Homeಮುಖಪುಟಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ದೂರು ನೀಡಿದರೂ ಎಫ್‌ಐಆರ್‌ ದಾಖಲಿಸದ ಪೊಲೀಸರು

ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ದೂರು ನೀಡಿದರೂ ಎಫ್‌ಐಆರ್‌ ದಾಖಲಿಸದ ಪೊಲೀಸರು

- Advertisement -
- Advertisement -

ಗ್ರೇಟರ್ ಚೆನ್ನೈ ಕಾರ್ಪೊರೇಷನ್ (ಜಿಸಿಸಿ) ನಡೆಸುತ್ತಿರುವ ಪ್ರಾಥಮಿಕ ಶಾಲೆಯೊಂದರ ಮೂವರು ಬಾಲಕಿಯರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅನೇಕ ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ.

ಕಳೆದ ಎರಡು ವರ್ಷಗಳಿಂದ ಶಾಲೆಯ ಆವರಣದ ಹೊರಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ 8, 10 ಮತ್ತು 12 ವರ್ಷ ವಯಸ್ಸಿನ ಹುಡುಗಿಯರನ್ನು ಅವರದ್ದೇ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ 9 ವರ್ಷದ ಹುಡುಗ ಅಪರಿಚಿತ ವ್ಯಕ್ತಿಯ ಬಳಿಗೆ ಕರೆದೊಯ್ದಿದ್ದಾನೆ. ಜನವರಿ 23 ರಿಂದ ತಿರುವನ್ಮಿಯೂರ್ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರೂ, ಜನವರಿ 31 ರವರೆಗೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಕೊಂಡಿಲ್ಲ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

9 ವರ್ಷದ ಬಾಲಕ ಇತ್ತೀಚೆಗೆ ನಾಲ್ಕನೇ ಹುಡುಗಿಯನ್ನೂ ಅಪರಿಚಿತ ವ್ಯಕ್ತಿ ಬಳಿ ಕರೆದೊಯ್ದಿದ್ದ. ಆದರೆ, ಆಕೆ ಆತನ ಕೈಯಿಂದ ತಪ್ಪಿಸಿಕೊಂಡು ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಪೋಷಕರು ಮೂವರು ಸಂತ್ರಸ್ತ ಬಾಲಕಿಯರನ್ನು ವಿಚಾರಿಸಿದಾಗ, ಮೊದಲು ಅವರು ಮಾಹಿತಿ ನೀಡಿರಲಿಲ್ಲ. ಬಳಿಕ ನಡೆದಿರುವ ದೌರ್ಜನ್ಯದ ಬಗ್ಗೆ ಬಾಯ್ಬಿಟ್ಟಿದ್ದಾರೆ. ಆರೋಪಿ ಬಾಲಕಿಯರಿಗೆ ಅವರನ್ನು ಮತ್ತು ಅವರ ಕುಟುಂಬಸ್ಥರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಕಾರಣಕ್ಕೆ ಅವರು ದೌರ್ಜನ್ಯದ ಬಗ್ಗೆ ಯಾರಿಗೂ ತಿಳಿಸಿಲ್ಲ ಎಂದು ವರದಿ ತಿಳಿಸಿದೆ.

ಒಬ್ಬ ಬಾಲಕಿಯ ಪೋಷಕರು ಜನವರಿ 23 ರಂದು ಪೊಲೀಸರನ್ನು ಸಂಪರ್ಕಿಸಿ ಲಿಖಿತವಾಗಿ ದೂರು ನೀಡಿದ್ದಾರೆ. ಆದರೆ, ದೂರಿನ ಪ್ರತಿಗೆ ಸಹಿ ಹಾಕಲು ಅವರು ಹೆದರುತ್ತಿದ್ದರು ಎಂದು ನ್ಯೂಸ್‌ ಮಿನಿಟ್ ಹೇಳಿದೆ. ಬಾಲಕಿಯೊಬ್ಬಳ ಪೋಷಕರು ದೂರು ದಾಖಲಿಸಿದ ಬಳಿಕ, ಬಾಲಕಿಯರನ್ನು ಆರೋಪಿಯ ಬಳಿಗೆ ಕರೆದೊಯ್ಯುತ್ತಿದ್ದ ಒಂಬತ್ತು ವರ್ಷದ ಬಾಲಕ ಮತ್ತು ಆತನ ತಾಯಿಯನ್ನು ತಿರುವನ್ಮಿಯೂರ್ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ.

