Homeಕರೋನಾ ತಲ್ಲಣದೆಹಲಿಯ ಶಾಲೆಗಳನ್ನು ಈಗಲೇ ತೆರೆಯುವುದಿಲ್ಲ: ಅರವಿಂದ್ ಕೇಜ್ರಿವಾಲ್

ದೆಹಲಿಯ ಶಾಲೆಗಳನ್ನು ಈಗಲೇ ತೆರೆಯುವುದಿಲ್ಲ: ಅರವಿಂದ್ ಕೇಜ್ರಿವಾಲ್

- Advertisement -
- Advertisement -

ಕೊರೊನಾ ಕಾರಣದಿಂದ ಮುಚ್ಚಲಾಗಿರುವ ದೆಹಲಿ ಶಾಲೆಗಳಲ್ಲಿ ಈಗಲೇ ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸುವ ಯೋಜನೆ ಇಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಕೋವಿಡ್ ಸೋಂಕಿನ ಮೂರನೇ ಅಲೆ ಈಗಾಗಲೇ ಸನಿಹದಲ್ಲಿದ್ದು, ಸರ್ಕಾರವು ಮಕ್ಕಳ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ನಡೆದ ಸಂವಾದಲ್ಲಿ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲೆಗಳನ್ನು ಪುನರಾರಂಭಿಸಲಾಗುತ್ತಿದ್ದು, ದೆಹಲಿಯಲ್ಲಿಯೂ ಸರ್ಕಾರವು ಶಾಲೆಗಳಲ್ಲಿ ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸಲು ಯೋಜಿಸುತ್ತಿದೆಯೇ ಎಂದು ಕೇಳಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್  ಪ್ರತಿಕ್ರಿಯಿಸಿದ್ದಾರೆ.

“ಅಂತರರಾಷ್ಟ್ರೀಯ ವರದಿಗಳ ಪ್ರಕಾರ, ಕೋವಿಡ್ ಮೂರನೇ ಅಲೆ ಈಗಾಗಲೇ ಬಂದಿದೆ. ಆದ್ದರಿಂದ ಇಡೀ ದೇಶದ ಜನರಿಗೆ ಲಸಿಕೆ ನೀಡುವವರೆಗೂ ನಾವು ಮಕ್ಕಳನ್ನು ಅಪಾಯಕ್ಕೆ ಸಿಲುಕಿಸುವುದಿಲ್ಲ” ಎಂದು ಮುಖ್ಯಮಂತ್ರಿ ಉತ್ತರಿಸಿದ್ದಾರೆ.

ಇದನ್ನೂ ಓದಿ: ಗೋವಾ : ಅರವಿಂದ್ ಕೇಜ್ರಿವಾಲ್‌ರಿಂದ ಮತ್ತೆ ಉಚಿತ ವಿದ್ಯುತ್ ಯೋಜನೆ ಘೋಷಣೆ

ಕಳೆದ ಎರಡು ವಾರಗಳಿಂದ ದೆಹಲಿಯಲ್ಲಿ ದೈನಂದಿನ ಕೋವಿಡ್ ಪ್ರಕರಣಗಳು 100 ಕ್ಕಿಂತಲೂ ಕಡಿಮೆ ವರದಿಯಾಗುತ್ತಿವೆ. ಇದರಿಂದ ಎರಡನೇ ಹಂತದಲ್ಲಿ ಜಾರಿಗೆ ತಂದಿರುವ ಕೊರೊನಾ ನಿರ್ಬಂಧಗಳಿಗೆ ವಿನಾಯಿತಿ ನೀಡುವಂತೆ ಸರ್ಕಾರವನ್ನು ಪ್ರೇರೇಪಿಸಿದೆ.

ಗುರುವಾರ ಹೊರಡಿಸಲಾದ ರಾಜ್ಯ ಆರೋಗ್ಯ ಬುಲೆಟಿನ್ ಪ್ರಕಾರ, ದೆಹಲಿಯಲ್ಲಿ 72 ಹೊಸ ಕೋವಿಡ್ ಪ್ರಕರಣಗಳು, ಒಂದು ಸಾವು ಮತ್ತು ಕಳೆದ 24 ಗಂಟೆಗಳ ಅವಧಿಯಲ್ಲಿ ಶೇಕಡಾ 0.10 ರಷ್ಟು ಪಾಸಿಟಿವ್ ಪ್ರಮಾಣ ದಾಖಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 671 ರಷ್ಟಿದೆ. ದೆಹಲಿಯಲ್ಲಿ ಈವರೆಗೆ 91 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ಕೊರೊನಾ ಪ್ರಕರಣಗಳಲ್ಲಿನ ಇಳಿಕೆ ನಂತರ, ಹಲವಾರು ರಾಜ್ಯಗಳು ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಶಾಲೆಗಳಲ್ಲಿ ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸಲು ನಿರ್ಧರಿಸಿವೆ. ಜುಲೈ 16 ರಿಂದ 9 ರಿಂದ 12 ತರಗತಿಗಳ ವಿದ್ಯಾರ್ಥಿಗಳಿಗೆ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸಬಹುದು ಎಂದು ಹರಿಯಾಣ ರಾಜ್ಯ ಘೋಷಿಸಿದೆ.

“ವಿಶ್ವದಲ್ಲಿ ಈಗಾಗಲೇ ಕೊರೊನಾ 3ನೇ ಅಲೆ ಬಂದಿರುವ ಪುರಾವೆಗಳು ಮತ್ತು ಸಾಂಕ್ರಾಮಿಕ ರೋಗಗಳ ಇತಿಹಾಸ ಗಮನಿಸಿದರೆ, ಮೂರನೇ ಅಲೆಯನ್ನು ಎದುರಿಸುವುದು ಅನಿವಾರ್ಯವಾಗಿದೆ. ಇಷ್ಟೇ ಅಲ್ಲದೆ ಮೂರನೇ ಅಲೆ ಸನಿಹದಲ್ಲಿದೆ. ಆತಂಕದ ಸಂಗತಿಯೆಂದರೆ, ದೇಶದ ಅನೇಕ ಭಾಗಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರು ಎರಡನೇ ಅಲೆಯನ್ನು ಗೆದ್ದ ಸಂತಸದಲ್ಲಿದ್ದಾರೆ. ಸಾಮೂಹಿಕವಾಗಿ ಕೊರೊನಾ ನಿಯಮಾವಳಿಗಳನ್ನು ನಿರ್ಲಕ್ಷಿಸಿ ಸಾರ್ವಜನಿಕ ಕೆಲಸಗಳಲ್ಲಿ, ಸಭೆಗಳಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಭಾರತೀಯ ವೈದ್ಯಕೀಯ ಸಂಘ ತನ್ನ ಪತ್ರಿಕಾ ಪ್ರಕಟಣೆ ತಿಳಿಸಿದೆ.


ಇದನ್ನೂ ಓದಿ: ವಿಪಕ್ಷ ನಾಯಕರು ನಮ್ಮ ಕೆಲಸವನ್ನು ಹೊಗಳುತ್ತಿದ್ದಾರೆ-ಸಿಧು ಹೇಳಿಕೆಗೆ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...