Homeಮುಖಪುಟಶಾಲೆಯಲ್ಲಿ ವಿದ್ಯಾರ್ಥಿಗಳಿಂದ ನಮಾಜ್: ಶಿಕ್ಷಕರನ್ನು ಥಳಿಸಿದ ಸಂಘ ಪರಿವಾರದ ಕಾರ್ಯಕರ್ತರು

ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ನಮಾಜ್: ಶಿಕ್ಷಕರನ್ನು ಥಳಿಸಿದ ಸಂಘ ಪರಿವಾರದ ಕಾರ್ಯಕರ್ತರು

- Advertisement -
- Advertisement -

ಅಹಮದಾಬಾದ್‌ನ ಖಾಸಗಿ ಶಾಲೆಯೊಂದು ಜಾಗೃತಿ ಕಾರ್ಯಕ್ರಮದ ಭಾಗವಾಗಿ ಹಿಂದೂ ವಿದ್ಯಾರ್ಥಿಗಳನ್ನು ನಮಾಜ್ ಮಾಡಲು ಹೇಳಿದೆ ಎಂದು ಆರೋಪಿಸಿ, ಮಂಗಳವಾರ ಸಂಘ ಪರಿವಾರದ ಕಾರ್ಯಕರ್ತರ ಪ್ರತಿಭಟನೆ ನಡೆಸಿ, ಶಿಕ್ಷಕರನ್ನು ಥಳಿಸಿದ ಘಟನೆ ನಡೆದಿದೆ.

ಸಂಘ ಪರಿವಾರದ ಕಾರ್ಯಕರ್ತರು ಶಿಕ್ಷಕರನ್ನು ಥಳಿಸುತ್ತಿರುವುದನ್ನು ವೀಡಿಯೊದಲ್ಲಿ ಸೆರೆಯಾಗಿದೆ. ಸೆಪ್ಟೆಂಬರ್ 29 ರಂದು ಅಹಮದಾಬಾದ್‌ನ ಘಟ್ಲೋಡಿಯಾ ಪ್ರದೇಶದ ಕಲೋರೆಕ್ಸ್ ಫ್ಯೂಚರ್ ಸ್ಕೂಲ್‌ನಲ್ಲಿ ನಡೆದ ಕಾರ್ಯಕ್ರಮದ ಕುರಿತು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಘಟನೆಯ ಕುರಿತು ಕ್ಷಮೆಯಾಚಿಸಿರುವ ಶಾಲೆಯ ಆಡಳಿತ ಮಂಡಳಿ, ”ಈ ಕಾರ್ಯಕ್ರಮವು ವಿವಿಧ ಧರ್ಮಗಳ ಆಚರಣೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ. ಯಾವುದೇ ವಿದ್ಯಾರ್ಥಿಯನ್ನು ನಮಾಝ್ ಮಾಡಲು ಒತ್ತಾಯಿಸಿಲ್ಲ, ಎಂದು ಸ್ಪಷ್ಟೀಕರಣ ನೀಡಿದೆ.

ಈವೆಂಟ್‌ನ ವೀಡಿಯೋದಲ್ಲಿ, ಪ್ರಾಥಮಿಕ ವಿಭಾಗದ ವಿದ್ಯಾರ್ಥಿಯೊಬ್ಬರು ನಮಾಜ್ ನೀಡುತ್ತಿರುವುದನ್ನು ಕಾಣಬಹುದು. ಇತರ ನಾಲ್ವರು ”ಲ್ಯಾಬ್ ಪೆ ಆತಿ ಹೈ ದುವಾ” ಪ್ರಾರ್ಥನೆಯನ್ನು ಹಾಡಲು ಅವರೊಂದಿಗೆ ಸೇರಿಕೊಂಡರು. ಇದೀಗ ಈ ವಿಡಿಯೋವನ್ನು ಶಾಲೆಯ ಫೇಸ್‌ಬುಕ್ ಪುಟದಿಂದ ತೆಗೆದುಹಾಕಲಾಗಿದೆ.

ಶಾಲಾ ಆವರಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಬಜರಂಗದಳ ಹಾಗೂ ಇತರ ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

”ಕೆಲವರು ಶಾಲೆಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ರಾಜ್ಯದ ಶಾಂತಿಯುತ ವಾತಾವರಣವನ್ನು ಕದಡಲು ಬಯಸುತ್ತಿರುವಂತೆ ತೋರುತ್ತಿದೆ. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ತಾವು ಏನು ಮಾಡುತ್ತಿದ್ದೀರಿ ಎಂದು ನಿಖರವಾಗಿ ತಿಳಿದಿರುವುದಿಲ್ಲ, ಇದು ಸ್ವೀಕಾರಾರ್ಹವಲ್ಲ” ಎಂದು ಪ್ರಾಥಮಿಕ, ಪ್ರೌಢ ಮತ್ತು ವಯಸ್ಕ ಶಿಕ್ಷಣ ಸಚಿವ ಪ್ರಫುಲ್ ಪನ್ಶೇರಿಯಾ ಹೇಳಿದರು.

