Homeಕರ್ನಾಟಕರಾಜ್ಯದಲ್ಲಿ ಶಾಲೆ ತೊರೆದ ಮಕ್ಕಳ ಸಂಖ್ಯೆ ಹೆಚ್ಚಳ : ಹೊಸ ದಾಖಲಾತಿ ಇಳಿಕೆ ; ವರದಿ

ರಾಜ್ಯದಲ್ಲಿ ಶಾಲೆ ತೊರೆದ ಮಕ್ಕಳ ಸಂಖ್ಯೆ ಹೆಚ್ಚಳ : ಹೊಸ ದಾಖಲಾತಿ ಇಳಿಕೆ ; ವರದಿ

- Advertisement -
- Advertisement -

ಕಳೆದ 2022-23ನೇ ವರ್ಷಕ್ಕೆ ಹೋಲಿಸಿದರೆ 2023-24ರಲ್ಲಿ ಕರ್ನಾಟಕದಲ್ಲಿ ಶಾಲೆ ತೊರೆದ ಮಕ್ಕಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಇತ್ತೀಚೆಗೆ ಬಿಡುಗಡೆ ಮಾಡಿದ ಯುನಿಫೈಡ್ ಡಿಸ್ಟ್ರಿಕ್ಟ್ ಇನ್ಫಾರ್ಮೇಶನ್ ಸಿಸ್ಟಮ್ ಫಾರ್ ಎಜುಕೇಶನ್ ಪ್ಲಸ್ (ಯುಡಿಎಸ್ಇ+) ವರದಿ ಹೇಳಿದೆ.

ವರದಿಯ ಪ್ರಕಾರ, 2023-24ರಲ್ಲಿ ರಾಜ್ಯದಲ್ಲಿ ಶೇಖಡ 1.7 ಪ್ರಾಥಮಿಕ, ಶೇ. 2.7 ಹಿರಿಯ ಪ್ರಾಥಮಿಕ ಮತ್ತು ಶೇ. 22.09 ಪ್ರೌಢ ಶಾಲಾ ತರಗತಿಗಳ ಮಕ್ಕಳು ಶಾಲೆ ತೊರೆದಿದ್ದಾರೆ. (ಒಂದು ತರಗತಿಯಿಂದ ಇನ್ನೊಂದಕ್ಕೆ ವಿದ್ಯಾರ್ಥಿಗಳ ನೈಜ ಚಲನೆಯನ್ನು ಆಧರಿಸಿ ವೈಯಕ್ತಿಕ ವಿದ್ಯಾರ್ಥಿಯ ದತ್ತಾಂಶವನ್ನು ಬಳಸಿಕೊಂಡು ಲೆಕ್ಕ ಹಾಕಲಾಗಿದೆ) 2022-23 ರಲ್ಲಿ, ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ತರಗತಿಗಳ ಮಕ್ಕಳು ಶಾಲೆ ತೊರೆದ ಪ್ರಮಾಣ ಶೂನ್ಯ ಇತ್ತು. ಪ್ರೌಢ ತರಗತಿಗಳ ಶೇ.14.9 ಮಕ್ಕಳು ಶಾಲೆ ತೊರೆದಿದ್ದರು.

ವರದಿಯ ಪ್ರಕಾರ, ಶಾಲೆ ತೊರೆದ ಮಕ್ಕಳ ಸಂಖ್ಯೆಯು ಒಂದು ನಿರ್ದಿಷ್ಟ ಶೈಕ್ಷಣಿಕ ವರ್ಷದಲ್ಲಿ ನಿರ್ದಿಷ್ಟ ಮಟ್ಟದಲ್ಲಿ ದಾಖಲಾದ ವಿದ್ಯಾರ್ಥಿಗಳ ಅನುಪಾತವಾಗಿದೆ. ಅವರು ಮುಂದಿನ ಶಾಲಾ ವರ್ಷದಲ್ಲಿ ಯಾವುದೇ ತರಗತಿಗೆ ದಾಖಲಾಗಿರುವುದಿಲ್ಲ.

ರಾಜ್ಯದಲ್ಲಿ ಪೂರ್ವ ಪ್ರಾಥಮಿಕದಿಂದ 12 ನೇ ತರಗತಿಗೆ ಒಟ್ಟು ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕೂಡ ಇಳಿಕೆಯಾಗಿದೆ.

2023-24ನೇ ವರ್ಷದಲ್ಲಿ ರಾಜ್ಯದ ಶಾಲೆಗಳಲ್ಲಿ (ಸರ್ಕಾರಿ, ಖಾಸಗಿ , ಅನುದಾನಿತ ಇತ್ಯಾದಿ) ದಾಖಲಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 1,19,26,303. 2023-23ರಲ್ಲಿ 1,23,98,654 ವಿದ್ಯಾರ್ಥಿಗಳು ದಾಖಲಾಗಿದ್ದರು. ಈ ಸಂಖ್ಯೆ 2021-22ರಲ್ಲಿ 1,20,92,381 ಮತ್ತು 2020-21ರಲ್ಲಿ 1,18,56,736 ಇತ್ತು.