ಈ ನಡುವೆ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಬಾಲಕನನ್ನು ಠಾಣೆಗೆ ಕರೆಸಿಕೊಂಡ ಪೊಲೀಸರು ಆತನನ್ನು ಕೂಡಿ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾರಂತೆ. ಬಾಲ ನ್ಯಾಯ ಮಂಡಳಿಯ ಮುಂದೆ ಬಾಲಕನನ್ನು ಹಾಜರುಪಡಿಸಬೇಕಾದ ಪೊಲೀಸರು, ಠಾಣೆಯಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ. ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿದ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಕ್ಕಳ ಹಕ್ಕುಗಳ ಹೋರಾಟಗಾರ ದೇವನೇಯನ್ ಹೇಳಿದ್ದಾರೆ.

ಬಾಲಕಿಯರ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿ ಲಿಖಿತ ದೂರು ನೀಡದ ಕಾರಣ ಎಫ್‌ಐಆರ್ ದಾಖಲಾಗಿಲ್ಲ ಎಂದು ತಿರುವನ್ಮಿಯೂರ್ ಪೊಲೀಸ್ ಠಾಣೆ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.

ಪ್ರಸ್ತುತ ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು ಮಧ್ಯ ಪ್ರವೇಶಿಸಿದ್ದು, ಎಫ್‌ಐಆರ್ ದಾಖಲಿಸಲು ಪೊಲೀಸರು ಅವರೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪ್ರಾಪ್ತ ಬಾಲಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.

ಶಾಲೆಯ ಸಿಬ್ಬಂದಿ ಸಂತ್ರಸ್ತ ಬಾಲಕಿಯರೊಂದಿಗೆ ಮಾತನಾಡಿದ್ದಾರೆ. ಮಕ್ಕಳ ಸಹಾಯವಾಣಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಇನ್ನೂ ಎಫ್‌ಐಆರ್ ದಾಖಲಾಗಿಲ್ಲ. ಶಾಲೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಜಿಸಿಸಿಯ ಉಪ ಆಯುಕ್ತ (ಶಿಕ್ಷಣ) ಶರಣ್ಯ ಆರಿ ಹೇಳಿದ್ದಾಗಿ ನ್ಯೂಸ್‌ ಮಿನಿಟ್ ತಿಳಿಸಿದೆ.

ಇನ್ನೂ ಎಫ್‌ಐಆರ್ ದಾಖಲಿಸದಿರುವ ಪೊಲೀಸರ ಕ್ರಮವು ಅಪರಾಧವಾಗಿದೆ. ಏಕೆಂದರೆ ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಣೆ (ಪೋಕ್ಸೊ) ಕಾಯಿದೆಯ ಸೆಕ್ಷನ್ 19 ಕಡ್ಡಾಯವಾಗಿ ಎಫ್‌ಐಆರ್‌ ದಾಖಲಿಸುವಂತೆ ಹೇಳುತ್ತದೆ. ಪೊಲೀಸರು ಮಾಡಿರುವ ತಪ್ಪಿಗೆ ಅವರು ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ಅಥವಾ ಎರಡನ್ನೂ ಎದುರಿಸಬೇಕಾಗುತ್ತದೆ. ಮಕ್ಕಳ ಕಲ್ಯಾಣ ಸಮಿತಿಯ ಮಧ್ಯಪ್ರವೇಶವಿಲ್ಲದೆ ಪೊಲೀಸರು ಎಫ್‌ಐಆರ್ ದಾಖಲಿಸಬಹುದು ಎಂದು ದೇವನೇಯನ್ ತಿಳಿಸಿದ್ದಾರೆ.

ಇಂತಹ ಪ್ರಕರಣಗಳಲ್ಲಿ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಅಧಿಕಾರವಿದೆ. ಅವರು ಕೂಡಲೇ ಎಫ್‌ಐಆರ್ ದಾಖಲಿಸಿ ಬಾಲಕಿಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕಿತ್ತು ಎಂದು ದೇವನೇಯನ್ ಟೀಕಿಸಿದ್ದಾರೆ. ಡಿಎಂಕೆ ಶಾಸಕ ಐ ಕರುಣಾನಿಧಿ ಅವರ ಪುತ್ರ ಮತ್ತು ಸೊಸೆ ದಲಿತ ಬಾಲಕಿಯ ಮೇಲೆ ದೈಹಿಕವಾಗಿ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವನ್ನು ಉಲ್ಲೇಖಿಸಿದ ಅವರು “ತಿರುವನ್ಮಿಯೂರ್ ಪೊಲೀಸರು ಈ ರೀತಿಯ ಪ್ರಕರಣವನ್ನು ನಿರ್ಲಕ್ಷ್ಯದಿಂದ ನಿರ್ವಹಿಸುತ್ತಿರುವುದು ಇದು ಎರಡನೇ ಬಾರಿಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬಂಧನ ಪ್ರಶ್ನಿಸಿ ಹೇಮಂತ್ ಸೊರೆನ್ ಸುಪ್ರೀಂಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...