Homeಕರ್ನಾಟಕಪರಿಶಿಷ್ಟ ಜಾತಿಗಳ ಸಮೀಕ್ಷೆ | ಮನೆ ಮನೆಗೆ ಭೇಟಿ ಮೇ 25 ರವರೆಗೆ ವಿಸ್ತರಣೆ

ಪರಿಶಿಷ್ಟ ಜಾತಿಗಳ ಸಮೀಕ್ಷೆ | ಮನೆ ಮನೆಗೆ ಭೇಟಿ ಮೇ 25 ರವರೆಗೆ ವಿಸ್ತರಣೆ

- Advertisement -
- Advertisement -

ಪರಿಶಿಷ್ಟ ಜಾತಿಗಳ (SCs) ಪ್ರಾಯೋಗಿಕ ಅಂಕಿ ಅಂಶಗಳನ್ನು ಪಡೆಯಲು ನಡೆಯುತ್ತಿರುವ ಮನೆ-ಮನೆ ಸಮೀಕ್ಷೆಯನ್ನು ಮೇ 25 ರವರೆಗೆ ವಿಸ್ತರಿಸಲಾಗುವುದು ಎಂದು ರಾಜ್ಯ ಸರ್ಕಾರ ಶುಕ್ರವಾರ ಪ್ರಕಟಿಸಿದೆ. ಈ ಹಿಂದೆ ಘೋಷಿಸಿದಂತೆ ಸಮೀಕ್ಷೆಯು ಮೇ 17 ರಂದು ಮುಕ್ತಾಯಗೊಳ್ಳಬೇಕಿತ್ತು. ಪರಿಶಿಷ್ಟ ಜಾತಿಗಳ ಸಮೀಕ್ಷೆ

ವಿಶೇಷ ಶಿಬಿರಗಳು ಮತ್ತು ಆನ್‌ಲೈನ್ ಸ್ವಯಂ ಘೋಷಣೆಗೂ ವಿಸ್ತರಣೆಗಳನ್ನು ಒದಗಿಸಲಾಗಿದೆ. ಆರಂಭದಲ್ಲಿ ಮೇ 19-21 ರಿಂದ ನಿಗದಿಯಾಗಿದ್ದ ವಿಶೇಷ ಶಿಬಿರಗಳು ಮೇ 26-28 ರವರೆಗೆ ನಡೆಯಲಿವೆ. ಮೇ 19-23 ರಿಂದ ನಿಗದಿಯಾಗಿದ್ದ ಆನ್‌ಲೈನ್ ಸ್ವಯಂ ಘೋಷಣೆ ಮೇ 19-28 ರವರೆಗೆ ನಡೆಯಲಿದೆ.

“ಸಮೀಕ್ಷೆಯಲ್ಲಿ ಈಗ ನಾವು 72% (73.72%) ಪ್ರಗತಿಯನ್ನು ಸಾಧಿಸಿದ್ದೇವೆ. ಆದಾಗ್ಯೂ, ಲಂಬಾಣಿ ಮತ್ತು ಬಂಜಾರದಂತಹ ಸಮುದಾಯಗಳ ನಾಯಕರು ಮತ್ತು ಸದಸ್ಯರು ವಿಸ್ತರಣೆಯನ್ನು ಕೋರಿ ನಮಗೆ ಪತ್ರ ಬರೆದಿದ್ದಾರೆ. ಜಿಲ್ಲಾಧಿಕಾರಿಗಳು ಸಹ ವಿನಂತಿಸಿದ್ದಾರೆ. ಪರಿಣಾಮವಾಗಿ, ನಾವು ಸಮೀಕ್ಷೆಯನ್ನು ವಿಸ್ತರಿಸಿದ್ದೇವೆ,” ಎಂದು ಎಸ್‌ಸಿಗಳಿಗೆ ಒಳ ಮೀಸಲಾತಿಯನ್ನು ನಿರ್ಧರಿಸಲಿರುವ ಏಕವ್ಯಕ್ತಿ ಆಯೋಗದ ಮುಖ್ಯಸ್ಥರಾಗಿರುವ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಜಾತಿ ದತ್ತಾಂಶವನ್ನು ನಿಖರವಾಗಿ ಎಣಿಸುವಲ್ಲಿ ಮೂರು ಅಡಚಣೆಗಳಿವೆ ಎಂದು ನ್ಯಾಯಮೂರ್ತಿ ದಾಸ್ ಇದೇ ವೇಳೆ ತಿಳಿಸಿದ್ದಾರೆ. “ಮೊದಲನೆಯದಾಗಿ, ಹಲವಾರು ಜನರಿಗೆ ಅವರ ಪ್ರಾಥಮಿಕ ಜಾತಿ ತಿಳಿದಿಲ್ಲ. ಎರಡನೆಯದಾಗಿ, ಕೆಲವು ಜಾತಿಗಳನ್ನು 101 ಜಾತಿಗಳ ಪಟ್ಟಿಗೆ ಸೇರಿಸಲಾಗಿಲ್ಲ. ಮೂರನೆಯದಾಗಿ, ಕೆಲವರು ತಮ್ಮ ಪ್ರಾಥಮಿಕ ಜಾತಿಯನ್ನು ತಿಳಿದಿದ್ದರೂ, ಅದನ್ನು ಒಪ್ಪಿಕೊಳ್ಳುವುದಿಲ್ಲ.” ಎಂದು ಹೇಳಿದ್ದಾರೆ.

