Homeಮುಖಪುಟವಿಜ್ಞಾನ-ವಿಶೇಷ; ಹಡಗು ಹಾರುತಿದೆ ನೋಡಿದಿರಾ?: ವಿಶ್ವಕೀರ್ತಿ

ವಿಜ್ಞಾನ-ವಿಶೇಷ; ಹಡಗು ಹಾರುತಿದೆ ನೋಡಿದಿರಾ?: ವಿಶ್ವಕೀರ್ತಿ

- Advertisement -
- Advertisement -

ಈಚಿತ್ರವನ್ನು ಗಮನಿಸಿ. ಏನು ಕಾಣುತ್ತಿದೆ? ಹೌದು. ಸಮುದ್ರದಲ್ಲಿ ಒಂದು ಹಡಗು ತೇಲುತ್ತಿರುವಂತಿದೆ. ನೀರಿನ ಮೇಲಲ್ಲ ಗಾಳಿಯಲ್ಲಿ ಹಾರುತ್ತಿದೆ ಅಲ್ಲವೇ? ಇದು ಹೇಗೆ ಸಾಧ್ಯ? ಇದು ನಿಜವಾದ ಚಿತ್ರಾನ? ಏನೋ ಎಡಿಟ್ ಮಾಡಿರಬೇಕು ಅಂತ ಯೋಚನೆ ಮಾಡುತ್ತಿದ್ದಿರಾ. ಹಾಗಾದರೆ ಇಲ್ಲಿ ಕೇಳಿ,

ಇಂಗ್ಲೆಂಡ್‌ನ ಕಾರ್ನಾವಾಲ್‌ನಲ್ಲಿ, ಡೇವಿಡ್ ಮಾರಿಸ್ ಎನ್ನುವ ವ್ಯಕ್ತಿ ತನ್ನ ಕ್ಯಾಮರಾದಲ್ಲಿ ಸೆರೆ ಹಿಡಿದ ಚಿತ್ರ ಇದು. ಈ ಚಿತ್ರದಲ್ಲಿ ಯಾವುದನ್ನೂ ಎಡಿಟ್ ಮಾಡಿಲ್ಲ. ಚಿತ್ರದಲ್ಲಿ ಹಡಗು ಗಾಳಿಯಲ್ಲಿ ಹಾರುತ್ತಿರುವಂತೆ ನೀವು ಕಾಣುತ್ತಿರುವುದು ನಿಜ! ಚಿತ್ರ ತೆಗೆದ ಡೇವಿಡ್ ಕೂಡ ಇದನ್ನು ನೋಡಿ ಅಚ್ಚರಿಯಾಗಿದ್ದರು. ಈ ಚಿತ್ರ ಅಂರ್ಜಾಲದಲ್ಲಿ ಸಂಚಲನ ಮೂಡಿಸಿದ್ದು ಕೂಡ ನಿಜ.

ಅರೆರೆ ಏನಿದು, ವಿಜ್ಞಾನಿಗಳು ಗಾಳಿಯಲ್ಲಿ ಹಾರುವ ಹಡಗನ್ನು ಕಂಡುಹಿಡಿದು ಬಿಟ್ಟರಾ ಅಂತ ಯೋಚನೆ ಮಾಡ್ತಿದ್ದೀರಾ. ಅದರ ಅವಶ್ಯಕತೆ ಏನು ಎಂಬ ಚಿಂತೆ ಮೂಡಿತಾ? ಇಲ್ಲಾ ಇದು ಹಾರುವ ಹಡಗಲ್ಲ. ಇದು ನೀರಿನ ಮೇಲೆ ಚಲಿಸುತ್ತಿರುವ ಹಡಗೇ! ಹಡಗು ಗಾಳಿಯಲ್ಲಿ ಹಾರುತ್ತಿರುವಂತೆ ಕಾಣುತ್ತಿರುವುದು ಚಿತ್ರದಲ್ಲಿ ಮಾತ್ರ ಅಲ್ಲಾ, ಚಿತ್ರ ತೆಗೆದ ಡೇವಿಡ್ ಮಾರಿಸ್ ಅವರ ಬರಿಗಣ್ಣಿಗೂ ಇದು ಹಾರುತ್ತಿರುವಂತೆಯೇ ಕಂಡಿದೆ.