ಸರ್ಕಾರಿ ಶಾಲೆಗಳು 2023-24ರಲ್ಲಿ ಒಟ್ಟು 49,85,661 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿವೆ. 2022-23ಕ್ಕೆ ಹೋಲಿಸಿದರೆ 2023-24ರಲ್ಲಿ 3,41,560 ಮಕ್ಕಳು ಕಡಿಮೆಯಾಗಿದ್ದಾರೆ. 2022-23ರಲ್ಲಿ ಸರ್ಕಾರಿ ಶಾಲೆಗಳು 53,27,221 ಮತ್ತು 2021-22ರಲ್ಲಿ 54,45,989 ವಿದ್ಯಾರ್ಥಿಗಳಿಗೆ ಹೊಸದಾಗಿ ಪ್ರವೇಶ ನೀಡಿತ್ತು.

ಗಮನಾರ್ಹ ವಿಷಯವೆಂದರೆ, ಖಾಸಗಿ ಅನುದಾನ ರಹಿತ ಶಾಲೆಗಳಲ್ಲೂ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆಯಾಗಿದೆ. 2022-23ರಲ್ಲಿ 55,59,281 ವಿದ್ಯಾರ್ಥಿಗಳು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಪ್ರವೇಶ ಪಡೆದಿದ್ದರು. 2023-24ರಲ್ಲಿ ಈ ಸಂಖ್ಯೆ 54,80,677ಕ್ಕೆ ಇಳಿಕೆಯಾಗಿದೆ. ಪ್ರವೇಶಕ್ಕೆ ಅರ್ಹರಾಗಿರುವ ಮಕ್ಕಳ ಸಂಖ್ಯೆಯಲ್ಲಿನ ಇಳಿಕೆಯೇ ಇದಕ್ಕೆ ಪ್ರಮುಖ ಕಾರಣ ಎಂದು ಖಾಸಗಿ ಶಾಲಾ ಆಡಳಿತ ಮಂಡಳಿಗಳು ತಿಳಿಸಿವೆ.

ವರದಿಯು ಶೂನ್ಯ ದಾಖಲಾತಿ ಶಾಲೆಗಳು ಮತ್ತು ಶೂನ್ಯ ಶಿಕ್ಷಕರ ಶಾಲೆಗಳನ್ನು ಎತ್ತಿ ತೋರಿಸಿದೆ. ರಾಜ್ಯದಲ್ಲಿ ಶಿಕ್ಷಕರಿಲ್ಲದ 1,572 ಶಾಲೆಗಳಿವೆ ಮತ್ತು 7,821 ಏಕ ಶಿಕ್ಷಕರಿದ್ದಾರೆ. ಈ ಏಕ ಶಿಕ್ಷಕರ ಶಾಲೆಗಳಲ್ಲಿ 2,74,814 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಒಟ್ಟು 1,078 ಶಾಲೆಗಳು ಒಬ್ಬ ವಿದ್ಯಾರ್ಥಿಯನ್ನೂ ದಾಖಲಿಸಲು ವಿಫಲವಾಗಿವೆ.

ಆದರೆ, ವರದಿಯಲ್ಲಿ ಬಹಿರಂಗವಾಗಿರುವ ಸಕಾರಾತ್ಮಕ ಅಂಶವೆಂದರೆ, ಶಾಲಾಪೂರ್ವ ಅನುಭವದೊಂದಿಗೆ 1ನೇ ತರಗತಿಗೆ ಪ್ರವೇಶಿ ಪಡೆಯುವ ಮಕ್ಕಳ ಸಂಖ್ಯೆ, ವಿಶೇಷವಾಗಿ ಅಂಗನವಾಡಿ ಕೇಂದ್ರಗಳಿಂದ ಬರುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. 2023-24ರಲ್ಲಿ 9,45,325 ಮಕ್ಕಳು 1ನೇ ತರಗತಿಗೆ ಸೇರಿದ್ದು, ಅದರಲ್ಲಿ 3,91,940 ಮಕ್ಕಳು ಅಂಗನವಾಡಿಗಳಿಂದ ಬಂದವರು. ಅವರಲ್ಲಿ ಹೆಚ್ಚಿನವರು, ಅಂದರೆ 59,748 ಮಕ್ಕಳು ಖಾಸಗಿ ಅನುದಾನರಹಿತ ಶಾಲೆಗಳಿಗೆ ಸೇರಿದ್ದಾರೆ.

ಇದನ್ನೂ ಓದಿ : ಸಚಿವ ಸಂಪುಟ ಸಭೆ | ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳ : ನಿಗಮಗಳು ₹2 ಸಾವಿರ ಕೋಟಿ ಸಾಲ ಪಡೆಯಲು ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...