“ಕಳೆದ 25-30 ವರ್ಷಗಳಲ್ಲಿ, ಸಮಾಜದಲ್ಲಿ ಹೊಸ ಸಂರಚನೆಗಳು ರಚನೆಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಸಹ, ನಿವೇಶನವಿಲ್ಲದ ಜನರು ಮನೆಗಳನ್ನು ಹೊಂದಿದ್ದಾರೆ. ಪರಿಣಾಮವಾಗಿ, ಅಸ್ಪೃಶ್ಯತೆ ಮುಂದುವರಿದಿದ್ದರೂ, ಎಸ್‌ಸಿಗಳು ಮತ್ತು ಎಸ್‌ಸಿಗಳಲ್ಲದ ಜನರು ಅಕ್ಕಪಕ್ಕದಲ್ಲಿ ವಾಸಿಸುವ ಪರಿಸ್ಥಿತಿ ಸೃಷ್ಟಿಯಾಗಿದೆ. ಹೀಗಾಗಿ, ನಾವು ಎಲ್ಲಾ ಮನೆಗಳಿಗೆ ಭೇಟಿ ನೀಡುತ್ತೇವೆ.” ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಎಸ್‌ಸಿಗಳಲ್ಲದವರಿಗೆ ಹೆಚ್ಚುವರಿ ಪ್ರಶ್ನೆಗಳನ್ನು ಕೇಳಲಾಗುವುದಿಲ್ಲ ಎಂದು ನ್ಯಾಯಮೂರ್ತಿ ದಾಸ್ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರವು ಸಮೀಕ್ಷೆಯ ವಿಧಾನವನ್ನು ಕೋರಿದ್ದು, ಅದರ ಉತ್ತರವನ್ನು ಕಳುಹಿಸಿದ್ದಾಗಿ ನ್ಯಾಯಮೂರ್ತಿ ದಾಸ್ ಇದೇ ವೇಳೆ ಹೇಳಿದ್ದಾರೆ. “ನಾವು ಪಂಚಾಯತ್‌ನಿಂದ ಸಂಸತ್ತಿನವರೆಗೆ ರಾಜಕೀಯ ಪ್ರಾತಿನಿಧ್ಯದ ಕುರಿತು ಮಾಹಿತಿಯನ್ನು ಕೋರಿದ್ದೇವೆ. ಮಾಹಿತಿ ಅಪೂರ್ಣವಾಗಿದ್ದಲ್ಲಿ, ನೋಟಿಸ್‌ಗಳನ್ನು ನೀಡಲಾಗಿದೆ.” ಎಂದು ಹೇಳಿದ್ದಾರೆ.

ಸಮೀಕ್ಷೆಯ ನಂತರ ಪ್ರಾಯೋಗಿಕ ದತ್ತಾಂಶವನ್ನು ವಿಶ್ಲೇಷಿಸಿ ಸುಪ್ರೀಂಕೋರ್ಟ್ ನಿಗದಿಪಡಿಸಿದ ಮಾನದಂಡಗಳನ್ನು ಅನುಸರಿಸುವುದಾಗಿ ನ್ಯಾಯಮೂರ್ತಿ ದಾಸ್ ಅವರು ಹೇಳಿದ್ದಾರೆ. “ಹೆಚ್ಚಿನ ಸಮಯ ವ್ಯರ್ಥ ಮಾಡದೆ ಅಂತಿಮ ವರದಿಯನ್ನು ಸಲ್ಲಿಸಲಾಗುವುದು” ಎಂದು ಅವರು ಹೇಳಿದ್ದಾರೆ. ಪರಿಶಿಷ್ಟ ಜಾತಿಗಳ ಸಮೀಕ್ಷೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಯೋತ್ಪಾದನೆ ವಿರುದ್ಧದ ಭಾರತದ ನಿಲುವು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ನಿಯೋಗ

ಭಯೋತ್ಪಾದನೆ ವಿರುದ್ಧದ ಭಾರತದ ನಿಲುವು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ನಿಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...