Homeಮುಖಪುಟವಿಜ್ಞಾನ-ವಿಶೇಷ; ಹಡಗು ಹಾರುತಿದೆ ನೋಡಿದಿರಾ?: ವಿಶ್ವಕೀರ್ತಿ

ವಿಜ್ಞಾನ-ವಿಶೇಷ; ಹಡಗು ಹಾರುತಿದೆ ನೋಡಿದಿರಾ?: ವಿಶ್ವಕೀರ್ತಿ

- Advertisement -
- Advertisement -

ಈಚಿತ್ರವನ್ನು ಗಮನಿಸಿ. ಏನು ಕಾಣುತ್ತಿದೆ? ಹೌದು. ಸಮುದ್ರದಲ್ಲಿ ಒಂದು ಹಡಗು ತೇಲುತ್ತಿರುವಂತಿದೆ. ನೀರಿನ ಮೇಲಲ್ಲ ಗಾಳಿಯಲ್ಲಿ ಹಾರುತ್ತಿದೆ ಅಲ್ಲವೇ? ಇದು ಹೇಗೆ ಸಾಧ್ಯ? ಇದು ನಿಜವಾದ ಚಿತ್ರಾನ? ಏನೋ ಎಡಿಟ್ ಮಾಡಿರಬೇಕು ಅಂತ ಯೋಚನೆ ಮಾಡುತ್ತಿದ್ದಿರಾ. ಹಾಗಾದರೆ ಇಲ್ಲಿ ಕೇಳಿ,

ಇಂಗ್ಲೆಂಡ್‌ನ ಕಾರ್ನಾವಾಲ್‌ನಲ್ಲಿ, ಡೇವಿಡ್ ಮಾರಿಸ್ ಎನ್ನುವ ವ್ಯಕ್ತಿ ತನ್ನ ಕ್ಯಾಮರಾದಲ್ಲಿ ಸೆರೆ ಹಿಡಿದ ಚಿತ್ರ ಇದು. ಈ ಚಿತ್ರದಲ್ಲಿ ಯಾವುದನ್ನೂ ಎಡಿಟ್ ಮಾಡಿಲ್ಲ. ಚಿತ್ರದಲ್ಲಿ ಹಡಗು ಗಾಳಿಯಲ್ಲಿ ಹಾರುತ್ತಿರುವಂತೆ ನೀವು ಕಾಣುತ್ತಿರುವುದು ನಿಜ! ಚಿತ್ರ ತೆಗೆದ ಡೇವಿಡ್ ಕೂಡ ಇದನ್ನು ನೋಡಿ ಅಚ್ಚರಿಯಾಗಿದ್ದರು. ಈ ಚಿತ್ರ ಅಂರ್ಜಾಲದಲ್ಲಿ ಸಂಚಲನ ಮೂಡಿಸಿದ್ದು ಕೂಡ ನಿಜ.

ಅರೆರೆ ಏನಿದು, ವಿಜ್ಞಾನಿಗಳು ಗಾಳಿಯಲ್ಲಿ ಹಾರುವ ಹಡಗನ್ನು ಕಂಡುಹಿಡಿದು ಬಿಟ್ಟರಾ ಅಂತ ಯೋಚನೆ ಮಾಡ್ತಿದ್ದೀರಾ. ಅದರ ಅವಶ್ಯಕತೆ ಏನು ಎಂಬ ಚಿಂತೆ ಮೂಡಿತಾ? ಇಲ್ಲಾ ಇದು ಹಾರುವ ಹಡಗಲ್ಲ. ಇದು ನೀರಿನ ಮೇಲೆ ಚಲಿಸುತ್ತಿರುವ ಹಡಗೇ! ಹಡಗು ಗಾಳಿಯಲ್ಲಿ ಹಾರುತ್ತಿರುವಂತೆ ಕಾಣುತ್ತಿರುವುದು ಚಿತ್ರದಲ್ಲಿ ಮಾತ್ರ ಅಲ್ಲಾ, ಚಿತ್ರ ತೆಗೆದ ಡೇವಿಡ್ ಮಾರಿಸ್ ಅವರ ಬರಿಗಣ್ಣಿಗೂ ಇದು ಹಾರುತ್ತಿರುವಂತೆಯೇ ಕಂಡಿದೆ.

