Homeಕರ್ನಾಟಕರಾಜ್ಯದಲ್ಲಿ ಶಾಲೆ ತೊರೆದ ಮಕ್ಕಳ ಸಂಖ್ಯೆ ಹೆಚ್ಚಳ : ಹೊಸ ದಾಖಲಾತಿ ಇಳಿಕೆ ; ವರದಿ

ರಾಜ್ಯದಲ್ಲಿ ಶಾಲೆ ತೊರೆದ ಮಕ್ಕಳ ಸಂಖ್ಯೆ ಹೆಚ್ಚಳ : ಹೊಸ ದಾಖಲಾತಿ ಇಳಿಕೆ ; ವರದಿ

- Advertisement -
- Advertisement -

ಕಳೆದ 2022-23ನೇ ವರ್ಷಕ್ಕೆ ಹೋಲಿಸಿದರೆ 2023-24ರಲ್ಲಿ ಕರ್ನಾಟಕದಲ್ಲಿ ಶಾಲೆ ತೊರೆದ ಮಕ್ಕಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಇತ್ತೀಚೆಗೆ ಬಿಡುಗಡೆ ಮಾಡಿದ ಯುನಿಫೈಡ್ ಡಿಸ್ಟ್ರಿಕ್ಟ್ ಇನ್ಫಾರ್ಮೇಶನ್ ಸಿಸ್ಟಮ್ ಫಾರ್ ಎಜುಕೇಶನ್ ಪ್ಲಸ್ (ಯುಡಿಎಸ್ಇ+) ವರದಿ ಹೇಳಿದೆ.

ವರದಿಯ ಪ್ರಕಾರ, 2023-24ರಲ್ಲಿ ರಾಜ್ಯದಲ್ಲಿ ಶೇಖಡ 1.7 ಪ್ರಾಥಮಿಕ, ಶೇ. 2.7 ಹಿರಿಯ ಪ್ರಾಥಮಿಕ ಮತ್ತು ಶೇ. 22.09 ಪ್ರೌಢ ಶಾಲಾ ತರಗತಿಗಳ ಮಕ್ಕಳು ಶಾಲೆ ತೊರೆದಿದ್ದಾರೆ. (ಒಂದು ತರಗತಿಯಿಂದ ಇನ್ನೊಂದಕ್ಕೆ ವಿದ್ಯಾರ್ಥಿಗಳ ನೈಜ ಚಲನೆಯನ್ನು ಆಧರಿಸಿ ವೈಯಕ್ತಿಕ ವಿದ್ಯಾರ್ಥಿಯ ದತ್ತಾಂಶವನ್ನು ಬಳಸಿಕೊಂಡು ಲೆಕ್ಕ ಹಾಕಲಾಗಿದೆ) 2022-23 ರಲ್ಲಿ, ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ತರಗತಿಗಳ ಮಕ್ಕಳು ಶಾಲೆ ತೊರೆದ ಪ್ರಮಾಣ ಶೂನ್ಯ ಇತ್ತು. ಪ್ರೌಢ ತರಗತಿಗಳ ಶೇ.14.9 ಮಕ್ಕಳು ಶಾಲೆ ತೊರೆದಿದ್ದರು.

ವರದಿಯ ಪ್ರಕಾರ, ಶಾಲೆ ತೊರೆದ ಮಕ್ಕಳ ಸಂಖ್ಯೆಯು ಒಂದು ನಿರ್ದಿಷ್ಟ ಶೈಕ್ಷಣಿಕ ವರ್ಷದಲ್ಲಿ ನಿರ್ದಿಷ್ಟ ಮಟ್ಟದಲ್ಲಿ ದಾಖಲಾದ ವಿದ್ಯಾರ್ಥಿಗಳ ಅನುಪಾತವಾಗಿದೆ. ಅವರು ಮುಂದಿನ ಶಾಲಾ ವರ್ಷದಲ್ಲಿ ಯಾವುದೇ ತರಗತಿಗೆ ದಾಖಲಾಗಿರುವುದಿಲ್ಲ.

ರಾಜ್ಯದಲ್ಲಿ ಪೂರ್ವ ಪ್ರಾಥಮಿಕದಿಂದ 12 ನೇ ತರಗತಿಗೆ ಒಟ್ಟು ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕೂಡ ಇಳಿಕೆಯಾಗಿದೆ.

2023-24ನೇ ವರ್ಷದಲ್ಲಿ ರಾಜ್ಯದ ಶಾಲೆಗಳಲ್ಲಿ (ಸರ್ಕಾರಿ, ಖಾಸಗಿ , ಅನುದಾನಿತ ಇತ್ಯಾದಿ) ದಾಖಲಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 1,19,26,303. 2023-23ರಲ್ಲಿ 1,23,98,654 ವಿದ್ಯಾರ್ಥಿಗಳು ದಾಖಲಾಗಿದ್ದರು. ಈ ಸಂಖ್ಯೆ 2021-22ರಲ್ಲಿ 1,20,92,381 ಮತ್ತು 2020-21ರಲ್ಲಿ 1,18,56,736 ಇತ್ತು.

