Homeಕರ್ನಾಟಕರಾಜ್ಯದಲ್ಲಿ ಶಾಲೆ ತೊರೆದ ಮಕ್ಕಳ ಸಂಖ್ಯೆ ಹೆಚ್ಚಳ : ಹೊಸ ದಾಖಲಾತಿ ಇಳಿಕೆ ; ವರದಿ

ರಾಜ್ಯದಲ್ಲಿ ಶಾಲೆ ತೊರೆದ ಮಕ್ಕಳ ಸಂಖ್ಯೆ ಹೆಚ್ಚಳ : ಹೊಸ ದಾಖಲಾತಿ ಇಳಿಕೆ ; ವರದಿ

- Advertisement -
- Advertisement -

ಕಳೆದ 2022-23ನೇ ವರ್ಷಕ್ಕೆ ಹೋಲಿಸಿದರೆ 2023-24ರಲ್ಲಿ ಕರ್ನಾಟಕದಲ್ಲಿ ಶಾಲೆ ತೊರೆದ ಮಕ್ಕಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಇತ್ತೀಚೆಗೆ ಬಿಡುಗಡೆ ಮಾಡಿದ ಯುನಿಫೈಡ್ ಡಿಸ್ಟ್ರಿಕ್ಟ್ ಇನ್ಫಾರ್ಮೇಶನ್ ಸಿಸ್ಟಮ್ ಫಾರ್ ಎಜುಕೇಶನ್ ಪ್ಲಸ್ (ಯುಡಿಎಸ್ಇ+) ವರದಿ ಹೇಳಿದೆ.

ವರದಿಯ ಪ್ರಕಾರ, 2023-24ರಲ್ಲಿ ರಾಜ್ಯದಲ್ಲಿ ಶೇಖಡ 1.7 ಪ್ರಾಥಮಿಕ, ಶೇ. 2.7 ಹಿರಿಯ ಪ್ರಾಥಮಿಕ ಮತ್ತು ಶೇ. 22.09 ಪ್ರೌಢ ಶಾಲಾ ತರಗತಿಗಳ ಮಕ್ಕಳು ಶಾಲೆ ತೊರೆದಿದ್ದಾರೆ. (ಒಂದು ತರಗತಿಯಿಂದ ಇನ್ನೊಂದಕ್ಕೆ ವಿದ್ಯಾರ್ಥಿಗಳ ನೈಜ ಚಲನೆಯನ್ನು ಆಧರಿಸಿ ವೈಯಕ್ತಿಕ ವಿದ್ಯಾರ್ಥಿಯ ದತ್ತಾಂಶವನ್ನು ಬಳಸಿಕೊಂಡು ಲೆಕ್ಕ ಹಾಕಲಾಗಿದೆ) 2022-23 ರಲ್ಲಿ, ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ತರಗತಿಗಳ ಮಕ್ಕಳು ಶಾಲೆ ತೊರೆದ ಪ್ರಮಾಣ ಶೂನ್ಯ ಇತ್ತು. ಪ್ರೌಢ ತರಗತಿಗಳ ಶೇ.14.9 ಮಕ್ಕಳು ಶಾಲೆ ತೊರೆದಿದ್ದರು.

ವರದಿಯ ಪ್ರಕಾರ, ಶಾಲೆ ತೊರೆದ ಮಕ್ಕಳ ಸಂಖ್ಯೆಯು ಒಂದು ನಿರ್ದಿಷ್ಟ ಶೈಕ್ಷಣಿಕ ವರ್ಷದಲ್ಲಿ ನಿರ್ದಿಷ್ಟ ಮಟ್ಟದಲ್ಲಿ ದಾಖಲಾದ ವಿದ್ಯಾರ್ಥಿಗಳ ಅನುಪಾತವಾಗಿದೆ. ಅವರು ಮುಂದಿನ ಶಾಲಾ ವರ್ಷದಲ್ಲಿ ಯಾವುದೇ ತರಗತಿಗೆ ದಾಖಲಾಗಿರುವುದಿಲ್ಲ.

ರಾಜ್ಯದಲ್ಲಿ ಪೂರ್ವ ಪ್ರಾಥಮಿಕದಿಂದ 12 ನೇ ತರಗತಿಗೆ ಒಟ್ಟು ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕೂಡ ಇಳಿಕೆಯಾಗಿದೆ.

2023-24ನೇ ವರ್ಷದಲ್ಲಿ ರಾಜ್ಯದ ಶಾಲೆಗಳಲ್ಲಿ (ಸರ್ಕಾರಿ, ಖಾಸಗಿ , ಅನುದಾನಿತ ಇತ್ಯಾದಿ) ದಾಖಲಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 1,19,26,303. 2023-23ರಲ್ಲಿ 1,23,98,654 ವಿದ್ಯಾರ್ಥಿಗಳು ದಾಖಲಾಗಿದ್ದರು. ಈ ಸಂಖ್ಯೆ 2021-22ರಲ್ಲಿ 1,20,92,381 ಮತ್ತು 2020-21ರಲ್ಲಿ 1,18,56,736 ಇತ್ತು.