ಹಿಗೆ ಗೋಚರಿಸುವುದಕ್ಕೆ ಕಾರಣ ನಿಸರ್ಗದಲ್ಲಿ ಕಾಣುವ ಅಪರೂಪದ ದೃಷ್ಟಿಭ್ರಮೆ (Optical Illusion) ವಿಧ್ಯಮಾನದಿಂದ. ಇದನ್ನು ಮಿರಾಜ್ (mirage) ಎಂದು ಕರೆಯುತ್ತಾರೆ. ಕನ್ನಡದಲ್ಲಿ ಮಿರಾಜ್‌ಗೆ ಬಿಸಿಲುಕುದುರೆ, ಮರೀಚಿಕೆ, ಭ್ರಮೆ ಎಂಬ ಪದಗಳು ಬಳಕೆಯಲ್ಲಿವೆ.

ಹಾಗಿದ್ದರೆ ಹಡಗು ನಿಜಕ್ಕೂ ಹಾರಿದ್ದು ಹೇಗೆ?

ಡೇವಿಡ್ ಮೋರಿಸ್‌ರವರು ಸಮುದ್ರದ ತಟದಿಂದ ಬಹಳ ದೂರದಲ್ಲಿ ಕಾಣುವ ಹಡಗಿನ ಚಿತ್ರವನ್ನು ತೆಗೆದಿದ್ದಾರೆ. ಸಾಮಾನ್ಯವಾಗಿ ಸಮುದ್ರದ ನೀರು ತಂಪಾಗಿರುತ್ತದೆ. ಈ ಕಾರಣದಿಂದ, ನೀರಿನ ಹತ್ತಿರ ಇರುವ ಗಾಳಿಯು ತಂಪಾಗಿರುತ್ತದೆ. ಸಮುದ್ರದ ನೀರಿನ ಮಟ್ಟದಿಂದ ಮೇಲಕ್ಕೆ ಚಲಿಸಿದಂತೆ, ಅಂದಿನ ಆ ಸ್ಥಳದ ವಾತಾವರಣದ ಹವಾಮಾನಕ್ಕೆ ತಕ್ಕಂತೆ, ಗಾಳಿಯ ತಾಪಮಾನವು ಹೆಚ್ಚುತ್ತಿರುತ್ತದೆ. ಅಲ್ಲದೆ, ತಂಪಾಗಿರುವ ಗಾಳಿಯ ಸಾಂದ್ರತೆ (density) ಹೆಚ್ಚಿದ್ದು, ಬಿಸಿಯಾಗಿರುವ ಗಾಳಿಯ ಸಾಂದ್ರತೆ ಕಡಿಮೆ ಇರುವುದರಿಂದ, ತಂಪಾದ ಗಾಳಿಯ ಪದರ ಕೆಳಗಿದ್ದು, ಬಿಸಿಯಾದ ಗಾಳಿಯ ಪದರ ಅದರ ಮೇಲಿರುತ್ತದೆ. ಹೀಗೆ, ಸಮುದ್ರದಿಂದ ಮೇಲ್ಮುಖವಾಗಿ ಏರಿಕೆಯ ತಾಪಮಾನದ ಗಾಳಿಯ ಪದರಗಳು ರಚಿಸಲ್ಪಟ್ಟಿರುತ್ತವೆ.

ಅಲ್ಲದೆ, ನಾವು ಯಾವುದಾದರೊಂದು ವಸ್ತುವನ್ನು ನೋಡುತ್ತೇವೆ ಎಂದರೆ, ಆ ವಸ್ತುವಿನ ಮೇಲೆ ಬೆಳಕು ಬಿದ್ದು, ಅದು ನಮ್ಮಕಣ್ಣಿನ ಮೇಲೆ ಬಿದ್ದರೆ ಮಾತ್ರ ಆ ವಸ್ತು ನಮಗೆ ಕಾಣುತ್ತದೆ. ಬೆಳಕು ಸರಳರೇಖೆಯಲ್ಲಿಯೇ ಚಲಿಸುತ್ತದೆ ಎಂದು ತಿಳಿದಿದ್ದೇವೆ. ಆದುದರಿಂದಲೆ ನಮಗೆ ಕಾಣುವ ವಸ್ತು ಬೆಳಕಿನ ಕಿರಣಗಳ ಸರಳ ರೇಖೆಯ ದಿಕ್ಕಿನಲ್ಲಿದೆ ಎಂದು ನಾವು ಗ್ರಹಿಸುವುದು. ಆದರೆ ಬೆಳಕು, ಒಂದು ಸಾಂದ್ರತೆ ಇರುವ ಮಾಧ್ಯಮದಿಂದ (medium) ಮತ್ತೊಂದು ಸಾಂದ್ರತೆಇರುವ ಮಾಧ್ಯಮಕ್ಕೆ ಚಲಿಸಿದಾಗ ಹೆಚ್ಚು ಸಾಂದ್ರತೆ ಇರುವ ಮಾಧ್ಯಮದ ಕಡೆಗೆ ಬಾಗುತ್ತದೆ. ಇದನ್ನು ವಕ್ರೀಭವನ (refraction) ಎಂದು ಕರೆಯುತ್ತೇವೆ.

