Homeಮುಖಪುಟವಿಜ್ಞಾನ-ವಿಶೇಷ; ಹಡಗು ಹಾರುತಿದೆ ನೋಡಿದಿರಾ?: ವಿಶ್ವಕೀರ್ತಿ

ವಿಜ್ಞಾನ-ವಿಶೇಷ; ಹಡಗು ಹಾರುತಿದೆ ನೋಡಿದಿರಾ?: ವಿಶ್ವಕೀರ್ತಿ

- Advertisement -
- Advertisement -

ಈಚಿತ್ರವನ್ನು ಗಮನಿಸಿ. ಏನು ಕಾಣುತ್ತಿದೆ? ಹೌದು. ಸಮುದ್ರದಲ್ಲಿ ಒಂದು ಹಡಗು ತೇಲುತ್ತಿರುವಂತಿದೆ. ನೀರಿನ ಮೇಲಲ್ಲ ಗಾಳಿಯಲ್ಲಿ ಹಾರುತ್ತಿದೆ ಅಲ್ಲವೇ? ಇದು ಹೇಗೆ ಸಾಧ್ಯ? ಇದು ನಿಜವಾದ ಚಿತ್ರಾನ? ಏನೋ ಎಡಿಟ್ ಮಾಡಿರಬೇಕು ಅಂತ ಯೋಚನೆ ಮಾಡುತ್ತಿದ್ದಿರಾ. ಹಾಗಾದರೆ ಇಲ್ಲಿ ಕೇಳಿ,

ಇಂಗ್ಲೆಂಡ್‌ನ ಕಾರ್ನಾವಾಲ್‌ನಲ್ಲಿ, ಡೇವಿಡ್ ಮಾರಿಸ್ ಎನ್ನುವ ವ್ಯಕ್ತಿ ತನ್ನ ಕ್ಯಾಮರಾದಲ್ಲಿ ಸೆರೆ ಹಿಡಿದ ಚಿತ್ರ ಇದು. ಈ ಚಿತ್ರದಲ್ಲಿ ಯಾವುದನ್ನೂ ಎಡಿಟ್ ಮಾಡಿಲ್ಲ. ಚಿತ್ರದಲ್ಲಿ ಹಡಗು ಗಾಳಿಯಲ್ಲಿ ಹಾರುತ್ತಿರುವಂತೆ ನೀವು ಕಾಣುತ್ತಿರುವುದು ನಿಜ! ಚಿತ್ರ ತೆಗೆದ ಡೇವಿಡ್ ಕೂಡ ಇದನ್ನು ನೋಡಿ ಅಚ್ಚರಿಯಾಗಿದ್ದರು. ಈ ಚಿತ್ರ ಅಂರ್ಜಾಲದಲ್ಲಿ ಸಂಚಲನ ಮೂಡಿಸಿದ್ದು ಕೂಡ ನಿಜ.

ಅರೆರೆ ಏನಿದು, ವಿಜ್ಞಾನಿಗಳು ಗಾಳಿಯಲ್ಲಿ ಹಾರುವ ಹಡಗನ್ನು ಕಂಡುಹಿಡಿದು ಬಿಟ್ಟರಾ ಅಂತ ಯೋಚನೆ ಮಾಡ್ತಿದ್ದೀರಾ. ಅದರ ಅವಶ್ಯಕತೆ ಏನು ಎಂಬ ಚಿಂತೆ ಮೂಡಿತಾ? ಇಲ್ಲಾ ಇದು ಹಾರುವ ಹಡಗಲ್ಲ. ಇದು ನೀರಿನ ಮೇಲೆ ಚಲಿಸುತ್ತಿರುವ ಹಡಗೇ! ಹಡಗು ಗಾಳಿಯಲ್ಲಿ ಹಾರುತ್ತಿರುವಂತೆ ಕಾಣುತ್ತಿರುವುದು ಚಿತ್ರದಲ್ಲಿ ಮಾತ್ರ ಅಲ್ಲಾ, ಚಿತ್ರ ತೆಗೆದ ಡೇವಿಡ್ ಮಾರಿಸ್ ಅವರ ಬರಿಗಣ್ಣಿಗೂ ಇದು ಹಾರುತ್ತಿರುವಂತೆಯೇ ಕಂಡಿದೆ.

