Homeಮುಖಪುಟಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ದೂರು ನೀಡಿದರೂ ಎಫ್‌ಐಆರ್‌ ದಾಖಲಿಸದ ಪೊಲೀಸರು

ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ದೂರು ನೀಡಿದರೂ ಎಫ್‌ಐಆರ್‌ ದಾಖಲಿಸದ ಪೊಲೀಸರು

- Advertisement -
- Advertisement -

ಗ್ರೇಟರ್ ಚೆನ್ನೈ ಕಾರ್ಪೊರೇಷನ್ (ಜಿಸಿಸಿ) ನಡೆಸುತ್ತಿರುವ ಪ್ರಾಥಮಿಕ ಶಾಲೆಯೊಂದರ ಮೂವರು ಬಾಲಕಿಯರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅನೇಕ ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ.

ಕಳೆದ ಎರಡು ವರ್ಷಗಳಿಂದ ಶಾಲೆಯ ಆವರಣದ ಹೊರಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ 8, 10 ಮತ್ತು 12 ವರ್ಷ ವಯಸ್ಸಿನ ಹುಡುಗಿಯರನ್ನು ಅವರದ್ದೇ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ 9 ವರ್ಷದ ಹುಡುಗ ಅಪರಿಚಿತ ವ್ಯಕ್ತಿಯ ಬಳಿಗೆ ಕರೆದೊಯ್ದಿದ್ದಾನೆ. ಜನವರಿ 23 ರಿಂದ ತಿರುವನ್ಮಿಯೂರ್ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರೂ, ಜನವರಿ 31 ರವರೆಗೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಕೊಂಡಿಲ್ಲ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

9 ವರ್ಷದ ಬಾಲಕ ಇತ್ತೀಚೆಗೆ ನಾಲ್ಕನೇ ಹುಡುಗಿಯನ್ನೂ ಅಪರಿಚಿತ ವ್ಯಕ್ತಿ ಬಳಿ ಕರೆದೊಯ್ದಿದ್ದ. ಆದರೆ, ಆಕೆ ಆತನ ಕೈಯಿಂದ ತಪ್ಪಿಸಿಕೊಂಡು ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಪೋಷಕರು ಮೂವರು ಸಂತ್ರಸ್ತ ಬಾಲಕಿಯರನ್ನು ವಿಚಾರಿಸಿದಾಗ, ಮೊದಲು ಅವರು ಮಾಹಿತಿ ನೀಡಿರಲಿಲ್ಲ. ಬಳಿಕ ನಡೆದಿರುವ ದೌರ್ಜನ್ಯದ ಬಗ್ಗೆ ಬಾಯ್ಬಿಟ್ಟಿದ್ದಾರೆ. ಆರೋಪಿ ಬಾಲಕಿಯರಿಗೆ ಅವರನ್ನು ಮತ್ತು ಅವರ ಕುಟುಂಬಸ್ಥರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಕಾರಣಕ್ಕೆ ಅವರು ದೌರ್ಜನ್ಯದ ಬಗ್ಗೆ ಯಾರಿಗೂ ತಿಳಿಸಿಲ್ಲ ಎಂದು ವರದಿ ತಿಳಿಸಿದೆ.

ಒಬ್ಬ ಬಾಲಕಿಯ ಪೋಷಕರು ಜನವರಿ 23 ರಂದು ಪೊಲೀಸರನ್ನು ಸಂಪರ್ಕಿಸಿ ಲಿಖಿತವಾಗಿ ದೂರು ನೀಡಿದ್ದಾರೆ. ಆದರೆ, ದೂರಿನ ಪ್ರತಿಗೆ ಸಹಿ ಹಾಕಲು ಅವರು ಹೆದರುತ್ತಿದ್ದರು ಎಂದು ನ್ಯೂಸ್‌ ಮಿನಿಟ್ ಹೇಳಿದೆ. ಬಾಲಕಿಯೊಬ್ಬಳ ಪೋಷಕರು ದೂರು ದಾಖಲಿಸಿದ ಬಳಿಕ, ಬಾಲಕಿಯರನ್ನು ಆರೋಪಿಯ ಬಳಿಗೆ ಕರೆದೊಯ್ಯುತ್ತಿದ್ದ ಒಂಬತ್ತು ವರ್ಷದ ಬಾಲಕ ಮತ್ತು ಆತನ ತಾಯಿಯನ್ನು ತಿರುವನ್ಮಿಯೂರ್ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ.

