಿ ಎಸ್. ಅಲಗು ವರ್ಷಿಣಿ ಅವರು, ಕಲ್ಯಾಣ ಹಾಸ್ಟೆಲ್‌ಗಳು ಮತ್ತು ತರಗತಿ ಕೊಠಡಿಗಳಲ್ಲಿ ವಿದ್ಯಾರ್ಥಿಗಳ ದಿನಚರಿಯಲ್ಲಿ ಶುಚಿಗೊಳಿಸುವ ಕೆಲಸಗಳನ್ನು ಸೇರಿಸುವಂತೆ ಶಾಲಾ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದ್ದಾರೆ ಎಂಬ ಆಡಿಯೊ ಕ್ಲಿಪ್ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ವೈರಲ್ ಆದ ನಂತರ ನೋಟಿಸ್ ನೀಡಲಾಗಿದೆ.

ರಾಜ್ಯ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ತೆಲಂಗಾಣ ಸಮಾಜ ಕಲ್ಯಾಣ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಪರಿಶಿಷ್ಟ ಜಾತಿ ಸಮುದಾಯಗಳ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಒದಗಿಸುತ್ತದೆ.

ಸಮಾಜ ಕಲ್ಯಾಣ ಸಂಘದಿಂದ ನಡೆಸಲ್ಪಡುವ ಸಂಸ್ಥೆಗಳ ವಿದ್ಯಾರ್ಥಿಗಳು ಅತ್ಯಂತ ಬಡ ಹಿನ್ನೆಲೆಯಿಂದ ಬಂದವರು. ಹಾಗಾಗಿ, ಅವರು ಮನೆಯಲ್ಲಿದ್ದಾಗಲೂ ತಮ್ಮನ್ನು ತಾವು ಹೇಗೆ ನೋಡಿಕೊಳ್ಳಬೇಕೆಂದು ಕಲಿಯಬೇಕಾಗಿದೆ ಎಂದು ವರ್ಷಿಣಿ ಹೇಳುತ್ತಿರುವುದು ಆಡಿಯೋದಲ್ಲಿ ಕೇಳಿಬಂದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ಅವರು (ವಿದ್ಯಾರ್ಥಿಗಳು) ತಮ್ಮ ಕೊಠಡಿ ಸ್ವಚ್ಛಗೊಳಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಅವರ ಕೊಠಡಿಗಳನ್ನು ಯಾರು ಸ್ವಚ್ಛಗೊಳಿಸುತ್ತಾರೆ? ಒಬ್ಬರು ಕಸ ಗುಡಿಸುವರು ಒಂದು ಸಲ ಸ್ವಚ್ಛ ಮಾಡಿದರೆ, ಇತರ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ಏಕೆ ಸ್ವಚ್ಛ ಮಾಡಬಾರದು? ಅವರು ತಮ್ಮ ಶೌಚಾಲಯಗಳನ್ನು ಏಕೆ ಸ್ವಚ್ಛಗೊಳಿಸಲು ಸಾಧ್ಯವಿಲ್ಲ? ಅದರಲ್ಲಿ ತಪ್ಪೇನು?” ಎಂದು ವರ್ಷಿಣಿ ಹೇಳಿರುವುದಾಗಿ ಆರೋಪಿಸಲಾಗಿದೆ.

ತನ್ನ ನಿರ್ದೇಶನಕ್ಕೆ ಆಕ್ಷೇಪ ವ್ಯಕ್ತಪಡಿಸುವ ಪೋಷಕರಿಗೆ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ವರ್ಷಿಣಿ ಹೇಳಿದ್ದಾರೆ ಎನ್ನಲಾಗಿದೆ.

ವರ್ಷಿಣಿ ಅವರ ಮಾತು ಬೆಳಕಿಗೆ ಬಂದ ನಂತರ, ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ನಾಯಕ ಮತ್ತು ಸಂಘದ ಮಾಜಿ ಕಾರ್ಯದರ್ಶಿ ಆರ್.ಎಸ್. ಪ್ರವೀಣ್ ಕುಮಾರ್, ವರ್ಷಿಣಿ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

“ಈ ಸಂಪೂರ್ಣ ಶಿಕ್ಷಣ ಪ್ರಯೋಗ” ಸೋ ಕಾಲ್ಡ್ ಶ್ರೀಮಂತ ಸಮಾಜ ಎಂದು ಕರೆಯಲ್ಪಡುವವರಿಂದ ಮತ್ತು ಅವರ ಮಕ್ಕಳ ಪ್ರೀತಿಯ ಮನೆ, ಅಂತಾರಾಷ್ಟ್ರೀಯ ಶಾಲೆಗಳಿಂದ ಪ್ರಾರಂಭವಾಗಬೇಕು. ಅಲ್ಲದೆ ಬಡ ಮಕ್ಕಳಿಂದ ಅಲ್ಲ” ಎಂದು ಪ್ರವೀಣ್ ಕುಮಾರ್ ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿದ್ದಾರೆ.

