Homeಮುಖಪುಟಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ದೂರು ನೀಡಿದರೂ ಎಫ್‌ಐಆರ್‌ ದಾಖಲಿಸದ ಪೊಲೀಸರು

ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ದೂರು ನೀಡಿದರೂ ಎಫ್‌ಐಆರ್‌ ದಾಖಲಿಸದ ಪೊಲೀಸರು

- Advertisement -
- Advertisement -

ಗ್ರೇಟರ್ ಚೆನ್ನೈ ಕಾರ್ಪೊರೇಷನ್ (ಜಿಸಿಸಿ) ನಡೆಸುತ್ತಿರುವ ಪ್ರಾಥಮಿಕ ಶಾಲೆಯೊಂದರ ಮೂವರು ಬಾಲಕಿಯರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅನೇಕ ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ.

ಕಳೆದ ಎರಡು ವರ್ಷಗಳಿಂದ ಶಾಲೆಯ ಆವರಣದ ಹೊರಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ 8, 10 ಮತ್ತು 12 ವರ್ಷ ವಯಸ್ಸಿನ ಹುಡುಗಿಯರನ್ನು ಅವರದ್ದೇ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ 9 ವರ್ಷದ ಹುಡುಗ ಅಪರಿಚಿತ ವ್ಯಕ್ತಿಯ ಬಳಿಗೆ ಕರೆದೊಯ್ದಿದ್ದಾನೆ. ಜನವರಿ 23 ರಿಂದ ತಿರುವನ್ಮಿಯೂರ್ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರೂ, ಜನವರಿ 31 ರವರೆಗೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಕೊಂಡಿಲ್ಲ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

9 ವರ್ಷದ ಬಾಲಕ ಇತ್ತೀಚೆಗೆ ನಾಲ್ಕನೇ ಹುಡುಗಿಯನ್ನೂ ಅಪರಿಚಿತ ವ್ಯಕ್ತಿ ಬಳಿ ಕರೆದೊಯ್ದಿದ್ದ. ಆದರೆ, ಆಕೆ ಆತನ ಕೈಯಿಂದ ತಪ್ಪಿಸಿಕೊಂಡು ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಪೋಷಕರು ಮೂವರು ಸಂತ್ರಸ್ತ ಬಾಲಕಿಯರನ್ನು ವಿಚಾರಿಸಿದಾಗ, ಮೊದಲು ಅವರು ಮಾಹಿತಿ ನೀಡಿರಲಿಲ್ಲ. ಬಳಿಕ ನಡೆದಿರುವ ದೌರ್ಜನ್ಯದ ಬಗ್ಗೆ ಬಾಯ್ಬಿಟ್ಟಿದ್ದಾರೆ. ಆರೋಪಿ ಬಾಲಕಿಯರಿಗೆ ಅವರನ್ನು ಮತ್ತು ಅವರ ಕುಟುಂಬಸ್ಥರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಕಾರಣಕ್ಕೆ ಅವರು ದೌರ್ಜನ್ಯದ ಬಗ್ಗೆ ಯಾರಿಗೂ ತಿಳಿಸಿಲ್ಲ ಎಂದು ವರದಿ ತಿಳಿಸಿದೆ.

ಒಬ್ಬ ಬಾಲಕಿಯ ಪೋಷಕರು ಜನವರಿ 23 ರಂದು ಪೊಲೀಸರನ್ನು ಸಂಪರ್ಕಿಸಿ ಲಿಖಿತವಾಗಿ ದೂರು ನೀಡಿದ್ದಾರೆ. ಆದರೆ, ದೂರಿನ ಪ್ರತಿಗೆ ಸಹಿ ಹಾಕಲು ಅವರು ಹೆದರುತ್ತಿದ್ದರು ಎಂದು ನ್ಯೂಸ್‌ ಮಿನಿಟ್ ಹೇಳಿದೆ. ಬಾಲಕಿಯೊಬ್ಬಳ ಪೋಷಕರು ದೂರು ದಾಖಲಿಸಿದ ಬಳಿಕ, ಬಾಲಕಿಯರನ್ನು ಆರೋಪಿಯ ಬಳಿಗೆ ಕರೆದೊಯ್ಯುತ್ತಿದ್ದ ಒಂಬತ್ತು ವರ್ಷದ ಬಾಲಕ ಮತ್ತು ಆತನ ತಾಯಿಯನ್ನು ತಿರುವನ್ಮಿಯೂರ್ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ.