ಹಿಗೆ ಗೋಚರಿಸುವುದಕ್ಕೆ ಕಾರಣ ನಿಸರ್ಗದಲ್ಲಿ ಕಾಣುವ ಅಪರೂಪದ ದೃಷ್ಟಿಭ್ರಮೆ (Optical Illusion) ವಿಧ್ಯಮಾನದಿಂದ. ಇದನ್ನು ಮಿರಾಜ್ (mirage) ಎಂದು ಕರೆಯುತ್ತಾರೆ. ಕನ್ನಡದಲ್ಲಿ ಮಿರಾಜ್‌ಗೆ ಬಿಸಿಲುಕುದುರೆ, ಮರೀಚಿಕೆ, ಭ್ರಮೆ ಎಂಬ ಪದಗಳು ಬಳಕೆಯಲ್ಲಿವೆ.

ಹಾಗಿದ್ದರೆ ಹಡಗು ನಿಜಕ್ಕೂ ಹಾರಿದ್ದು ಹೇಗೆ?

ಡೇವಿಡ್ ಮೋರಿಸ್‌ರವರು ಸಮುದ್ರದ ತಟದಿಂದ ಬಹಳ ದೂರದಲ್ಲಿ ಕಾಣುವ ಹಡಗಿನ ಚಿತ್ರವನ್ನು ತೆಗೆದಿದ್ದಾರೆ. ಸಾಮಾನ್ಯವಾಗಿ ಸಮುದ್ರದ ನೀರು ತಂಪಾಗಿರುತ್ತದೆ. ಈ ಕಾರಣದಿಂದ, ನೀರಿನ ಹತ್ತಿರ ಇರುವ ಗಾಳಿಯು ತಂಪಾಗಿರುತ್ತದೆ. ಸಮುದ್ರದ ನೀರಿನ ಮಟ್ಟದಿಂದ ಮೇಲಕ್ಕೆ ಚಲಿಸಿದಂತೆ, ಅಂದಿನ ಆ ಸ್ಥಳದ ವಾತಾವರಣದ ಹವಾಮಾನಕ್ಕೆ ತಕ್ಕಂತೆ, ಗಾಳಿಯ ತಾಪಮಾನವು ಹೆಚ್ಚುತ್ತಿರುತ್ತದೆ. ಅಲ್ಲದೆ, ತಂಪಾಗಿರುವ ಗಾಳಿಯ ಸಾಂದ್ರತೆ (density) ಹೆಚ್ಚಿದ್ದು, ಬಿಸಿಯಾಗಿರುವ ಗಾಳಿಯ ಸಾಂದ್ರತೆ ಕಡಿಮೆ ಇರುವುದರಿಂದ, ತಂಪಾದ ಗಾಳಿಯ ಪದರ ಕೆಳಗಿದ್ದು, ಬಿಸಿಯಾದ ಗಾಳಿಯ ಪದರ ಅದರ ಮೇಲಿರುತ್ತದೆ. ಹೀಗೆ, ಸಮುದ್ರದಿಂದ ಮೇಲ್ಮುಖವಾಗಿ ಏರಿಕೆಯ ತಾಪಮಾನದ ಗಾಳಿಯ ಪದರಗಳು ರಚಿಸಲ್ಪಟ್ಟಿರುತ್ತವೆ.

ಅಲ್ಲದೆ, ನಾವು ಯಾವುದಾದರೊಂದು ವಸ್ತುವನ್ನು ನೋಡುತ್ತೇವೆ ಎಂದರೆ, ಆ ವಸ್ತುವಿನ ಮೇಲೆ ಬೆಳಕು ಬಿದ್ದು, ಅದು ನಮ್ಮಕಣ್ಣಿನ ಮೇಲೆ ಬಿದ್ದರೆ ಮಾತ್ರ ಆ ವಸ್ತು ನಮಗೆ ಕಾಣುತ್ತದೆ. ಬೆಳಕು ಸರಳರೇಖೆಯಲ್ಲಿಯೇ ಚಲಿಸುತ್ತದೆ ಎಂದು ತಿಳಿದಿದ್ದೇವೆ. ಆದುದರಿಂದಲೆ ನಮಗೆ ಕಾಣುವ ವಸ್ತು ಬೆಳಕಿನ ಕಿರಣಗಳ ಸರಳ ರೇಖೆಯ ದಿಕ್ಕಿನಲ್ಲಿದೆ ಎಂದು ನಾವು ಗ್ರಹಿಸುವುದು. ಆದರೆ ಬೆಳಕು, ಒಂದು ಸಾಂದ್ರತೆ ಇರುವ ಮಾಧ್ಯಮದಿಂದ (medium) ಮತ್ತೊಂದು ಸಾಂದ್ರತೆಇರುವ ಮಾಧ್ಯಮಕ್ಕೆ ಚಲಿಸಿದಾಗ ಹೆಚ್ಚು ಸಾಂದ್ರತೆ ಇರುವ ಮಾಧ್ಯಮದ ಕಡೆಗೆ ಬಾಗುತ್ತದೆ. ಇದನ್ನು ವಕ್ರೀಭವನ (refraction) ಎಂದು ಕರೆಯುತ್ತೇವೆ.