ಹಿಗೆ ಗೋಚರಿಸುವುದಕ್ಕೆ ಕಾರಣ ನಿಸರ್ಗದಲ್ಲಿ ಕಾಣುವ ಅಪರೂಪದ ದೃಷ್ಟಿಭ್ರಮೆ (Optical Illusion) ವಿಧ್ಯಮಾನದಿಂದ. ಇದನ್ನು ಮಿರಾಜ್ (mirage) ಎಂದು ಕರೆಯುತ್ತಾರೆ. ಕನ್ನಡದಲ್ಲಿ ಮಿರಾಜ್‌ಗೆ ಬಿಸಿಲುಕುದುರೆ, ಮರೀಚಿಕೆ, ಭ್ರಮೆ ಎಂಬ ಪದಗಳು ಬಳಕೆಯಲ್ಲಿವೆ.

ಹಾಗಿದ್ದರೆ ಹಡಗು ನಿಜಕ್ಕೂ ಹಾರಿದ್ದು ಹೇಗೆ?

ಡೇವಿಡ್ ಮೋರಿಸ್‌ರವರು ಸಮುದ್ರದ ತಟದಿಂದ ಬಹಳ ದೂರದಲ್ಲಿ ಕಾಣುವ ಹಡಗಿನ ಚಿತ್ರವನ್ನು ತೆಗೆದಿದ್ದಾರೆ. ಸಾಮಾನ್ಯವಾಗಿ ಸಮುದ್ರದ ನೀರು ತಂಪಾಗಿರುತ್ತದೆ. ಈ ಕಾರಣದಿಂದ, ನೀರಿನ ಹತ್ತಿರ ಇರುವ ಗಾಳಿಯು ತಂಪಾಗಿರುತ್ತದೆ. ಸಮುದ್ರದ ನೀರಿನ ಮಟ್ಟದಿಂದ ಮೇಲಕ್ಕೆ ಚಲಿಸಿದಂತೆ, ಅಂದಿನ ಆ ಸ್ಥಳದ ವಾತಾವರಣದ ಹವಾಮಾನಕ್ಕೆ ತಕ್ಕಂತೆ, ಗಾಳಿಯ ತಾಪಮಾನವು ಹೆಚ್ಚುತ್ತಿರುತ್ತದೆ. ಅಲ್ಲದೆ, ತಂಪಾಗಿರುವ ಗಾಳಿಯ ಸಾಂದ್ರತೆ (density) ಹೆಚ್ಚಿದ್ದು, ಬಿಸಿಯಾಗಿರುವ ಗಾಳಿಯ ಸಾಂದ್ರತೆ ಕಡಿಮೆ ಇರುವುದರಿಂದ, ತಂಪಾದ ಗಾಳಿಯ ಪದರ ಕೆಳಗಿದ್ದು, ಬಿಸಿಯಾದ ಗಾಳಿಯ ಪದರ ಅದರ ಮೇಲಿರುತ್ತದೆ. ಹೀಗೆ, ಸಮುದ್ರದಿಂದ ಮೇಲ್ಮುಖವಾಗಿ ಏರಿಕೆಯ ತಾಪಮಾನದ ಗಾಳಿಯ ಪದರಗಳು ರಚಿಸಲ್ಪಟ್ಟಿರುತ್ತವೆ.

ಅಲ್ಲದೆ, ನಾವು ಯಾವುದಾದರೊಂದು ವಸ್ತುವನ್ನು ನೋಡುತ್ತೇವೆ ಎಂದರೆ, ಆ ವಸ್ತುವಿನ ಮೇಲೆ ಬೆಳಕು ಬಿದ್ದು, ಅದು ನಮ್ಮಕಣ್ಣಿನ ಮೇಲೆ ಬಿದ್ದರೆ ಮಾತ್ರ ಆ ವಸ್ತು ನಮಗೆ ಕಾಣುತ್ತದೆ. ಬೆಳಕು ಸರಳರೇಖೆಯಲ್ಲಿಯೇ ಚಲಿಸುತ್ತದೆ ಎಂದು ತಿಳಿದಿದ್ದೇವೆ. ಆದುದರಿಂದಲೆ ನಮಗೆ ಕಾಣುವ ವಸ್ತು ಬೆಳಕಿನ ಕಿರಣಗಳ ಸರಳ ರೇಖೆಯ ದಿಕ್ಕಿನಲ್ಲಿದೆ ಎಂದು ನಾವು ಗ್ರಹಿಸುವುದು. ಆದರೆ ಬೆಳಕು, ಒಂದು ಸಾಂದ್ರತೆ ಇರುವ ಮಾಧ್ಯಮದಿಂದ (medium) ಮತ್ತೊಂದು ಸಾಂದ್ರತೆಇರುವ ಮಾಧ್ಯಮಕ್ಕೆ ಚಲಿಸಿದಾಗ ಹೆಚ್ಚು ಸಾಂದ್ರತೆ ಇರುವ ಮಾಧ್ಯಮದ ಕಡೆಗೆ ಬಾಗುತ್ತದೆ. ಇದನ್ನು ವಕ್ರೀಭವನ (refraction) ಎಂದು ಕರೆಯುತ್ತೇವೆ.

