Homeಕರ್ನಾಟಕರಾಜ್ಯದಲ್ಲಿ ಶಾಲೆ ತೊರೆದ ಮಕ್ಕಳ ಸಂಖ್ಯೆ ಹೆಚ್ಚಳ : ಹೊಸ ದಾಖಲಾತಿ ಇಳಿಕೆ ; ವರದಿ

ರಾಜ್ಯದಲ್ಲಿ ಶಾಲೆ ತೊರೆದ ಮಕ್ಕಳ ಸಂಖ್ಯೆ ಹೆಚ್ಚಳ : ಹೊಸ ದಾಖಲಾತಿ ಇಳಿಕೆ ; ವರದಿ

- Advertisement -
- Advertisement -

ಕಳೆದ 2022-23ನೇ ವರ್ಷಕ್ಕೆ ಹೋಲಿಸಿದರೆ 2023-24ರಲ್ಲಿ ಕರ್ನಾಟಕದಲ್ಲಿ ಶಾಲೆ ತೊರೆದ ಮಕ್ಕಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಇತ್ತೀಚೆಗೆ ಬಿಡುಗಡೆ ಮಾಡಿದ ಯುನಿಫೈಡ್ ಡಿಸ್ಟ್ರಿಕ್ಟ್ ಇನ್ಫಾರ್ಮೇಶನ್ ಸಿಸ್ಟಮ್ ಫಾರ್ ಎಜುಕೇಶನ್ ಪ್ಲಸ್ (ಯುಡಿಎಸ್ಇ+) ವರದಿ ಹೇಳಿದೆ.

ವರದಿಯ ಪ್ರಕಾರ, 2023-24ರಲ್ಲಿ ರಾಜ್ಯದಲ್ಲಿ ಶೇಖಡ 1.7 ಪ್ರಾಥಮಿಕ, ಶೇ. 2.7 ಹಿರಿಯ ಪ್ರಾಥಮಿಕ ಮತ್ತು ಶೇ. 22.09 ಪ್ರೌಢ ಶಾಲಾ ತರಗತಿಗಳ ಮಕ್ಕಳು ಶಾಲೆ ತೊರೆದಿದ್ದಾರೆ. (ಒಂದು ತರಗತಿಯಿಂದ ಇನ್ನೊಂದಕ್ಕೆ ವಿದ್ಯಾರ್ಥಿಗಳ ನೈಜ ಚಲನೆಯನ್ನು ಆಧರಿಸಿ ವೈಯಕ್ತಿಕ ವಿದ್ಯಾರ್ಥಿಯ ದತ್ತಾಂಶವನ್ನು ಬಳಸಿಕೊಂಡು ಲೆಕ್ಕ ಹಾಕಲಾಗಿದೆ) 2022-23 ರಲ್ಲಿ, ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ತರಗತಿಗಳ ಮಕ್ಕಳು ಶಾಲೆ ತೊರೆದ ಪ್ರಮಾಣ ಶೂನ್ಯ ಇತ್ತು. ಪ್ರೌಢ ತರಗತಿಗಳ ಶೇ.14.9 ಮಕ್ಕಳು ಶಾಲೆ ತೊರೆದಿದ್ದರು.

ವರದಿಯ ಪ್ರಕಾರ, ಶಾಲೆ ತೊರೆದ ಮಕ್ಕಳ ಸಂಖ್ಯೆಯು ಒಂದು ನಿರ್ದಿಷ್ಟ ಶೈಕ್ಷಣಿಕ ವರ್ಷದಲ್ಲಿ ನಿರ್ದಿಷ್ಟ ಮಟ್ಟದಲ್ಲಿ ದಾಖಲಾದ ವಿದ್ಯಾರ್ಥಿಗಳ ಅನುಪಾತವಾಗಿದೆ. ಅವರು ಮುಂದಿನ ಶಾಲಾ ವರ್ಷದಲ್ಲಿ ಯಾವುದೇ ತರಗತಿಗೆ ದಾಖಲಾಗಿರುವುದಿಲ್ಲ.

ರಾಜ್ಯದಲ್ಲಿ ಪೂರ್ವ ಪ್ರಾಥಮಿಕದಿಂದ 12 ನೇ ತರಗತಿಗೆ ಒಟ್ಟು ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕೂಡ ಇಳಿಕೆಯಾಗಿದೆ.

2023-24ನೇ ವರ್ಷದಲ್ಲಿ ರಾಜ್ಯದ ಶಾಲೆಗಳಲ್ಲಿ (ಸರ್ಕಾರಿ, ಖಾಸಗಿ , ಅನುದಾನಿತ ಇತ್ಯಾದಿ) ದಾಖಲಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 1,19,26,303. 2023-23ರಲ್ಲಿ 1,23,98,654 ವಿದ್ಯಾರ್ಥಿಗಳು ದಾಖಲಾಗಿದ್ದರು. ಈ ಸಂಖ್ಯೆ 2021-22ರಲ್ಲಿ 1,20,92,381 ಮತ್ತು 2020-21ರಲ್ಲಿ 1,18,56,736 ಇತ್ತು.