ಈ ನಡುವೆ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಬಾಲಕನನ್ನು ಠಾಣೆಗೆ ಕರೆಸಿಕೊಂಡ ಪೊಲೀಸರು ಆತನನ್ನು ಕೂಡಿ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾರಂತೆ. ಬಾಲ ನ್ಯಾಯ ಮಂಡಳಿಯ ಮುಂದೆ ಬಾಲಕನನ್ನು ಹಾಜರುಪಡಿಸಬೇಕಾದ ಪೊಲೀಸರು, ಠಾಣೆಯಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ. ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿದ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಕ್ಕಳ ಹಕ್ಕುಗಳ ಹೋರಾಟಗಾರ ದೇವನೇಯನ್ ಹೇಳಿದ್ದಾರೆ.

ಬಾಲಕಿಯರ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿ ಲಿಖಿತ ದೂರು ನೀಡದ ಕಾರಣ ಎಫ್‌ಐಆರ್ ದಾಖಲಾಗಿಲ್ಲ ಎಂದು ತಿರುವನ್ಮಿಯೂರ್ ಪೊಲೀಸ್ ಠಾಣೆ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.

ಪ್ರಸ್ತುತ ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು ಮಧ್ಯ ಪ್ರವೇಶಿಸಿದ್ದು, ಎಫ್‌ಐಆರ್ ದಾಖಲಿಸಲು ಪೊಲೀಸರು ಅವರೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪ್ರಾಪ್ತ ಬಾಲಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.

ಶಾಲೆಯ ಸಿಬ್ಬಂದಿ ಸಂತ್ರಸ್ತ ಬಾಲಕಿಯರೊಂದಿಗೆ ಮಾತನಾಡಿದ್ದಾರೆ. ಮಕ್ಕಳ ಸಹಾಯವಾಣಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಇನ್ನೂ ಎಫ್‌ಐಆರ್ ದಾಖಲಾಗಿಲ್ಲ. ಶಾಲೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಜಿಸಿಸಿಯ ಉಪ ಆಯುಕ್ತ (ಶಿಕ್ಷಣ) ಶರಣ್ಯ ಆರಿ ಹೇಳಿದ್ದಾಗಿ ನ್ಯೂಸ್‌ ಮಿನಿಟ್ ತಿಳಿಸಿದೆ.

ಇನ್ನೂ ಎಫ್‌ಐಆರ್ ದಾಖಲಿಸದಿರುವ ಪೊಲೀಸರ ಕ್ರಮವು ಅಪರಾಧವಾಗಿದೆ. ಏಕೆಂದರೆ ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಣೆ (ಪೋಕ್ಸೊ) ಕಾಯಿದೆಯ ಸೆಕ್ಷನ್ 19 ಕಡ್ಡಾಯವಾಗಿ ಎಫ್‌ಐಆರ್‌ ದಾಖಲಿಸುವಂತೆ ಹೇಳುತ್ತದೆ. ಪೊಲೀಸರು ಮಾಡಿರುವ ತಪ್ಪಿಗೆ ಅವರು ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ಅಥವಾ ಎರಡನ್ನೂ ಎದುರಿಸಬೇಕಾಗುತ್ತದೆ. ಮಕ್ಕಳ ಕಲ್ಯಾಣ ಸಮಿತಿಯ ಮಧ್ಯಪ್ರವೇಶವಿಲ್ಲದೆ ಪೊಲೀಸರು ಎಫ್‌ಐಆರ್ ದಾಖಲಿಸಬಹುದು ಎಂದು ದೇವನೇಯನ್ ತಿಳಿಸಿದ್ದಾರೆ.

ಇಂತಹ ಪ್ರಕರಣಗಳಲ್ಲಿ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಅಧಿಕಾರವಿದೆ. ಅವರು ಕೂಡಲೇ ಎಫ್‌ಐಆರ್ ದಾಖಲಿಸಿ ಬಾಲಕಿಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕಿತ್ತು ಎಂದು ದೇವನೇಯನ್ ಟೀಕಿಸಿದ್ದಾರೆ. ಡಿಎಂಕೆ ಶಾಸಕ ಐ ಕರುಣಾನಿಧಿ ಅವರ ಪುತ್ರ ಮತ್ತು ಸೊಸೆ ದಲಿತ ಬಾಲಕಿಯ ಮೇಲೆ ದೈಹಿಕವಾಗಿ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವನ್ನು ಉಲ್ಲೇಖಿಸಿದ ಅವರು “ತಿರುವನ್ಮಿಯೂರ್ ಪೊಲೀಸರು ಈ ರೀತಿಯ ಪ್ರಕರಣವನ್ನು ನಿರ್ಲಕ್ಷ್ಯದಿಂದ ನಿರ್ವಹಿಸುತ್ತಿರುವುದು ಇದು ಎರಡನೇ ಬಾರಿಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬಂಧನ ಪ್ರಶ್ನಿಸಿ ಹೇಮಂತ್ ಸೊರೆನ್ ಸುಪ್ರೀಂಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...