ಸರ್ಕಾರಿ ಶಾಲೆಗಳು 2023-24ರಲ್ಲಿ ಒಟ್ಟು 49,85,661 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿವೆ. 2022-23ಕ್ಕೆ ಹೋಲಿಸಿದರೆ 2023-24ರಲ್ಲಿ 3,41,560 ಮಕ್ಕಳು ಕಡಿಮೆಯಾಗಿದ್ದಾರೆ. 2022-23ರಲ್ಲಿ ಸರ್ಕಾರಿ ಶಾಲೆಗಳು 53,27,221 ಮತ್ತು 2021-22ರಲ್ಲಿ 54,45,989 ವಿದ್ಯಾರ್ಥಿಗಳಿಗೆ ಹೊಸದಾಗಿ ಪ್ರವೇಶ ನೀಡಿತ್ತು.

ಗಮನಾರ್ಹ ವಿಷಯವೆಂದರೆ, ಖಾಸಗಿ ಅನುದಾನ ರಹಿತ ಶಾಲೆಗಳಲ್ಲೂ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆಯಾಗಿದೆ. 2022-23ರಲ್ಲಿ 55,59,281 ವಿದ್ಯಾರ್ಥಿಗಳು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಪ್ರವೇಶ ಪಡೆದಿದ್ದರು. 2023-24ರಲ್ಲಿ ಈ ಸಂಖ್ಯೆ 54,80,677ಕ್ಕೆ ಇಳಿಕೆಯಾಗಿದೆ. ಪ್ರವೇಶಕ್ಕೆ ಅರ್ಹರಾಗಿರುವ ಮಕ್ಕಳ ಸಂಖ್ಯೆಯಲ್ಲಿನ ಇಳಿಕೆಯೇ ಇದಕ್ಕೆ ಪ್ರಮುಖ ಕಾರಣ ಎಂದು ಖಾಸಗಿ ಶಾಲಾ ಆಡಳಿತ ಮಂಡಳಿಗಳು ತಿಳಿಸಿವೆ.

ವರದಿಯು ಶೂನ್ಯ ದಾಖಲಾತಿ ಶಾಲೆಗಳು ಮತ್ತು ಶೂನ್ಯ ಶಿಕ್ಷಕರ ಶಾಲೆಗಳನ್ನು ಎತ್ತಿ ತೋರಿಸಿದೆ. ರಾಜ್ಯದಲ್ಲಿ ಶಿಕ್ಷಕರಿಲ್ಲದ 1,572 ಶಾಲೆಗಳಿವೆ ಮತ್ತು 7,821 ಏಕ ಶಿಕ್ಷಕರಿದ್ದಾರೆ. ಈ ಏಕ ಶಿಕ್ಷಕರ ಶಾಲೆಗಳಲ್ಲಿ 2,74,814 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಒಟ್ಟು 1,078 ಶಾಲೆಗಳು ಒಬ್ಬ ವಿದ್ಯಾರ್ಥಿಯನ್ನೂ ದಾಖಲಿಸಲು ವಿಫಲವಾಗಿವೆ.

ಆದರೆ, ವರದಿಯಲ್ಲಿ ಬಹಿರಂಗವಾಗಿರುವ ಸಕಾರಾತ್ಮಕ ಅಂಶವೆಂದರೆ, ಶಾಲಾಪೂರ್ವ ಅನುಭವದೊಂದಿಗೆ 1ನೇ ತರಗತಿಗೆ ಪ್ರವೇಶಿ ಪಡೆಯುವ ಮಕ್ಕಳ ಸಂಖ್ಯೆ, ವಿಶೇಷವಾಗಿ ಅಂಗನವಾಡಿ ಕೇಂದ್ರಗಳಿಂದ ಬರುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. 2023-24ರಲ್ಲಿ 9,45,325 ಮಕ್ಕಳು 1ನೇ ತರಗತಿಗೆ ಸೇರಿದ್ದು, ಅದರಲ್ಲಿ 3,91,940 ಮಕ್ಕಳು ಅಂಗನವಾಡಿಗಳಿಂದ ಬಂದವರು. ಅವರಲ್ಲಿ ಹೆಚ್ಚಿನವರು, ಅಂದರೆ 59,748 ಮಕ್ಕಳು ಖಾಸಗಿ ಅನುದಾನರಹಿತ ಶಾಲೆಗಳಿಗೆ ಸೇರಿದ್ದಾರೆ.

ಇದನ್ನೂ ಓದಿ : ಸಚಿವ ಸಂಪುಟ ಸಭೆ | ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳ : ನಿಗಮಗಳು ₹2 ಸಾವಿರ ಕೋಟಿ ಸಾಲ ಪಡೆಯಲು ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...