Homeಮುಖಪುಟಕಾಲೇಜುಗಳಿಗೆ ರಜೆ ನೀಡಿ ವಿದ್ಯಾರ್ಥಿಗಳನ್ನು ಮೋದಿಯ ಕಾರ್ಯಕ್ರಮಕ್ಕೆ ಕಳುಹಿಸುವಂತೆ ಸುತ್ತೋಲೆ!

ಕಾಲೇಜುಗಳಿಗೆ ರಜೆ ನೀಡಿ ವಿದ್ಯಾರ್ಥಿಗಳನ್ನು ಮೋದಿಯ ಕಾರ್ಯಕ್ರಮಕ್ಕೆ ಕಳುಹಿಸುವಂತೆ ಸುತ್ತೋಲೆ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆ ಗೋವಾದ ಮಾರ್ಗೋವಾ ಪ್ರದೇಶದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಾಲೇಜುಗಳಿಗೆ ಕೂಡ ಅರ್ಧ ದಿನ ರಜೆ ಘೋಷಿಸಲಾಗಿದ್ದು, ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಲು ಕಾಲೇಜುಗಳಿಗೆ ಸೂಚಿಸಿರುವ ಬಗ್ಗೆ ವರದಿಯಾಗಿದೆ.

ದಕ್ಷಿಣ ಗೋವಾದ ಮಾರ್ಗೋವಾ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಮಂಗಳವಾರ  ಮಧ್ಯಾಹ್ನದ ವೇಳೆಗೆ ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ಗೋವಾ ಸರ್ಕಾರ ಘೋಷಿಸಿದೆ. ಕಳೆದ ವಾರ  ಮಾರ್ಗೋವ್‌ನ ಎಲ್ಲಾ ಶಾಲೆಗಳನ್ನು ಮುಚ್ಚಲಾಗುವುದು ಎಂದು ಘೋಷಿಸಲಾಗಿತ್ತು.

ದಿನಾಂಕ 06/02/2024ರಂದು ಭಾರತದ ಪ್ರಧಾನ ಮಂತ್ರಿಗಳ ಭೇಟಿಯನ್ನು ಗಮನದಲ್ಲಿಟ್ಟುಕೊಂಡು, ಮಾರ್ಗಾವೊದಲ್ಲಿನ ಎಲ್ಲಾ ಕಾಲೇಜುಗಳನ್ನು ಮಧ್ಯಾಹ್ನ 12 ಗಂಟೆವರೆಗೆ ಮುಚ್ಚಲಾಗುತ್ತದೆ. ಈ ಸಂಬಂಧವಾಗಿ ಪ್ರಧಾನ ಮಂತ್ರಿಗಳ ಸಭೆಗೆ ಹಾಜರಾಗಲು ಪ್ರಾಂಶುಪಾಲರು ತಮ್ಮ ಸಂಸ್ಥೆಗಳ ವಿದ್ಯಾರ್ಥಿಗಳನ್ನು ಮಧ್ಯಾಹ್ನ 1 ಗಂಟೆಯೊಳಗೆ ಮಾರ್ಗೋವ್ ಕೆಟಿಸಿ ಬಸ್ ನಿಲ್ದಾಣಕ್ಕೆ ಕಳುಹಿಸಿಕೊಡಬೇಕು ಎಂದು ಗೋವಾ ಸರಕಾರದ ಉನ್ನತ ಶಿಕ್ಷಣ ನಿರ್ದೇಶನಾಲಯ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದೆ.