ಈಗ ಈ ಚಿತ್ರ ನೋಡಿ, ಈ ಚಿತ್ರದಲ್ಲಿ ಹಡಗಿನಿಂದ ಬರುತ್ತಿರುವ ಬೆಳಕಿನ ಕಿರಣಗಳು ನೇರವಾಗಿ (ಸರಳ ರೇಖೆಯಲ್ಲಿ) ಚಲಿಸದೆ ಬಾಗಿ ದಡದಲ್ಲಿರುವ ವ್ಯಕ್ತಿಯಕಣ್ಣಿಗೆ ಬೀಳುತ್ತಿದೆ. ಇದು ಏಕೆ ಎಂದು ಹೆಳಬಲ್ಲಿರಾ?

ಹೌದು, ನಾವು ಈಗಾಗಲೇ ತಿಳಿದಂತೆ, ವಾತಾವರಣದ ಹವಾಮಾನದಿಂದ ಸಮುದ್ರದ ನೀರಿನ ಬಳಿ ಹೆಚ್ಚು ಸಾಂದ್ರತೆ ಉಳ್ಳ ತಂಪಾದ ಗಾಳಿಯ ಪದರವಿದೆ. ಸಮುದ್ರದಿಂದ ಮೇಲ್ಮುಖವಾಗಿ ಚಲಿಸಿದಂತೆ ಕಡಿಮೆ ಸಾಂದ್ರತೆಯ, ಹೆಚ್ಚು ಉಷ್ಣವುಳ್ಳ ಗಾಳಿಯ ಪದರಗಳಿರುವುದರಿಂದ, ಬೆಳಕು ಹೆಚ್ಚು ಸಾಂದ್ರತೆಯ ಗಾಳಿಯ ಪದರದಿಂದ ಕಡಿಮೆ ಸಾಂದ್ರತೆಯ ಗಾಳಿಯ ಪದರದ ಕಡೆಗೆ ಚಲಿಸಿದಾಗ, ಹೆಚ್ಚು ಸಾಂದ್ರತೆವುಳ್ಳ ಗಾಳಿಯ ಪದರದ ಕಡೆಗೆ ಬಾಗುತ್ತಿದೆ. ಈ ಕಾರಣದಿಂದ ಹಡಗಿನಿಂದ ಬರುವ ಬೆಳಕಿನ ಕಿರಣಗಳು ಸಮುದ್ರ ಮಟ್ಟದಿಂದ ತಾಪಮಾನ ಹೆಚ್ಚಾಗುತ್ತಿರುವ ಗಾಳಿಯ ಪದರಗಳ ಮೂಲಕ ಹಾದು ಹಲವು ಬಾರಿ ವಕ್ರೀಭವನಗೊಂಡು ವ್ಯಕ್ತಿಯ ಕಣ್ಣಿಗೆ ಬೀಳುತ್ತಿದೆ.

ಬೆಳಕಿನ ಕಿರಣಗಳು ಆ ವ್ಯಕ್ತಿಯ ಕಣ್ಣಿಗೆ ಬಿದ್ದಾಗ, ಅದು ನೇರವಾಗಿ ಬಂದಿದ್ದರೆ ಯಾವ ಸ್ಥಳದಿಂದ ಬರುತ್ತಿತ್ತೋ ಆ ಸ್ಥಳದಲ್ಲಿಯೇ ಹಡಗು ಇದೆ ಎಂಬ ಚಿತ್ರ ವ್ಯಕ್ತಿಗೆ ಕಾಣುತ್ತದೆ. ಆತನ ಸ್ಥಾನದಲ್ಲಿ ಕ್ಯಾಮರಾ ಇದ್ದರೂ, ಅದೂ ಕೂಡ ಇದೆ ರೀತಿಯ ಚಿತ್ರವನ್ನು ಸೆರೆ ಹಿಡಿಯುತ್ತದೆ. ಆದರೆ ಇದು ನೈಜ ಚಿತ್ರವಲ್ಲ. ಬೆಳಕಿನ ವಕ್ರೀಭವನದಿಂದ ಉಂಟಾದ ದೃಷ್ಟ ಭ್ರಮೆಯ ಚಿತ್ರ ಇದಾಗಿದೆ. ಇದೆ ಹಾರುವ ಹಡಗಿನ ಚಿತ್ರದ ಹಿಂದಿನ ವಿಜ್ಞಾನ ರಹಸ್ಯ.