“ದಮನಿತ ಸಮುದಾಯಗಳು/ಕುಟುಂಬಗಳ ಮಕ್ಕಳು ಪ್ರತಿದಿನ ತೊಟ್ಟಿಲಿನಿಂದ ಸಮಾಧಿಯವರೆಗೆ ಪ್ರತಿದಿನ ತಮ್ಮನ್ನು ತಾವು ಸಹಾಯ ಮಾಡಿಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲದೆ ಉಳಿದಿದ್ದಾರೆ. ಏಕೆಂದರೆ, ಅವರಿಗೆ ತಮ್ಮ ಹೊರೆಯನ್ನು ಬೇರೆಯವರ ಮೇಲೆ ಹೊರಿಸಲು ಇಷ್ಟವಿಲ್ಲ” ಎಂದಿದ್ದಾರೆ.

“ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ರಾಜ್ಯ ಸರ್ಕಾರದ ಕಾರ್ಯದರ್ಶಿ ತಮ್ಮ ಮಕ್ಕಳನ್ನು ಒಂದು ತಿಂಗಳ ಕಾಲ ಕಲ್ಯಾಣ ಹಾಸ್ಟೆಲ್‌ಗಳಲ್ಲಿ ಇರಿಸಿ, ಮೊದಲು ಅವರಿಂದ ಈ ಸ್ವ-ಸಹಾಯವನ್ನು ಮಾಡಿಸಲಿ. ಬಡವರಿಗೆ ಧರ್ಮೋಪದೇಶ ಮಾಡುವುದು ತುಂಬಾ ಸುಲಭ. ಏಕೆಂದರೆ ಅವರಿಗೆ ಬೇರೆ ಆಯ್ಕೆ ಇಲ್ಲದ ಕಾರಣ ಅವರು ಪ್ರತಿಯಾಗಿ ಪ್ರಶ್ನೆಗಳನ್ನು ಕೇಳುವುದಿಲ್ಲ” ಎಂದು ಕುಮಾರ್ ಹೇಳಿದ್ದಾರೆ.

ಆಡಿಯೋ ಕ್ಲಿಪ್ ಅನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿರುವ ಬಿಆರ್‌ಎಸ್ ಎಂಎಲ್‌ಸಿ ಕೆ. ಕವಿತಾ, “ಐಎಎಸ್ ಅಧಿಕಾರಿಯ ಆಘಾತಕಾರಿ ನಡವಳಿಕೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಡವರ ವಿರೋಧಿ ನಡೆ ಕಾಣುತ್ತಿದೆ” ಎಂದಿದ್ದಾರೆ.

“ಬಿಆರ್‌ಎಸ್ ಸರ್ಕಾರದ ಅವಧಿಯಲ್ಲಿ ಪ್ರತಿ ಸಮಾಜ ಕಲ್ಯಾಣ ಶಾಲೆಗೆ ಶುಚಿಗೊಳಿಸುವ ಕಾರ್ಯಗಳಿಗಾಗಿ ನಾಲ್ಕು ತಾತ್ಕಾಲಿಕ ಕಾರ್ಮಿಕರನ್ನು ನೇಮಿಸಿಕೊಳ್ಳಲು ತಿಂಗಳಿಗೆ 40,000 ರೂ.ಗಳನ್ನು ನೀಡಲಾಗುತ್ತಿತ್ತು” ಎಂದು ಕವಿತಾ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ. “ಈ ವರ್ಷದ ಮೇ ತಿಂಗಳಿನಿಂದ ಕಾಂಗ್ರೆಸ್ ಸರ್ಕಾರ ಇದನ್ನು ನಿಲ್ಲಿಸಿದೆ” ಎಂದಿದ್ದಾರೆ.

“ರಾಜ್ಯ ಸರ್ಕಾರವು 240 ಶಾಲೆಗಳಲ್ಲಿ ಸಹಾಯಕ ಪಾಲಕರನ್ನು ಹೊಂದುವುದನ್ನು ರದ್ದುಗೊಳಿಸಿದೆ. ವಿದ್ಯಾರ್ಥಿಗಳು ವಾರ್ಡನ್‌ಗಳ ಜವಾಬ್ದಾರಿ ತೆಗೆದುಕೊಳ್ಳಲು ಮತ್ತು ಅಡುಗೆಮನೆಗಳನ್ನು ನಿರ್ವಹಿಸಲು ಒತ್ತಾಯಿಸಿದೆ” ಎಂದು ಅವರು ಆರೋಪಿಸಿದ್ದಾರೆ.