ಈಗ ಈ ಚಿತ್ರ ನೋಡಿ, ಈ ಚಿತ್ರದಲ್ಲಿ ಹಡಗಿನಿಂದ ಬರುತ್ತಿರುವ ಬೆಳಕಿನ ಕಿರಣಗಳು ನೇರವಾಗಿ (ಸರಳ ರೇಖೆಯಲ್ಲಿ) ಚಲಿಸದೆ ಬಾಗಿ ದಡದಲ್ಲಿರುವ ವ್ಯಕ್ತಿಯಕಣ್ಣಿಗೆ ಬೀಳುತ್ತಿದೆ. ಇದು ಏಕೆ ಎಂದು ಹೆಳಬಲ್ಲಿರಾ?

ಹೌದು, ನಾವು ಈಗಾಗಲೇ ತಿಳಿದಂತೆ, ವಾತಾವರಣದ ಹವಾಮಾನದಿಂದ ಸಮುದ್ರದ ನೀರಿನ ಬಳಿ ಹೆಚ್ಚು ಸಾಂದ್ರತೆ ಉಳ್ಳ ತಂಪಾದ ಗಾಳಿಯ ಪದರವಿದೆ. ಸಮುದ್ರದಿಂದ ಮೇಲ್ಮುಖವಾಗಿ ಚಲಿಸಿದಂತೆ ಕಡಿಮೆ ಸಾಂದ್ರತೆಯ, ಹೆಚ್ಚು ಉಷ್ಣವುಳ್ಳ ಗಾಳಿಯ ಪದರಗಳಿರುವುದರಿಂದ, ಬೆಳಕು ಹೆಚ್ಚು ಸಾಂದ್ರತೆಯ ಗಾಳಿಯ ಪದರದಿಂದ ಕಡಿಮೆ ಸಾಂದ್ರತೆಯ ಗಾಳಿಯ ಪದರದ ಕಡೆಗೆ ಚಲಿಸಿದಾಗ, ಹೆಚ್ಚು ಸಾಂದ್ರತೆವುಳ್ಳ ಗಾಳಿಯ ಪದರದ ಕಡೆಗೆ ಬಾಗುತ್ತಿದೆ. ಈ ಕಾರಣದಿಂದ ಹಡಗಿನಿಂದ ಬರುವ ಬೆಳಕಿನ ಕಿರಣಗಳು ಸಮುದ್ರ ಮಟ್ಟದಿಂದ ತಾಪಮಾನ ಹೆಚ್ಚಾಗುತ್ತಿರುವ ಗಾಳಿಯ ಪದರಗಳ ಮೂಲಕ ಹಾದು ಹಲವು ಬಾರಿ ವಕ್ರೀಭವನಗೊಂಡು ವ್ಯಕ್ತಿಯ ಕಣ್ಣಿಗೆ ಬೀಳುತ್ತಿದೆ.

ಬೆಳಕಿನ ಕಿರಣಗಳು ಆ ವ್ಯಕ್ತಿಯ ಕಣ್ಣಿಗೆ ಬಿದ್ದಾಗ, ಅದು ನೇರವಾಗಿ ಬಂದಿದ್ದರೆ ಯಾವ ಸ್ಥಳದಿಂದ ಬರುತ್ತಿತ್ತೋ ಆ ಸ್ಥಳದಲ್ಲಿಯೇ ಹಡಗು ಇದೆ ಎಂಬ ಚಿತ್ರ ವ್ಯಕ್ತಿಗೆ ಕಾಣುತ್ತದೆ. ಆತನ ಸ್ಥಾನದಲ್ಲಿ ಕ್ಯಾಮರಾ ಇದ್ದರೂ, ಅದೂ ಕೂಡ ಇದೆ ರೀತಿಯ ಚಿತ್ರವನ್ನು ಸೆರೆ ಹಿಡಿಯುತ್ತದೆ. ಆದರೆ ಇದು ನೈಜ ಚಿತ್ರವಲ್ಲ. ಬೆಳಕಿನ ವಕ್ರೀಭವನದಿಂದ ಉಂಟಾದ ದೃಷ್ಟ ಭ್ರಮೆಯ ಚಿತ್ರ ಇದಾಗಿದೆ. ಇದೆ ಹಾರುವ ಹಡಗಿನ ಚಿತ್ರದ ಹಿಂದಿನ ವಿಜ್ಞಾನ ರಹಸ್ಯ.