ಇಂತಹ ದೃಷ್ಟಭ್ರಮೆಯನ್ನು ಮಿರಾಜ್ ಎಂದು ಹೆಚ್ಚು ಜನಪ್ರಿಯವಾಗಿದೆ. ಮಿರಾಜ್ ಮೂಡುವುದು, ವಾತಾವರಣದ ಹವಾಮಾನ (ತಾಪಮಾನ), ಗಾಳಿಯ ವೇಗ ಮತ್ತು ಸೂರ್ಯನ ಬಿಸಿಲಿನ ಸೂಕ್ಷ್ಮ ಬದಲಾವಣೆಗಳಿಂದ. ಹಾಗಾಗಿ ಹಲವು ಸ್ಥಳಗಳಲ್ಲಿ ಇಂತಹ ವಿದ್ಯಮಾನಗಳನ್ನು ಕಾಣುವುದು ಅತೀ ಅಪರೂಪ.

ಮರಳು ಭೂಮಿಯಲ್ಲಿ ದೂರದಲ್ಲಿ ನೀರಿರುವಂತೆ ಕಾಣುವುದು, ಬೇಸಿಗೆಯಂದು ಹೆದ್ದಾರಿಗಳಲ್ಲಿ ವಾಹನಗಳ ಪ್ರತಿಫಲನವನ್ನು ರಸ್ತೆಯಲ್ಲಿ ಕಾಣುವುದು ಇವೆಲ್ಲವೂ ಮಿರಾಜ್‌ಗಳೆ. ಕೆಲವೊಮ್ಮೆ, ಕಡಲ ಕಿನಾರೆ ಬಳಿ ಸೂರ್ಯಾಸ್ತವನ್ನು ಕಂಡು ವಾಪಸ್ಸಾಗುವಾಗ ಮತ್ತೊಮ್ಮೆ ಸೂರ್ಯನನ್ನು ಕಾಣಬಹುದು. ಇದು ಕೂಡ ಹಾರುವ ಹಡಗಿನ ಚಿತ್ರದಂತೆಯೇ. ಮುಂದೊಮ್ಮೆ ಎಂದಾದರೂ ಸೂರ್ಯಾಸ್ತ ನೋಡುವಾಗ ಇದರ ಬಗ್ಗೆ ಗಮನ ಕೊಡಿ. ಅಂದಿನ ಹವಾಮಾನ ’ನಮ್ಮ ವೈಜ್ಞಾನಿಕ ಮನೋಭಾವ’ ವೃದ್ಧಿಗೆ ಸಹಕರಿಸಿದರೆ, ಸೂರ್ಯನ ಅತೀ ಅಪರೂಪದ ಮಿರಾಜ್‌ಅನ್ನು ಕಣ್ತುಂಬಿಕೊಳ್ಳಬಹುದು.

ವಿಶ್ವ ಕೀರ್ತಿ ಎಸ್.

ವಿಶ್ವ ಕೀರ್ತಿ ಎಸ್.
ವಿಜ್ಞಾನ ಮತ್ತು ಖಗೋಳ sದಲ್ಲಿ ಆಸಕ್ತಿ, ಹವ್ಯಾಸಿ ಆಕಾಶ ವೀಕ್ಷಣೆಗಾರ. ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಭೌತ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಸಂಸ್ಥೆಯಲ್ಲಿ ವೈಜ್ಞಾನಿಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ಸರ್ಕಾರದ ಸಂವಹನಕ್ಕೆ ಸಚಿವರ ಚರ್ಚೆಯ ವರದಿ; ಕಳೆ ಕೀಳುವ ನೆಪದಲ್ಲಿ ತೆನೆ ಚಿವುಟುವ ಹುನ್ನಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...