Homeಮುಖಪುಟಮೋದಿ ರೋಡ್‌ಶೋ ವೇಳೆ ನೀತಿ ಸಂಹಿತೆ ಉಲ್ಲಂಘನೆ: ಕೇಸರಿ ಬಟ್ಟೆ ಧರಿಸಿ ಶಾಲಾ ಮಕ್ಕಳು ಭಾಗಿ

ಮೋದಿ ರೋಡ್‌ಶೋ ವೇಳೆ ನೀತಿ ಸಂಹಿತೆ ಉಲ್ಲಂಘನೆ: ಕೇಸರಿ ಬಟ್ಟೆ ಧರಿಸಿ ಶಾಲಾ ಮಕ್ಕಳು ಭಾಗಿ

- Advertisement -
- Advertisement -

ಕೊಯಮತ್ತೂರಿನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ಶೋನಲ್ಲಿ ಶಾಲಾ ಮಕ್ಕಳು ಭಾಗವಹಿಸಿದ್ದು, ಈ ಕುರಿತು ಕೊಯಮತ್ತೂರು ಜಿಲ್ಲಾ ಶಿಕ್ಷಣಾಧಿಕಾರಿ ತನಿಖೆಗೆ ಆದೇಶಿಸಿದ್ದಾರೆ.

ಮೋದಿ ರೋಡ್‌ಶೋನಲ್ಲಿ ಭಾಗವಹಿಸಲು ಶಾಲಾ ಮಕ್ಕಳನ್ನು ಕರೆತಂದ ಸರ್ಕಾರಿ ಅನುದಾನಿತ ಶಾಲೆಯ ಆಡಳಿತ ಮಂಡಳಿ ವಿರುದ್ಧ ಸಾಯಿಬಾಬಾ ಕಾಲೋನಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕೊಯಮತ್ತೂರಿನಲ್ಲಿ ಮೆಟ್ಟುಪಾಳ್ಯಂ ರಸ್ತೆಯಲ್ಲಿರುವ ಗಂಗಾ ಆಸ್ಪತ್ರೆ ಮತ್ತು ಆರ್ ಎಸ್ ಪುರಂನಲ್ಲಿರುವ ಹೆಡ್ ಪೋಸ್ಟ್ ಆಫೀಸ್ ನಡುವೆ ಮೋದಿ ನಾಲ್ಕು ಕಿಲೋಮೀಟರ್ ಉದ್ದದ ರಸ್ತೆಯಲ್ಲಿ ರೋಡ್ ಶೋ ನಡೆಸಿದ್ದರು. ಕಾರ್ಯಕ್ರಮದಲ್ಲಿ ಸರ್ಕಾರಿ ಅನುದಾನಿತ ಶ್ರೀ ಸಾಯಿಬಾಬಾ ವಿದ್ಯಾಲಯ ಅನುದಾನಿತ ಮಾಧ್ಯಮಿಕ ಶಾಲೆಯ 14 ವರ್ಷದೊಳಗಿನ ಮಕ್ಕಳು ಪಕ್ಷದ ಚಿಹ್ನೆಗಳನ್ನು ಹೊಂದಿರುವ ಕೇಸರಿ ಬಣ್ಣದ ಬಟ್ಟೆಗಳನ್ನು ಧರಿಸಿ ಭಾಗವಹಿಸಿರುವುದು ಮತ್ತು ರೋಡ್‌ಶೋ ಉದ್ದಕ್ಕೂ ಬಿಜೆಪಿ ಕಾರ್ಯಕರ್ತರು ಏರ್ಪಡಿಸಿದ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿರುವುದು ಕಂಡು ಬಂದಿದೆ.

ರಾಜಕೀಯ ರ್ಯಾಲಿಗಳಲ್ಲಿ ಮಕ್ಕಳು ಭಾಗವಹಿಸುವುದು ಭಾರತದ ಚುನಾವಣಾ ಆಯೋಗದ ನಿರ್ದೇಶನಗಳಿಗೆ ವಿರುದ್ಧವಾಗಿದೆ. ಆದ್ದರಿಂದ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮತ್ತು ಘಟನೆಯ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸಲು ಅಧಿಕಾರಿಗಳು ಶಾಲಾ ಆಡಳಿತ ಮಂಡಳಿಗೆ ಸೂಚಿಸಿದ್ದಾರೆ. ಈ ಬಗ್ಗೆ ಕಾರ್ಮಿಕ ಇಲಾಖೆಯ ಜಂಟಿ ಆಯುಕ್ತರು ಮತ್ತು ಮುಖ್ಯ ಶಿಕ್ಷಣಾಧಿಕಾರಿಗಳಿಂದಲೂ ಪ್ರತ್ಯೇಕ ವಿಚಾರಣೆಯನ್ನು ನಡೆಸುತ್ತಿದ್ದಾರೆ.

ನಾವು ಈ ವಿಚಾರವನ್ನು ತಿಳಿದಿದ್ದೇವೆ ಮತ್ತು ಇಲಾಖೆಗಳಿಂದ ವರದಿಗಳನ್ನು ಕೇಳಲಾಗಿದೆ. ಈ ಕುರಿತ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೊಯಮತ್ತೂರು ಜಿಲ್ಲಾಧಿಕಾರಿ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಮುಖ್ಯ ಶಿಕ್ಷಣಾಧಿಕಾರಿ ಎಂ.ಬಾಲಮುರಳಿ ಈ ಕುರಿತು ಪ್ರತಿಕ್ರಿಯಿಸಿದ್ದು, ನಾವು ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದೇವೆ. ಕಾರ್ಯಕ್ರಮಕ್ಕೆ ಮೊದಲೇ ಚುನಾವಣಾ ಕಾರ್ಯಕ್ರಮಗಳಿಂದ ದೂರವಿರಲು ಎಲ್ಲಾ ಶಾಲೆಗಳಿಗೆ ಸ್ಪಷ್ಟವಾಗಿ ಸೂಚನೆ ನೀಡಲಾಗಿತ್ತು ಎಂದು ಹೇಳಿದ್ದಾರೆ. ಸಹಾಯಕ ಚುನಾವಣಾಧಿಕಾರಿ ಪಿ.ಸುರೇಶ್ ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ್ದು, ಪ್ರಕರಣದಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿರುವುದು ಖಚಿತವಾಗಿದೆ. ವಿಚಾರಣೆ ಮುಗಿದ ನಂತರ ಮುಂದಿನ ಕ್ರಮಕ್ಕಾಗಿ ಚುನಾವಣಾ ಆಯೋಗಕ್ಕೆ ವರದಿ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಲು ಶಾಲಾ ಮುಖ್ಯೋಪಾಧ್ಯಾಯರು ಲಭ್ಯರಿಲ್ಲದೆ ಇದ್ದರೂ ರೋಡ್‌ ಶೋನಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ಪ್ರಕಾರ ಅವರಿಗೆ ಕಾರ್ಯಕ್ರಮದ ಎರಡು ಗಂಟೆ ಮುಂಚಿತವಾಗಿ ಸಾಯಿ ಬಾಬಾ ಕಾಲನಿ ಜಂಕ್ಷನ್‌ನಲ್ಲಿರುವಂತೆ ಶಾಲಾಡಳಿತ ಸೂಚಿಸಿತ್ತು.

ಇದನ್ನು ಓದಿ: ನಗರ್ತಪೇಟೆ ಮೊಬೈಲ್ ಅಂಗಡಿ ಪ್ರಕರಣ: ಕೋಮು ಪ್ರಚೋದನೆ ಹೇಳಿಕೆ ನೀಡಿದ್ದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...