Homeಮುಖಪುಟಮೋದಿ ಸುಳ್ಳು ಹೇಳುತ್ತಾರೆ, ಆದರೆ ವಿಜ್ಞಾನವಲ್ಲ: ಕೋವಿಡ್ ಸಾವುಗಳ ಕುರಿತು ರಾಹುಲ್ ಹೇಳಿಕೆ

ಮೋದಿ ಸುಳ್ಳು ಹೇಳುತ್ತಾರೆ, ಆದರೆ ವಿಜ್ಞಾನವಲ್ಲ: ಕೋವಿಡ್ ಸಾವುಗಳ ಕುರಿತು ರಾಹುಲ್ ಹೇಳಿಕೆ

- Advertisement -
- Advertisement -

ಸರ್ಕಾರ 4.8 ಲಕ್ಷ ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಹೇಳುತ್ತಿದೆ. ಆದರೆ 47 ಲಕ್ಷ ಭಾರತೀಯರು ಕೋವಿಡ್‌ನಿಂದ ಪ್ರಾಣ ಬಿಟ್ಟಿದ್ದಾರೆ ಎಂದಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಮೋದಿ ಸುಳ್ಳು ಹೇಳುತ್ತಾರೆ, ಆದರೆ ವಿಜ್ಞಾನವಲ್ಲ” ಎಂದು ಪ್ರತಿಪಾದಿಸಿದ್ದಾರೆ.

ಭಾರತದ ಕೋವಿಡ್ ಸಾವುಗಳ ಕುರಿತು WHO ಬಿಡುಗಡೆ ಮಾಡಿದ ವರದಿಯ ತುಣುಕು ಹಂಚಿಕೊಂಡಿರುವ ಅವರು, ಕೋವಿಡ್‌ನಿಂದ ಪ್ರಾಣಬಿಟ್ಟ ಕುಟುಂಬಗಳನ್ನು ಗೌರವಿಸಬೇಕು. ಪ್ರತಿ ಕುಟುಂಬಕ್ಕೂ ತಲಾ 4 ಲಕ್ಷ ರೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

2020ರ ಜನವರಿಯಿಂದ 2022ರ ಡಿಸೆಂಬರ್‌ವರೆಗಿನ ಎರಡು ವರ್ಷಗಳ ಅವಧಿಯಲ್ಲಿ ಭಾರತದಲ್ಲಿ ಸುಮಾರು 47 ಲಕ್ಷಕ್ಕೂ ಹೆಚ್ಚುವರಿ ಕೋವಿಡ್ ಸಾವುಗಳು ಸಂಭವಿಸಿವೆ ಎಂದು WHO ಗುರುವಾರ ಬಿಡುಗಡೆ ಮಾಡಿದ ವರದಿಯಲ್ಲಿ ಹೇಳಿದೆ. ಇದು ಭಾರತದ ಸರ್ಕಾರ ಬಿಡುಗಡೆ ಮಾಡಿದ ಅಧಿಕೃತ ಅಂಕಿ ಅಂಶಗಳಿಗಿಂತ ಹತ್ತು ಪಟ್ಟು ಹೆಚ್ಚು ಇದ್ದು, ಪ್ರಪಂಚದ ಮೂರನೇ ಒಂದು ಭಾಗದಷ್ಟು ಸಾವುಗಳು ಭಾರತದಲ್ಲಿಯೇ ಸಂಭವಿಸಿದೆ ಎಂದು ವರದಿ ಹೇಳಿದೆ.

ಇಡೀ ಪ್ರಪಂಚದಲ್ಲಿ 60 ಲಕ್ಷ ಕೋವಿಡ್ ಸಾವುಗಳು ಸಂಭವಿಸಿವೆ ಎಂದು ಅಧಿಕೃತ ಅಂಕಿ ಅಂಶಗಳು ಹೇಳುತ್ತವೆ. ಆದರೆ ಅದು ಒಂದೂವರೆ ಕೋಟಿಗೂ ಹೆಚ್ಚಿದೆ ಎಂದು WHO ಹೇಳಿದೆ.

2020 ರಲ್ಲಿ ಸಿವಿಲ್ ನೋಂದಣಿ ವ್ಯವಸ್ಥೆಯ ಅಡಿಯಲ್ಲಿ ಭಾರತವು 4,74,806 ಸಾವುಗಳನ್ನು ದಾಖಲಿಸಿದೆ.

