Homeಮುಖಪುಟಶಾಲೆಯಲ್ಲಿ ವಿದ್ಯಾರ್ಥಿಗಳಿಂದ ನಮಾಜ್: ಶಿಕ್ಷಕರನ್ನು ಥಳಿಸಿದ ಸಂಘ ಪರಿವಾರದ ಕಾರ್ಯಕರ್ತರು

ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ನಮಾಜ್: ಶಿಕ್ಷಕರನ್ನು ಥಳಿಸಿದ ಸಂಘ ಪರಿವಾರದ ಕಾರ್ಯಕರ್ತರು

- Advertisement -
- Advertisement -

ಅಹಮದಾಬಾದ್‌ನ ಖಾಸಗಿ ಶಾಲೆಯೊಂದು ಜಾಗೃತಿ ಕಾರ್ಯಕ್ರಮದ ಭಾಗವಾಗಿ ಹಿಂದೂ ವಿದ್ಯಾರ್ಥಿಗಳನ್ನು ನಮಾಜ್ ಮಾಡಲು ಹೇಳಿದೆ ಎಂದು ಆರೋಪಿಸಿ, ಮಂಗಳವಾರ ಸಂಘ ಪರಿವಾರದ ಕಾರ್ಯಕರ್ತರ ಪ್ರತಿಭಟನೆ ನಡೆಸಿ, ಶಿಕ್ಷಕರನ್ನು ಥಳಿಸಿದ ಘಟನೆ ನಡೆದಿದೆ.

ಸಂಘ ಪರಿವಾರದ ಕಾರ್ಯಕರ್ತರು ಶಿಕ್ಷಕರನ್ನು ಥಳಿಸುತ್ತಿರುವುದನ್ನು ವೀಡಿಯೊದಲ್ಲಿ ಸೆರೆಯಾಗಿದೆ. ಸೆಪ್ಟೆಂಬರ್ 29 ರಂದು ಅಹಮದಾಬಾದ್‌ನ ಘಟ್ಲೋಡಿಯಾ ಪ್ರದೇಶದ ಕಲೋರೆಕ್ಸ್ ಫ್ಯೂಚರ್ ಸ್ಕೂಲ್‌ನಲ್ಲಿ ನಡೆದ ಕಾರ್ಯಕ್ರಮದ ಕುರಿತು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಘಟನೆಯ ಕುರಿತು ಕ್ಷಮೆಯಾಚಿಸಿರುವ ಶಾಲೆಯ ಆಡಳಿತ ಮಂಡಳಿ, ”ಈ ಕಾರ್ಯಕ್ರಮವು ವಿವಿಧ ಧರ್ಮಗಳ ಆಚರಣೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ. ಯಾವುದೇ ವಿದ್ಯಾರ್ಥಿಯನ್ನು ನಮಾಝ್ ಮಾಡಲು ಒತ್ತಾಯಿಸಿಲ್ಲ, ಎಂದು ಸ್ಪಷ್ಟೀಕರಣ ನೀಡಿದೆ.

ಈವೆಂಟ್‌ನ ವೀಡಿಯೋದಲ್ಲಿ, ಪ್ರಾಥಮಿಕ ವಿಭಾಗದ ವಿದ್ಯಾರ್ಥಿಯೊಬ್ಬರು ನಮಾಜ್ ನೀಡುತ್ತಿರುವುದನ್ನು ಕಾಣಬಹುದು. ಇತರ ನಾಲ್ವರು ”ಲ್ಯಾಬ್ ಪೆ ಆತಿ ಹೈ ದುವಾ” ಪ್ರಾರ್ಥನೆಯನ್ನು ಹಾಡಲು ಅವರೊಂದಿಗೆ ಸೇರಿಕೊಂಡರು. ಇದೀಗ ಈ ವಿಡಿಯೋವನ್ನು ಶಾಲೆಯ ಫೇಸ್‌ಬುಕ್ ಪುಟದಿಂದ ತೆಗೆದುಹಾಕಲಾಗಿದೆ.

ಶಾಲಾ ಆವರಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಬಜರಂಗದಳ ಹಾಗೂ ಇತರ ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

”ಕೆಲವರು ಶಾಲೆಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ರಾಜ್ಯದ ಶಾಂತಿಯುತ ವಾತಾವರಣವನ್ನು ಕದಡಲು ಬಯಸುತ್ತಿರುವಂತೆ ತೋರುತ್ತಿದೆ. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ತಾವು ಏನು ಮಾಡುತ್ತಿದ್ದೀರಿ ಎಂದು ನಿಖರವಾಗಿ ತಿಳಿದಿರುವುದಿಲ್ಲ, ಇದು ಸ್ವೀಕಾರಾರ್ಹವಲ್ಲ” ಎಂದು ಪ್ರಾಥಮಿಕ, ಪ್ರೌಢ ಮತ್ತು ವಯಸ್ಕ ಶಿಕ್ಷಣ ಸಚಿವ ಪ್ರಫುಲ್ ಪನ್ಶೇರಿಯಾ ಹೇಳಿದರು.

