Homeಕರೋನಾ ತಲ್ಲಣಜನವರಿ 1 ರಿಂದ ಶಾಲೆ ಆರಂಭ: ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ತೀರ್ಮಾನ

ಜನವರಿ 1 ರಿಂದ ಶಾಲೆ ಆರಂಭ: ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ತೀರ್ಮಾನ

2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ; ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ತೀರ್ಮಾನ"

- Advertisement -
- Advertisement -

ಕೊರೊನಾ ಕಾರಣದಿಂದ ಸುಮಾರು 9 ತಿಂಗಳಿನಿಂದ ಮುಚ್ಚಿದ್ದ ಶಾಲೆಗಳನ್ನು 2021ರ ಜನವರಿ 1 ರಿಂದ ತೆರೆಯಲು ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ತೀರ್ಮಾನಿಸಿದ್ದು, 6 ನೇ ತರಗತಿಯಿಂದ ಪಿಯುಸಿಯವರೆಗೆ ತೆರೆಯಲು ಸೂಚನೆ ನೀಡಲಾಗಿದೆ.

ಈ ಕುರಿತು ಮುಖ್ಯಂತ್ರಿಗಳ ಅಧಿಕೃತ ಟ್ವಿಟರ್ ಖಾತೆಯಿಂದ “2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ; ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯ ಇಂದಿನ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: ಲಸಿಕೆ ಬರುವವರೆಗೂ ದೆಹಲಿಯಲ್ಲಿ ಶಾಲೆ ಆರಂಭವಿಲ್ಲ- ಮನೀಶ್ ಸಿಸೋಡಿಯಾ

ಇದನ್ನೂ ಓದಿ: ಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ವಸೂಲಿ ಆರಂಭ

“ಶಾಲೆಗಳನ್ನು ತೆರೆಯದೆ ಬಡಮಕ್ಕಳ ಹಿತರಕ್ಷಣೆ ಮಾಡಲು ವಿಫಲವಾಗಿರುವ ಮಾನ್ಯ ಶಿಕ್ಷಣ ಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ” ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿಯು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದಿವೆ.

ಇದೇ ಸಮಿತಿ ಡಿಸೆಂಬರ್ 7ರಂದು ಡಿಸೆಂಬರ್ 15ರೊಳಗೆ ಎಲ್ಲಾ ಶಾಲೆಗಳನ್ನು ಪೂರ್ಣವಾಗಿ ತೆರೆಯಬೇಕೆಂದು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದಿತ್ತು.

ರಾಜ್ಯದಲ್ಲಿ ಕೊರೊನಾ ಸೋಂಕಿನ ಹರಡುವಿಕೆಯು ಗಣನೀಯವಾಗಿ ಇಳಿದಿದ್ದರೂ, ಮಾರ್ಚ್ ತಿಂಗಳಿನಿಂದಲೇ ಮುಚ್ಚಿದ ಶಾಲೆ-ಕಾಲೇಜುಗಳನ್ನು ಪುನರಾರಂಭಿಸದಿರುವ ರಾಜ್ಯ ಸರ್ಕಾರದ  ನಿರ್ಧಾರವನ್ನು ಈ ಸಮಿತಿ ಖಂಡಿಸಿತ್ತು. ಜೊತೆಗೆ ಬಾಲವಾಡಿಯಿಂದ 12ನೇ ತರಗತಿಯವರೆಗೆ ಎಲ್ಲಾ ಶಾಲೆಗಳನ್ನು ಡಿಸೆಂಬರ್ 15ರೊಳಗೆ ಪೂರ್ಣವಾಗಿ ತೆರೆಯಬೇಕೆಂದು ಶಿಕ್ಷಣ ಸಚಿವರಿಗೆ ಪತ್ರ ಬರೆದು ಮನವಿ ಮಾಡಿತ್ತು.


ಇದನ್ನೂ ಓದಿ: ಶಾಲೆ ಆರಂಭಿಸದ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಸಂಘಟನೆಗಳ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...