ಸರ್ಕಾರಿ ಶಾಲೆಗಳು 2023-24ರಲ್ಲಿ ಒಟ್ಟು 49,85,661 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿವೆ. 2022-23ಕ್ಕೆ ಹೋಲಿಸಿದರೆ 2023-24ರಲ್ಲಿ 3,41,560 ಮಕ್ಕಳು ಕಡಿಮೆಯಾಗಿದ್ದಾರೆ. 2022-23ರಲ್ಲಿ ಸರ್ಕಾರಿ ಶಾಲೆಗಳು 53,27,221 ಮತ್ತು 2021-22ರಲ್ಲಿ 54,45,989 ವಿದ್ಯಾರ್ಥಿಗಳಿಗೆ ಹೊಸದಾಗಿ ಪ್ರವೇಶ ನೀಡಿತ್ತು.

ಗಮನಾರ್ಹ ವಿಷಯವೆಂದರೆ, ಖಾಸಗಿ ಅನುದಾನ ರಹಿತ ಶಾಲೆಗಳಲ್ಲೂ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆಯಾಗಿದೆ. 2022-23ರಲ್ಲಿ 55,59,281 ವಿದ್ಯಾರ್ಥಿಗಳು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಪ್ರವೇಶ ಪಡೆದಿದ್ದರು. 2023-24ರಲ್ಲಿ ಈ ಸಂಖ್ಯೆ 54,80,677ಕ್ಕೆ ಇಳಿಕೆಯಾಗಿದೆ. ಪ್ರವೇಶಕ್ಕೆ ಅರ್ಹರಾಗಿರುವ ಮಕ್ಕಳ ಸಂಖ್ಯೆಯಲ್ಲಿನ ಇಳಿಕೆಯೇ ಇದಕ್ಕೆ ಪ್ರಮುಖ ಕಾರಣ ಎಂದು ಖಾಸಗಿ ಶಾಲಾ ಆಡಳಿತ ಮಂಡಳಿಗಳು ತಿಳಿಸಿವೆ.

ವರದಿಯು ಶೂನ್ಯ ದಾಖಲಾತಿ ಶಾಲೆಗಳು ಮತ್ತು ಶೂನ್ಯ ಶಿಕ್ಷಕರ ಶಾಲೆಗಳನ್ನು ಎತ್ತಿ ತೋರಿಸಿದೆ. ರಾಜ್ಯದಲ್ಲಿ ಶಿಕ್ಷಕರಿಲ್ಲದ 1,572 ಶಾಲೆಗಳಿವೆ ಮತ್ತು 7,821 ಏಕ ಶಿಕ್ಷಕರಿದ್ದಾರೆ. ಈ ಏಕ ಶಿಕ್ಷಕರ ಶಾಲೆಗಳಲ್ಲಿ 2,74,814 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಒಟ್ಟು 1,078 ಶಾಲೆಗಳು ಒಬ್ಬ ವಿದ್ಯಾರ್ಥಿಯನ್ನೂ ದಾಖಲಿಸಲು ವಿಫಲವಾಗಿವೆ.

ಆದರೆ, ವರದಿಯಲ್ಲಿ ಬಹಿರಂಗವಾಗಿರುವ ಸಕಾರಾತ್ಮಕ ಅಂಶವೆಂದರೆ, ಶಾಲಾಪೂರ್ವ ಅನುಭವದೊಂದಿಗೆ 1ನೇ ತರಗತಿಗೆ ಪ್ರವೇಶಿ ಪಡೆಯುವ ಮಕ್ಕಳ ಸಂಖ್ಯೆ, ವಿಶೇಷವಾಗಿ ಅಂಗನವಾಡಿ ಕೇಂದ್ರಗಳಿಂದ ಬರುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. 2023-24ರಲ್ಲಿ 9,45,325 ಮಕ್ಕಳು 1ನೇ ತರಗತಿಗೆ ಸೇರಿದ್ದು, ಅದರಲ್ಲಿ 3,91,940 ಮಕ್ಕಳು ಅಂಗನವಾಡಿಗಳಿಂದ ಬಂದವರು. ಅವರಲ್ಲಿ ಹೆಚ್ಚಿನವರು, ಅಂದರೆ 59,748 ಮಕ್ಕಳು ಖಾಸಗಿ ಅನುದಾನರಹಿತ ಶಾಲೆಗಳಿಗೆ ಸೇರಿದ್ದಾರೆ.

ಇದನ್ನೂ ಓದಿ : ಸಚಿವ ಸಂಪುಟ ಸಭೆ | ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳ : ನಿಗಮಗಳು ₹2 ಸಾವಿರ ಕೋಟಿ ಸಾಲ ಪಡೆಯಲು ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...