Homeಕರ್ನಾಟಕರಾಜ್ಯದಲ್ಲಿ ಶಾಲೆ ತೊರೆದ ಮಕ್ಕಳ ಸಂಖ್ಯೆ ಹೆಚ್ಚಳ : ಹೊಸ ದಾಖಲಾತಿ ಇಳಿಕೆ ; ವರದಿ

ರಾಜ್ಯದಲ್ಲಿ ಶಾಲೆ ತೊರೆದ ಮಕ್ಕಳ ಸಂಖ್ಯೆ ಹೆಚ್ಚಳ : ಹೊಸ ದಾಖಲಾತಿ ಇಳಿಕೆ ; ವರದಿ

- Advertisement -
- Advertisement -

ಕಳೆದ 2022-23ನೇ ವರ್ಷಕ್ಕೆ ಹೋಲಿಸಿದರೆ 2023-24ರಲ್ಲಿ ಕರ್ನಾಟಕದಲ್ಲಿ ಶಾಲೆ ತೊರೆದ ಮಕ್ಕಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಇತ್ತೀಚೆಗೆ ಬಿಡುಗಡೆ ಮಾಡಿದ ಯುನಿಫೈಡ್ ಡಿಸ್ಟ್ರಿಕ್ಟ್ ಇನ್ಫಾರ್ಮೇಶನ್ ಸಿಸ್ಟಮ್ ಫಾರ್ ಎಜುಕೇಶನ್ ಪ್ಲಸ್ (ಯುಡಿಎಸ್ಇ+) ವರದಿ ಹೇಳಿದೆ.

ವರದಿಯ ಪ್ರಕಾರ, 2023-24ರಲ್ಲಿ ರಾಜ್ಯದಲ್ಲಿ ಶೇಖಡ 1.7 ಪ್ರಾಥಮಿಕ, ಶೇ. 2.7 ಹಿರಿಯ ಪ್ರಾಥಮಿಕ ಮತ್ತು ಶೇ. 22.09 ಪ್ರೌಢ ಶಾಲಾ ತರಗತಿಗಳ ಮಕ್ಕಳು ಶಾಲೆ ತೊರೆದಿದ್ದಾರೆ. (ಒಂದು ತರಗತಿಯಿಂದ ಇನ್ನೊಂದಕ್ಕೆ ವಿದ್ಯಾರ್ಥಿಗಳ ನೈಜ ಚಲನೆಯನ್ನು ಆಧರಿಸಿ ವೈಯಕ್ತಿಕ ವಿದ್ಯಾರ್ಥಿಯ ದತ್ತಾಂಶವನ್ನು ಬಳಸಿಕೊಂಡು ಲೆಕ್ಕ ಹಾಕಲಾಗಿದೆ) 2022-23 ರಲ್ಲಿ, ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ತರಗತಿಗಳ ಮಕ್ಕಳು ಶಾಲೆ ತೊರೆದ ಪ್ರಮಾಣ ಶೂನ್ಯ ಇತ್ತು. ಪ್ರೌಢ ತರಗತಿಗಳ ಶೇ.14.9 ಮಕ್ಕಳು ಶಾಲೆ ತೊರೆದಿದ್ದರು.

ವರದಿಯ ಪ್ರಕಾರ, ಶಾಲೆ ತೊರೆದ ಮಕ್ಕಳ ಸಂಖ್ಯೆಯು ಒಂದು ನಿರ್ದಿಷ್ಟ ಶೈಕ್ಷಣಿಕ ವರ್ಷದಲ್ಲಿ ನಿರ್ದಿಷ್ಟ ಮಟ್ಟದಲ್ಲಿ ದಾಖಲಾದ ವಿದ್ಯಾರ್ಥಿಗಳ ಅನುಪಾತವಾಗಿದೆ. ಅವರು ಮುಂದಿನ ಶಾಲಾ ವರ್ಷದಲ್ಲಿ ಯಾವುದೇ ತರಗತಿಗೆ ದಾಖಲಾಗಿರುವುದಿಲ್ಲ.

ರಾಜ್ಯದಲ್ಲಿ ಪೂರ್ವ ಪ್ರಾಥಮಿಕದಿಂದ 12 ನೇ ತರಗತಿಗೆ ಒಟ್ಟು ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕೂಡ ಇಳಿಕೆಯಾಗಿದೆ.

2023-24ನೇ ವರ್ಷದಲ್ಲಿ ರಾಜ್ಯದ ಶಾಲೆಗಳಲ್ಲಿ (ಸರ್ಕಾರಿ, ಖಾಸಗಿ , ಅನುದಾನಿತ ಇತ್ಯಾದಿ) ದಾಖಲಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 1,19,26,303. 2023-23ರಲ್ಲಿ 1,23,98,654 ವಿದ್ಯಾರ್ಥಿಗಳು ದಾಖಲಾಗಿದ್ದರು. ಈ ಸಂಖ್ಯೆ 2021-22ರಲ್ಲಿ 1,20,92,381 ಮತ್ತು 2020-21ರಲ್ಲಿ 1,18,56,736 ಇತ್ತು.

