Homeಕರ್ನಾಟಕರಾಜ್ಯದ 11 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ

ರಾಜ್ಯದ 11 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ

- Advertisement -
- Advertisement -

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್‌‌ ಚುನಾವಣೆಯ ಹಿನ್ನೆಲೆಯಲ್ಲಿ ಜೂನ್ 13 ರಂದು 11 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಕರ್ನಾಟಕ ಸರ್ಕಾರ ರಜೆ ಘೋಷಿಸಿದೆ.

ವಿಜಯಪುರ, ಬಾಗಲಕೋಟೆ, ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರಜೆ ಇರಲಿದೆ.

ಮತ ಚಲಾಯಿಸುವುದಕ್ಕಾಗಿ ಸರ್ಕಾರಿ ಅನುದಾನಿತ, ಅನುದಾನರಹಿತ, ಖಾಸಗಿ ಶಾಲಾ-ಕಾಲೇಜುಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರಿ ಕಚೇರಿಗಳು, ಕಾರ್ಖಾನೆಗಳು, ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್‌ಗಳು, ಸಹಕಾರ ಸಂಘಗಳು ಮತ್ತು ಇತರ ಎಲ್ಲ ಸಂಸ್ಥೆಗಳಿಗೆ ಸೇರಿದ ಪದವೀಧರರು ಹಾಗೂ ಶಿಕ್ಷಕರಿಗೆ ಜೂನ್ 13 ರಂದು ಒಂದು ದಿನದ ರಜೆ ನೀಡಬೇಕು ಎಂದು ಸರ್ಕಾರ ಸೂಚಿಸಿದೆ.

ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳ ನಾಲ್ಕು ವಿಧಾನ ಪರಿಷತ್ ಸ್ಥಾನಗಳ ಪೈಕಿ ಮೂರರಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ನಾಲ್ಕು ಸ್ಥಾನಗಳಲ್ಲೂ ಜೆಡಿಎಸ್‌‌ ಕಣದಲ್ಲಿದೆ. ವಾಯುವ್ಯ ಪದವೀಧರರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರ, ವಾಯುವ್ಯ ಶಿಕ್ಷಕರು ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ.

ಅರುಣ್ ಶಹಪುರ್, ಕೆ.ಟಿ.ಶ್ರೀಕಂಠೇಗೌಡ ಮತ್ತು ಹನುಮನಾಥ್ ಆರ್ ನಿರಾಣಿ ಅವರ ಅಧಿಕಾರಾವಧಿ ಜುಲೈ 4 ರಂದು ಮುಕ್ತಾಯವಾಗಿದೆ. ಜು.4ಕ್ಕೆ ಬಸವರಾಜ ಹೊರಟ್ಟಿ ಅವರ ಅಧಿಕಾರವಧಿಯೂ ಮುಗಿಯಲಿದ್ದು, ಬಿಜೆಪಿಗೆ ಸೇರ್ಪಡೆಯಾದ ಬಳಿಕ ರಾಜೀನಾಮೆ ನೀಡಿದ್ದಾರೆ. ಮೇಲ್ಮನೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಹೊರಟ್ಟಿ ಅವರು ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಎಂಟು ಬಾರಿ ಆಯ್ಕೆಯಾಗಿ ಗೆಲುವು ಸಾಧಿಸಿ ಗೆಲುವಿನ ಗುರಿ ಹೊಂದಿದ್ದಾರೆ. ಹೊರಟ್ಟಿಯವರು ತಮ್ಮ ನಿಕಟವರ್ತಿ ಜೆಡಿಎಸ್‌ನ ಶ್ರೀಶೈಲ ಜಿ. ಹಾಗೂ ಒಂದು ಕಾಲದ ಬೆಂಬಲಿಗ ಕಾಂಗ್ರೆಸ್‌ನ ಬಸವರಾಜ ಗುರಿಕಾರ ವಿರುದ್ಧ ಸ್ಪರ್ಧಿಸಿದ್ದಾರೆ.

ಕರ್ನಾಟಕ ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಎಂಎಲ್‌ಸಿ ಅರುಣ್ ಶಹಾಪುರ ಎರಡನೇ ಅವಧಿಗೆ ಸ್ಪರ್ಧಿಸಿದ್ದು, ಹಿರಿಯ ಕಾಂಗ್ರೆಸ್ ನಾಯಕ ಪ್ರಕಾಶ ಹುಕ್ಕೇರಿ ಕಣಕ್ಕಿಳಿದಿದ್ದಾರೆ.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರ ಕಿರಿಯ ಸಹೋದರ, ಬಿಜೆಪಿ ಅಭ್ಯರ್ಥಿ, ಹಾಲಿ ಎಂಎಲ್‌ಸಿ ಹನುಮಂತ್ ಆರ್ ನಿರಾಣಿ ಅವರು ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಸುಂಕ್ ಅವರನ್ನು ವಾಯವ್ಯ ಪದವೀಧರರ ಕ್ಷೇತ್ರದಲ್ಲಿ ಎದುರಿಸಲಿದ್ದಾರೆ.

ಕರ್ನಾಟಕ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಶ್ರಮಿಸುತ್ತಿರುವ ಜನತಾದಳ (ಜಾತ್ಯತೀತ) ತನ್ನ ಹಾಲಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಬದಲಿಗೆ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎಚ್.ಕೆ.ರಾಮು ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‌ನಿಂದ ಮಧು ಮಾದೇಗೌಡ ಸ್ಪರ್ಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...