Homeಮುಖಪುಟಮಕ್ಕಳಿರುವಲ್ಲೇ ಶಾಲೆ!: ಛತ್ತಿಸ್‌ಘಡ ಶಿಕ್ಷಕನ ಮನಮೆಚ್ಚುವ ಕಾರ್ಯ

ಮಕ್ಕಳಿರುವಲ್ಲೇ ಶಾಲೆ!: ಛತ್ತಿಸ್‌ಘಡ ಶಿಕ್ಷಕನ ಮನಮೆಚ್ಚುವ ಕಾರ್ಯ

ಶಿಕ್ಷಕ ರುದ್ರ ರಾಣಾ ತನ್ನ ಬೈಕ್‌ನಲ್ಲಿ ಕಪ್ಪು ಹಲಗೆ, ಫಲಕಗಳೊಂದಿಗೆ ಹಳ್ಳಿಗಳಿಗೆ ಪ್ರಯಾಣಿಸಿ, ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಿ ಅಲ್ಲೇ ಪಾಠ ಮಾಡುತ್ತಾರೆ. ಈ ತರಗತಿಗಳಿಗೆ ’ಮೊಹಲ್ಲಾ’ ತರಗತಿಗಳು ಎನ್ನುತ್ತಾರೆ.

- Advertisement -
- Advertisement -

ಕೊರೊನಾ ಸಂಕಷ್ಟದಲ್ಲಿ ಶಾಲೆ-ಕಾಲೇಜುಗಳು ಬಾಗಿಲು ಮುಚ್ಚಿವೆ. ಈ ನಡುವೆ ಆನ್‌ಲೈನ್ ಶಿಕ್ಷಣ ಶುರುವಾಗಿ ಉಳ್ಳವರು ಶಿಕ್ಷಣ ಪಡೆಯುತ್ತಿದ್ದರೆ, ಉಳಿದ ಅದೇಷ್ಟೊ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಬಡತನ, ಲ್ಯಾಪ್‌ಟಾಪ್‌ಗಳ ಕೊರತೆ, ನೆಟ್‌ವರ್ಕ್ ಇಲ್ಲದೆ ಇರುವುದು, ಹಳ್ಳಿಗಳ ಮಕ್ಕಳಿಗೆ ಇರುವ ಸಮಸ್ಯೆಗಳು ಒಂದೆರಡಲ್ಲ.

ಈ ಎಲ್ಲದರ ನಡುವೆ ಕೆಲ ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡಲು ಹಲವು ಕ್ರಮಗಳು, ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಛತ್ತಿಸ್‌ಘಡದ ಕೊರಿಯಾ ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕ ರುದ್ರ ರಾಣಾ ಅವರು ವಿದ್ಯಾರ್ಥಿಗಳಿರುವಲ್ಲೇ ಹೋಗಿ ಪಾಠ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪ್ರಧಾನಿಗೆ ವ್ಯಂಗ್ಯವಾಗಿ ಶುಭಾಶಯ ತಿಳಿಸಿದ ಎಚ್‌ಡಿಕೆ, ಸಿದ್ದರಾಮಯ್ಯ!

ಶಿಕ್ಷಕ ರುದ್ರ ರಾಣಾ ತನ್ನ ಬೈಕ್‌ನಲ್ಲಿ ಕಪ್ಪು ಹಲಗೆ, ಫಲಕಗಳೊಂದಿಗೆ ಹಳ್ಳಿಗಳಿಗೆ ಪ್ರಯಾಣಿಸುತ್ತಾರೆ. ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಿ ಅಲ್ಲೇ ಪಾಠ ಮಾಡುತ್ತಾರೆ. ಈ ತರಗತಿಗಳಿಗೆ ’ಮೊಹಲ್ಲಾ’ ತರಗತಿಗಳು ಎನ್ನುತ್ತಾರೆ.

“ನಾನು, ಕಪ್ಪು ಹಲಗೆ, ಪುಸ್ತಕಗಳು ಮತ್ತು ಫಲಕಗಳನ್ನೂ ಸಹ ನನ್ನ ಬಳಿ ಇಟ್ಟುಕೊಂಡಿದ್ದೇನೆ. ಶಾಲೆಯಲ್ಲಿರುವಂತೆಯೇ ನಾನು ಗಂಟೆ ಬಾರಿಸುತ್ತೇನೆ ಮತ್ತು ನಂತರ ವಿದ್ಯಾರ್ಥಿಗಳು ಬರುತ್ತಾರೆ, ನಂತರ  ಪ್ರಾರ್ಥನೆಯನ್ನು ಮಾಡುತ್ತಾರೆ ಮತ್ತು ನಾವು ಪಠ್ಯಕ್ರಮದ ಪ್ರಕಾರ ತರಗತಿ ಪ್ರಾರಂಭಿಸುತ್ತೇವೆ” ಎಂದು ಎಎನ್‌ಐ ಜೊತೆಗೆ ಮಾತನಾಡಿದ್ದಾರೆ.

PC: ANI

“ನಾನು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಪ್ರಯಾಣಿಸುತ್ತೇನೆ, ವಿದ್ಯಾರ್ಥಿಗಳನ್ನು ಒಟ್ಟುಗೂಡಿಸುತ್ತೇನೆ ಮತ್ತು  ಕೊರೊನಾ ವೈರಸ್ ಮತ್ತು ಅದರ ವಿಷಯಗಳ ಬಗ್ಗೆ ಅವರಿಗೆ ಶಿಕ್ಷಣ ನೀಡುತ್ತೇನೆ. ಸ್ಥಳೀಯರು ಈ ಕ್ರಮವನ್ನು ಮೆಚ್ಚುತ್ತಿದ್ದಾರೆ. ವಿದ್ಯಾರ್ಥಿಗಳು ಸಹ ಮುಂದೆ ಬಂದು ಆಸಕ್ತಿ ತೋರಿಸುತ್ತಿದ್ದಾರೆ” ಎಂದು ರಾಣಾ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ಶಿಕ್ಷಕರು ನಮಗೆ ವಿಭಿನ್ನ ವಿಚಾರಗಳನ್ನು ಕಲಿಸುತ್ತಾರೆ. ನಂತರ ನಾವು ಅವುಗಳನ್ನು ನಮ್ಮದೇ ಆದ ರೀತಿಯಲ್ಲಿ ಅಧ್ಯಯನ ಮಾಡುತ್ತೇವೆ. ನಾವು ಶಾಲೆ ಯನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಆದರೆ ಸರ್‌ ನಡೆಸುವ ಈ ತರಗತಿಗಳು ನಾವು ಶಾಲೆಯಲ್ಲಿದ್ದಂತೆ ಅನ್ನಿಸುತ್ತದೆ” ಎಂದು ವಿದ್ಯಾರ್ಥಿ ಸೂರಜ್ ಹೇಳಿದ್ದಾರೆ.

PC: ANI

ಕೊರೊನಾದಂತಹ ಸಾಂಕ್ರಾಮಿಕ ರೋಗದ ನಡುವೆಯೂ ಶಿಕ್ಷಣ ವಂಚಿತ ವಿದ್ಯಾರ್ಥಿಗಳಿಗಾಗಿ ಈ ಶಿಕ್ಷಕರ ವಿಭಿನ್ನ ಪ್ರಯತ್ನ ನಿಜಕ್ಕೂ ಪ್ರಶಂಸನೀಯವಾದದ್ದು.


ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...