ಈ ಬಗ್ಗೆ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಆಕ್ಷೇಪವನ್ನು ವ್ಯಕ್ತಪಡಿಸಿದೆ. ಈ ಅಧಿಸೂಚನೆಯನ್ನು ತಕ್ಷಣವೇ ಹಿಂಪಡೆಯುವಂತೆ ನಾವು ಉನ್ನತ ಶಿಕ್ಷಣ ನಿರ್ದೇಶನಾಲಯಕ್ಕೆ ಮನವಿ ಮಾಡುತ್ತೇವೆ. ಇದು ಸರಕಾರಿ ಯಂತ್ರದ ದುರ್ಬಳಕೆಯಾಗಿದೆ. ಕಾಲೇಜು ವಿದ್ಯಾರ್ಥಿಗಳು ಸಾರ್ವಜನಿಕ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸರ್ಕಾರ ಹೇಳುತ್ತಿದೆ. ಕೆಲ ವಿದ್ಯಾರ್ಥಿಗಳು ಹಾಜರಾಗಲು ಬಯಸುತ್ತಾರೆ, ಆದರೆ ಅದು ಯಾವುದೇ ಬಲವಂತವಾಗಿರಬಾರದು ಎಂದು NSUIನ ಗೋವಾ ಅಧ್ಯಕ್ಷ ನೌಶಾದ್ ಚೌಧರಿ ಅವರು ಹೇಳಿದ್ದಾರೆ.

ಮಾರ್ಗೋದಲ್ಲಿ ಪ್ರಧಾನಿ ಮೋದಿಯ ಸಾರ್ವಜನಿಕ ಭಾಷಣಕ್ಕೆ ಸಿದ್ಧತೆ ವಿಚಾರವು ಈ ಮೊದಲು ವಿವಾದಕ್ಕೆ ಕಾರಣವಾಗಿತ್ತು. ಹಳೆಯ ಮರಗಳನ್ನು ಕಡಿದು ಮೋದಿ ಕಾರ್ಯಕ್ರಮಕ್ಕೆ ವೇದಿಕೆ ಸಿದ್ದತೆ ಪಡಿಸಲಾಗಿದೆ ಎಂದು ಆರೋಪ ಕೇಳಿ ಬಂದಿತ್ತು.

ರಾಮಮಂದಿರ ಉದ್ಘಾಟನೆಯ ವೇಳೆ ಪ್ರಧಾನಿ ಮೋದಿ ಹಾದಿಯಾಗಿ ಕೇಂದ್ರ ಸರಕಾರ ಮತ್ತು ಇಡೀ ಆಡಳಿತ ಯಂತ್ರ ತೊಡಗಿಸಿಕೊಂಡಿತ್ತು. ಧಾರ್ಮಿಕ ಕಾರ್ಯಕ್ರಮದಲ್ಲಿ ಸರಕಾರಿ ಆಡಳಿತ ತೊಡಗಿಸಿರುವುದು ಸಂವಿಧಾನ ಬಾಹಿರವಾಗಿದೆ. ಈ ಬಗ್ಗೆ ಪ್ರತಿಪಕ್ಷಗಳು ವ್ಯಾಪಕವಾಗಿ ಟೀಕೆಯನ್ನು ವ್ಯಕ್ತಪಡಿಸಿದ್ದರು. ಇದಲ್ಲದೆ ಕೇಂದ್ರ ಸರಕಾರ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ‘ಇಡಿ’, ‘ಐಟಿ’ ದಾಳಿಯನ್ನು ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದವು. ಇದೀಗ ಪ್ರಧಾನಿ ಕಾರ್ಯಕ್ರಮದ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ಕೂಡ ರಜೆ ಘೋಷಿಸಲಾಗಿದ್ದು, ವ್ಯಾಪಕವಾದ ಟೀಕೆಗೆ ಕಾರಣವಾಗಿದೆ.

ಇದನ್ನು ಓದಿ: ಭಾರತ್ ಜೋಡೋ ನ್ಯಾಯ ಯಾತ್ರೆ: ಜಾತಿವಾರು ಜನಸಂಖ್ಯೆ, ತೆರಿಗೆ ಪಾವತಿ ಬಗ್ಗೆ ಬಹಿರಂಗಪಡಿಸಬೇಕು; ರಾಹುಲ್‌ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...