Homeಕರೋನಾ ತಲ್ಲಣದೆಹಲಿಯ ಶಾಲೆಗಳನ್ನು ಈಗಲೇ ತೆರೆಯುವುದಿಲ್ಲ: ಅರವಿಂದ್ ಕೇಜ್ರಿವಾಲ್

ದೆಹಲಿಯ ಶಾಲೆಗಳನ್ನು ಈಗಲೇ ತೆರೆಯುವುದಿಲ್ಲ: ಅರವಿಂದ್ ಕೇಜ್ರಿವಾಲ್

- Advertisement -
- Advertisement -

ಕೊರೊನಾ ಕಾರಣದಿಂದ ಮುಚ್ಚಲಾಗಿರುವ ದೆಹಲಿ ಶಾಲೆಗಳಲ್ಲಿ ಈಗಲೇ ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸುವ ಯೋಜನೆ ಇಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಕೋವಿಡ್ ಸೋಂಕಿನ ಮೂರನೇ ಅಲೆ ಈಗಾಗಲೇ ಸನಿಹದಲ್ಲಿದ್ದು, ಸರ್ಕಾರವು ಮಕ್ಕಳ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ನಡೆದ ಸಂವಾದಲ್ಲಿ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲೆಗಳನ್ನು ಪುನರಾರಂಭಿಸಲಾಗುತ್ತಿದ್ದು, ದೆಹಲಿಯಲ್ಲಿಯೂ ಸರ್ಕಾರವು ಶಾಲೆಗಳಲ್ಲಿ ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸಲು ಯೋಜಿಸುತ್ತಿದೆಯೇ ಎಂದು ಕೇಳಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್  ಪ್ರತಿಕ್ರಿಯಿಸಿದ್ದಾರೆ.

“ಅಂತರರಾಷ್ಟ್ರೀಯ ವರದಿಗಳ ಪ್ರಕಾರ, ಕೋವಿಡ್ ಮೂರನೇ ಅಲೆ ಈಗಾಗಲೇ ಬಂದಿದೆ. ಆದ್ದರಿಂದ ಇಡೀ ದೇಶದ ಜನರಿಗೆ ಲಸಿಕೆ ನೀಡುವವರೆಗೂ ನಾವು ಮಕ್ಕಳನ್ನು ಅಪಾಯಕ್ಕೆ ಸಿಲುಕಿಸುವುದಿಲ್ಲ” ಎಂದು ಮುಖ್ಯಮಂತ್ರಿ ಉತ್ತರಿಸಿದ್ದಾರೆ.

ಇದನ್ನೂ ಓದಿ: ಗೋವಾ : ಅರವಿಂದ್ ಕೇಜ್ರಿವಾಲ್‌ರಿಂದ ಮತ್ತೆ ಉಚಿತ ವಿದ್ಯುತ್ ಯೋಜನೆ ಘೋಷಣೆ

ಕಳೆದ ಎರಡು ವಾರಗಳಿಂದ ದೆಹಲಿಯಲ್ಲಿ ದೈನಂದಿನ ಕೋವಿಡ್ ಪ್ರಕರಣಗಳು 100 ಕ್ಕಿಂತಲೂ ಕಡಿಮೆ ವರದಿಯಾಗುತ್ತಿವೆ. ಇದರಿಂದ ಎರಡನೇ ಹಂತದಲ್ಲಿ ಜಾರಿಗೆ ತಂದಿರುವ ಕೊರೊನಾ ನಿರ್ಬಂಧಗಳಿಗೆ ವಿನಾಯಿತಿ ನೀಡುವಂತೆ ಸರ್ಕಾರವನ್ನು ಪ್ರೇರೇಪಿಸಿದೆ.

ಗುರುವಾರ ಹೊರಡಿಸಲಾದ ರಾಜ್ಯ ಆರೋಗ್ಯ ಬುಲೆಟಿನ್ ಪ್ರಕಾರ, ದೆಹಲಿಯಲ್ಲಿ 72 ಹೊಸ ಕೋವಿಡ್ ಪ್ರಕರಣಗಳು, ಒಂದು ಸಾವು ಮತ್ತು ಕಳೆದ 24 ಗಂಟೆಗಳ ಅವಧಿಯಲ್ಲಿ ಶೇಕಡಾ 0.10 ರಷ್ಟು ಪಾಸಿಟಿವ್ ಪ್ರಮಾಣ ದಾಖಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 671 ರಷ್ಟಿದೆ. ದೆಹಲಿಯಲ್ಲಿ ಈವರೆಗೆ 91 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ಕೊರೊನಾ ಪ್ರಕರಣಗಳಲ್ಲಿನ ಇಳಿಕೆ ನಂತರ, ಹಲವಾರು ರಾಜ್ಯಗಳು ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಶಾಲೆಗಳಲ್ಲಿ ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸಲು ನಿರ್ಧರಿಸಿವೆ. ಜುಲೈ 16 ರಿಂದ 9 ರಿಂದ 12 ತರಗತಿಗಳ ವಿದ್ಯಾರ್ಥಿಗಳಿಗೆ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸಬಹುದು ಎಂದು ಹರಿಯಾಣ ರಾಜ್ಯ ಘೋಷಿಸಿದೆ.

“ವಿಶ್ವದಲ್ಲಿ ಈಗಾಗಲೇ ಕೊರೊನಾ 3ನೇ ಅಲೆ ಬಂದಿರುವ ಪುರಾವೆಗಳು ಮತ್ತು ಸಾಂಕ್ರಾಮಿಕ ರೋಗಗಳ ಇತಿಹಾಸ ಗಮನಿಸಿದರೆ, ಮೂರನೇ ಅಲೆಯನ್ನು ಎದುರಿಸುವುದು ಅನಿವಾರ್ಯವಾಗಿದೆ. ಇಷ್ಟೇ ಅಲ್ಲದೆ ಮೂರನೇ ಅಲೆ ಸನಿಹದಲ್ಲಿದೆ. ಆತಂಕದ ಸಂಗತಿಯೆಂದರೆ, ದೇಶದ ಅನೇಕ ಭಾಗಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರು ಎರಡನೇ ಅಲೆಯನ್ನು ಗೆದ್ದ ಸಂತಸದಲ್ಲಿದ್ದಾರೆ. ಸಾಮೂಹಿಕವಾಗಿ ಕೊರೊನಾ ನಿಯಮಾವಳಿಗಳನ್ನು ನಿರ್ಲಕ್ಷಿಸಿ ಸಾರ್ವಜನಿಕ ಕೆಲಸಗಳಲ್ಲಿ, ಸಭೆಗಳಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಭಾರತೀಯ ವೈದ್ಯಕೀಯ ಸಂಘ ತನ್ನ ಪತ್ರಿಕಾ ಪ್ರಕಟಣೆ ತಿಳಿಸಿದೆ.


ಇದನ್ನೂ ಓದಿ: ವಿಪಕ್ಷ ನಾಯಕರು ನಮ್ಮ ಕೆಲಸವನ್ನು ಹೊಗಳುತ್ತಿದ್ದಾರೆ-ಸಿಧು ಹೇಳಿಕೆಗೆ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....