”ಇಂತಹ ಕಾರ್ಯಕ್ರಮವನ್ನು ಆಯೋಜಿಸುವುದರ ಹಿಂದಿನ ಮನಸ್ಥಿತಿ ಮತ್ತು ಉದ್ದೇಶವನ್ನು ಕಂಡುಹಿಡಿಯಲು ನಾವು ತನಿಖೆ ನಡೆಸುತ್ತೇವೆ ಮತ್ತು ನಂತರ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ತಪ್ಪು ಮಾಡಿದವರನ್ನು ನಾವು ಬಿಡುವುದಿಲ್ಲ” ಎಂದು ಸಚಿವರು ಹೇಳಿದರು.

”ಶಾಲೆಯ ಹಿಂದೂ ವಿದ್ಯಾರ್ಥಿಗಳು ಚಟುವಟಿಕೆಯ ಸಂದರ್ಭದಲ್ಲಿ ನಮಾಜ್ ಮಾಡಲು ಬಲವಂತಪಡಿಸಿದ ವೀಡಿಯೊವನ್ನು ನಾವು ನೋಡಿದ್ದೇವೆ. ನಮ್ಮ ಪ್ರತಿಭಟನೆಯ ನಂತರ, ಶಾಲಾ ಆಡಳಿತ ಮಂಡಳಿಯು ಕ್ಷಮೆಯಾಚಿಸಿದೆ ಮತ್ತು ಭವಿಷ್ಯದಲ್ಲಿ ಅಂತಹ ಚಟುವಟಿಕೆಗಳನ್ನು ನಡೆಸುವುದಿಲ್ಲ ಎಂದು ಭರವಸೆ ನೀಡಿದೆ. ಕೇವಲ ಹಿಂದೂ ವಿದ್ಯಾರ್ಥಿಗಳು ಮಾತ್ರ ಶಾಲೆಯಲ್ಲಿ ಓದುತ್ತಾರೆ” ಎಂದು ಗುಜರಾತ್ ಎಬಿವಿಪಿಯ ಮಾಧ್ಯಮ ಸಂಯೋಜಕರಾದ ಮೀಟ್ ಭಾವ್ಸರ್ ಹೇಳಿದ್ದಾರೆ.

ಈವೆಂಟ್‌ನ ವೀಡಿಯೊದಲ್ಲಿ ಸಂಗೀತ ವಾದ್ಯವನ್ನು ನುಡಿಸುತ್ತಿರುವ ಶಿಕ್ಷಕನನ್ನು ಮಂಗಳವಾರ ಪ್ರತಿಭಟನೆಯ ಸಂದರ್ಭದಲ್ಲಿ ಕಾರ್ಯಕರ್ತರು ಮತ್ತು ಕೋಪಗೊಂಡ ಪೋಷಕರು ಥಳಿಸಿದ್ದಾರೆ ಎಂದು ಕೆಲವು ವೈರಲ್ ವೀಡಿಯೊಗಳು ತೋರಿಸಿವೆ. ಇದುವರೆಗೆ ಯಾವುದೇ ಪೊಲೀಸ್ ಪ್ರಕರಣ ದಾಖಲಾಗಿಲ್ಲ.

ಈ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯಿನಿ ನೀರಲಿ ದಗಲಿ ಮಾತನಾಡಿ, ”ಹಬ್ಬ ಹರಿದಿನಗಳಿಗೆ ಮುನ್ನ ವಿದ್ಯಾರ್ಥಿಗಳಿಗೆ ವಿವಿಧ ಧರ್ಮ, ಆಚರಣೆಗಳ ಬಗ್ಗೆ ಅರಿವು ಮೂಡಿಸುವುದು ಶಾಲೆಯ ಸಂಪ್ರದಾಯವಾಗಿದೆ” ಎಂದು ಹೇಳಿದ್ದಾರೆ.

”ಈದ್ ಹಿನ್ನೆಲೆಯಲ್ಲಿ 2ನೇ ತರಗತಿಯ ವಿದ್ಯಾರ್ಥಿಗಳಿಗೆ ಹಬ್ಬದ ಬಗ್ಗೆ ಬೋಧಿಸಲು ಈ ಚಟುವಟಿಕೆಯನ್ನು ಹಮ್ಮಿಕೊಂಡಿದ್ದೆವು. ಸಂವತ್ಸರಿ, ಗಣೇಶ ಚತುರ್ಥಿ ಸೇರಿದಂತೆ ಎಲ್ಲ ಧರ್ಮಗಳ ಹಬ್ಬಗಳಿಗೂ ಮುನ್ನ ಇಂತಹ ಚಟುವಟಿಕೆಗಳನ್ನು ನಡೆಸುತ್ತೇವೆ. ಯಾವ ವಿದ್ಯಾರ್ಥಿಯೂ ನಮಾಜ್ ಮಾಡುವಂತೆ ಒತ್ತಾಯಿಸಿಲ್ಲ. ಕೇವಲ ಎರಡು ನಿಮಿಷಗಳ ಚಟುವಟಿಕೆಯಾಗಿತ್ತು ಮತ್ತು ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಪೋಷಕರಿಂದ ಒಪ್ಪಿಗೆ ಪಡೆದಿದ್ದಾರೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಪೊಲೀಸ್ ಎನ್‌ಕೌಂಟರ್‌ನಲ್ಲಿ ಮುಸ್ಲಿಮ್ ಯುವಕ ಸಾವು ಎಂಬುವುದು ಸುಳ್ಳು: ಎಸ್ಪಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...