ಈ ನಡುವೆ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಬಾಲಕನನ್ನು ಠಾಣೆಗೆ ಕರೆಸಿಕೊಂಡ ಪೊಲೀಸರು ಆತನನ್ನು ಕೂಡಿ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾರಂತೆ. ಬಾಲ ನ್ಯಾಯ ಮಂಡಳಿಯ ಮುಂದೆ ಬಾಲಕನನ್ನು ಹಾಜರುಪಡಿಸಬೇಕಾದ ಪೊಲೀಸರು, ಠಾಣೆಯಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ. ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿದ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಕ್ಕಳ ಹಕ್ಕುಗಳ ಹೋರಾಟಗಾರ ದೇವನೇಯನ್ ಹೇಳಿದ್ದಾರೆ.

ಬಾಲಕಿಯರ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿ ಲಿಖಿತ ದೂರು ನೀಡದ ಕಾರಣ ಎಫ್‌ಐಆರ್ ದಾಖಲಾಗಿಲ್ಲ ಎಂದು ತಿರುವನ್ಮಿಯೂರ್ ಪೊಲೀಸ್ ಠಾಣೆ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.

ಪ್ರಸ್ತುತ ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು ಮಧ್ಯ ಪ್ರವೇಶಿಸಿದ್ದು, ಎಫ್‌ಐಆರ್ ದಾಖಲಿಸಲು ಪೊಲೀಸರು ಅವರೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪ್ರಾಪ್ತ ಬಾಲಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.

ಶಾಲೆಯ ಸಿಬ್ಬಂದಿ ಸಂತ್ರಸ್ತ ಬಾಲಕಿಯರೊಂದಿಗೆ ಮಾತನಾಡಿದ್ದಾರೆ. ಮಕ್ಕಳ ಸಹಾಯವಾಣಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಇನ್ನೂ ಎಫ್‌ಐಆರ್ ದಾಖಲಾಗಿಲ್ಲ. ಶಾಲೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಜಿಸಿಸಿಯ ಉಪ ಆಯುಕ್ತ (ಶಿಕ್ಷಣ) ಶರಣ್ಯ ಆರಿ ಹೇಳಿದ್ದಾಗಿ ನ್ಯೂಸ್‌ ಮಿನಿಟ್ ತಿಳಿಸಿದೆ.

ಇನ್ನೂ ಎಫ್‌ಐಆರ್ ದಾಖಲಿಸದಿರುವ ಪೊಲೀಸರ ಕ್ರಮವು ಅಪರಾಧವಾಗಿದೆ. ಏಕೆಂದರೆ ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಣೆ (ಪೋಕ್ಸೊ) ಕಾಯಿದೆಯ ಸೆಕ್ಷನ್ 19 ಕಡ್ಡಾಯವಾಗಿ ಎಫ್‌ಐಆರ್‌ ದಾಖಲಿಸುವಂತೆ ಹೇಳುತ್ತದೆ. ಪೊಲೀಸರು ಮಾಡಿರುವ ತಪ್ಪಿಗೆ ಅವರು ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ಅಥವಾ ಎರಡನ್ನೂ ಎದುರಿಸಬೇಕಾಗುತ್ತದೆ. ಮಕ್ಕಳ ಕಲ್ಯಾಣ ಸಮಿತಿಯ ಮಧ್ಯಪ್ರವೇಶವಿಲ್ಲದೆ ಪೊಲೀಸರು ಎಫ್‌ಐಆರ್ ದಾಖಲಿಸಬಹುದು ಎಂದು ದೇವನೇಯನ್ ತಿಳಿಸಿದ್ದಾರೆ.

ಇಂತಹ ಪ್ರಕರಣಗಳಲ್ಲಿ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಅಧಿಕಾರವಿದೆ. ಅವರು ಕೂಡಲೇ ಎಫ್‌ಐಆರ್ ದಾಖಲಿಸಿ ಬಾಲಕಿಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕಿತ್ತು ಎಂದು ದೇವನೇಯನ್ ಟೀಕಿಸಿದ್ದಾರೆ. ಡಿಎಂಕೆ ಶಾಸಕ ಐ ಕರುಣಾನಿಧಿ ಅವರ ಪುತ್ರ ಮತ್ತು ಸೊಸೆ ದಲಿತ ಬಾಲಕಿಯ ಮೇಲೆ ದೈಹಿಕವಾಗಿ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವನ್ನು ಉಲ್ಲೇಖಿಸಿದ ಅವರು “ತಿರುವನ್ಮಿಯೂರ್ ಪೊಲೀಸರು ಈ ರೀತಿಯ ಪ್ರಕರಣವನ್ನು ನಿರ್ಲಕ್ಷ್ಯದಿಂದ ನಿರ್ವಹಿಸುತ್ತಿರುವುದು ಇದು ಎರಡನೇ ಬಾರಿಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬಂಧನ ಪ್ರಶ್ನಿಸಿ ಹೇಮಂತ್ ಸೊರೆನ್ ಸುಪ್ರೀಂಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...