Homeಕರ್ನಾಟಕರಾಜ್ಯದ 11 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ

ರಾಜ್ಯದ 11 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ

- Advertisement -
- Advertisement -

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್‌‌ ಚುನಾವಣೆಯ ಹಿನ್ನೆಲೆಯಲ್ಲಿ ಜೂನ್ 13 ರಂದು 11 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಕರ್ನಾಟಕ ಸರ್ಕಾರ ರಜೆ ಘೋಷಿಸಿದೆ.

ವಿಜಯಪುರ, ಬಾಗಲಕೋಟೆ, ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರಜೆ ಇರಲಿದೆ.

ಮತ ಚಲಾಯಿಸುವುದಕ್ಕಾಗಿ ಸರ್ಕಾರಿ ಅನುದಾನಿತ, ಅನುದಾನರಹಿತ, ಖಾಸಗಿ ಶಾಲಾ-ಕಾಲೇಜುಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರಿ ಕಚೇರಿಗಳು, ಕಾರ್ಖಾನೆಗಳು, ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್‌ಗಳು, ಸಹಕಾರ ಸಂಘಗಳು ಮತ್ತು ಇತರ ಎಲ್ಲ ಸಂಸ್ಥೆಗಳಿಗೆ ಸೇರಿದ ಪದವೀಧರರು ಹಾಗೂ ಶಿಕ್ಷಕರಿಗೆ ಜೂನ್ 13 ರಂದು ಒಂದು ದಿನದ ರಜೆ ನೀಡಬೇಕು ಎಂದು ಸರ್ಕಾರ ಸೂಚಿಸಿದೆ.

ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳ ನಾಲ್ಕು ವಿಧಾನ ಪರಿಷತ್ ಸ್ಥಾನಗಳ ಪೈಕಿ ಮೂರರಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ನಾಲ್ಕು ಸ್ಥಾನಗಳಲ್ಲೂ ಜೆಡಿಎಸ್‌‌ ಕಣದಲ್ಲಿದೆ. ವಾಯುವ್ಯ ಪದವೀಧರರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರ, ವಾಯುವ್ಯ ಶಿಕ್ಷಕರು ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ.

ಅರುಣ್ ಶಹಪುರ್, ಕೆ.ಟಿ.ಶ್ರೀಕಂಠೇಗೌಡ ಮತ್ತು ಹನುಮನಾಥ್ ಆರ್ ನಿರಾಣಿ ಅವರ ಅಧಿಕಾರಾವಧಿ ಜುಲೈ 4 ರಂದು ಮುಕ್ತಾಯವಾಗಿದೆ. ಜು.4ಕ್ಕೆ ಬಸವರಾಜ ಹೊರಟ್ಟಿ ಅವರ ಅಧಿಕಾರವಧಿಯೂ ಮುಗಿಯಲಿದ್ದು, ಬಿಜೆಪಿಗೆ ಸೇರ್ಪಡೆಯಾದ ಬಳಿಕ ರಾಜೀನಾಮೆ ನೀಡಿದ್ದಾರೆ. ಮೇಲ್ಮನೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಹೊರಟ್ಟಿ ಅವರು ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಎಂಟು ಬಾರಿ ಆಯ್ಕೆಯಾಗಿ ಗೆಲುವು ಸಾಧಿಸಿ ಗೆಲುವಿನ ಗುರಿ ಹೊಂದಿದ್ದಾರೆ. ಹೊರಟ್ಟಿಯವರು ತಮ್ಮ ನಿಕಟವರ್ತಿ ಜೆಡಿಎಸ್‌ನ ಶ್ರೀಶೈಲ ಜಿ. ಹಾಗೂ ಒಂದು ಕಾಲದ ಬೆಂಬಲಿಗ ಕಾಂಗ್ರೆಸ್‌ನ ಬಸವರಾಜ ಗುರಿಕಾರ ವಿರುದ್ಧ ಸ್ಪರ್ಧಿಸಿದ್ದಾರೆ.

ಕರ್ನಾಟಕ ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಎಂಎಲ್‌ಸಿ ಅರುಣ್ ಶಹಾಪುರ ಎರಡನೇ ಅವಧಿಗೆ ಸ್ಪರ್ಧಿಸಿದ್ದು, ಹಿರಿಯ ಕಾಂಗ್ರೆಸ್ ನಾಯಕ ಪ್ರಕಾಶ ಹುಕ್ಕೇರಿ ಕಣಕ್ಕಿಳಿದಿದ್ದಾರೆ.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರ ಕಿರಿಯ ಸಹೋದರ, ಬಿಜೆಪಿ ಅಭ್ಯರ್ಥಿ, ಹಾಲಿ ಎಂಎಲ್‌ಸಿ ಹನುಮಂತ್ ಆರ್ ನಿರಾಣಿ ಅವರು ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಸುಂಕ್ ಅವರನ್ನು ವಾಯವ್ಯ ಪದವೀಧರರ ಕ್ಷೇತ್ರದಲ್ಲಿ ಎದುರಿಸಲಿದ್ದಾರೆ.

ಕರ್ನಾಟಕ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಶ್ರಮಿಸುತ್ತಿರುವ ಜನತಾದಳ (ಜಾತ್ಯತೀತ) ತನ್ನ ಹಾಲಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಬದಲಿಗೆ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎಚ್.ಕೆ.ರಾಮು ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‌ನಿಂದ ಮಧು ಮಾದೇಗೌಡ ಸ್ಪರ್ಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...