ಸರ್ಕಾರಿ ಶಾಲೆಗಳು 2023-24ರಲ್ಲಿ ಒಟ್ಟು 49,85,661 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿವೆ. 2022-23ಕ್ಕೆ ಹೋಲಿಸಿದರೆ 2023-24ರಲ್ಲಿ 3,41,560 ಮಕ್ಕಳು ಕಡಿಮೆಯಾಗಿದ್ದಾರೆ. 2022-23ರಲ್ಲಿ ಸರ್ಕಾರಿ ಶಾಲೆಗಳು 53,27,221 ಮತ್ತು 2021-22ರಲ್ಲಿ 54,45,989 ವಿದ್ಯಾರ್ಥಿಗಳಿಗೆ ಹೊಸದಾಗಿ ಪ್ರವೇಶ ನೀಡಿತ್ತು.

ಗಮನಾರ್ಹ ವಿಷಯವೆಂದರೆ, ಖಾಸಗಿ ಅನುದಾನ ರಹಿತ ಶಾಲೆಗಳಲ್ಲೂ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆಯಾಗಿದೆ. 2022-23ರಲ್ಲಿ 55,59,281 ವಿದ್ಯಾರ್ಥಿಗಳು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಪ್ರವೇಶ ಪಡೆದಿದ್ದರು. 2023-24ರಲ್ಲಿ ಈ ಸಂಖ್ಯೆ 54,80,677ಕ್ಕೆ ಇಳಿಕೆಯಾಗಿದೆ. ಪ್ರವೇಶಕ್ಕೆ ಅರ್ಹರಾಗಿರುವ ಮಕ್ಕಳ ಸಂಖ್ಯೆಯಲ್ಲಿನ ಇಳಿಕೆಯೇ ಇದಕ್ಕೆ ಪ್ರಮುಖ ಕಾರಣ ಎಂದು ಖಾಸಗಿ ಶಾಲಾ ಆಡಳಿತ ಮಂಡಳಿಗಳು ತಿಳಿಸಿವೆ.

ವರದಿಯು ಶೂನ್ಯ ದಾಖಲಾತಿ ಶಾಲೆಗಳು ಮತ್ತು ಶೂನ್ಯ ಶಿಕ್ಷಕರ ಶಾಲೆಗಳನ್ನು ಎತ್ತಿ ತೋರಿಸಿದೆ. ರಾಜ್ಯದಲ್ಲಿ ಶಿಕ್ಷಕರಿಲ್ಲದ 1,572 ಶಾಲೆಗಳಿವೆ ಮತ್ತು 7,821 ಏಕ ಶಿಕ್ಷಕರಿದ್ದಾರೆ. ಈ ಏಕ ಶಿಕ್ಷಕರ ಶಾಲೆಗಳಲ್ಲಿ 2,74,814 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಒಟ್ಟು 1,078 ಶಾಲೆಗಳು ಒಬ್ಬ ವಿದ್ಯಾರ್ಥಿಯನ್ನೂ ದಾಖಲಿಸಲು ವಿಫಲವಾಗಿವೆ.

ಆದರೆ, ವರದಿಯಲ್ಲಿ ಬಹಿರಂಗವಾಗಿರುವ ಸಕಾರಾತ್ಮಕ ಅಂಶವೆಂದರೆ, ಶಾಲಾಪೂರ್ವ ಅನುಭವದೊಂದಿಗೆ 1ನೇ ತರಗತಿಗೆ ಪ್ರವೇಶಿ ಪಡೆಯುವ ಮಕ್ಕಳ ಸಂಖ್ಯೆ, ವಿಶೇಷವಾಗಿ ಅಂಗನವಾಡಿ ಕೇಂದ್ರಗಳಿಂದ ಬರುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. 2023-24ರಲ್ಲಿ 9,45,325 ಮಕ್ಕಳು 1ನೇ ತರಗತಿಗೆ ಸೇರಿದ್ದು, ಅದರಲ್ಲಿ 3,91,940 ಮಕ್ಕಳು ಅಂಗನವಾಡಿಗಳಿಂದ ಬಂದವರು. ಅವರಲ್ಲಿ ಹೆಚ್ಚಿನವರು, ಅಂದರೆ 59,748 ಮಕ್ಕಳು ಖಾಸಗಿ ಅನುದಾನರಹಿತ ಶಾಲೆಗಳಿಗೆ ಸೇರಿದ್ದಾರೆ.

ಇದನ್ನೂ ಓದಿ : ಸಚಿವ ಸಂಪುಟ ಸಭೆ | ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳ : ನಿಗಮಗಳು ₹2 ಸಾವಿರ ಕೋಟಿ ಸಾಲ ಪಡೆಯಲು ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...