Homeಕರ್ನಾಟಕಕೆಲಸ ಕಳೆದುಕೊಂಡ ಕಾರ್ಮಿಕನ ಮೇಲೆ ’ಸ್ಮಿಟ್ಝ್’ ಕಂಪೆನಿ ಅಧಿಕಾರಿಯಿಂದ ಹಲ್ಲೆಯತ್ನ: ವಿಡಿಯೋದಲ್ಲಿ ದಾಖಲು

ಕೆಲಸ ಕಳೆದುಕೊಂಡ ಕಾರ್ಮಿಕನ ಮೇಲೆ ’ಸ್ಮಿಟ್ಝ್’ ಕಂಪೆನಿ ಅಧಿಕಾರಿಯಿಂದ ಹಲ್ಲೆಯತ್ನ: ವಿಡಿಯೋದಲ್ಲಿ ದಾಖಲು

- Advertisement -
- Advertisement -

ಬೆಂಗಳೂರಿನ ಕುಂಬಳಗೋಡಿನಲ್ಲಿ ಕಾರ್ಯಚರಿಸುತ್ತಿರುವ ಜರ್ಮನ್ ಮೂಲದ ಸೂಜಿ ತಯಾರಿಕ ಕಂಪೆನಿ ”ಸ್ಮಿಟ್ಝ್” ವಿರುದ್ದ ಅಲ್ಲಿನ ಕಾರ್ಮಿಕರು ಎಂಟು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಮಂಗಳವಾರ ಕಂಪೆನಿಯು ನಷ್ಟದಲ್ಲಿರುವುದರಿಂದ ಲಾಕೌಟ್ ಮಾಡಿರುವುದಾಗಿ ಹೇಳಿದ್ದ ಆಡಳಿತ ಮಂಡಳಿ ಇದೀಗ ಕಾರ್ಮಿರನ್ನು ವಜಾ ಮಾಡಿರುವುದಾಗಿ ಹೇಳುತ್ತಿದೆ ಎಂದು ಕಾಮಿರ್ಕರು ಆರೋಪಿಸುತ್ತಿದ್ದಾರೆ.

ಮಂಗಳವಾರ ಬೆಳಿಗ್ಗೆ ಪ್ರತಿಭಟನೆ ನಡೆಸುತ್ತಿದ್ದ ಕಾರ್ಮಿಕರೊಂದಿಗೆ ಮಾತುಕತೆಗೆ ಬಂದಿದ್ದ ಕಂಪೆನಿಯ ಜನರಲ್ ಮ್ಯಾನೇಜರ್‌ ರವಿಶಂಕರ್‌ ಮಹಿಳೆಯರೊಂದಿಗೆ ವಾಗ್ವಾದ ನಡೆಸಿದ್ದರು. ಈ ಸಂದರ್ಭ ಅವರ ಮಾತುಕತೆಯನ್ನು ವಿಡಿಯೋ ಮಾಡುತ್ತಿದ್ದ ಕಾರ್ಮಿಕರೊಬ್ಬರ ಮೇಲೆ ಹಲ್ಲೆ ನಡೆಸಲು ಪ್ರಯತ್ನ ಮಾಡಿದ್ದಾರೆ. ಇದು ವಿಡಿಯೋದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ಈ ನಡುವೆ ಕಂಪೆನಿ ಮತ್ತು ಕಾರ್ಮಿಕರ ನಡುವಿನ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಕಾರ್ಮಿಕ ಇಲಾಖೆಯು ಎರಡೂ ಕಡೆಯವರನ್ನು ಜನವರಿ 15 ರಂದು ಮಾತುಕತೆಗೆ ಕರೆದಿದೆ.

“ಕಂಪೆನಿಯು ಏಕಾಏಕಿ ನಮ್ಮನ್ನು ವಜಾಗೊಳಿಸಿ, ನಿಮಗಿನ್ನು ಇಲ್ಲಿ ಕೆಲಸ ಇಲ್ಲ ಎಂದು ಹೇಳುತ್ತಿದೆ. ಹತ್ತದಿನೈದು ವರ್ಷದಿಂದ ಕಂಪೆನಿಯನ್ನು ಕಟ್ಟಿ ಬೆಳೆಸಿದ್ದೇವೆ. ಈಗ ನಮ್ಮನ್ನು ಕಿತ್ತು ಹಾಕಿ, ನಿಮಗೆ ಕೆಲಸವಿಲ್ಲ ಎನ್ನುತ್ತಿದ್ದಾರೆ. ಕೆಲಸದಿಂದ ಕಿತ್ತು ಹಾಕಿದ್ದಕ್ಕೆ ಕಾರಣ ನೀಡುತ್ತಿಲ್ಲ, ನಮ್ಮ ಜೀವನಾಂಶವನ್ನೂ ಕೊಟ್ಟಿಲ್ಲ. ನಾವಿಲ್ಲಿ ನಮ್ಮ ಹಕ್ಕುಗಳನ್ನು ಕೇಳುತ್ತಿದ್ದೇವೆ, ಆದರೆ ಪ್ರತಿಭಟನೆ ಮಾಡದಂತೆ ಇಲ್ಲಿನ ಅಧಿಕಾರಿಗಳು ನಮ್ಮನ್ನ ಬಂದು ಬೆದರಿಸುತ್ತಿದ್ದಾರೆ” ಎಂದು ಪ್ರತಿಭಟನಾ ನಿರತ ಕಾರ್ಮಿಕರಾದ ಗುರು ನಾನಾಗೌರಿ.ಕಾಮ್‌ನೊಂದಿಗೆ ಹೇಳಿದ್ದಾರೆ.

ಇದನ್ನೂ ಓದಿ: ಕಾರ್ಮಿಕರ ಹೋರಾಟವನ್ನು ಹತ್ತಿಕ್ಕಿದ ಶ್ರೀರಂಗಪಟ್ಟಣದ ಗಾರ್ಮೆಂಟ್ಸ್‌: ಅಧ್ಯಯನ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...