Homeಮುಖಪುಟಮೋದಿ ಸುಳ್ಳು ಹೇಳುತ್ತಾರೆ, ಆದರೆ ವಿಜ್ಞಾನವಲ್ಲ: ಕೋವಿಡ್ ಸಾವುಗಳ ಕುರಿತು ರಾಹುಲ್ ಹೇಳಿಕೆ

ಮೋದಿ ಸುಳ್ಳು ಹೇಳುತ್ತಾರೆ, ಆದರೆ ವಿಜ್ಞಾನವಲ್ಲ: ಕೋವಿಡ್ ಸಾವುಗಳ ಕುರಿತು ರಾಹುಲ್ ಹೇಳಿಕೆ

- Advertisement -
- Advertisement -

ಸರ್ಕಾರ 4.8 ಲಕ್ಷ ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಹೇಳುತ್ತಿದೆ. ಆದರೆ 47 ಲಕ್ಷ ಭಾರತೀಯರು ಕೋವಿಡ್‌ನಿಂದ ಪ್ರಾಣ ಬಿಟ್ಟಿದ್ದಾರೆ ಎಂದಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಮೋದಿ ಸುಳ್ಳು ಹೇಳುತ್ತಾರೆ, ಆದರೆ ವಿಜ್ಞಾನವಲ್ಲ” ಎಂದು ಪ್ರತಿಪಾದಿಸಿದ್ದಾರೆ.

ಭಾರತದ ಕೋವಿಡ್ ಸಾವುಗಳ ಕುರಿತು WHO ಬಿಡುಗಡೆ ಮಾಡಿದ ವರದಿಯ ತುಣುಕು ಹಂಚಿಕೊಂಡಿರುವ ಅವರು, ಕೋವಿಡ್‌ನಿಂದ ಪ್ರಾಣಬಿಟ್ಟ ಕುಟುಂಬಗಳನ್ನು ಗೌರವಿಸಬೇಕು. ಪ್ರತಿ ಕುಟುಂಬಕ್ಕೂ ತಲಾ 4 ಲಕ್ಷ ರೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

2020ರ ಜನವರಿಯಿಂದ 2022ರ ಡಿಸೆಂಬರ್‌ವರೆಗಿನ ಎರಡು ವರ್ಷಗಳ ಅವಧಿಯಲ್ಲಿ ಭಾರತದಲ್ಲಿ ಸುಮಾರು 47 ಲಕ್ಷಕ್ಕೂ ಹೆಚ್ಚುವರಿ ಕೋವಿಡ್ ಸಾವುಗಳು ಸಂಭವಿಸಿವೆ ಎಂದು WHO ಗುರುವಾರ ಬಿಡುಗಡೆ ಮಾಡಿದ ವರದಿಯಲ್ಲಿ ಹೇಳಿದೆ. ಇದು ಭಾರತದ ಸರ್ಕಾರ ಬಿಡುಗಡೆ ಮಾಡಿದ ಅಧಿಕೃತ ಅಂಕಿ ಅಂಶಗಳಿಗಿಂತ ಹತ್ತು ಪಟ್ಟು ಹೆಚ್ಚು ಇದ್ದು, ಪ್ರಪಂಚದ ಮೂರನೇ ಒಂದು ಭಾಗದಷ್ಟು ಸಾವುಗಳು ಭಾರತದಲ್ಲಿಯೇ ಸಂಭವಿಸಿದೆ ಎಂದು ವರದಿ ಹೇಳಿದೆ.

ಇಡೀ ಪ್ರಪಂಚದಲ್ಲಿ 60 ಲಕ್ಷ ಕೋವಿಡ್ ಸಾವುಗಳು ಸಂಭವಿಸಿವೆ ಎಂದು ಅಧಿಕೃತ ಅಂಕಿ ಅಂಶಗಳು ಹೇಳುತ್ತವೆ. ಆದರೆ ಅದು ಒಂದೂವರೆ ಕೋಟಿಗೂ ಹೆಚ್ಚಿದೆ ಎಂದು WHO ಹೇಳಿದೆ.

2020 ರಲ್ಲಿ ಸಿವಿಲ್ ನೋಂದಣಿ ವ್ಯವಸ್ಥೆಯ ಅಡಿಯಲ್ಲಿ ಭಾರತವು 4,74,806 ಸಾವುಗಳನ್ನು ದಾಖಲಿಸಿದೆ.