ಕೋವಿಡ್ ಸಾವುಗಳ ಸಂಖ್ಯೆಯನ್ನು ಲೆಕ್ಕಾಚಾರ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಬಳಸಿದ ಸಂಖ್ಯಾಶಾಸ್ತ್ರೀಯ ಮಾದರಿಯ ಬಳಕೆಯನ್ನು ಭಾರತ ಸರ್ಕಾರ ಬಲವಾಗಿ ನಿರಾಕರಿಸಿದೆ. ದೇಶವು ಜನನ – ಮರಣಗಳ ನೋಂದಣಿಯ ಅತ್ಯಂತ ದೃಢವಾದ ವ್ಯವಸ್ಥೆಯನ್ನು ಹೊಂದಿದೆ. WHOದ ಅಂಕಿ ಸಂಖ್ಯೆಗಳು ವಾಸ್ತವಕ್ಕೆ ದೂರವಾಗಿವೆ. ಈ ದತ್ತಾಂಶ ಸಂಗ್ರಹದ ವ್ಯವಸ್ಥೆಯನ್ನು “ಸಂಖ್ಯಾಶಾಸ್ತ್ರೀಯವಾಗಿ ಅಸ್ಪಷ್ಟ ಮತ್ತು ವೈಜ್ಞಾನಿಕವಾಗಿ ಪ್ರಶ್ನಾರ್ಹ” ಎಂದು ಕರೆದಿದೆ.

ಹದಿನೇಳು ಭಾರತೀಯ ರಾಜ್ಯಗಳಿಗೆ ಸಂಬಂಧಿಸಿದಂತೆ ಡೇಟಾವನ್ನು ಕೆಲವು ವೆಬ್‌ಸೈಟ್‌ಗಳು ಮತ್ತು ಮಾಧ್ಯಮ ವರದಿಗಳಿಂದ ಪಡೆಯಲಾಗಿದ್ದು, ಇದನ್ನು ಭಾರತವು ಸತತವಾಗಿ ಪ್ರಶ್ನಿಸಿದೆ. ಆದರೆ ಭಾರತದ ವಿರೋಧದ ನಡುವೆಯೂ ಕೋವಿಡ್ ಸಾವುಗಳ ಲೆಕ್ಕಾಚಾರದ ಪ್ರಕ್ರಿಯೆಯನ್ನು WHO ಮುಂದುವರೆಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.

ಇದನ್ನೂ ಓದಿ; ರಾಜಾರಾಂ ತಲ್ಲೂರು ಅವರ ’ಕರಿಡಬ್ಬಿ ಪುಸ್ತಕದಿಂದ ಆಯ್ದ ಅಧ್ಯಾಯ; #WHOCARES

ಈ ಪ್ರಕ್ರಿಯೆಯಲ್ಲಿ WHO ಜೊತೆ ನಡೆಸಿದ ಸಂವಾದ-ಸಂವಹದನಲ್ಲಿ ಅದು ಹಲವಾರು ಮಾದರಿಗಳನ್ನು ಉಲ್ಲೇಖಿಸಿ ವಿವಿಧ ಹೆಚ್ಚುವರಿ ಮರಣದ ಅಂಕಿಅಂಶಗಳನ್ನು ಯೋಜಿಸಿದೆ. ಸಿವಿಲ್ ನೋಂದಣಿ ವ್ಯವಸ್ಥೆಯ ಅಡಿಯಲ್ಲಿ ದಾಖಲಾದ ಅಂಕಿ ಅಂಶಗಳನ್ನು WHO ಜೊತೆಗೆ ಹಂಚಿಕೊಂಡಿದ್ದೇವೆ. ಆದರೂ ನಮ್ಮೆಲ್ಲ ಅಂಕಿ ಅಂಶಗಳನ್ನು ತಿರಸ್ಕರಿಸಿ ಹೆಚ್ಚಿನ ಮರಣ ಸಂಭವಿಸಿವೆ ಎಂದು ವರದಿ ನೀಡಿದೆ. ಆದರೆ ಅದು ಬಳಸಿದ ಮಾದರಿಗಳ ಸಿಂಧುತ್ವ ಮತ್ತು ದೃಢತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಭಾರತ ಸರ್ಕಾರ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...