”ಇಂತಹ ಕಾರ್ಯಕ್ರಮವನ್ನು ಆಯೋಜಿಸುವುದರ ಹಿಂದಿನ ಮನಸ್ಥಿತಿ ಮತ್ತು ಉದ್ದೇಶವನ್ನು ಕಂಡುಹಿಡಿಯಲು ನಾವು ತನಿಖೆ ನಡೆಸುತ್ತೇವೆ ಮತ್ತು ನಂತರ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ತಪ್ಪು ಮಾಡಿದವರನ್ನು ನಾವು ಬಿಡುವುದಿಲ್ಲ” ಎಂದು ಸಚಿವರು ಹೇಳಿದರು.

”ಶಾಲೆಯ ಹಿಂದೂ ವಿದ್ಯಾರ್ಥಿಗಳು ಚಟುವಟಿಕೆಯ ಸಂದರ್ಭದಲ್ಲಿ ನಮಾಜ್ ಮಾಡಲು ಬಲವಂತಪಡಿಸಿದ ವೀಡಿಯೊವನ್ನು ನಾವು ನೋಡಿದ್ದೇವೆ. ನಮ್ಮ ಪ್ರತಿಭಟನೆಯ ನಂತರ, ಶಾಲಾ ಆಡಳಿತ ಮಂಡಳಿಯು ಕ್ಷಮೆಯಾಚಿಸಿದೆ ಮತ್ತು ಭವಿಷ್ಯದಲ್ಲಿ ಅಂತಹ ಚಟುವಟಿಕೆಗಳನ್ನು ನಡೆಸುವುದಿಲ್ಲ ಎಂದು ಭರವಸೆ ನೀಡಿದೆ. ಕೇವಲ ಹಿಂದೂ ವಿದ್ಯಾರ್ಥಿಗಳು ಮಾತ್ರ ಶಾಲೆಯಲ್ಲಿ ಓದುತ್ತಾರೆ” ಎಂದು ಗುಜರಾತ್ ಎಬಿವಿಪಿಯ ಮಾಧ್ಯಮ ಸಂಯೋಜಕರಾದ ಮೀಟ್ ಭಾವ್ಸರ್ ಹೇಳಿದ್ದಾರೆ.

ಈವೆಂಟ್‌ನ ವೀಡಿಯೊದಲ್ಲಿ ಸಂಗೀತ ವಾದ್ಯವನ್ನು ನುಡಿಸುತ್ತಿರುವ ಶಿಕ್ಷಕನನ್ನು ಮಂಗಳವಾರ ಪ್ರತಿಭಟನೆಯ ಸಂದರ್ಭದಲ್ಲಿ ಕಾರ್ಯಕರ್ತರು ಮತ್ತು ಕೋಪಗೊಂಡ ಪೋಷಕರು ಥಳಿಸಿದ್ದಾರೆ ಎಂದು ಕೆಲವು ವೈರಲ್ ವೀಡಿಯೊಗಳು ತೋರಿಸಿವೆ. ಇದುವರೆಗೆ ಯಾವುದೇ ಪೊಲೀಸ್ ಪ್ರಕರಣ ದಾಖಲಾಗಿಲ್ಲ.

ಈ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯಿನಿ ನೀರಲಿ ದಗಲಿ ಮಾತನಾಡಿ, ”ಹಬ್ಬ ಹರಿದಿನಗಳಿಗೆ ಮುನ್ನ ವಿದ್ಯಾರ್ಥಿಗಳಿಗೆ ವಿವಿಧ ಧರ್ಮ, ಆಚರಣೆಗಳ ಬಗ್ಗೆ ಅರಿವು ಮೂಡಿಸುವುದು ಶಾಲೆಯ ಸಂಪ್ರದಾಯವಾಗಿದೆ” ಎಂದು ಹೇಳಿದ್ದಾರೆ.

”ಈದ್ ಹಿನ್ನೆಲೆಯಲ್ಲಿ 2ನೇ ತರಗತಿಯ ವಿದ್ಯಾರ್ಥಿಗಳಿಗೆ ಹಬ್ಬದ ಬಗ್ಗೆ ಬೋಧಿಸಲು ಈ ಚಟುವಟಿಕೆಯನ್ನು ಹಮ್ಮಿಕೊಂಡಿದ್ದೆವು. ಸಂವತ್ಸರಿ, ಗಣೇಶ ಚತುರ್ಥಿ ಸೇರಿದಂತೆ ಎಲ್ಲ ಧರ್ಮಗಳ ಹಬ್ಬಗಳಿಗೂ ಮುನ್ನ ಇಂತಹ ಚಟುವಟಿಕೆಗಳನ್ನು ನಡೆಸುತ್ತೇವೆ. ಯಾವ ವಿದ್ಯಾರ್ಥಿಯೂ ನಮಾಜ್ ಮಾಡುವಂತೆ ಒತ್ತಾಯಿಸಿಲ್ಲ. ಕೇವಲ ಎರಡು ನಿಮಿಷಗಳ ಚಟುವಟಿಕೆಯಾಗಿತ್ತು ಮತ್ತು ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಪೋಷಕರಿಂದ ಒಪ್ಪಿಗೆ ಪಡೆದಿದ್ದಾರೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಪೊಲೀಸ್ ಎನ್‌ಕೌಂಟರ್‌ನಲ್ಲಿ ಮುಸ್ಲಿಮ್ ಯುವಕ ಸಾವು ಎಂಬುವುದು ಸುಳ್ಳು: ಎಸ್ಪಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...