ಸರ್ಕಾರಿ ಶಾಲೆಗಳು 2023-24ರಲ್ಲಿ ಒಟ್ಟು 49,85,661 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿವೆ. 2022-23ಕ್ಕೆ ಹೋಲಿಸಿದರೆ 2023-24ರಲ್ಲಿ 3,41,560 ಮಕ್ಕಳು ಕಡಿಮೆಯಾಗಿದ್ದಾರೆ. 2022-23ರಲ್ಲಿ ಸರ್ಕಾರಿ ಶಾಲೆಗಳು 53,27,221 ಮತ್ತು 2021-22ರಲ್ಲಿ 54,45,989 ವಿದ್ಯಾರ್ಥಿಗಳಿಗೆ ಹೊಸದಾಗಿ ಪ್ರವೇಶ ನೀಡಿತ್ತು.

ಗಮನಾರ್ಹ ವಿಷಯವೆಂದರೆ, ಖಾಸಗಿ ಅನುದಾನ ರಹಿತ ಶಾಲೆಗಳಲ್ಲೂ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆಯಾಗಿದೆ. 2022-23ರಲ್ಲಿ 55,59,281 ವಿದ್ಯಾರ್ಥಿಗಳು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಪ್ರವೇಶ ಪಡೆದಿದ್ದರು. 2023-24ರಲ್ಲಿ ಈ ಸಂಖ್ಯೆ 54,80,677ಕ್ಕೆ ಇಳಿಕೆಯಾಗಿದೆ. ಪ್ರವೇಶಕ್ಕೆ ಅರ್ಹರಾಗಿರುವ ಮಕ್ಕಳ ಸಂಖ್ಯೆಯಲ್ಲಿನ ಇಳಿಕೆಯೇ ಇದಕ್ಕೆ ಪ್ರಮುಖ ಕಾರಣ ಎಂದು ಖಾಸಗಿ ಶಾಲಾ ಆಡಳಿತ ಮಂಡಳಿಗಳು ತಿಳಿಸಿವೆ.

ವರದಿಯು ಶೂನ್ಯ ದಾಖಲಾತಿ ಶಾಲೆಗಳು ಮತ್ತು ಶೂನ್ಯ ಶಿಕ್ಷಕರ ಶಾಲೆಗಳನ್ನು ಎತ್ತಿ ತೋರಿಸಿದೆ. ರಾಜ್ಯದಲ್ಲಿ ಶಿಕ್ಷಕರಿಲ್ಲದ 1,572 ಶಾಲೆಗಳಿವೆ ಮತ್ತು 7,821 ಏಕ ಶಿಕ್ಷಕರಿದ್ದಾರೆ. ಈ ಏಕ ಶಿಕ್ಷಕರ ಶಾಲೆಗಳಲ್ಲಿ 2,74,814 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಒಟ್ಟು 1,078 ಶಾಲೆಗಳು ಒಬ್ಬ ವಿದ್ಯಾರ್ಥಿಯನ್ನೂ ದಾಖಲಿಸಲು ವಿಫಲವಾಗಿವೆ.

ಆದರೆ, ವರದಿಯಲ್ಲಿ ಬಹಿರಂಗವಾಗಿರುವ ಸಕಾರಾತ್ಮಕ ಅಂಶವೆಂದರೆ, ಶಾಲಾಪೂರ್ವ ಅನುಭವದೊಂದಿಗೆ 1ನೇ ತರಗತಿಗೆ ಪ್ರವೇಶಿ ಪಡೆಯುವ ಮಕ್ಕಳ ಸಂಖ್ಯೆ, ವಿಶೇಷವಾಗಿ ಅಂಗನವಾಡಿ ಕೇಂದ್ರಗಳಿಂದ ಬರುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. 2023-24ರಲ್ಲಿ 9,45,325 ಮಕ್ಕಳು 1ನೇ ತರಗತಿಗೆ ಸೇರಿದ್ದು, ಅದರಲ್ಲಿ 3,91,940 ಮಕ್ಕಳು ಅಂಗನವಾಡಿಗಳಿಂದ ಬಂದವರು. ಅವರಲ್ಲಿ ಹೆಚ್ಚಿನವರು, ಅಂದರೆ 59,748 ಮಕ್ಕಳು ಖಾಸಗಿ ಅನುದಾನರಹಿತ ಶಾಲೆಗಳಿಗೆ ಸೇರಿದ್ದಾರೆ.

ಇದನ್ನೂ ಓದಿ : ಸಚಿವ ಸಂಪುಟ ಸಭೆ | ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳ : ನಿಗಮಗಳು ₹2 ಸಾವಿರ ಕೋಟಿ ಸಾಲ ಪಡೆಯಲು ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...