ಈಗ ಈ ಚಿತ್ರ ನೋಡಿ, ಈ ಚಿತ್ರದಲ್ಲಿ ಹಡಗಿನಿಂದ ಬರುತ್ತಿರುವ ಬೆಳಕಿನ ಕಿರಣಗಳು ನೇರವಾಗಿ (ಸರಳ ರೇಖೆಯಲ್ಲಿ) ಚಲಿಸದೆ ಬಾಗಿ ದಡದಲ್ಲಿರುವ ವ್ಯಕ್ತಿಯಕಣ್ಣಿಗೆ ಬೀಳುತ್ತಿದೆ. ಇದು ಏಕೆ ಎಂದು ಹೆಳಬಲ್ಲಿರಾ?

ಹೌದು, ನಾವು ಈಗಾಗಲೇ ತಿಳಿದಂತೆ, ವಾತಾವರಣದ ಹವಾಮಾನದಿಂದ ಸಮುದ್ರದ ನೀರಿನ ಬಳಿ ಹೆಚ್ಚು ಸಾಂದ್ರತೆ ಉಳ್ಳ ತಂಪಾದ ಗಾಳಿಯ ಪದರವಿದೆ. ಸಮುದ್ರದಿಂದ ಮೇಲ್ಮುಖವಾಗಿ ಚಲಿಸಿದಂತೆ ಕಡಿಮೆ ಸಾಂದ್ರತೆಯ, ಹೆಚ್ಚು ಉಷ್ಣವುಳ್ಳ ಗಾಳಿಯ ಪದರಗಳಿರುವುದರಿಂದ, ಬೆಳಕು ಹೆಚ್ಚು ಸಾಂದ್ರತೆಯ ಗಾಳಿಯ ಪದರದಿಂದ ಕಡಿಮೆ ಸಾಂದ್ರತೆಯ ಗಾಳಿಯ ಪದರದ ಕಡೆಗೆ ಚಲಿಸಿದಾಗ, ಹೆಚ್ಚು ಸಾಂದ್ರತೆವುಳ್ಳ ಗಾಳಿಯ ಪದರದ ಕಡೆಗೆ ಬಾಗುತ್ತಿದೆ. ಈ ಕಾರಣದಿಂದ ಹಡಗಿನಿಂದ ಬರುವ ಬೆಳಕಿನ ಕಿರಣಗಳು ಸಮುದ್ರ ಮಟ್ಟದಿಂದ ತಾಪಮಾನ ಹೆಚ್ಚಾಗುತ್ತಿರುವ ಗಾಳಿಯ ಪದರಗಳ ಮೂಲಕ ಹಾದು ಹಲವು ಬಾರಿ ವಕ್ರೀಭವನಗೊಂಡು ವ್ಯಕ್ತಿಯ ಕಣ್ಣಿಗೆ ಬೀಳುತ್ತಿದೆ.

ಬೆಳಕಿನ ಕಿರಣಗಳು ಆ ವ್ಯಕ್ತಿಯ ಕಣ್ಣಿಗೆ ಬಿದ್ದಾಗ, ಅದು ನೇರವಾಗಿ ಬಂದಿದ್ದರೆ ಯಾವ ಸ್ಥಳದಿಂದ ಬರುತ್ತಿತ್ತೋ ಆ ಸ್ಥಳದಲ್ಲಿಯೇ ಹಡಗು ಇದೆ ಎಂಬ ಚಿತ್ರ ವ್ಯಕ್ತಿಗೆ ಕಾಣುತ್ತದೆ. ಆತನ ಸ್ಥಾನದಲ್ಲಿ ಕ್ಯಾಮರಾ ಇದ್ದರೂ, ಅದೂ ಕೂಡ ಇದೆ ರೀತಿಯ ಚಿತ್ರವನ್ನು ಸೆರೆ ಹಿಡಿಯುತ್ತದೆ. ಆದರೆ ಇದು ನೈಜ ಚಿತ್ರವಲ್ಲ. ಬೆಳಕಿನ ವಕ್ರೀಭವನದಿಂದ ಉಂಟಾದ ದೃಷ್ಟ ಭ್ರಮೆಯ ಚಿತ್ರ ಇದಾಗಿದೆ. ಇದೆ ಹಾರುವ ಹಡಗಿನ ಚಿತ್ರದ ಹಿಂದಿನ ವಿಜ್ಞಾನ ರಹಸ್ಯ.