“ಈಗ ಅಧಿಕಾರಿ ಶಾಲೆಗಳಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಮಕ್ಕಳನ್ನು ಒತ್ತಾಯಿಸುತ್ತಿದ್ದಾರೆ. ಅವರ ಹೇಳಿಕೆಯು ತಳ ಸಮುದಾಯಗಳ ವಿದ್ಯಾರ್ಥಿಗಳನ್ನು ಜಾತಿ ಮತ್ತು ವರ್ಗ ಪಕ್ಷಪಾತದಿಂದ ರಕ್ಷಿಸಲು ಗುರುಕುಲಗಳನ್ನು ಸ್ಥಾಪಿಸುವ ಪರಿಕಲ್ಪನೆಗೆ ವಿರುದ್ಧವಾಗಿದೆ. ಈ ನಡವಳಿಕೆಯು ತಾರತಮ್ಯ, ಶೋಷಣೆ ಮತ್ತು ಮಕ್ಕಳ ಹಕ್ಕುಗಳು ಮತ್ತು ಘನತೆಯ ಮೂಲ ತತ್ವಗಳನ್ನು ಉಲ್ಲಂಘಿಸುತ್ತದೆ” ಎಂದು ಕವಿತಾ ಹೇಳಿದ್ದಾರೆ.

ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಯನ್ನು ತೆಗೆದುಹಾಕಲು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಐಎಎಸ್ ಅಧಿಕಾರಿ ವರ್ಷಿಣಿ ಅವರು ಮಾಧ್ಯಮಗಳೊಂದಿಗೆ ಹಂಚಿಕೊಂಡ ಮತ್ತೊಂದು ಆಡಿಯೋ ಕ್ಲಿಪ್‌ನಲ್ಲಿ, “ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ನನ್ನ ಮಾತುಗಳನ್ನು ತಿರುಚಬೇಡಿ ಎಂದು ಮನವಿ ಮಾಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶಾಲೆಗಳಲ್ಲಿ ನೈರ್ಮಲ್ಯ ಸಿಬ್ಬಂದಿ ಇಲ್ಲ ಎಂಬ ಆರೋಪಗಳು ಆಧಾರರಹಿತವೆಂದು ಅವರು ಹೇಳಿಕೊಂಡಿದ್ದು, ಮನೆಯಲ್ಲಿ ಪೋಷಕರಿಗೆ ಮಕ್ಕಳು ಸಹಾಯ ಮಾಡುವುದು ‘ಸಾಮಾನ್ಯ ದಿನನಿತ್ಯದ ಚಟುವಟಿಕೆ’. ಅದು ಅವರು ‘ಜಾಗೃತ ವ್ಯಕ್ತಿ’ ಯಾಗಿ ಬೆಳೆಯಲು ಸಹಾಯ ಮಾಡುತ್ತದೆ” ಎಂದಿದ್ದಾರೆ.

“ನೀವು ವಿದೇಶಕ್ಕೆ ಹೋದರೆ ಅಥವಾ ಬೇರೆ ರಾಜ್ಯಕ್ಕೆ ಹೋದರೆ, ನಿಮ್ಮ ದೈನಂದಿನ ಕೆಲಸವನ್ನು ನೀವೇ ಮಾಡಬೇಕು. ಕೊಠಡಿಗಳನ್ನು ಸ್ವಚ್ಛಗೊಳಿಸುವುದು, ಸ್ನಾನಗೃಹಗಳನ್ನು ತೊಳೆಯುವುದು ಮತ್ತು ಬಟ್ಟೆ ಒಗೆಯುವುದು ಸ್ವತಃ ಮಾಡಬೇಕಾಗಿದೆ. ಜೊತೆಗೆ ಅಧ್ಯಯನದತ್ತ ಗಮನ ಹರಿಸಬೇಕು. ಹಠಾತ್ ರೂಪಾಂತರವು ಸಾಮಾನ್ಯವಾಗಿ ಮಕ್ಕಳಿಗೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

ಹೇಮಾ ಸಮಿತಿ ವರದಿ| ತನಿಖೆಗೆ ಸಂತ್ರಸ್ತರ ಅಸಹಕಾರ: ಕೆಲ ಪ್ರಕರಣಗಳನ್ನು ಕೈಬಿಡಲು ಮುಂದಾದ ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...