ಕೋವಿಡ್ ಸಾವುಗಳ ಸಂಖ್ಯೆಯನ್ನು ಲೆಕ್ಕಾಚಾರ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಬಳಸಿದ ಸಂಖ್ಯಾಶಾಸ್ತ್ರೀಯ ಮಾದರಿಯ ಬಳಕೆಯನ್ನು ಭಾರತ ಸರ್ಕಾರ ಬಲವಾಗಿ ನಿರಾಕರಿಸಿದೆ. ದೇಶವು ಜನನ – ಮರಣಗಳ ನೋಂದಣಿಯ ಅತ್ಯಂತ ದೃಢವಾದ ವ್ಯವಸ್ಥೆಯನ್ನು ಹೊಂದಿದೆ. WHOದ ಅಂಕಿ ಸಂಖ್ಯೆಗಳು ವಾಸ್ತವಕ್ಕೆ ದೂರವಾಗಿವೆ. ಈ ದತ್ತಾಂಶ ಸಂಗ್ರಹದ ವ್ಯವಸ್ಥೆಯನ್ನು “ಸಂಖ್ಯಾಶಾಸ್ತ್ರೀಯವಾಗಿ ಅಸ್ಪಷ್ಟ ಮತ್ತು ವೈಜ್ಞಾನಿಕವಾಗಿ ಪ್ರಶ್ನಾರ್ಹ” ಎಂದು ಕರೆದಿದೆ.

ಹದಿನೇಳು ಭಾರತೀಯ ರಾಜ್ಯಗಳಿಗೆ ಸಂಬಂಧಿಸಿದಂತೆ ಡೇಟಾವನ್ನು ಕೆಲವು ವೆಬ್‌ಸೈಟ್‌ಗಳು ಮತ್ತು ಮಾಧ್ಯಮ ವರದಿಗಳಿಂದ ಪಡೆಯಲಾಗಿದ್ದು, ಇದನ್ನು ಭಾರತವು ಸತತವಾಗಿ ಪ್ರಶ್ನಿಸಿದೆ. ಆದರೆ ಭಾರತದ ವಿರೋಧದ ನಡುವೆಯೂ ಕೋವಿಡ್ ಸಾವುಗಳ ಲೆಕ್ಕಾಚಾರದ ಪ್ರಕ್ರಿಯೆಯನ್ನು WHO ಮುಂದುವರೆಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.

ಇದನ್ನೂ ಓದಿ; ರಾಜಾರಾಂ ತಲ್ಲೂರು ಅವರ ’ಕರಿಡಬ್ಬಿ ಪುಸ್ತಕದಿಂದ ಆಯ್ದ ಅಧ್ಯಾಯ; #WHOCARES

ಈ ಪ್ರಕ್ರಿಯೆಯಲ್ಲಿ WHO ಜೊತೆ ನಡೆಸಿದ ಸಂವಾದ-ಸಂವಹದನಲ್ಲಿ ಅದು ಹಲವಾರು ಮಾದರಿಗಳನ್ನು ಉಲ್ಲೇಖಿಸಿ ವಿವಿಧ ಹೆಚ್ಚುವರಿ ಮರಣದ ಅಂಕಿಅಂಶಗಳನ್ನು ಯೋಜಿಸಿದೆ. ಸಿವಿಲ್ ನೋಂದಣಿ ವ್ಯವಸ್ಥೆಯ ಅಡಿಯಲ್ಲಿ ದಾಖಲಾದ ಅಂಕಿ ಅಂಶಗಳನ್ನು WHO ಜೊತೆಗೆ ಹಂಚಿಕೊಂಡಿದ್ದೇವೆ. ಆದರೂ ನಮ್ಮೆಲ್ಲ ಅಂಕಿ ಅಂಶಗಳನ್ನು ತಿರಸ್ಕರಿಸಿ ಹೆಚ್ಚಿನ ಮರಣ ಸಂಭವಿಸಿವೆ ಎಂದು ವರದಿ ನೀಡಿದೆ. ಆದರೆ ಅದು ಬಳಸಿದ ಮಾದರಿಗಳ ಸಿಂಧುತ್ವ ಮತ್ತು ದೃಢತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಭಾರತ ಸರ್ಕಾರ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...