ಇಂತಹ ದೃಷ್ಟಭ್ರಮೆಯನ್ನು ಮಿರಾಜ್ ಎಂದು ಹೆಚ್ಚು ಜನಪ್ರಿಯವಾಗಿದೆ. ಮಿರಾಜ್ ಮೂಡುವುದು, ವಾತಾವರಣದ ಹವಾಮಾನ (ತಾಪಮಾನ), ಗಾಳಿಯ ವೇಗ ಮತ್ತು ಸೂರ್ಯನ ಬಿಸಿಲಿನ ಸೂಕ್ಷ್ಮ ಬದಲಾವಣೆಗಳಿಂದ. ಹಾಗಾಗಿ ಹಲವು ಸ್ಥಳಗಳಲ್ಲಿ ಇಂತಹ ವಿದ್ಯಮಾನಗಳನ್ನು ಕಾಣುವುದು ಅತೀ ಅಪರೂಪ.

ಮರಳು ಭೂಮಿಯಲ್ಲಿ ದೂರದಲ್ಲಿ ನೀರಿರುವಂತೆ ಕಾಣುವುದು, ಬೇಸಿಗೆಯಂದು ಹೆದ್ದಾರಿಗಳಲ್ಲಿ ವಾಹನಗಳ ಪ್ರತಿಫಲನವನ್ನು ರಸ್ತೆಯಲ್ಲಿ ಕಾಣುವುದು ಇವೆಲ್ಲವೂ ಮಿರಾಜ್‌ಗಳೆ. ಕೆಲವೊಮ್ಮೆ, ಕಡಲ ಕಿನಾರೆ ಬಳಿ ಸೂರ್ಯಾಸ್ತವನ್ನು ಕಂಡು ವಾಪಸ್ಸಾಗುವಾಗ ಮತ್ತೊಮ್ಮೆ ಸೂರ್ಯನನ್ನು ಕಾಣಬಹುದು. ಇದು ಕೂಡ ಹಾರುವ ಹಡಗಿನ ಚಿತ್ರದಂತೆಯೇ. ಮುಂದೊಮ್ಮೆ ಎಂದಾದರೂ ಸೂರ್ಯಾಸ್ತ ನೋಡುವಾಗ ಇದರ ಬಗ್ಗೆ ಗಮನ ಕೊಡಿ. ಅಂದಿನ ಹವಾಮಾನ ’ನಮ್ಮ ವೈಜ್ಞಾನಿಕ ಮನೋಭಾವ’ ವೃದ್ಧಿಗೆ ಸಹಕರಿಸಿದರೆ, ಸೂರ್ಯನ ಅತೀ ಅಪರೂಪದ ಮಿರಾಜ್‌ಅನ್ನು ಕಣ್ತುಂಬಿಕೊಳ್ಳಬಹುದು.

ವಿಶ್ವ ಕೀರ್ತಿ ಎಸ್.

ವಿಶ್ವ ಕೀರ್ತಿ ಎಸ್.
ವಿಜ್ಞಾನ ಮತ್ತು ಖಗೋಳ sದಲ್ಲಿ ಆಸಕ್ತಿ, ಹವ್ಯಾಸಿ ಆಕಾಶ ವೀಕ್ಷಣೆಗಾರ. ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಭೌತ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಸಂಸ್ಥೆಯಲ್ಲಿ ವೈಜ್ಞಾನಿಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ಸರ್ಕಾರದ ಸಂವಹನಕ್ಕೆ ಸಚಿವರ ಚರ್ಚೆಯ ವರದಿ; ಕಳೆ ಕೀಳುವ ನೆಪದಲ್ಲಿ ತೆನೆ ಚಿವುಟುವ ಹುನ್ನಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...