ಇಂತಹ ದೃಷ್ಟಭ್ರಮೆಯನ್ನು ಮಿರಾಜ್ ಎಂದು ಹೆಚ್ಚು ಜನಪ್ರಿಯವಾಗಿದೆ. ಮಿರಾಜ್ ಮೂಡುವುದು, ವಾತಾವರಣದ ಹವಾಮಾನ (ತಾಪಮಾನ), ಗಾಳಿಯ ವೇಗ ಮತ್ತು ಸೂರ್ಯನ ಬಿಸಿಲಿನ ಸೂಕ್ಷ್ಮ ಬದಲಾವಣೆಗಳಿಂದ. ಹಾಗಾಗಿ ಹಲವು ಸ್ಥಳಗಳಲ್ಲಿ ಇಂತಹ ವಿದ್ಯಮಾನಗಳನ್ನು ಕಾಣುವುದು ಅತೀ ಅಪರೂಪ.

ಮರಳು ಭೂಮಿಯಲ್ಲಿ ದೂರದಲ್ಲಿ ನೀರಿರುವಂತೆ ಕಾಣುವುದು, ಬೇಸಿಗೆಯಂದು ಹೆದ್ದಾರಿಗಳಲ್ಲಿ ವಾಹನಗಳ ಪ್ರತಿಫಲನವನ್ನು ರಸ್ತೆಯಲ್ಲಿ ಕಾಣುವುದು ಇವೆಲ್ಲವೂ ಮಿರಾಜ್‌ಗಳೆ. ಕೆಲವೊಮ್ಮೆ, ಕಡಲ ಕಿನಾರೆ ಬಳಿ ಸೂರ್ಯಾಸ್ತವನ್ನು ಕಂಡು ವಾಪಸ್ಸಾಗುವಾಗ ಮತ್ತೊಮ್ಮೆ ಸೂರ್ಯನನ್ನು ಕಾಣಬಹುದು. ಇದು ಕೂಡ ಹಾರುವ ಹಡಗಿನ ಚಿತ್ರದಂತೆಯೇ. ಮುಂದೊಮ್ಮೆ ಎಂದಾದರೂ ಸೂರ್ಯಾಸ್ತ ನೋಡುವಾಗ ಇದರ ಬಗ್ಗೆ ಗಮನ ಕೊಡಿ. ಅಂದಿನ ಹವಾಮಾನ ’ನಮ್ಮ ವೈಜ್ಞಾನಿಕ ಮನೋಭಾವ’ ವೃದ್ಧಿಗೆ ಸಹಕರಿಸಿದರೆ, ಸೂರ್ಯನ ಅತೀ ಅಪರೂಪದ ಮಿರಾಜ್‌ಅನ್ನು ಕಣ್ತುಂಬಿಕೊಳ್ಳಬಹುದು.

ವಿಶ್ವ ಕೀರ್ತಿ ಎಸ್.

ವಿಶ್ವ ಕೀರ್ತಿ ಎಸ್.
ವಿಜ್ಞಾನ ಮತ್ತು ಖಗೋಳ sದಲ್ಲಿ ಆಸಕ್ತಿ, ಹವ್ಯಾಸಿ ಆಕಾಶ ವೀಕ್ಷಣೆಗಾರ. ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಭೌತ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಸಂಸ್ಥೆಯಲ್ಲಿ ವೈಜ್ಞಾನಿಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ಸರ್ಕಾರದ ಸಂವಹನಕ್ಕೆ ಸಚಿವರ ಚರ್ಚೆಯ ವರದಿ; ಕಳೆ ಕೀಳುವ ನೆಪದಲ್ಲಿ ತೆನೆ ಚಿವುಟುವ ಹುನ್ನಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....