Homeಮುಖಪುಟಮಕ್ಕಳಿರುವಲ್ಲೇ ಶಾಲೆ!: ಛತ್ತಿಸ್‌ಘಡ ಶಿಕ್ಷಕನ ಮನಮೆಚ್ಚುವ ಕಾರ್ಯ

ಮಕ್ಕಳಿರುವಲ್ಲೇ ಶಾಲೆ!: ಛತ್ತಿಸ್‌ಘಡ ಶಿಕ್ಷಕನ ಮನಮೆಚ್ಚುವ ಕಾರ್ಯ

ಶಿಕ್ಷಕ ರುದ್ರ ರಾಣಾ ತನ್ನ ಬೈಕ್‌ನಲ್ಲಿ ಕಪ್ಪು ಹಲಗೆ, ಫಲಕಗಳೊಂದಿಗೆ ಹಳ್ಳಿಗಳಿಗೆ ಪ್ರಯಾಣಿಸಿ, ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಿ ಅಲ್ಲೇ ಪಾಠ ಮಾಡುತ್ತಾರೆ. ಈ ತರಗತಿಗಳಿಗೆ ’ಮೊಹಲ್ಲಾ’ ತರಗತಿಗಳು ಎನ್ನುತ್ತಾರೆ.

- Advertisement -
- Advertisement -

ಕೊರೊನಾ ಸಂಕಷ್ಟದಲ್ಲಿ ಶಾಲೆ-ಕಾಲೇಜುಗಳು ಬಾಗಿಲು ಮುಚ್ಚಿವೆ. ಈ ನಡುವೆ ಆನ್‌ಲೈನ್ ಶಿಕ್ಷಣ ಶುರುವಾಗಿ ಉಳ್ಳವರು ಶಿಕ್ಷಣ ಪಡೆಯುತ್ತಿದ್ದರೆ, ಉಳಿದ ಅದೇಷ್ಟೊ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಬಡತನ, ಲ್ಯಾಪ್‌ಟಾಪ್‌ಗಳ ಕೊರತೆ, ನೆಟ್‌ವರ್ಕ್ ಇಲ್ಲದೆ ಇರುವುದು, ಹಳ್ಳಿಗಳ ಮಕ್ಕಳಿಗೆ ಇರುವ ಸಮಸ್ಯೆಗಳು ಒಂದೆರಡಲ್ಲ.

ಈ ಎಲ್ಲದರ ನಡುವೆ ಕೆಲ ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡಲು ಹಲವು ಕ್ರಮಗಳು, ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಛತ್ತಿಸ್‌ಘಡದ ಕೊರಿಯಾ ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕ ರುದ್ರ ರಾಣಾ ಅವರು ವಿದ್ಯಾರ್ಥಿಗಳಿರುವಲ್ಲೇ ಹೋಗಿ ಪಾಠ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪ್ರಧಾನಿಗೆ ವ್ಯಂಗ್ಯವಾಗಿ ಶುಭಾಶಯ ತಿಳಿಸಿದ ಎಚ್‌ಡಿಕೆ, ಸಿದ್ದರಾಮಯ್ಯ!

ಶಿಕ್ಷಕ ರುದ್ರ ರಾಣಾ ತನ್ನ ಬೈಕ್‌ನಲ್ಲಿ ಕಪ್ಪು ಹಲಗೆ, ಫಲಕಗಳೊಂದಿಗೆ ಹಳ್ಳಿಗಳಿಗೆ ಪ್ರಯಾಣಿಸುತ್ತಾರೆ. ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಿ ಅಲ್ಲೇ ಪಾಠ ಮಾಡುತ್ತಾರೆ. ಈ ತರಗತಿಗಳಿಗೆ ’ಮೊಹಲ್ಲಾ’ ತರಗತಿಗಳು ಎನ್ನುತ್ತಾರೆ.

“ನಾನು, ಕಪ್ಪು ಹಲಗೆ, ಪುಸ್ತಕಗಳು ಮತ್ತು ಫಲಕಗಳನ್ನೂ ಸಹ ನನ್ನ ಬಳಿ ಇಟ್ಟುಕೊಂಡಿದ್ದೇನೆ. ಶಾಲೆಯಲ್ಲಿರುವಂತೆಯೇ ನಾನು ಗಂಟೆ ಬಾರಿಸುತ್ತೇನೆ ಮತ್ತು ನಂತರ ವಿದ್ಯಾರ್ಥಿಗಳು ಬರುತ್ತಾರೆ, ನಂತರ  ಪ್ರಾರ್ಥನೆಯನ್ನು ಮಾಡುತ್ತಾರೆ ಮತ್ತು ನಾವು ಪಠ್ಯಕ್ರಮದ ಪ್ರಕಾರ ತರಗತಿ ಪ್ರಾರಂಭಿಸುತ್ತೇವೆ” ಎಂದು ಎಎನ್‌ಐ ಜೊತೆಗೆ ಮಾತನಾಡಿದ್ದಾರೆ.

PC: ANI

“ನಾನು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಪ್ರಯಾಣಿಸುತ್ತೇನೆ, ವಿದ್ಯಾರ್ಥಿಗಳನ್ನು ಒಟ್ಟುಗೂಡಿಸುತ್ತೇನೆ ಮತ್ತು  ಕೊರೊನಾ ವೈರಸ್ ಮತ್ತು ಅದರ ವಿಷಯಗಳ ಬಗ್ಗೆ ಅವರಿಗೆ ಶಿಕ್ಷಣ ನೀಡುತ್ತೇನೆ. ಸ್ಥಳೀಯರು ಈ ಕ್ರಮವನ್ನು ಮೆಚ್ಚುತ್ತಿದ್ದಾರೆ. ವಿದ್ಯಾರ್ಥಿಗಳು ಸಹ ಮುಂದೆ ಬಂದು ಆಸಕ್ತಿ ತೋರಿಸುತ್ತಿದ್ದಾರೆ” ಎಂದು ರಾಣಾ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ಶಿಕ್ಷಕರು ನಮಗೆ ವಿಭಿನ್ನ ವಿಚಾರಗಳನ್ನು ಕಲಿಸುತ್ತಾರೆ. ನಂತರ ನಾವು ಅವುಗಳನ್ನು ನಮ್ಮದೇ ಆದ ರೀತಿಯಲ್ಲಿ ಅಧ್ಯಯನ ಮಾಡುತ್ತೇವೆ. ನಾವು ಶಾಲೆ ಯನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಆದರೆ ಸರ್‌ ನಡೆಸುವ ಈ ತರಗತಿಗಳು ನಾವು ಶಾಲೆಯಲ್ಲಿದ್ದಂತೆ ಅನ್ನಿಸುತ್ತದೆ” ಎಂದು ವಿದ್ಯಾರ್ಥಿ ಸೂರಜ್ ಹೇಳಿದ್ದಾರೆ.

PC: ANI

ಕೊರೊನಾದಂತಹ ಸಾಂಕ್ರಾಮಿಕ ರೋಗದ ನಡುವೆಯೂ ಶಿಕ್ಷಣ ವಂಚಿತ ವಿದ್ಯಾರ್ಥಿಗಳಿಗಾಗಿ ಈ ಶಿಕ್ಷಕರ ವಿಭಿನ್ನ ಪ್ರಯತ್ನ ನಿಜಕ್ಕೂ ಪ್ರಶಂಸನೀಯವಾದದ್ದು.


ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...